Breaking News

Laxminews 24x7

ಒಂದೇ ಬೆಡ್​ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ

ದೆಹಲಿ: ಹಾಸಿಗೆಗಳ ಕೊರತೆ, ಆಮ್ಲಜನಕದ ಕೊರತೆ.. ಒಂದೇ ಹಾಸಿಗೆಯಲ್ಲಿ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಮಲಗಿರುವ ಇಬ್ಬರು ಕೊರೊನಾ ಸೋಂಕಿತರು. ಇದು ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯ ಕರುಣಾಜನಕ ಪರಿಸ್ಥಿತಿ. ಕೊವಿಡ್ ಸೋಂಕಿತರಿಗಾಗಿಯೇ ಸುಮಾರು 1500 ಹಾಸಿಗೆ ವ್ಯವಸ್ಥೆಯಿರುವ ದೆಹಲಿಯ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿದೆ. ‘ನನಗೆ ಗೊತ್ತು, ನಮ್ಮ ಆಸ್ಪತ್ರೆಯಲ್ಲಿ ಮಿತಿಮೀರಿದ, ಹಿಡಿಯಲಾರದಷ್ಟು ಕೊರೊನಾ ಸೋಂಕಿತರು ತುಂಬಲಿದ್ದಾರೆ. ಈಗಲೇ ಹಾಸಿಗೆಯೂ ಸೇರಿ ನಮ್ಮಲ್ಲಿರುವ …

Read More »

ಪೊಲೀಸರೇ ಈ ರೀತಿ ಮಾಡಿದರೆ ಕನ್ನಡ ಪರ ಸಂಘಟನೆಗಳು ಕನ್ನಡ ಉಳಿಸೋದು ಹೇಗೆ?’ ಕಪಾಳಮೋಕ್ಷ ಮಾಡಿದ ಪೊಲೀಸ್​ಗೆ ಕರವೇ ಪ್ರಶ್ನೆ

ಬೆಂಗಳೂರು: ಚೀಟಿಂಗ್‌ ಪ್ರಕರಣವೊಂದರ ಆರೋಪಿಗಳಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಪೊಲೀಸರ ವಶದಲ್ಲಿದ್ದ ವ್ಯಕ್ತಿಗಳನ್ನು ಮಾತನಾಡಿಸಿದ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಉಪಾಧ್ಯಕ್ಷ ಉಮೇಶ್​ಗೌಡಗೆ ನೆಲಮಂಗಲ ಟೌನ್ ಠಾಣೆಯ ಎಸ್​ಐ ಸುರೇಶ್‌ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷಮಾಡಿರುವುದನ್ನು ಖಂಡಿಸಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಎದುರು ಕರವೇ ಕಾರ್ಯಕರ್ತರು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್​ಐ ಸುರೇಶ್​ರನ್ನು ಅಮಾನತು​ ಮಾಡುವಂತೆ …

Read More »

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ವಿಜಯಪುರ : ನಗರದ ಆಶ್ರಮ ರಸ್ತೆಯ ಪಾನ್‍ಶಾಪ್ ಮುಂದೆ ನಿಂತು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರಮ ರಸ್ತೆಯಲ್ಲಿನ ರಾಜು ಪಾನ್‍ಶಾಪ್ ಎದುರು ಕ್ರಿಕೆಟ್ ಬಟ್ಟಿಂಗ್ ನಡೆಯುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಕಾಳಿಕಾ ನಗರ …

Read More »

ಉಪ ಚುನಾವಣೆ ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಏಪ್ರಿಲ್ 17 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಸೇವೆಯಲ್ಲಿರುವ …

Read More »

ಎ. 17ರಂದು ಉಪ ಸಮರ : ಶುಭಾಶುಭ ಭವಿಷ್ಯ ಏನು?

ಬೆಂಗಳೂರು : ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಎ. 17ರಂದು ಮತದಾನ ನಡೆಯಲಿದೆ. ಇವುಗಳ ಫ‌ಲಿತಾಂಶ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲಾರದು. ಆದರೆ ಕೆಲವು ನಾಯಕರ ಶಕ್ತಿ, ಸಂಘಟನ ಕೌಶಲ, ದೌರ್ಬಲ್ಯಗಳನ್ನು ಒರೆಗೆ ಹಚ್ಚುವುದು ಖಚಿತ. ಬಿಜೆಪಿ ಗೆದ್ದರೆ : – ಉತ್ತರ ಕರ್ನಾಟಕದಲ್ಲಿ ಸಿಎಂ ಬಿಎಸ್‌ವೈ ಶಕ್ತಿ ವೃದ್ಧಿ. – ನಾಯಕತ್ವ …

Read More »

ಎಂಇಎಸ್ ಬೆಂಬಲಿಸಿ ಮತ ವ್ಯರ್ಥ ಮಾಡಬೇಡಿ: ದೇವೇಂದ್ರ ಫಡ್ನವೀಸ್

ಬೆಳಗಾವಿ, ಎ.15: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಿಮ್ಮ ಮತಗಳನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ. ಗುರುವಾರ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಮತಯಾಚಿಸಿ ಮಾತನಾಡಿದ ಅವರು, ಶಿವಸೇನೆ ಮುಖಂಡ ಸಂಜಯ್ ರಾವತ್ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡಲು ನಿನ್ನೆ …

Read More »

ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ

ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …

Read More »

ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್​ ವಾರ್​ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.   ಅನೇಕ ಫೇಸ್​ಬುಕ್​ …

Read More »

ಕೊರೊನಾ ಅಟ್ಟಹಾಸ; ರಾಜ್ಯದ ಪ್ರಸಿದ್ಧ ದೇವಾಲಯಗಳು, ಐತಿಹಾಸಿಕ ತಾಣಗಳು ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಿ ತಾಣಗಳು, ಐತಿಹಾಸಿಕ ದೇವಾಲಗಳನ್ನು ಬಂದ್ ಮಾಡಲಾಗುತ್ತಿದೆ. ಹಾಸನ ಜಿಲ್ಲೆಯ ಬೇಲೂರು-ಹಳೆಬೀಡು, ಶ್ರವಣಬೆಳಗೊಳಕ್ಕೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೇ 15ರವರೆಗೆ ಐತಿಹಾಸಿಕ ದೇವಾಲಯಗಳನ್ನು ಬಂದ್ ಮಾಡಿ ಭಾರತೀಯ ಪುರಾತತ್ವ ಇಲಾಖೆ ನಿರ್ದೇಶಕ ಎನ್.ಕೆ.ಪಾಟಕ್ ಆದೇಶ ಹೊರಡಿಸಿದ್ದಾರೆ.   ಇದೇ ವೇಳೆ ವಿಜಯಪುರ ಜಿಲ್ಲೆಯ ಐತಿಹಾಸಿಕ ಗೋಲಗುಮ್ಮಟಕ್ಕೂ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ …

Read More »

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮತದಾರರ ಮನವೊಲಿಕೆಗೆ ಅಂತಿಮಹಂತದ ಕಸರತ್ತು ನಡೆಸಿದ್ದಾರೆ. ಏಪ್ರಿಲ್ 17 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ …

Read More »