ಬೆಂಗಳೂರು,ಏ.7- ರಾಜ್ಯದ 49 ಬರಪೀಡಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರಿಗಾಗಿ ತಾಲ್ಲೂಕಿಗೆ ತಲಾ ಒಂದು ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಗ್ರಾಮ ಪಂಚಾಯ್ತಿಗಳಲ್ಲಿ ಕೊರೋನಾ ಟಾಸ್ಕ್ ಫೋರ್ಸ್ ರಚನೆ ಮಾಡಿದ್ದೇವೆ. ಗ್ರಾಮಗಳಲ್ಲೂ ಸಮಿತಿಗಳನ್ನು ಮಾಡಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ನರೇಗಾ ಯೋಜನೆಯಲ್ಲಿ ಕೇಂದ್ರದಿಂದ 1,861 ಕೋಟಿ …
Read More »ಆನ್ಲೈನ್ನಲ್ಲಿ ದ್ರಾಕ್ಷಿ ಮಾರಾಟಕ್ಕೆ ವ್ಯವಸ್ಥೆ : ಸಚಿವ ಬಿ.ಸಿ.ಪಾಟೀಲ್
ವಿಜಯಪುರ, ಏ. 7: ರೈತ ಸಮುದಾಯಕ್ಕಾಗುವ ತೊಂದರೆ ಇಡೀ ದೇಶಕ್ಕಾಗುವ ತೊಂದರೆಯಿದ್ದಂತೆ.ಹೀಗಾಗಿ ರೈತ ಸಮುದಾಯಕ್ಕೆ ಅನುಕೂಲವಾಗಲೆಂದು ಕೃಷಿ ಉತ್ಪನ್ನಗಳ ಸುಲಲಿತ ಮಾರಾಟಕ್ಕೆ ಅಂತರಾಜ್ಯ ನಿರ್ಬಂಧಗಳನ್ನು ಸಹ ತೆಗೆದುಹಾಕಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಸಚಿವರು ಕೊರೊನಾ ಹಿನ್ನಲೆಯಲ್ಲಿ ರೈತ ಮತ್ತು ಕೃಷಿ ಚಟುವಟಿಕೆಗಳ ಕುರಿತು ಜಿಲ್ಲಾ ಕೃಷಿ, ತೋಟಗಾರಿಕೆ, ಆರೋಗ್ಯ, ಪೊಲೀಸ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. …
Read More »ಕಾರ್ಡ್ ಇಲ್ಲದ ಮಂದಿಗೂ ಪಡಿತರ ಕಿಟ್ – ಯಾವುದೇ ತರಕಾರಿ ತಗೆದುಕೊಂಡ್ರು ಕೆಜಿಗೆ 10 ರೂ. ಮಾತ್ರ
ಮೈಸೂರು: ಪಡಿತರ ಕಾರ್ಡ್ ಇರೋರಿಗೆ ಪಡಿತರ ಕೊಡ್ತಾರೆ ಆದರೆ ಕಾರ್ಡ್ ಇಲ್ಲದೆ ಇರೋರ ಗತಿ ಏನೂ ಎಂದು ಬಹಳಷ್ಟು ಜನ ಪ್ರಶ್ನಿಸಿದ್ದರು. ಈಗ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆ ಪ್ರಶ್ನೆಗೆ ಸ್ಥಳೀಯ ಶಾಸಕ ಜಿ.ಟಿ ದೇವೇಗೌಡ ಉತ್ತರ ನೀಡಿದ್ದು, ಡಿಸಿಸಿ ಬ್ಯಾಂಕ್ ಜೊತೆಗೂಡಿ ಪಡಿತರ ಕಾರ್ಡ್ ಇಲ್ಲದವರ ನೆರವಿಗೆ ಧಾವಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಟ್ಟು 5 ಸಾವಿರ ಜನರ ಬಳಿ ಯಾವುದೇ ಪಡಿತರ ಕಾರ್ಡ್ ಇಲ್ಲ. ಹೀಗಾಗಿ ಇವರಿಗೆ 10 …
Read More »ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ
ಶಂಕಿತ ಕೊರೊನಾಗೆ ಮಗು ಹಂಸಲೇಖ ಬಲಿ ಯಾದಗಿರಿ, ಶಹಾಪುರಃ ಕೊರೊನಾ ವೈರಸ್ ಶಂಕಿತ ಕ್ವಾರಂಟೈನ್ ನಲ್ಲಿದ್ದ ಮಗುವೊಂದ ಕೆಮ್ಮು, ಜ್ವರದಿಂದ ಬಳಲಿ ಅಸುನೀಗದ ಘಟನೆ ಜಿಲ್ಲೆಯ ಶಹಾಾಪುರ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ. ಹಂಸಲೇಖ ತಂದೆ ರಾಮಪ್ಪ ಹೊಸಮನಿ (4) ಎಂಬ ಮಗುವೇ ಶಂಕಿತ ಕೊರೊನಾದಿಂದ ಮೃತಪಟ್ಟಿದೆ ಎನ್ನಲಾಗಿದೆ. ಮಗುವಿನ ಪಾಲಕರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಹಾವಳಿಗೆ ಇಡಿ ದೇಶ ಲಾಕ್ ಡೌನ್ ಆದ ಹಿನ್ನೆಲೆ ಅವರು ಏಪ್ರೀಲ್ …
Read More »ಕ್ವಾರಂಟೈನ್ ಕೋಣೆ ಮುಂದೆಯೇ ಮಲವಿಸರ್ಜಿಸಿ ವಿಕೃತಿ – ತಬ್ಲಿಘಿಗಳ ವಿರುದ್ಧ ಕೇಸ್
ನವದೆಹಲಿ: ಕೊರೊನಾ ಕ್ವಾರಂಟೈನ್ ಕೋಣೆಯ ಮುಂದೆಯೇ ದೆಹಲಿ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಇಬ್ಬರು ತಬ್ಲಿಘಿಗಳು ಕ್ವಾರಂಟೈನ್ ಕೊಠಡಿಯ ಮುಂದೆಯೇ ಮಲವಿಸರ್ಜನೆ ಮಾಡಿ ವಿಕೃತಿ ಮರೆದಿರುವಂತಹ ಘಟನೆ ನರೇಲಾ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸರು, ಕ್ವಾರಂಟೈನ್ ಕೋಣೆಯ ಮುಂದೆ ಮುಲವಿಸರ್ಜನೆ ಮಾಡಿದ ಇಬ್ಬರ ಮೇಲೆ ದೂರು ದಾಖಲಾಗಿದೆ. ಈ ಇಬ್ಬರು ಆರೋಪಿಗಳು ಉತ್ತರ ಪ್ರದೇಶದ ಬರಾಬಂಕಿ ನಿವಾಸಿಗಳಾಗಿದ್ದು, ಕಳೆದ ತಿಂಗಳು ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ …
Read More »ಪ್ರಾಣದ ಹಂಗು ತೊರೆದು ಪೇಂಟರ್ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ನೆಲಮಂಗಲ: ಬಣ್ಣ ಬಳಿಯಲು ಹೋಗಿ ಸುಮಾರು 12 ಅಡಿ ಆಳದ ನೀರಿನ ಸಂಪ್ಗೆ ಬಿದ್ದು ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದವರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ ಪ್ರಾಣದ ಹಂಗು ತೊರೆದು ರಕ್ಷಿಸಿ ಹೀರೋ ಆಗಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಸುಭಾಷ್ ನಗರದಲ್ಲಿ ಘಟನೆ ನಡೆದಿದ್ದು, ಉಸಿರಾಟದ ತೊಂದರೆಯಿಂದ ನರಳಾಡುತ್ತಿದ್ದ ಪೇಂಟರ್ ಹಾಗೂ ಆತನ ರಕ್ಷಣೆಗೆ ಇಳಿದಿದ್ದ ವ್ಯಕ್ತಿ ಒಟ್ಟು ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರೇವಣ್ಣ …
Read More »ಮದ್ಯ ಮಾರಾಟಕ್ಕೆ ಅನುಮತಿ ಕೋರಿದ್ದ ವೈದ್ಯರಿಗೆ 10 ಸಾವಿರ ದಂಡ
ಬೆಂಗಳೂರು: ಲಾಕ್ಡೌನ್ ವೇಳೆ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದ ಮನೋವೈದ್ಯರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದೆ. ಕೊರೊನಾ ವೈರಸ್ ಹಾವಳಿ ತಡೆಗಟ್ಟುವ ಸಂಬಂಧ ದೇಶದಲ್ಲಿ ಲಾಕ್ಡೌನ್ ಜಾರಿಯಾಗಿದ್ದು ಎಲ್ಲ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿದೆ. ಕರ್ನಾಟಕದಲ್ಲೂ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಖ್ಯಾತ ಮನೋವೈದ್ಯ ವಿನೋದ್ ಕುಲಕರ್ಣಿ ಮದ್ಯ ಮಾರಾಟಕ್ಕೆ ಅನುಮತಿ ಕೋರಿ ಪಿಐಎಲ್ ಸಲ್ಲಿಸಿದ್ದರು. …
Read More »ಲಾಕ್ಡೌನ್ ವಿಸ್ತರಣೆಗೆ ವಿವಿಧ ರಾಜ್ಯಗಳಿಂದ ಕೇಂದ್ರಕ್ಕೆ ಮನವಿ
ನವದೆಹಲಿ: ದೇಶಾದ್ಯಂತ ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೀಗಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ವಿಸ್ತರಿಸುವಂತೆ ಅನೇಕ ರಾಜ್ಯ ಸರ್ಕಾರಗಳು ಮತ್ತು ತಜ್ಞರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಇತ್ತ ಕೇಂದ್ರ ಸರ್ಕಾರವೂ ಲಾಕ್ಡೌನ್ ವಿಸ್ತರಿಸುವ ನಿಟ್ಟಿನಲ್ಲಿ ಯೋಚನೆ ನಡೆಸಿದೆ. ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ದೇಶಾದ್ಯಂತ …
Read More »ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್ಡೌನ್ ಎಫೆಕ್ಟ್
ಮಡಿಕೇರಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಭಾಗವಹಿಸುವ ದುಬಾರೆ ಸಾಕಾನೆ ಶಿಬಿರಕ್ಕೂ ಲಾಕ್ಡೌನ್ ಎಫೆಕ್ಟ್ ತಟ್ಟಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಸಾಕಾನೆ ಶಿಬಿರದಲ್ಲಿ ಆನೆಗಳ ಪರಿಸ್ಥಿತಿ ಸಾಕಾನೆಗಳ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತೆ ಆಗಿದೆ. ಶಿಬಿರದಲ್ಲಿರುವ ಆನೆಗಳಿಗೆ ಹೊಟ್ಟೆ ತುಂಬಾ ಆಹಾರ ಬಳಲುತ್ತಿವೆ. ಲಾಕ್ಡೌನ್ ಹಿನ್ನೆಲೆ ಆಹಾರ ಪೂರೈಕೆಯಾಗಿಲ್ಲ. ಆನೆಗಳಿಗೆ ಪ್ರತಿದಿನ ಆಹಾರ ನೀಡುತ್ತಿದ್ದ ಭತ್ತದ ಹುಲ್ಲು, ಬೆಲ್ಲದ ಕೊರತೆ ಉಂಟಾಗಿದೆ. ಮಾವುತರು, ಕಾವಡಿಗರಿಗೂ ಅಗತ್ಯ ವಸ್ತುಗಳ ಕೊರತೆಯಾಗಿದೆ. …
Read More »ಅಮೆರಿಕಕ್ಕೆ ಭಾರತದಿಂದ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆ ರಫ್ತು
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನವಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಅಮೆರಿಕಕ್ಕೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ರಫ್ತು ಮಾಡಲು ಒಪ್ಪಿಗೆ ಸೂಚಿಸಿದೆ. ಭಾರತ ಸರ್ಕಾರ ದೇಶದಲ್ಲಿ ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಮಲೇರಿಯಾ ರೋಗದ ವಿರುದ್ಧವಾಗಿ ನೀಡುವ ಹೈಡ್ರಾಕ್ಸಿಕ್ಲೋರೋಕ್ವಿನ್, ಪ್ಯಾರಾಸಿಟಮೊಲ್ ಸೇರಿದಂತೆ 16 ಮಾತ್ರೆಗಳ ರಫ್ತಿಗೆ ನಿಷೇಧ ಹೇರಿತ್ತು. ಈ ಮಧ್ಯೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳಿಂದ ಕೊರೊನಾ ಪೀಡಿತ ರೋಗಿಗಳು ಗುಣವಾಗುತ್ತಾರೆ ಎನ್ನುವ ವಿಚಾರ ಅಧ್ಯಯನದಿಂದ ತಿಳಿದು ಬಂದಿತ್ತು. ಅಮೆರಿಕದಲ್ಲಿ ಕೊರೊನಾ ಸಾವು …
Read More »