Breaking News

Laxminews 24x7

ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ

ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿದ್ದ ಖೂಬಾ ಫ್ಲಾಟ್ ಪ್ರದೇಶದ 45 ವರ್ಷದ ಪುರುಷ(ರೋಗಿ-926) ಮತ್ತು ಮೋಮಿನಪುರ ಕಂಟೈನ್‍ಮೆಂಟ್ ಝೋನ್‍ನಲ್ಲಿದ್ದ 60 ವರ್ಷದ ವೃದ್ಧ(ಮೃತ ರೋಗಿ-927) ಕೊರೊನಾ ಸೋಂಕಿಗೆ ತುತ್ತಾಗಿರುವುದು ವರದಿಯಾಗಿದೆ. ಮೋಮಿನಪುರ ಕಂಟೈನ್‍ಮೆಂಟ್ ಝೋನ್‍ನ ನಿವಾಸಿ 60 ವರ್ಷದ ವೃದ್ಧ ಮೇ 11ರಂದೇ ಆಸ್ಪತ್ರೆಗೆ ಬರುವ ಮುನ್ನವೆ ನಿಧನರಾಗಿದ್ದಾರೆ. ಆದರೆ …

Read More »

ಜುಲೈ 30, 31 ರಂದು ಸಿಇಟಿ ಪರೀಕ್ಷೆ – ಸೆಪ್ಟೆಂಬರ್‌ನಲ್ಲಿ ಡಿಗ್ರಿ ಕಾಲೇಜ್ ಆರಂಭ

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಸಿಇಟಿ ಪರೀಕ್ಷೆಗಳು ಜುಲೈ 30, 31ರಂದು ನಡೆಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಥ್ ನಾರಾಯಣ್, ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದ್ದು, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಷೆ …

Read More »

ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು

ಬೆಂಗಳೂರು: ಖಗೋಳ ಪ್ರಿಯರಿಗೆ ಗುಡ್‍ನ್ಯೂಸ್. ಇಂದಿನಿಂದ ಮೇ 25ರವರೆಗೆ ನೀವು ಬರಿಗಣ್ಣಿನಲ್ಲಿ ಬೆಳಗಿನ ಜಾವ ಧೂಮಕೇತುವನ್ನು ವೀಕ್ಷಿಸಬಹುದು. ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ‘ಸ್ವಾನ್’ ಹೆಸರಿನ ಧೂಮಕೇತು ಭೂಮಿಯ ಸಮೀಪ ಬರುತ್ತಿದೆ. ಆರಂಭದ ದಿನದಲ್ಲಿ ಬೆಳಿಗ್ಗೆ 4.30ರ ವೇಳೆಗೆ `ಸ್ವಾನ್’ ಧೂಮಕೇತು ಕಾಣಿಸಿಕೊಳ್ಳಲಿದೆ ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಜಿ. ಗಲಗಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ. ಆರಂಭದ ದಿನಗಳಲ್ಲಿ ಕತ್ತಲಿನಲ್ಲಿ ಇದು ಪ್ರಕಾಶಮಾನವಾಗಿ ಕಾಣುವುದರಿಂದ ಬರಿಗಣ್ಣಿನಲ್ಲಿ ವೀಕ್ಷಿಸಬಹುದು. ಸೂರ್ಯೋದಯದ ನಂತರ …

Read More »

ರಾಜ್ಯದಲ್ಲಿ ಇಂದು 26 ಜನರಿಗೆ ಕೊರೊನಾ- 951ಕ್ಕೆ ಏರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಹಾಸನ, ದಾವಣಗೆರೆ, ಬೀದರ್, ಕಲಬುರಗಿಯ ಜಿಲ್ಲೆಯ ಜನರನ್ನು ಕೊರೊನಾ ವೈರಸ್ ಮತ್ತಷ್ಟು ಆತಂಕಕ್ಕೆ ನೂಕಿದೆ. ಈ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 26 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದೆ. ಜೊತೆಗೆ ಕಲಬುರಗಿಯಲ್ಲಿ ಕೊರೊನಾ ಬಲಿಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಬೀದರ್ 11, ಹಾಸನ 4, ದಾವಣಗೆರೆ, ವಿಜಯಪುರ, ಕಲಬುರಗಿ, …

Read More »

ಯುಎಇಯಿಂದ 52 ಮಂದಿ ಉಡುಪಿಗೆ ಆಗಮನ- 9 ಮಂದಿ ಸರ್ಕಾರಿ ಕ್ವಾರಂಟೈನ್……….

ಉಡುಪಿ: ವಿದೇಶಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕಳೆದ ಐದು ದಿನಗಳಿಂದ ಭಾರತಕ್ಕೆ ವಾಪಸ್ ಕರೆತರಲಾಗುತ್ತಿದೆ. ಯುನೈಟೆಡ್ ಅರಬ್ ಎಮಿರೇಟ್ಸಿಂದ ಉಡುಪಿಗೆ 52 ಪ್ರಯಾಣಿಕರು ವಾಪಸ್ಸಾಗಿದ್ದಾರೆ. ಮಂಗಳವಾರ ರಾತ್ರಿ 176 ಪ್ರಯಾಣಿಕರು ಮಂಗಳೂರು ಏರ್ ಪೋರ್ಟಿಗೆ ಬಂದಿಳಿದಿದ್ದು , ಈ ಪೈಕಿ 52 ಜನರು ವಿಮಾನ ನಿಲ್ದಾಣದಲ್ಲಿನ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿ ಉಡುಪಿ ಜಿಲ್ಲೆಗೆ ಬಂದಿದ್ದಾರೆ. ಈ ಪೈಕಿ 27 ಮಂದಿ ಪುರುಷರು ಮತ್ತು 26 ಮಂದಿ ಮಹಿಳೆಯರಿದ್ದಾರೆ. 41 ಜನ ಹೋಟೆಲ್, …

Read More »

3 ವರ್ಷದ ಮಗುವನ್ನ ಹೊತ್ತೊಯ್ದು ತಿಂದಿದ್ದ ನರಭಕ್ಷಕ ಚಿರತೆ ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಬೋನಿನಲ್ಲಿ ಸೆರೆ

ರಾಮನಗರ: ಪೋಷಕರ ಬಳಿ ಮಲಗಿದ್ದ 3 ವರ್ಷದ ಮಗುವನ್ನ ಹೊತ್ತೊಯ್ದು ತಿಂದಿದ್ದ ನರಭಕ್ಷಕ ಚಿರತೆ ಮಾಗಡಿ ತಾಲೂಕಿನ ಕದಿರಯ್ಯನ ಪಾಳ್ಯದಲ್ಲಿ ಬೋನಿನಲ್ಲಿ ಸೆರೆ ಸಿಕ್ಕಿದೆ. ಕದಿರಯ್ಯನ ಪಾಳ್ಯದಲ್ಲಿ ಮೇ 9ರಂದು ನಸುಕಿನ ಜಾವ ಚಿರತೆ ಬಾಲಕ ಹೇಮಂತ್‍ನನ್ನು ಕೊಂದು ಹಾಕಿತ್ತು. ಇದರಿಂದಾಗಿ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿರತೆಯ ಸೆರೆಗೆ ಮುಂದಾಗಿದ್ದ ಅರಣ್ಯ ಇಲಾಖೆಯು ಕದಿರಯ್ಯನ ಪಾಳ್ಯದಲ್ಲಿ ಬೋನು ಇಟ್ಟಿತ್ತು. ಚಿರತೆಯು ಇಂದು ಬೋನಿಗೆ ಬಿದ್ದಿದ್ದು, …

Read More »

ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ.

ಹುಬ್ಬಳ್ಳಿ: ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ. ಆನ್‍ಲೈನ್‍ನಲ್ಲಿ ಐಪ್ಯಾಡ್, ಐವಾಚ್, ಐಫೋನ್ ಆರ್ಡರ್ ಮಾಡಿದ ವ್ಯಕ್ತಿಗೆ ಕೊರಿಯರ್ ಹಾಗೂ ರಿಜಿಸ್ಟ್ರೇಷನ್ ಶುಲ್ಕದ ನೆಪದಲ್ಲಿ ಆನ್‍ಲೈನ್ ಕಳ್ಳ 20 ಸಾವಿರ ಪಡೆದು ವಂಚಿಸಿದ್ದಾನೆ. ಧಾರವಾಡದ ಪವನಕುಮಾರ್ ವಂಚನೆಗೆ ಒಳಗಾಗಿದ್ದು, ಪವನಕುಮಾರ್ ಅವರು ಮೊಬೈಲ್ ನಲ್ಲಿ ಫೇಸ್‍ಬುಕ್ ನೋಡುತ್ತಿದ್ದಾಗ ಬ್ಲಿಂಕ್ ಆಗುತ್ತಿದ್ದ, `ಐ ಫೋನ್ ಅಟ್ ಚೀಪೆಸ್ಟ್ ಪ್ರೈಸ್’ …

Read More »

‘ಕೊರೊನಾ ಬಂದಿರೋ ಭಯ ಕಾಡ್ತಿದೆ’- ಗುಂಡಿಕ್ಕಿಕೊಂಡು ಸಿಆರ್‌ಪಿಎಫ್ ಅಧಿಕಾರಿ ಆತ್ಮಹತ್ಯೆ

ಶ್ರೀನಗರ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸಿಆರ್‌ಪಿಎಫ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜಮ್ಮು-ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ನಡೆದಿದೆ. ರಾಜಸ್ಥಾನದ ಜೈಸಲ್ಮೇರ್ ನಿವಾಸಿ ಸಬ್‌-ಇನ್ಸ್‌ಪೆಕ್ಟರ್ ಫತಾಹ್ ಸಿಂಗ್ ಆತ್ಮಹತ್ಯೆಗೆ ಶರಣಾದ ಸಿಆರ್‌ಪಿಎಫ್ ಅಧಿಕಾರಿ. ಫತಾಹ್ ಸಿಂಗ್ ಅವರನ್ನು ದಕ್ಷಿಣ ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಮಟ್ಟನ್ ಪ್ರದೇಶದಲ್ಲಿ ಸಿಆರ್‌ಪಿಎಫ್‍ನ 49ನೇ ಬೆಟಾಲಿಯನ್‍ನೊಂದಿಗೆ ನೇಮಿಸಲಾಗಿತ್ತು. ಆದರೆ ತಾವು ಕೋವಿಡ್-19 ಸೋಂಕು ತಗುಲಬಹುದೆಂದು ಆತಂಕಕ್ಕೆ ಒಳಗಾಗಿದ್ದರು. ಫತಾಹ್ ಸಿಂಗ್ ಮಂಗಳವಾರ ತಮ್ಮ ಬಳಿ ಇದ್ದ ರೈಫಲ್‍ನಿಂದ …

Read More »

ಆನ್​ಲೈನ್ ಶಿಕ್ಷಣದ ಹೆಸರಲ್ಲಿ ಶೋಷಣೆಯಾದರೆ ಕಠಿಣ ಕ್ರಮ: ಶಿಕ್ಷಣ ಸಂಸ್ಥೆಗಳಿಗೆ ಸುರೇಶ್ ಕುಮಾರ್ ಎಚ್ಚರಿಕೆ

ಬೆಂಗಳೂರು: ಲಾಕ್ ಡೌನ್ ಆಗಿ ಶಿಕ್ಷಣ ಸಂಸ್ಥೆಗಳನ್ನು ಬಂದ್ ಮಾಡಲಾದ ಬಳಿಕ ಆನ್​ಲೈನ್​ನಲ್ಲಿ ಪಾಠ ಮಾಡಲು ಅವಕಾಶ ಕೊಡಲಾಗಿದೆ. ಅದೇ ರೀತಿ ಹಲವು ಕಡೆ ಈಗಾಗಲೇ ಆನ್​ಲೈನ್​ನಲ್ಲೇ ತರಗತಿಗಳು ಪ್ರಾರಂಭವಾಗಿವೆ. ಕೆಲ ಶಿಕ್ಷಣ ಸಂಸ್ಥೆಗಳಂತೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ವಿಪರೀತ ಒತ್ತಡ ಹೇರುತ್ತಿವೆ. ದಿನವಿಡೀ ಆನ್​ಲೈನ್ ಕ್ಲಾಸ್ ಎಂದು ಹೈರಾಣಗೊಳಿಸುತ್ತಿವೆ ಎಂಬ ಆರೋಪ ಸಾಕಷ್ಟು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು …

Read More »

ಬೆಂಗಳೂರಿನಿಂದ ಇಂದು ಮೂರು ರಾಜ್ಯಗಳಿಗೆ ಶ್ರಮಿಕ್​​​ ವಿಶೇಷ ರೈಲು; ಹತ್ತು ಸಾವಿರ ವಲಸಿಗರು ಪ್ರಯಾಣ

ಪ್ರತೀನಿತ್ಯ ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ವಲಸೆ ಕಾರ್ಮಿಕರು ಭಾನುವಾರ ಒಂದೇ ದಿನ ಸಂಚಾರ ನಡೆಸುತ್ತಿದ್ದಾರೆ. ರಾಜ್ಯದಿಂದ ಪ್ರಯಾಣ ಮಾಡಿದವರ ಹತ್ತಾರು ಸಾವಿರಗಟ್ಟಲೇ ಇದೆ. ಬೆಂಗಳೂರು(ಮೇ.13): ಕೊರೋನಾ ಲಾಕ್​​ಡೌನ್​​ನಿಂದ ರಾಜ್ಯದಲ್ಲಿ ಸಿಲುಕಿರುವ ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು ತವರಿಗೆ ವಾಪಸ್ಸಾಗುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಿಂದ ಉತ್ತರ ರಾಜ್ಯಗಳಿಗೆ ಕೇಂದ್ರ ರೈಲ್ವೆ ಇಲಾಖೆಯ ಮೂರು ವಿಶೇಷ ಶ್ರಮಿಕ್​​​​​ ಟ್ರೈನ್​​ಗಳು ಹೊರಟಿವೆ. ಚಿಕ್ಕಬಾಣವಾರದಿಂದ ಗೋರಖ್‌ಪುರ …

Read More »