Breaking News

Laxminews 24x7

ಸೋಂಕಿತರನ್ನು ಕುಣಿದು, ರಂಜಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ : ಹೊನ್ನಾಳ್ಳಿಯ ಹೋರಿಯ ಡ್ಯಾನ್ಸ್ ಸಖತ್ ವೈರಲ್.!

ಹೊನ್ನಾಳ್ಳಿ : ಈಗಾಗಲೇ ಅನೇಕ ವಿಷಯಗಳಿಂದ ಸುದ್ದಿಯಾಗಿರುವಂತ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳ್ಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ, ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಕೊರೋನಾ ಸೋಂಕಿತರೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ, ಅವರನ್ನು ರಂಜಿಸಿ, ಸೋಂಕಿನ ಬಾಧೆಯಿಂದ ಕೆಲಕಾಲ ಮರೆಯುವಂತೆ ಮಾಡಿದ್ದಾರೆ. ಹೌದು.. ಹೊನ್ನಾಳ್ಳಿಯ ಹೋರಿ ಎಂದು ಸಹ ಪ್ರಸಿದ್ಧವಾಗಿರುವಂತ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಕೊರೋನಾ ಸೋಂಕಿತರಿಗೆ ಒಂದಷ್ಟು ಉಲ್ಲಾಸಭರಿತರನ್ನಾಗಿ ಮಾಡಿದ್ದಾರೆ. ಅದು ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ರಿಮೇಕ್ ಹಾಡನ್ನು ಹಾಕಿ, …

Read More »

ಪ್ಯಾಕೇಜ್ ಪರಿಹಾರ ಸಿಗದವರಿಗೆ ಸಿಹಿ ಸುದ್ದಿ: 10 -12 ದಿನಗಳಲ್ಲಿ ಮತ್ತೊಂದು ವಿಶೇಷ ಪ್ಯಾಕೇಜ್; ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು …

Read More »

ಭಕ್ತಿ – ಶ್ರದ್ದಾ ಕೇಂದ್ರ ಇಡಗುಂಜಿಯ ಸಿದ್ದಿ ವಿನಾಯಕ ದೇವಸ್ಥಾನ

ಉತ್ತರ ಕನ್ನಡ ಜಿಲ್ಲೆ ಹಲವಾರು ಪ್ರಾಕೃತಿಕ ವಿಸ್ಮಯವನ್ನು ಹೊಂದಿದ್ದು, ಮಾತ್ರವಲ್ಲ ತನ್ನ ಮಡಿಲಿನಲ್ಲಿ ಹಲವಾರು ಶಕ್ತಿ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಇಡಗುಂಜಿ ವಿನಾಯಕ ದೇವಸ್ಥಾನವೂ ಸಹ ಅತ್ಯಂತ ಶ್ರದ್ದಾ ಕೇಂದ್ರವಾಗಿದ್ದು ಭಕ್ತರ ಇಷ್ಟಾರ್ಥವನ್ನು ಈಡೇರಿಸುವ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕರ್ನಾಟಕದ ಅತ್ಯಂತ ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರ ಮಾತ್ರವಲ್ಲ ಸುಮಾರು 1500 ವ‌ರ್ಷಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿದ ಇಡಗುಂಜಿ ವಿನಾಯಕ ದೇವಸ್ಥಾನ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ …

Read More »

ಅರಬ್ ನಿಂದ ಬಂತು 220 ಮೆಟ್ರಿಕ್ ಟನ್ ಜೀವರಕ್ಷಕ ಆಕ್ಸಿಜನ್

ಮಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಾಗಿದ್ದು, ಹೊರದೇಶಗಳಿಂದ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಇದೀಗ ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ 220 ಮೆಟ್ರಿಕ್ ಟನ್ ಆಕ್ಸಿಜನ್ ಆಗಮಿಸಿದೆ.   ಭಾರತೀಯ ನೌಕಾಪಡೆಯ ಐ ಎನ್ ಎಸ್ ಶಾರ್ದೂಲ ಎಂಬ ವಾರ್ ಶಿಪ್, ಕುವೈಟ್ ನಿಂದ 11 ಕಂಟೇನರ್ ಗಳಲ್ಲಿ ಒಟ್ಟು 220 ಮೆಟ್ರಿಕ್ ಟನ್ ಮೆಡಿಕಲ್ ಆಕ್ಸಿಜನ್ ನ್ನು ಹೊತ್ತು ತಂದಿದೆ. ನವಮಂಗಳೂರು …

Read More »

ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.

ಬಳ್ಳಾರಿ: ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ. ಕೊರೊನಾ ದೂರವಾಗಲಿ ಅಂಥಾ ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ ಆಚೆ ಚೆಲ್ಲಿ ಬಂದಿದ್ದಾರೆ. ಗ್ರಾಮದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಳ್ಳಿ ಜನತೆ …

Read More »

ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್

ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.   ಹೊಸೂರಿನಲ್ಲಿ ಸುಮಾರು 50 …

Read More »

ಸನ್ನಿ ಲಿಯೋನ್‍ಗೆ ಬಟ್ಟೆ ತೊಡಿಸಿ ಸುಸ್ತಾದ ಆರ್ಮಿ ತಂಡ

ಮುಂಬೈ: ಮಾದಕ ನಟಿ ಸನ್ನಿ ಲಿಯೋನ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ನಾನಾ ವಿಚಾರಕ್ಕೆ ಸುದ್ದಿಯಾಗುವ ಬೇಬಿ ಡಾಲ್ ಬಟ್ಟೆ ತೊಟ್ಟುಕೊಳ್ಳಲು ಕಷ್ಟ ಪಡುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಸನ್ನಿ ಲಿಯೋನ್ ರಿಯಾಲಿಟಿ ಶೋವೊಂದರಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‍ನ ಜನಪ್ರಿಯ Splitsvilla ಶೋಗೆ ನಿರೂಪಕಿಯಾಗಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ತಯಾರಾಗುತ್ತಿರುವ ಹಿನ್ನಲೆಯಲ್ಲಿ ತನಗೆ ಕಾಸ್ಟ್ಯೂಮ್ ತೊಡಿಸಲು ಕಷ್ಟ ಪಟ್ಟ ತಂಡವೊಂದರ ಚಿತ್ರವನ್ನು ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ …

Read More »

ವ್ಯರ್ಥವಾಯ್ತು ಸರ್ಕಾರದ ಕೋಟಿ ಕೋಟಿ ಹಣ..!

ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …

Read More »

ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ

ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು …

Read More »

ವಿಡಿಯೋ; ಚಿತ್ರದುರ್ಗ ಜಿಲ್ಲಾಸ್ಪತ್ರೆ ವಾರ್ಡ್‌ನಲ್ಲಿ ನಾಯಿ ಸಂಚಾರ

ಚಿತ್ರದುರ್ಗ, ಮೇ 25; ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಇರುವುದಿಲ್ಲ, ಒಂದೊಂದು ಸಮಯದಲ್ಲಿ ಕುಳಿತುಕೊಳ್ಳಲು ಜಾಗವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬೀದಿ ನಾಯಿಗಳ ಓಡಾಟ ನಡೆಸುತ್ತಿವೆ. ನಾಯಿಗಳ ಓಡಾಟದ ವಿಡಿಯೋ ವೈರಲ್ ಆಗಿದೆ. ತಡರಾತ್ರಿ ಎರಡು ಗಂಟೆ ಸಮಯದಲ್ಲಿ ರೋಗಿಗಳು ಇರುವ ವಾರ್ಡ್‌ನಲ್ಲಿಯೇ ನಾಯಿಗಳು ಓಡಾಟ ನಡೆಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ಏಲ್ಲಿ ನೋಡಿದರೂ ರಾಜಾ ರೋಷವಾಗಿ ನಾಯಿಗಳು ಓಡಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   …

Read More »