Breaking News

Laxminews 24x7

ಹಸಿದ ಹೊಟ್ಟೆಗೆ ಆಸರೆಯಾದ ಶಿವಣ್ಣ ದಂಪತಿ

ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ದಿನಗೂಲಿ ಕಾರ್ಮಿಕರಿಗೆ, ಬಡವರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಇದನ್ನು ಮನಗಂಡು ನಟ ಶಿವರಾಜ್‍ಕುಮಾರ್, ಅಂತಹವರಿಗೆ ಊಟ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ. ಶಿವರಾಜ್‍ಕುಮಾರ್ ಅವರು ಆಸರೆ ಎಂಬ ಹೆಸರಿನಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ. ಶಿವರಾಜ್‍ಕುಮಾರ್ ಅವರಿಗೆ ಪತ್ನಿ ಗೀತಾ ಶಿವರಾಜ್‍ಕುಮಾರ್ ಸಾಥ್ ನೀಡಿದ್ದಾರೆ. ನಾಗವಾರದಲ್ಲಿರುವ ತಮ್ಮ ನಿವಾಸದ ಸುತ್ತಮುತ್ತಲಿನ ಏರಿಯಾದಲ್ಲಿರುವ ನೂರಾರು ಜನರಿಗೆ ನಿತ್ಯವು ಆಹಾರ ಒದಗಿಸುವ ಕೆಲಸವನ್ನು ಶಿವರಾಜ್‍ಕುಮಾರ್-ಗೀತಾ ದಂಪತಿ ಮಾಡುತ್ತಿದ್ದಾರೆ. ಶಿವಣ್ಣ ಬಾಯ್ಸ್ ಹೆಸರಿನ ತಂಡವೊಂದು …

Read More »

ಶುಲ್ಕ ಪಾವತಿಗೆ ಒತ್ತಡ; ಬೆಂಗಳೂರು ಖಾಸಗಿ ಶಾಲಾ ಆಡಳಿತ ಮಂಡಳಿಯ ವರ್ತನೆಯಿಂದ ಪೋಷಕರು ಕಂಗಾಲು

ಬೆಂಗಳೂರು: ಕೊರೊನಾ ಎರಡನೇ ಅಲೆ ದೇಶದಲ್ಲಿ ಅತ್ಯಂತ ವೇಗವಾಗಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದ್ದು, ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಬೆನ್ನೆಲ್ಲೆ ದಿನಗೂಲಿ ಕಾರ್ಮಿಕರು, ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಆದರೆ ಇದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಶಾಲೆಗಳು ಮಾತ್ರ ಶುಲ್ಕ ಕಟ್ಟಿಸಿಕೊಳ್ಳಲು ಮುಂದಾಗಿದೆ. ಮೇ 24ರವರೆಗೆ ಶಾಲೆಗಳ …

Read More »

ಹೆಣಗಳ ಪಕ್ಕದಲ್ಲೇ ಸೋಂಕಿತರಿಗೆ ಚಿಕಿತ್ಸೆ, ಚಿತ್ರದುರ್ಗದಲ್ಲಿ ಭಯಾನಕ ವ್ಯವಸ್ಥೆ

ಚಿತ್ರದುರ್ಗ : ಕೊರೋನಾ ಸೋಂಕಿನ ಚಿಕಿತ್ಸೆಗೆ ಒಂದೇ ವಾರ್ಡಿನಲ್ಲಿ  ದಾಖಲಾಗಿದ್ದ ಮೂವರು ಸೋಂಕಿತರು ಸಾವನ್ನಪ್ಪಿ ಗಂಟೆಗಳೇ ಕಳೆದಿದ್ದವು. ಸೋಂಕಿತರು ಮೃತಪಟ್ಟಿರೋ ಸುದ್ದಿ ತಿಳಿದರೂ ಮೃತ ದೇಹಗಳನ್ನ ಬೇರೆ ಕಡೆಗೆ ಸ್ಥಳಾಂತರ ಮಾಡದೆ ಚಿತ್ರದುರ್ಗ ಜಿಲ್ಲಾ  ಕೋವಿಡ್  ಆಸ್ಪತ್ರೆ ಸಿಬ್ಬಂದಿ, ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದರು ಅನ್ನೋ ಆರೋಪಗಳು ಕೇಳಿ ಬಂದಿವೆ. ಈ ದೃಶ್ಯವನ್ನ ಮೊಬೈಲ್ನಲ್ಲಿ ವೀಡಿಯೋ ಮಾಡಿದ ಸೋಂಕಿತ ವಕೀಲರೊಬ್ಬರು ಆಸ್ಪತ್ರೆಯ ಅವ್ಯವಸ್ಥೆಯನ್ನ ಬಯಲು ಮಾಡಿ ಜಿಲ್ಲಾಡಳಿತದ ಬೇಜವಬ್ದಾರಿಯನ್ನ ತೋರಿಸಿ ಛೀಮಾರಿ …

Read More »

ಕೊರೊನಾ ಹಬ್ಬಲು ಬಿಜೆಪಿ ಕಾರಣ: ಸತೀಶ್​ ಜಾರಕಿಹೊಳಿ

ಬೆಂಗಳೂರು: ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಮಾನಸಿಕವಾಗಿ ಗೆದ್ದಿದೆ. ಆದರೆ ತಾಂತ್ರಿಕವಾಗಿ ಸೋತಿದೆಯಷ್ಟೇ ಎಂದು ಕಾಂಗ್ರೆಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ತಮ್ಮ ಸೋಲನ್ನು ವಿಶ್ಲೇಷಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಬೆಂಗಳೂರಿಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರನ್ನು ಸತೀಶ್​​ ಜಾರಕಿಹೊಳಿ ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು ಚುನಾವಣೆ ಆದ ಬಳಿಕ ಭೇಟಿ ಆಗಿರಲಿಲ್ಲ. ಹೀಗಾಗಿ ಬಂದು ಭೇಟಿ ಮಾಡಿದ್ದೇನೆ. ಪಕ್ಷ ಸಂಘಟನೆ ದೃಷ್ಟಿಯಿಂದ …

Read More »

ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಬೋಟ್ 9 ಜನರ ರಕ್ಷಣೆ

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಎನ್ ಎಂಪಿಟಿ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಟ್ ನಲ್ಲಿದ 9 ಜನರನ್ನು ರಕ್ಷಣೆ ಮಾಡಲಾಗಿದೆ. ಚಂಡಮಾರುತದಿಂದಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಟಗ್ ಬೋಟ್ ಶನಿವಾರ ಅರಬ್ಬಿ ಸಮುದ್ರದಲ್ಲಿ ಮಗುಚಿಬಿದ್ದಿತ್ತು. ಕಾಪುವಿನ ದೀಪಸ್ತಂಭದಿಂದ 13 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿತ್ತು. ಇಬ್ಬರು ಈಜಿ ದಡ ಸೇರಿದ್ದರೆ ಬೋಟ್ ನಲ್ಲಿದ್ದ 9 ಜನರು …

Read More »

ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ

ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ. ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ …

Read More »

ಉದ್ಯೋಗ ‘ಖಾತ್ರಿ’ ಕೂಲಿ ಹಣ ಪಡೆಯುವುದೇ ಪಜೀತಿ!

ಶಿವಮೊಗ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪಾಡು ‘ಮಾಡುವುದು ಕೂಲಿ, ಬೇಡುವುದು ಕೂಲಿ’ ಎಂಬಂತಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಸಾಕಷ್ಟು ಗ್ರಾಮೀಣ ಕುಟುಂಬಗಳಿಗೆ ಜೀವನಾಧಾರವೂ ಆಗಿದೆ. ಲಾಕ್‌ಡೌನ್‌ನಿಂದಾಗಿ ನಗರದಲ್ಲಿ ಕೆಲಸ ವಿಲ್ಲದೆ ಹಲವು ಜನರು ಉದ್ಯೋಗ ಖಾತ್ರಿ ಕಾಮಗಾರಿಗೆ ಹೋಗುತ್ತಿದ್ದಾರೆ. ಕುಟುಂಬ ನಿರ್ವಹಣೆಗೆ ಸಂಘ-ಸಂಸ್ಥೆಗಳಲ್ಲಿ ಸಾಲ ಪಡೆದು ಕಂತು ರೂಪದಲ್ಲಿ ಪಾವತಿ ಮಾಡುತ್ತಿರುವ ಅದೆಷ್ಟೋ …

Read More »

ಎಲ್ಲದಕ್ಕೂ ಕಾಂಗ್ರೆಸ್ ದೂರುವ ಬಿಜೆಪಿಯವರೇ ಈ 10 ಪ್ರಶ್ನೆಗಳಿಗೆ ಉತ್ತರಿಸಿ: ಈಶ್ವರ ಖಂಡ್ರೆ

ಬೀದರ್: ‘ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿದಂತೆ’ ಎಂಬ ಗಾದೆಯಂತೆ, ಕೋವಿಡ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿ ಸಾವಿರಾರು ಮುಗ್ಧ ಜನರ ಸಾವಿಗೆ ಕಾರಣವಾದ ಬಿಜೆಪಿ ಈಗ ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ವೆಚ್ಚ ಮಾಡಿದ್ದರೆ ಕೋವಿಡ್ ನಿಯಂತ್ರಿಸಬಹುದಾಗಿತ್ತು ಎಂದು ಆರೋಪಿಸುತ್ತಿರುವುದು ಅರ್ಥ ಹೀನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳ ಬೇಜವಾಬ್ದಾರಿತನ, ಹೊಣೆಗೇಡಿ, ತಿಳಿಗೇಡಿತನದ …

Read More »

ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು. ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ …

Read More »

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್

ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ …

Read More »