Breaking News
Home / Laxminews 24x7 (page 3723)

Laxminews 24x7

ಕಲಾಪದಲ್ಲಿ ‘ಅನರ್ಹ-ಅರ್ಹರ’ ಗಲಾಟೆ

ಬೆಂಗಳೂರು: 17 ಜನ ಶಾಸಕರನ್ನ ಸುಪ್ರೀಂಕೋರ್ಟ್ ಅನರ್ಹ ಮಾಡಿದ್ದು ಆಯ್ತು. ಅದರಲ್ಲಿ 11 ಜನ ಮತ್ತೆ ಚುನಾವಣೆಯಲ್ಲಿ ಗೆದ್ದು ಅರ್ಹರಾಗಿ ಸಚಿವರಾಗಿಯೂ ಆಯ್ತು. ಈಗ ಅನರ್ಹ ಅನ್ನೋ ಪದ ದೊಡ್ಡ ಗಲಾಟೆಗೆ ಕಾರಣವಾಗಿದೆ. ಅಷ್ಟಕ್ಕೂ ಈ ಗಲಾಟೆ ನಡೆದಿದ್ದು ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಚರ್ಚೆ ವೇಳೆ ಆಡಿದ ಆ ಒಂದು ಪದದಿಂದ ಕಲಾಪದಲ್ಲಿ ಗದ್ದಲ ಗಲಾಟೆ ಉಂಟಾಯ್ತು. ವಿಧಾನ ಪರಿಷತ್‍ನಲ್ಲಿ ಇಂದು ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ಆಗುತ್ತಿತ್ತು. …

Read More »

ಮಂಗಳೂರು ಗಲಭೆಯನ್ನು ಎಳೆ ಎಳೆಯಾಗಿ ಬಿಡಿಸಿಟ್ಟರು” ಸಿದ್ದರಾಮಯ್ಯ

ಬೆಂಗಳೂರು, ಫೆ.19- ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರು ಪ್ರತಿಭಟನೆಯಲ್ಲಿ ಗೋಲಿಬಾರ್ ನಡೆದು ಇಬ್ಬರು ಸಾವನ್ನಪ್ಪಿರುವ ಪ್ರಕರಣ ವಿಧಾನಸಭೆಯಲ್ಲಿಂದು ಗಂಭೀರ ಚರ್ಚೆಗೆ ಒಳಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ಕಾರಣವಾಯಿತು. ಇಂದು ಬೆಳಗ್ಗೆ ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿಯಮ 69ರ ಅಡಿ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆ ಮಾಡಲು ಅವಕಾಶ ಕಲ್ಪಿಸಿದರು. ಚರ್ಚೆ ಆರಂಭಿಸಿದ ಸಿದ್ದರಾಮಯ್ಯ …

Read More »

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ: ಎಚ್.ಡಿ.ದೇವೇಗೌಡ

ರಾಜ್ಯದ ಬಿಜೆಪಿ ಸರಕಾರವನ್ನು ಪತನಗೊಳಿಸುವ ಇಚ್ಛೆ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ನಾವು ಸೋಲನ್ನು ಸವಾಲಾಗಿ ಸ್ವೀಕರಿಸಿ ಕೆಳಮಟ್ಟದಿಂದ ಪಕ್ಷ ಸಂಘಟಿಸುವ ಕೆಲಸವನ್ನು ಮಾಡುತ್ತೇವೆ. ರಾಜ್ಯದ ಅಭಿವೃದ್ಧಿಯಾಗಬೇಕೆಂದರೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ. ಇದಕ್ಕೆ ಆಂದ್ರಪ್ರದೇಶ, ತಮಿಳುನಾಡು, ಪಶ್ಚಿಮಬಂಗಾಳ ಮೊದಲಾದವು ಸಾಕ್ಷಿಯಾಗಿವೆ ಎಂದು ಹೇಳಿದರು. ಸಮ್ಮಿಶ್ರ ಸರಕಾರ ಪತನಕ್ಕೂ ಸಿದ್ದರಾಮಯ್ಯ ಕಾರಣ, ನನ್ನ …

Read More »

– ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿದ್ದರಿಂದಾಗಿ ಡಿವೈಎಸ್‍ಪಿ ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡರುಜಾರ್ಜ್:.

ಬೆಂಗಳೂರು, ಫೆ.19- ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿದ್ದರಿಂದಾಗಿಯೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ.ರವಿ ಮತ್ತು ಡಿವೈಎಸ್‍ಪಿ ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸಭೆಯಲ್ಲಿಂದು ಮಂಗಳೂರು ಗಲಭೆ ಪ್ರಕರಣದ ಕುರಿತು ಚರ್ಚೆ ನಡೆಯುತ್ತಿದ್ದಾಗ ಸಚಿವ ಸುರೇಶ್‍ಕುಮಾರ್ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲಸ ಮಾಡಬೇಡಿ ಎಂದು ಸಲಹೆ ನೀಡಿದರು. ಆಗ ಮಧ್ಯ ಪ್ರವೇಶಿಸಿದ ಕೆ.ಜೆ.ಜಾರ್ಜ್ ಅವರು, ಬಿಜೆಪಿ ಆಡಳಿತ …

Read More »

ಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು.

ತುಮಕೂರು: ವಿಧಾನಸಭಾ ಅಧಿವೇಶನದ ನಡುವೆಯೂ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಪಟೂರು ತಾಲೂಕಿನ ನೋಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡರು. ಹೆಲಿಕಾಪ್ಟರ್ ಮೂಲಕ ಬೆಳಗ್ಗೆ 9:30ಕ್ಕೆ ಮಠಕ್ಕೆ ಆಗಮಿಸಿದ ಸಿಎಂ, ಮೃತ್ಯುಂಜಯ ಹೋಮ, ರುದ್ರ ಹೋಮ, ಜಯಾದಿ ಹೋಮದಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದರು. ಬಳಿಕ ಕಾಡುಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ವೇದಿಕೆ ಕಾರ್ಯಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಕಾಡುಸಿದ್ದೇಶ್ವರ ಮಠದ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ …

Read More »

250 ಚಿತ್ರಗಳಲ್ಲಿ ನಟಿಸಿದ ಹಿರಿಯ ಕಲಾವಿದನಿಗೆ ಕಿಡ್ನಿ ವೈಫಲ್ಯ- ಉಳಿಸಿಕೊಳ್ಳಲು ಜಗ್ಗೇಶ್ ಪ್ರಯತ್ನ

  ಬೆಂಗಳೂರು: ನವರಸನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಒಂದು ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಕಲಾವಿದನ ಬಗ್ಗೆ ಮಾತನಾಡಿ ಭಾವುಕರಾಗಿದ್ದರು. ಇದೀಗ ಆ ಕಲಾವಿದ ಯಾರು ಎಂಬುದನ್ನು ತಿಳಿಸಿದ್ದಾರೆ. ಜಗ್ಗೇಶ್ ಅಂದು ಕನ್ನಡ ಚಿತ್ರರಂಗದ ಪೋಷಕ ನಟ ಕಿಲ್ಲರ್ ವೆಂಕಟೇಶ್ ಬಗ್ಗೆ ಮಾತನಾಡಿದ್ದು. ಇವರು ಒಂದು ಕಾಲದಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಗುರುತಿಸಿಕೊಂಡಿದ್ದರು. ಆದರೆ ಇಂದು ವೆಂಕಟೇಶ್ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡುವ …

Read More »

ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ಮಾಡಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆ ಕರ್ನಾಟಕ ಲಿಂಗಾಯತ ಸಂಸ್ಥೆ ( ಕೆಎಲ್ಇ) ಗೆ ಅವಿರೋಧವಾಗಿ 4 ನೇ ಬಾರಿಗೆ ಆಯ್ಕೆ ಆಗುವ ಮೂಲಕ ಕಾರ್ಯಧ್ಯಕ್ಷ ಸ್ಥಾನ ಅಲಂಕರಿಸಿರುವ ಶ್ರೀ ಡಾ.ಪ್ರಭಾಕರ ಕೋರೆ ಜಿ ಯವರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ …

Read More »

ದೇಶದ ವಿರುದ್ಧ ಘೋಷಣೆಗಳನ್ನ ಕೂಗುವವರಿಗಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರು ಸದನವನ್ನ ಬಹಿಷ್ಕಾರ ಮಾಡಿದ್ದಾರೆ:ಶ್ರೀರಾಮುಲು

ರಾಯಚೂರು: ದೇಶದ ವಿರುದ್ಧ ಘೋಷಣೆಗಳನ್ನ ಕೂಗುವವರಿಗಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ನಾಯಕರು ಸದನವನ್ನ ಬಹಿಷ್ಕಾರ ಮಾಡಿದ್ದಾರೆ ಇದು ಸರಿಯಲ್ಲ ಅಂತ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಶ್ರೀರಾಮುಲು, ಹುಬ್ಬಳ್ಳಿ-ಬೀದರ್ ನಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಜಯಘೋಷ ಕೂಗುತ್ತಿದ್ದಾರೆ. ಇಂತಹದ್ದನ್ನ ನೋಡಿಕೊಂಡು ನಾವು, ಸರ್ಕಾರ ಕೈ ಕಟ್ಟಿಕೊಂಡು ಕೂಡಲು ಸಿದ್ಧರಿಲ್ಲ. ಸದನ ಬಹಿಷ್ಕಾರ ಮಾಡುವ ಮೂಲಕ ಅವರನ್ನ ರಕ್ಷಣೆ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಭಯೋತ್ಪಾದನೆಗೆ ಪ್ರಚೋದನೆ …

Read More »

ಭೂಗತ ಪಾತಕಿ ಜೈರಾಜ್ ಪಾತ್ರದಲ್ಲಿ ಡಾಲಿ

ಬೆಂಗಳೂರು: ಡಾಲಿ ಖ್ಯಾತಿಯ ಧನಂಜಯ್ ಇತ್ತೀಚೆಗೆ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದು, ಒಂದರ ಮೇಲೊಂದು ಸಿನಿಮಾ ಆಫರ್‍ಗಳು ಅವರನ್ನು ಅರಸಿ ಬರುತ್ತಿವೆ. ಅಲ್ಲದೆ ಒಂದಕ್ಕಿಂತ ಮತ್ತೊಂದು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲು ಧನಂಜಯ್ ತಯಾರಾಗಿದ್ದು, ಸಿಲಿಕಾನ್ ಸಿಟಿಯ ಭೂಗತ ಪಾತಕಿ ಜೈರಾಜ್ ಪಾತ್ರ ನಿರ್ವಹಿಸಲಿದ್ದಾರೆ. ಟಗರು’ ಸಿನಿಮಾ ತೆರೆಕಂಡ ನಂತರ ಡಾಲಿ ಧನಂಜಯ್ ನಸೀಬು ಫುಲ್ ಚೇಂಜ್ ಆಗಿದೆ. ಸಾಲು ಸಾಲು ಚಿತ್ರಗಳಲ್ಲಿ ನಟಿಸಲು ಅವರಿಗೆ ಆಫರ್‍ಗಳು ಹುಡುಕಿಕೊಂಡು …

Read More »

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ. ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್..

ರಾಜ್ಯ ಬಿಜೆಪಿಯಲ್ಲಿ ಏನಾಗ್ತಿದೆ..? ತಡರಾತ್ರಿ ಪಂಚಮಸಾಲಿ ಲಿಂಗಾಯತ ಶಾಸಕರ ಸೀಕ್ರೆಟ್ ಮೀಟಿಂಗ್.. ಬೆಂಗಳೂರು, ಫೆ.19-ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದೆ.ಪಂಚಮಸಾಲಿ ಲಿಂಗಾಯತ ಸಮುದಾಯದ ಬಿಜೆಪಿ ಶಾಸಕರಿಂದ ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಕರಡಿ ಸಂಗಣ್ಣ, ನಿಂಬಣ್ಣವರ್, ಮಹೇಶ್ ಕುಮಟಳ್ಳಿ, ಮೋಹನ್ ಲಿಂಬಿಕಾಯಿ ಹಾಗೂ ಮುರುಗೇಶ್ ನಿರಾಣಿ ಭಾಗವಹಿಸಿದ್ದರು. ನಿನ್ನೆ ರಾತ್ರಿ ಅವರ ನೇತೃತ್ವದಲ್ಲಿ …

Read More »