Breaking News

Laxminews 24x7

ಬಿಜೆಪಿಯ ಮೂವರಿಂದ ಅನ್ಯಾಯ : ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ ಹೇಳಿಕೆ

ಬೆಂಗಳೂರು : ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದಿಢೀರ್‌ ದಿಲ್ಲಿಗೆ ತೆರಳಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸುಳಿವು ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಾರಕಿಹೊಳಿ, ಬಿಜೆಪಿಯ ಮೂವರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ತಮಗೆ ಅನ್ಯಾಯ ಮಾಡಿದ್ದು, ತಕ್ಕ ಪಾಠ ಕಲಿಸುತ್ತೇನೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ದಿಲ್ಲಿಯಿಂದ ಕರೆ ಬಂದಿತ್ತು. ಅವರ ಆಹ್ವಾನದ ಮೇರೆಗೆ ನಾನು ಬಂದಿದ್ದೇನೆ. ಯಾರನ್ನು ಭೇಟಿಯಾಗುತ್ತೇನೆ …

Read More »

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ …

Read More »

ಹೊರಗುತ್ತಿಗೆ ಸಿಬ್ಬಂದಿಗೆ ನಿಯಮಿತವಾಗಿ ವೇತನ ನೀಡದಿದ್ದರೆ ಶಿಸ್ತುಕ್ರಮ : ಸಚಿವ ಸುಧಾಕರ್‌

ಮಡಿಕೇರಿ : ಕೋವಿಡ್‌ ಅವಧಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡ ನರ್ಸಿಂಗ್‌ ಸಿಬ್ಬಂದಿಗಳಿಗೆ ತಕ್ಷಣ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಭರವಸೆ ನೀಡಿದ್ದಾರೆ. ಅನೇಕ ದಿನಗಳಿಂದ ಹೊರ ಗುತ್ತಿಗೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಈ ಸಿಬ್ಬಂದಿಗೆ ಇದುವರೆಗೂ ವೇತನ ನೀಡಿಲ್ಲ ಎಂಬುದನ್ನು ಕೊಡಗು ಜಿಲ್ಲಾ ಕೋವಿಡ್‌ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಂಗಳವಾರ ಈ ಭರವಸೆ ನೀಡಿದರು. …

Read More »

ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿ ವಿಜಯಪುರಕ್ಕೆ ಸ್ಥಳಾಂತರವಾಗಲಿ : ಯತ್ನಾಳ್ ಆಗ್ರಹ

ವಿಜಯಪುರ : ಪಾರಂಪರಿಕ ಹಿನ್ನೆಲೆ ವಿಜಯಪುರ ನಗರ ವಿಶ್ವವಿಖ್ಯಾತ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆ. ಜಗತ್ತಪ್ರಸಿದ್ಧ ಗೋಲಗುಮ್ಮಟ, ಇಬ್ರಾಹಿಂ ರೋಜಾ ಸೇರಿದಂತೆ ನೂರಕ್ಕೂ ಹೆಚ್ಚು ಸ್ಮಾರಕಗಳು ವಿಜಯಪುರ ನಗರದಲ್ಲಿವೆ. ಹೀಗಾಗಿ ವಿಶ್ವದರ್ಜೆಯ ಸ್ಮಾಕರಗಳೇ ಇಲ್ಲದ ಧಾರವಾಡ ನಗರದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿಯನ್ನು ವಿಜಯಪುರ ಪಾರಂಪರಿಕ ನಗರಕ್ಕೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಮಂಗಳವಾರ ನಗರದಲ್ಲಿ ಭೂತನಾಳ ಬಳಿ ಪ್ರವಾಸೋದ್ಯಮ ನಿಮಗದಿಂದ ನಿರ್ಮಿಸುತ್ತಿರುವ ತ್ರಿಸ್ಟಾರ್ …

Read More »

ಬೆಳಗಾವಿ ದಕ್ಷಿಣ ಮತಕ್ಷೇತ್ರದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ವ್ಯಾಕ್ಸೀನ್ ಹಾಕಿಸುವ ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ,

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ವ್ಯಾಕ್ಸೀನ್ ಹಾಕಿಸುವ ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ, ಕ್ಷೇತ್ರದಲ್ಲಿ ಲಸಿಕಾ ಕ್ರಾಂತಿಗೆ ಮುಂದಾಗಿದ್ದಾರೆ. ನೂರಕ್ಕೂ ಹೆಚ್ಚು ಕಾರ್ಯಕರ್ತರ ಪಡೆಯನ್ನು ಲಸಿಕಾ ಕಾರ್ಯದ ನೆರವಿಗೆ ನಿಯೋಜಿಸಿರುವ ಶಾಸಕ ಅಭಯ ಪಾಟೀಲ ಈಗಾಗಲೇ ಕ್ಷೇತ್ರದ ಸಾವಿರಾರು ಜನರಿಗೆ ವ್ಯಾಕ್ಸೀನ್ ದೊರಕಿಸಿಕೊಟ್ಟಿದ್ದು, ಶೀಘ್ರದಲ್ಲೇ ಕ್ಷೇತ್ರದಲ್ಲಿ ಬಹು ದೊಡ್ಡ ಲಸಿಕಾ ಅಭಿಯಾನ ನಡೆಸಲು ನಿರ್ಧರಿಸಿದ್ದಾರೆ. ಜನಸಂಘದ ಸಂಸ್ಥಾಪಕ ಡಾ. ಶಾಮಪ್ರಸಾದ ಮುಖರ್ಜಿ …

Read More »

ರಮೇಶ ಜಾರಕಿಹೊಳಿ ಶೀಘ್ರವೇ ಮತ್ತೆ ಸಚಿವ: ಉಮೇಶ ಕತ್ತಿ

ಬಾಗಲಕೋಟೆ: ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಳ ಸರಳ ಮನುಷ್ಯ. ಅವರ ಕ್ಯಾಸೆಟ್‌ (ಸಿಡಿ) ಕ್ರಿಯೆಟ್‌ ಮಾಡಿ ಅವರಿಗೆ ದುಃಖ ತಂದಿದ್ದಾರೆ. ಅವರು ಎರಡು ವರ್ಷ ಶಾಸಕರಾಗಿ ಇರುತ್ತಾರೆ. ಪ್ರಸಂಗ ಬಂದರೆ ಶೀಘ್ರವೇ ಸಚಿವರೂ ಆಗುತ್ತಾರೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡುವ ಪ್ರಯತ್ನ ನಮ್ಮ ಸಚಿವ ಸಂಪುಟದಿಂದ ನಡೆದಿದೆ. ನಾನು, ಜಾರಕಿಹೊಳಿ ಒಂದೇ …

Read More »

ನಮ್ಮ ಪಕ್ಷದಲ್ಲಿ ಬಣ ರಾಜಕಾರಣ ಇಲ್ಲ -ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಪಕ್ಷದಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆಗೆ ಸರ್ಕಾರ ಸಿದ್ಧತೆಯನ್ನೇ ಮಾಡಿಕೊಂಡಿಲ್ಲ. ಸರ್ಕಾರ ಸಿದ್ಧತೆ ಮಾಡಿಕೊಳ್ಳಬೇಕು. ಬೆಡ್ ಇಲ್ಲದೆಯೇ ಬಹಳ ಜನ ಸತ್ತು ಹೋಗಿದ್ರು. ಆದರೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ ಅಂತ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ‘ಕಾಂಗ್ರೆಸ್ ಬದುಕಿದೆ’ ಎಂಬ …

Read More »

ಊಟ ಮಾಡಿಸೋ ವೇಳೆ ತೆಂಗಿನ ಕಾಯಿ ಬಿದ್ದು 11 ತಿಂಗಳ ಮಗು ಸಾವು

ಹಾವೇರಿ: ಮಗುವಿಗೆ ಊಟ ಮಾಡಿಸುತ್ತಿದ್ದ ವೇಳೆ ತೆಂಗಿನ ಕಾಯಿ ತಲೆ ಮೇಲೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ. ಹಂಸಭಾವಿಯ ಮಲ್ಲಿಕಾರ್ಜುನ ಮತ್ತು ಮಾಲಾ ಎಂಬ ದಂಪತಿಗಳ ಮಗು ತನ್ವೀತ್ ವಾಲ್ಮೀಕಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ನಿನ್ನೆ ಬೆಳಗ್ಗೆ ಮನೆಯ ಎದುರು ಮಗುವನ್ನು ಆಟವಾಡಿಸುತ್ತಾ ಊಟ ಮಾಡುವ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ತಕ್ಷಣವೇ ಮಗುವನ್ನು ಕುಟುಂಬಸ್ಥರು ದಾವಣಗೆರೆ ಖಾಸಗಿ …

Read More »

ಧಿಡೀರ್ ದೆಹಲಿಗೆ ಹಾರಿದ್ದಾರೆ ರಮೇಶ್ ಜಾರಕಿಹೊಳಿ ಅವ್ರಿಗೆ ರಾತ್ರಿ ಕರೆ ಮಾಡಿ ದ್ದಾದರು ಯಾರು…

ರಮೇಶ್ ಜಾರಕಿಹೊಳಿ ಒಂದು ಸರಕಾರವನ್ನು ಬೀಳಿಸಿ ಮತ್ತೊಂದು ಸರಕಾರ ರಚಿಸಲು ಪ್ರಮುಖ ಕಾರಣ ರಾದ ರಮೇಶ್ ಜಾರಕಿಹೊಳಿ ಪ್ರತಿದಿನ ಒಂದು ಹೊಸ ವಿಷಯ ದೊಂದಿಗೆ ಚರ್ಚೆ ಯಲ್ಲಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಮಧ್ಯಾಹ್ನ ಸಡನ್ ಆಗಿ ದೆಹಲಿಗೆ ಹಾರಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ಸಾಹುಕಾರರು ಮಧ್ಯಾಹ್ನ ಮುಖ್ಯ ಮಂತ್ರಿಗಳನ್ನಾ ಭೇಟಿ ಮಾಡಿ ದೆಹಲಿಗೆ ಹಾರಿದ್ದಾರೆ. ಹೌದು ನಿನ್ನೆ …

Read More »

ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ- ವಯೋಮಿತಿ ಹೆಚ್ಚಿಸಲು ಆಗ್ರಹ

ಧಾರವಾಡ: ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ನಿರಂತರ ಲಾಕ್‍ಡೌನ್ ಜಾರಿಗೊಳಿಸಿ, ಪೊಲೀಸ್ ನೇಮಕಾತಿಗಳನ್ನು ವಿಳಂಬ ಮಾಡಿದ್ದರಿಂದ ಕೆಲವು ವಿದ್ಯಾರ್ಥಿಗಳಿಗೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಹಾಕುವ ವಯೋಮಿತಿ ಮೀರಿ ಹೋಗಿದೆ. ಹೀಗಾಗಿ ಸರ್ಕಾರ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಿಬ್ಬಂದಿ ಆಗ್ರಹಿಸಿದ್ದಾರೆ. ವಯೋಮಿತಿ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ವಯೋಮಿತಿ ಹೆಚ್ಚಿಸದಿದ್ದರೆ, ಪೊಲೀಸ್ ಹುದ್ದೆಯನ್ನು ನೆಚ್ಚಿಕೊಂಡು ಕುಳಿತ ಸಾವಿರಾರು ವಿದ್ಯಾರ್ಥಿಗಳ ಕನಸಿಗೆ ಅಡ್ಡಿಯಾಗಲಿದೆ. ಕೆಲವು ರಾಜ್ಯಗಳಲ್ಲಿ ಪೊಲೀಸ್ …

Read More »