ಬೆಳಗಾವಿ :ಇಲ್ಲಿನ ಮಹಾನಗರ ಪಾಲಿಕೆಯು 2026-27ನೇ ಸಾಲಿನಲ್ಲಿ 92.32. ಲಕ್ಷ ರೂ. ಉಳಿತಾಯ ಬಜೆಟ್ ಮಂಡಿಸಿದೆ. ಒಟ್ಟು 442.54 ಕೋಟಿ ರೂ. ಆದಾಯ ನಿರೀಕ್ಷಿಸಿದ್ದು, ಅಭಿವೃದ್ಧಿಗಾಗಿ 441.62 ಕೋಟಿ ರೂ. ವೆಚ್ಚ ಮಾಡಲಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮೇಯರ್ ಮಂಗೇಶ ಪವಾರ್ ಕರೆದಿದ್ದ ವಿಶೇಷ ಪರಿಷತ್ ಸಭೆಯಲ್ಲಿ ವಾರ್ಷಿಕ ಬಜೆಟ್ ಮಂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷೆ ರೇಖಾ ಹೂಗಾರ ವಿವಿಧ ತೆರಿಗೆ ಆದಾಯ. 15 ಮತ್ತು 16ನೇ ಹಣಕಾಸು …
Read More »ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ವಿಶ್ವಾಸ ವೈದ್ಯ
ಸವದತ್ತಿ: ೇತ್ರದ ಪ್ರತಿಯೊಂದು ರಸ್ತೆ ಅಭಿವೃದ್ಧಿಯ ಸಂಕಲ್ಪ ಕೈಗೊಂಡಿದ್ದು, ಸಾರ್ವಜನಿಕರಿಗೆ ಉತ್ತಮ ಸಂಚಾರ ಸೌಲಭ್ಯ ಒದಗಿಸುವುದು ಮುಖ್ಯ ಗುರಿಯಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಪಟ್ಟಣದ ರಾಜ್ಯ ಹೆದ್ದಾರಿ&201ರಿಂದ ಮಹಾಮುನಿ ಕೆರೆವರೆಗೆ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕರ್ನಾಟಕ ಸರ್ಕಾರ ಹಾಗೂ ಪಂಚಾಯಿತಿ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 2025&26ನೇ ಸಾಲಿನ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ 50 ಲ ರೂ. ವೆಚ್ಚದಲ್ಲಿ 800 ಕಿ.ಮೀ …
Read More »ಫೆ.28ರಂದು ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್ ಅಭಿಯಾನ ಜಾಥಾ
ಬೆಳಗಾವಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಡಿಯಲ್ಲಿ ಜಿಲ್ಲೆಯಲ್ಲಿರುವ ಆರೋಗ್ಯ ವಿಜ್ಞಾನ ಕಾಲೇಜು ಸಹಯೋಗದಲ್ಲಿ ಸ್ವಾಸ್ಥೃ ಭಾರತ ಶ್ರೇಷ್ಠ ಭಾರತ ಅಂಗವಗಿ ಯುವ ಶುದ್ಧಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರವಿ ಪಾಟೀಲ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.28ರಂದು ಬೆಳಗ್ಗೆ 7.30 ಗಂಟೆಗೆ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ …
Read More »ಅಪಘಾತ ಬ್ಲಾೃಕ್ಸ್ಪಾಟ್ ಕುರಿತು ಸುಧಾರಣಾ ಕ್ರಮ ಕೈಗೊಳ್ಳಲು ಸತೀಶ ಜಾರಕಿಹೊಳಿ ಸೂಚನೆ
ಬೆಳಗಾವಿ: ವಾಕರಸಾ ಸಂಸ್ಥೆ ವ್ಯಾಪ್ತಿಯ 6 ಕಂದಾಯ ಜಿಲ್ಲೆಗಳ ಒಟ್ಟು 118 ಅಪಘಾತ ಕಪ್ಪು ಸ್ಥಳಗಳ(ಬ್ಲಾೃಕ್ಸ್ಪಾಟ್) ಕುರಿತು ಅಲ್ಪಾವಧಿ ಮತ್ತು ದೀರ್ಘಾವಧಿ ಕಾರ್ಯಯೋಜನೆ ರೂಪಿಸಿ ಅವಶ್ಯಕ ಸುಧಾರಣಾ ಕ್ರಮಗಳನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳುವಂತೆ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ವಾಕರಸಾ ಸಂಸ್ಥೆಯಿಂದ ಗುರುತಿಸಲಾದ ಅಪಘಾತ ಕಪ್ಪು ಸ್ಥಳ/ವಲಯಗಳ ಕುರಿತು ನಗರದ ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಇಂಜಿನಿಯರ್ ಕಚೇರಿಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಬ್ಲಾೃಕ್ ಸ್ಪಾಟ್ ಕುರಿತಾದ ವರದಿಯನ್ನು ಪರಿಶೀಲಿಸಿದ ಬಳಿಕ …
Read More »ಗೋಕಾಕ: ನಾಪತ್ತೆಯಾಗಿದ್ದ ಆಭರಣ ಕಳ್ಳನ ಬಳಿ ಪತ್ತೆ
ಬೆಳಗಾವಿ: ಅಡ ಇಟ್ಟ ಚಿನ್ನವನ್ನು ಬಿಡಿಸಿಕೊಂಡು ಹೋಗುವಾಗ ಬೈಕ್ ಮುಂದಿನ ಕವರ್ನಲ್ಲಿಟ್ಟಿದ್ದ ಚಿನ್ನ ಮಿಸ್ ಆಗಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಓರ್ವ ಕಳ್ಳನನ್ನು ಬಂಧಿಸಿ ಒಟ್ಟು 1.20 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ರೇವಪ್ಪ ಹಳ್ಳುರ, ಜ.24ರಂದು ಗೋಕಾಕನ ಭಗವಾನ ಶೆಡಜಿ ಅಂಗಡಿಯಲ್ಲಿ ಅಡ ಇಟ್ಟಿದ್ದ 70 ಸಾವಿರ ರೂ. ಮೌಲ್ಯದ 14.5 ಗ್ರಾಂ. ನಕ್ಲೆಸ್ ಹಾಗೂ 50 ಸಾವಿರ ರೂ. ಮೌಲ್ಯದ …
Read More »ಗ್ರಾಮಗಳಿಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ : ರಾಹುಲ್ ಶಿಂಧೆ
ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ …
Read More »ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ
ಜಾರ್ಖಂಡ್: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. …
Read More »ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಡಿಕೆಶಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ …
Read More »ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಶಕ್ತಿ ನಡೆಸಿದ ಉಗ್ರ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಅಲ್ಲದೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಒಳಮೀಸಲಾತಿ ಸಂಬಂಧ ಕೋರ್ಟ್ನಲ್ಲಿ ಪ್ರಕರಣ ಇರುವುದರಿಂದ ಸದ್ಯ 50% ಮೀಸಲಾತಿ ಪ್ರಮಾಣದಲ್ಲೇ ಹೊಸ ನೇಮಕಾತಿಗೆ ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಒಳಮೀಸಲಾತಿ ಜಾರಿ ಕಷ್ಟ ಸಾಧ್ಯವಾಗಿದೆ. …
Read More »ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಬೆಂಗಳೂರು: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕ ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ 2025’ಕ್ಕೆ ಕೊನೆಗೂ ರಾಜ್ಯಪಾಲರು ಸಹಿ ಹಾಕಿದ್ದಾರೆ. ಸಚಿವರ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿಯಾಗಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳು ನೇಮಕಾತಿ ಆಗುತ್ತಿಲ್ಲ ಅಂತ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ನೇಮಕಾತಿ …
Read More »
Laxmi News 24×7