Breaking News

Laxminews 24x7

ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಹುದಲಿ ಸರಕಾರಿ ಶಾಲೆಯಶಿಕ್ಷಕಿ ಕೋವಿಡ್ ಗೆ ಬಲಿ

ಬೆಳಗಾವಿ: ಬೆಳಗಾವಿಯಲ್ಲಿ ಕೋವಿಡ್ ಅಟ್ಟಹಾಸಕ್ಕೆ ಮತ್ತೋರ್ವ ಶಿಕ್ಷಕಿ ಬಲಿಯಾಗಿದ್ದಾರೆ. ಹುದಲಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಮೃತ ಶಿಕ್ಷಕಿ 32 ವರ್ಷದ ಶ್ರೀದೇವಿ ಹುಕ್ಕೇರಿ ಎಂದು ತಿಳಿದುಬಂದಿದೆ. ಹುದಲಿ ಸರಕಾರಿ ಶಾಲೆಯ ಕನ್ನಡ ಭಾಷೆ ಶಿಕ್ಷಕಿಯಾಗಿ ಕೆಲಸಮಾಡುತ್ತಿದ್ದ ಶ್ರೀದೇವಿಯವರು, ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ, ಬರಹಗಾರರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.   ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶ್ರೀದೇವಿ ಅವರು ಕೆಲದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. …

Read More »

ಏಟಿಎಂ ಚಾಲಕನನ್ನು ಕೊಂದು 75 ಲಕ್ಷ ರೂ. ದೋಚಿದ್ದ ನಾಲ್ವರ ಬಂಧನ

ಬೆಂಗಳೂರು: ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನಿಗೆ ಹಣದ ಆಮಿಷವೊಡ್ಡಿ ಹತ್ಯೆ ಮಾಡಿ ಸಕಲೇಶಪುರದ ಘಾಟ್‌ನಲ್ಲಿ ಎಸೆದು 75 ಲಕ್ಷ ರೂ. ದೋಚಿದ ನಾಲ್ವರನ್ನು ಗೋವಿಂದಪುರ ಪೊಲೀಸರು ಪ್ರಕರಣ ನಡೆದ ಮೂರು ವರ್ಷಗಳ ಬಳಿಕ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಎನ್.ಕುಮಾರ್ (23), ಮಧುಸೂದನ್ (23) ಮೈಸೂರಿನ ಕೆ.ಆರ್.ನಗರದ ಪ್ರಸನ್ನ (31) ಹಾಗೂ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಹೇಶ್ (22) ಬಂಧಿತರು. ಆರೋಪಿಗಳಿಂದ 3.5 …

Read More »

ರಾಮ್‌ದೇವ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್

ನವದೆಹಲಿ, : ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್‌ದೇವ್ ಮಾತನಾಡಿದ ವಿಡಿಯೋವೊಂದು ಇತ್ತೀಚೆಗೆ ವೈರಲ್ ಆಗಿತ್ತು. ಇದರಲ್ಲಿ ಅಲೋಪತಿ ಮತ್ತು ವೈಜ್ಞಾನಿಕ ವೈದ್ಯಕೀಯ ಪದ್ದತಿಗೆ ಅವಮಾನಕರ ಮಾತುಗಳನ್ನು ಆಡಿದ್ದಾರೆ ಎಂದು ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿ ಬಾಬಾ ರಾಮ್‌ದೇವ್ ಅಲೋಪತಿ ಚಿಕಿತ್ಸೆಯನ್ನು ‘ಮೂರ್ಖತನದ ವಿಜ್ಞಾನ’ ಎಂದು ಜರಿದಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ …

Read More »

ಸೋಂಕಿತರು ಇನ್ನು ಮುಂದೆ ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿರಬೇಕು ; ಆರೋಗ್ಯ ಸಚಿವರು

ಬೆಂಗಳೂರು : ಸೋಂಕಿತರು ಇನ್ನು ಮುಂದೆ ಹೋಂ ಐಸೋಲೇಷನ್‌ ನಲ್ಲಿ ಇರುವಂತಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸ್ವ್ಯಾಬ್ ಪರೀಕ್ಷೆ ವರದಿ 24 ರಿಂದ 36 ಗಂಟೆಯ ಒಳಗಾಗಿ ಸಿಗುವಂತೆ ಕ್ರಮ …

Read More »

ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿ :ಸಚಿವ ಮುರುಗೇಶ್ ನಿರಾಣಿ

ರಾಮನಗರ, ಮೇ.23- ಒಂದು ಸಾವಿರ ಆಮ್ಲಜನಕ ಸಾಂದ್ರಕ ಖರೀದಿಸಲು ಯೋಜಿಸಲಾಗಿದ್ದು, ಮೊದಲು 100 ಆಮ್ಲಜನಕ ಸಾಂದ್ರಕ ಖರೀದಿಸಲಾಗಿದೆ ಅದರ ಕಾರ್ಯವೈಖರಿ ಗುಣ ಮಟ್ಟ ನೋಡಿ ಉಳಿದ ಆಮ್ಲಜನಕ ಸಾಂದ್ರಕವನ್ನು ಖರೀದಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ವಿಭಾಗ ಮಟ್ಟಕ್ಕೆ 2 ರಂತೆ 10 ಆಕ್ಸಿಜನ್ ಟ್ಸಾಂಕರ್, 10 ಆಕ್ಸಿಜನ್ ಜನರೇಟರ್‌ಗಳನ್ನು …

Read More »

ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?

ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …

Read More »

ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ

ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …

Read More »

ಅನುಮತಿ ಇಲ್ಲದೆ ವಿವಾಹ ಆಯೋಜನೆ- 25 ಸಾವಿರ ದಂಡ

ಚಿಕ್ಕೋಡಿ/ಬೆಳಗಾವಿ: ಅನುಮತಿ ಪಡೆಯದೇ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಮದುವೆ ಸಮಾರಂಭದ ಆಯೋಜಿಸಿದ್ದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ದಾಳಿ ನಡೆಸಿ ಕುಟಂಬಕ್ಕೆ 25 ಸಾವಿರ ರೂ. ದಂಡ ವಿಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮದಲ್ಲಿ ನಡೆದಿದೆ. ಕಮತನೂರು ಗ್ರಾಮದ ವರ ಕಾಶಿನಾಥ ಕಾಡಿ ಹಾಗೂ ಅವರಗೋಳ ಗ್ರಾಮದ ವಧು ಕಾಂಚನಾ ಬಾಳಾಜಿ ಅವರ ಮದುವೆಯನ್ನು ಶುಕ್ರವಾರ ಕಮತನೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ಆದರೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿರಲಿಲ್ಲ. …

Read More »

ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ?: ಉಪೇಂದ್ರ

ಬೆಂಗಳೂರು: ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ? ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್​ ಹಂಚಿಕೊಳ್ಳುವ ಮೂಲವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ (CM ) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ. ಈ ಕುರಿತಾಗಿ ಅಭಿಮಾನಿಗಳು ಸಕಾರಾತ್ಮಕ ಪ್ರತಿಕ್ರೀಯೆಯನ್ನು ಕೊಟ್ಟಿದ್ದಾರೆ. ನೀವು ನನ್ನನ್ನ …

Read More »

ಬ್ಲ್ಯಾಕ್‌, ವೈಟ್‌ ಫಂಗಸ್ ನಲ್ಲಿ ವರ್ಣದ ಅಂಶ ಹೊರತು ಬೇರೆ ವ್ಯತ್ಯಾಸವಿಲ್ಲ : ಸುಧಾಕರ್‌

ಹುಬ್ಬಳ್ಳಿ : ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್‌ ವಾಟರ್‌ ಬಳಸಬೇಕು. ಆದರೆ ಹಲವೆಡೆ ನಲ್ಲಿಯ ನೀರನ್ನು ಹಾಕಿದ್ದಾರೆ. ಇದರಿಂದ ಫ‌ಂಗಸ್‌ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿ ಐಸಿಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫ‌ಂಗಸ್‌ ಬೆಳೆಯತ್ತಿದೆ. ಇವುಗಳನ್ನು ಮತ್ತೂಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ. ತಜ್ಞರ ವರದಿ ಆಧರಿಸಿ ಬ್ಲ್ಯಾಕ್‌ ಫ‌ಂಗಸ್‌ ಸೋಂಕು ಹರಡುವುದನ್ನು ತಡೆಯಲು ಎಲ್ಲ …

Read More »