ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ. ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.
Read More »ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?
ಬೆಂಗಳೂರು : ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ. ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು
Read More »ಲಂಚ ಪಡೆಯುತ್ತಿದ್ದ ಚಳ್ಳಕೆರೆ ತಾ.ಪಂ ಇಒ ಎಸಿಬಿ ಬಲೆಗೆ
ಚಿತ್ರದುರ್ಗ: ಪಿಡಿಒ ಒಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಚಳ್ಳಕೆರೆ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಶ್ರೀಧರ್ ಐ ಬಾರಿಕೇರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಬೆಳಗೆರೆ ಪಿಡಿಒ ಗುಂಡಪ್ಪ ಅವರಿಂದ ಕಾರ್ಯಯೋಜಿತ ಮಂಜೂರಾತಿಗಾಗಿ ತಾಲೂಕು ಪಂಚಾಯತಿ ಬಳಿ 20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್ಪಿ ಜಯಪ್ರಕಾಶ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಡಿವೈಎಸ್ಪಿ ಬಸವರಾಜ್ ಮಗುದಮ್, ಪಿಐಗಳಾದ ಪ್ರವೀಣ್ …
Read More »‘ಜೀವದ ಮೇಲೆ’ ನಿಮಗೆ ಪ್ರೀತಿ ಇದ್ದರೇ.. ಇಂಥ ‘ದುಸ್ಸಾಹಸ’ಕ್ಕೆ ಕೈ ಹಾಕಬೇಡಿ.!
ಪಣಜಿ : ಸಂಚರಿಸುವಂತ ರೈಲು ಹತ್ತಲು ಹೋಗಿ ಅನೇಕರು ಈಗಾಗಲೇ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಿದ್ದೂ ಇಂತಹ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂಬುದಾಗಿ ಎಚ್ಚರಿಸಿದ್ರೂ.. ಪ್ರಯಾಣಿಕರು ಮಾತ್ರ ಡೋಂಟ್ ಕೇರ್. ಹೀಗೆ ಚಲಿಸುತ್ತಿದ್ದಂತ ರೈಲು ಹತ್ತಿದ್ದರಿಂದ ಏನ್ ಆಯ್ತು ಅಂತ, ಈ ಸುದ್ದಿ ಓದಿ.. ‘ ಗೋವಾದ ವಾಸ್ಕೋಡಿಗಾಮಾ ರೈಲು ನಿಲ್ದಾಣದಲ್ಲಿ, ರೈಲು ನಿಂತಿದ್ದರೂ, ಹತ್ತದಿದ್ದಂತ ಪ್ರಯಾಣಿಕನೊಬ್ಬ, ಚಲಿಸಲು ಆರಂಭಿಸಿದಂತ ರೈಲು ಹತ್ತೋದಕ್ಕೆ ಪ್ರಯತ್ನ ಪಟ್ಟಿದ್ದಾನೆ. ಓಡಿ ಹೋಗಿ ಹತ್ತೋದಕ್ಕೆ ಪ್ರಯತ್ನಿಸಿದಾಗ ನಿಯಂತ್ರಣ …
Read More »ಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಸಂಚಾರವನ್ನು ಮಾರ್ಚ್ 14ರಿಂದ ಆರಂಭ
ಮೈಸೂರು, ಮಾರ್ಚ್ 12; ಐಷಾರಾಮಿ ಪ್ರವಾಸಿ ರೈಲು ಗೋಲ್ಡನ್ ಚಾರಿಯಟ್ ಸಂಚಾರವನ್ನು ಮಾರ್ಚ್ 14ರಿಂದ ಆರಂಭಿಸಲಾಗುತ್ತದೆ ಎಂದು ಐಆರ್ಸಿಟಿಸಿ ಹೇಳಿದೆ. 2020ರಲ್ಲಿ ಕೆಎಸ್ಟಿಡಿಸಿಯಿಂದ ರೈಲಿನ ನಿರ್ವಹಣೆಯನ್ನು ಐಆರ್ಸಿಟಿಸಿ ಪಡೆದಿದೆ. 6 ರಾತ್ರಿ 7 ಹಗಲುಗಳ ಪ್ರವಾಸಿ ಪ್ಯಾಕೇಜ್ ಪ್ರಯಾಣ ಮೊದಲು ಆರಂಭವಾಗಲಿದೆ. ಬೆಂಗಳೂರು ನಗರದಿಂದ ಆರಂಭವಾಗುವ ಪ್ರಯಾಣ ಬೆಂಗಳೂರಿನಲ್ಲಿಯೇ ಕೊನೆಗೊಳ್ಳಲಿದೆ. ಐಆರ್ಸಿಟಿಸಿ ವೆಬ್ಸೈಟ್ನಲ್ಲಿ ಪ್ಯಾಕೇಜ್ಗಳ ದರಗಳು ಲಭ್ಯವಿದೆ. ಬಂಡೀಪುರ, ಮೈಸೂರು, ಹಳೆಬೀಡು, ಚಿಕ್ಕಮಗಳೂರು, ಹಂಪಿ, ಐಹೊಳೆ, ಪಟ್ಟದಕಲ್ಲು ಮತ್ತು …
Read More »ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ಈ ತಿಂಗಳೊಳಗೆ ಪ್ರಯಾಣಿಕ ರೈಲುಗಳ ಸಂಚಾರ ಆರಂಭ
ನವದೆಹಲಿ: ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಈ ತಿಂಗಳೊಳಗೆ ಶೇಕಡ 85ರಷ್ಟು ಪ್ರಯಾಣಿಕ ರೈಲುಗಳ ಕಾರ್ಯಾರಂಭ ಮಾಡಲಿವೆ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಸದ್ಯ ಉಪನಗರ ರೈಲುಗಳ ಪೈಕಿ ಶೇಕಡ 95ರಷ್ಟು ರೈಲುಗಳು ಸಂಚಾರ ಆರಂಭಗೊಂಡಿದ್ದು, ಶೇ 75ರಷ್ಟು ಮೇಲ್ ಹಾಗೂ ಎಕ್ಸ್ಪ್ರೆಸ್ ರೈಲುಗಳು ಓಡಾಡುತ್ತಿವೆ. ಈ ಪ್ರಮಾಣವನ್ನ ಶೀಘ್ರವೇ ಶೇಕಡ 85ರಷ್ಟು ಹೆಚ್ಚಿಸಲಾಗುವುದು’ ಎಂದರು.
Read More »ರಾಜ್ಯದಲ್ಲಿ ಇಂದು 833 ಹೊಸ ಪ್ರಕರಣಗಳು ದಾಖಲು
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್-19 ದೃಢಪಟ್ಟ 833 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,58,417 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 12,386ಕ್ಕೆ ತಲುಪಿದೆ. ಶುಕ್ರವಾರ ಗುಣಮುಖರಾದ 545 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 9,37,898 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,114 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ …
Read More »16 ವರ್ಷ ಮೇಲ್ಪಟ್ಟರೆ ಬಾಲಾರೋಪಿ ಅಲ್ಲ?
ನವದೆಹಲಿ: ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ವಯಸ್ಕ ಆರೋಪಿಯ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕು ಎಂದು ಉನ್ನತಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. 2017ರಲ್ಲಿ ಪೋಸ್ಕೊ ಅಡಿಯಲ್ಲಿ 32,608 ಪ್ರಕರಣಗಳು ದಾಖಲಾಗಿದ್ದವು. 2019ರಲ್ಲಿ ಈ ಪ್ರಮಾಣ 47,325ಕ್ಕೆ (ಶೇ. 45) ಏರಿಕೆ ಆಗಿದೆ. ಆದ್ದರಿಂದ ವಯೋಮಿತಿಯನ್ನು ಪುನರ್ ಪರಿಶೀಲಿಸುವ ಮತ್ತು ಸೈಬರ್ ಅಪರಾಧ ಎಸಗುವವರ ವಯಸ್ಸನ್ನು ಪುನರ್ ವಿಮಶಿಸಬೇಕಿದೆ ಎಂದು ಸಮಿತಿ ಶಿಫಾರಸು …
Read More »ಭದ್ರಾವತಿ ಶಾಸಕ ಸಂಗಮೇಶ್’ಗೆ ಬೆಂಬಲ: ಶಿವಮೊಗ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜು
ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಚಲೋ ಆಯೋಜಿಸಿದೆ. ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಸಂಗಮೇಶ್ ಅವರನ್ನು …
Read More »CBSE ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: “ಕೃತಕ ಬುದ್ಧಿಮತ್ತೆ” ಲಭ್ಯ: ನೋಂದಾಯಿಸುವುದು ಹೇಗೆ | ಹಂತ ಹಂತದ ಮಾರ್ಗದರ್ಶಿ ಇಲ್ಲಿದೆ
ನವದೆಹಲಿ: ಸಿಬಿಎಸ್ಇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳ ಸಲುವಾಗಿ ವಿದ್ಯಾರ್ಥಿಗಳಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಕೇಂದ್ರೀಯ ಪ್ರೌಡಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂಟೆಲ್ ಸಹಯೋಗದೊಂದಿಗೆ ಎಐ (Artificial Intelligence Platform) ವಿದ್ಯಾರ್ಥಿ ಸಮುದಾಯವನ್ನು (ಎಐಎಸ್ಸಿ) ಶುಕ್ರವಾರ ಪ್ರಾರಂಭಿಸಿದೆ. ಈ ‘ಕೃತಕ ಬುದ್ಧಿಮತ್ತೆ’ ಪ್ಲಾಟ್ಫಾರ್ಮ್ನ ಮುಖ್ಯ ಉದ್ದೇಶವೆಂದರೆ ವಿದ್ಯಾರ್ಥಿಗಳು ಕಲಿಯಲು ಮತ್ತು ಅನುಭವಗಳನ್ನು ಹಂಚಿಕೊಳ್ಳಲು ಒಟ್ಟಿಗೆ ಸೇರುವುದಕ್ಕೆ ಇದು ಸ್ಥಳವನ್ನು ಒದಗಿಸುತ್ತದೆ. ಇದಲ್ಲದೇ ಸಿಬಿಎಸ್ಇಯ ನವೀಕರಣಗಳ ಪ್ರಕಾರ, ಕೃತಕ …
Read More »
Laxmi News 24×7