ಬೆಂಗಳೂರು : ಪೊಲೀಸರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ನೀಡುವಂತೆ ಎಲ್ಲ ಠಾಣಾಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಚೇರಿ ಆಡಳಿತ ವಿಭಾಗ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಡಿಸಿಪಿ ನಿಶಾ ಜೇಮ್ಸ್ ಹೊರಡಿಸಿರುವ ಆದೇಶದ ಪ್ರಕಾರ, ವಿಪತ್ತು, ಚುನಾವಣೆ ಮತ್ತು ಬಂದೋಬಸ್ತ್ ಕರ್ತವ್ಯ ಹೊರತು ಪಡಿಸಿ ಉಳಿದ ಎಲ್ಲ ಸಮಯದಲ್ಲಿ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡಬೇಕು. ಇದಕ್ಕಾಗಿ ಆಯಾ ಠಾಣಾಧಿಕಾರಿಗಳು ಸಿಬ್ಬಂದಿಯ …
Read More »ರೈಲಿನಲ್ಲಿ ಸ್ಮೋಕ್ ಮಾಡಿದ್ರೆ 1000 ರೂ. ದಂಡ, 3 ವರ್ಷ ಜೈಲು ಶಿಕ್ಷೆ!
ನವದೆಹಲಿ : ಧೂಮಪಾನಿಗಳಿಗೆ ರೈಲ್ವೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಧೂಮಪಾನ ಮಾಡಿದರೆ 1000 ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದ್ದು, ಈ ನಿಯಮ ಸೋಮವಾರದಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ರೈಲುಗಳಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನ ಮಾಡುವುದು ಮತ್ತು ಉರಿಯುವಂತಹ ವಸ್ತುಗಳ ಸಾಗಣೆಗೆ ರೈಲಿನಲ್ಲಿ ಸಂಪೂರ್ಣ ನಿಷೇಧ ಮಾಡಲಾಗಿದೆ. ರೈಲ್ವೆ ಕಾಯ್ದೆಯ …
Read More »BPL’ ಕಾರ್ಡ್ : ಟ್ಯಾಕ್ಸಿ, ಟ್ರ್ಯಾಕ್ಟರ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ
ಬೆಂಗಳೂರು : ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದೆ. ವಿಧಾನಪರಿಷತ್ ನಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಇರುವ ಕುಟುಂಬಸ್ಥರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಸಂಕಷ್ಟದಲ್ಲಿ …
Read More »ಠಾಕ್ರೆ ಬಗ್ಗೆ ಮಾತಾಡಿದರೆ ಆಸಿಡ್ ದಾಳಿ ಮಾಡುತ್ತೇವೆ ಎಂದು ಶಿವಸೇನೆ ಬೆದರಿಕೆ’ – ನವನೀತ್ ಕೌರ್
ವದೆಹಲಿ: ಲೋಕಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತಾಡಿದಕ್ಕಾಗಿ ನನಗೆ ಮಹಾರಾಷ್ಟ್ರ ಶಿವಸೇನಾ ಸಂಸದ ಅರವಿಂದ ಸಾವಂತ್ ತನಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿರುವ ಅಮರಾವತಿಯ ಪಕ್ಷೇತರ ಸಂಸದೆ ನವನೀತ್ ಕೌರ್ ರಾಣಾ ಅವರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾತನಾಡಿದ ಕಾರಣಕ್ಕೆ ನನಗೆ ಫೋನ್ ಕರೆ ಹಾಗೂ ಪತ್ರಗಳ ಮೂಲಕ ಆಸಿಡ್ ದಾಳಿ ಬೆದರಿಕೆ ಹಾಕಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ದೂರು ನೀಡಿದ್ದಾರೆ. ಆದರೆ ಈ ಆರೋಪವನ್ನು ಅಲ್ಲಗಳೆದಿರುವ …
Read More »ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ: ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಸಿಡಿ ವಿಚಾರದಲ್ಲಿ ನಾನೂ ಕೂಡಾ ಸದನದ ಚರ್ಚೆಯಲ್ಲಿ ಭಾಗವಹಿಸಬೇಕಿತ್ತು, ಆದರೆ ಹಿರಿಯರು ಬೇಡ ಎಂದಿದ್ದಕ್ಕೆ ಸುಮ್ಮನಾದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಆ ಹುಡುಗಿ ಒಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಆಕೆ ಒತ್ತಾಯದಿಂದ ಮಾತನಾಡಿದ್ದಾಳೋ, ಅಥವಾ ಸ್ವ-ಇಚ್ಛೆಯಿಂದ ಮಾತನಾಡಿದ್ದಾಳೋ ಗೊತ್ತಿಲ್ಲ. ಆದರೆ ಸಿಡಿಯಲ್ಲಿ ಇರುವ ದೃಶ್ಯ ಅಸಲಿಯೋ, ನಕಲಿಯೋ ಗೊತ್ತಿಲ್ಲ ಎಂದರು. ತನಿಖೆ ಆಗುವವರೆಗೂ ವಿರೋಧ ಪಕ್ಷ ಕೂಡ ಸಹಕರಿಸಬೇಕು. ಜನರ ಸಮಸ್ಯೆಗಳ …
Read More »ತುಂಡಾಗಿ ಕಳಚಿ ಬಿದ್ದ ಶಿವಾಜಿ ಪ್ರತಿಮೆ
ಹುಬ್ಬಳ್ಳಿ : ಇಲ್ಲಿನ ಪಾಲಿಕೆ ಕಚೇರಿಯ ಪಕ್ಕದ ಚಿಟಗುಪ್ಪಿ ಪಾರ್ಕ್ ನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬೃಹದಾಕಾರದ ಛತ್ರಪತಿ ಶಿವಾಜಿ ಮೂರ್ತಿ ತುಂಡಾಗಿ ಕಳಚಿ ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ಛತ್ತೀಸಘಡದಿಂದ ಹುಬ್ಬಳ್ಳಿ ಮಹಾನಗರ ಪಾಲಿಕೆ ವತಿಯಿಂದ ತಯಾರಿಸಿ ಇಲ್ಲಿಗೆ ತಂದು ಪ್ರತಿಷ್ಠಾಪಿಸಲಾಗಿತ್ತು. ಇದಕ್ಕಾಗಿ 17.5 ಲಕ್ಷ ರೂ ಖರ್ಚಾಗಿತ್ತು. ಕುದುರೆಯ ಮೂರು ಕಾಲುಗಳು ತುಂಡಾಗಿವೆ. ಶಿವಾಜಿ ಮೂರ್ತಿ ತಲೆ, ಖಡ್ಗ ಸೇರಿದಂತೆ ಸಂಪೂರ್ಣ ಜಖಂಗೊಂಡಿದೆ. ತುಂಡಾಗಿ ಬಿದ್ದಿರುವ ಮೂರ್ತಿಗೆ ಪಾಲಿಕೆ …
Read More »ಪೊಲೀಸರಿಂದ ತಪ್ಪಿಸಿಕೊಳ್ಳಲು ಸಿಗ್ನಲ್ ಆಯಪ್ ಬಳಸುತ್ತಿರುವ ಸಿಡಿ ಪ್ರಕರಣದ ಕಿಂಗ್ಪಿನ್ಗಳು!
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಬಹಿರಂಗವಾದ ಬಂದ ಬಳಿಕ 20 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಕಿಂಗ್ಪಿನ್ಗಳು ಗೌಪ್ಯ ಸಂವಹನಕ್ಕೆ ‘ಸಿಗ್ನಲ್’ ಆಯಪ್ ಮೆಸೆಂಜರ್ ಬಳಸುತ್ತಿದ್ದಾರೆ ಎಂಬ ಸಂಗತಿ ವಿಶೇಷ ತನಿಖಾ ದಳದ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಿಡಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾದ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರು ಮತ್ತು ವಿವಾದಿತ ಯುವತಿ ಎಸ್ಐಟಿ ಗಾಳಕ್ಕೆ ಸಿಲುಕದಂತೆ ಹೊರ ರಾಜ್ಯಗಳಲ್ಲಿ …
Read More »ಧ ಇಡಿಗೆ ದೂರು ಕೊಟ್ಟ ಕಾಂಗ್ರೆಸ್ ….
ಬೆಂಗಳೂರು, ಮಾರ್ಚ್ 23: ಮಾಜಿ ಸಚಿವ, ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ತೀವ್ರಗೊಳಿಸಿದೆ. ಸಿಡಿ ವಿಚಾರದಲ್ಲಿ ಕಾಂಗ್ರೆಸ್ ಇಡಿಗೆ ಮಾಜಿ ಸಚಿವರ ವಿರುದ್ಧ ದೂರು ನೀಡಿದೆ. ಮಂಗಳವಾರ ಬೆಂಗಳೂರಿನ ಶಾಂತಿ ನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಕಾಂಗ್ರೆಸ್ ಮುಖಂಡ ಮೋಹನ್ ದೂರು ನೀಡಿದ್ದಾರೆ. ಸಿಡಿ ಪ್ರಕರಣದಲ್ಲಿ ನಡೆದಿರುವ ಹಣದ ವ್ಯವಹಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ …
Read More »ಸಿಡಿ ಲೀಕ್ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್ಪಿನ್, ಹ್ಯಾಕರ್, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ.?
ಬೆಂಗಳೂರು: ಬಗೆದಷ್ಟೂ ಆಳ ಎಂಬಂತೆ ತನಿಖೆ ಮುಂದುವರಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಕೇಸ್ನ ಲೀಕಾಸುರರ ಎಕ್ಸ್ಕ್ಲೂಸಿವ್ ಮಾಹಿತಿ ಲಭ್ಯವಾಗುತ್ತಲೇ ಇದೆ. ಸಿಡಿ ಲೀಕ್ ಆದಾಗಿನಿಂದ ಊರೂರು ಸುತ್ತುತ್ತಿರುವ ಕಿಂಗ್ಪಿನ್, ಹ್ಯಾಕರ್, ಯುವತಿ ಸದ್ಯ ರಾಜಸ್ಥಾನದಲ್ಲಿದ್ದಾರೆ ಎನ್ನಲಾಗಿದೆ. ಇನ್ನು ಸಿಡಿ ಬಹಿರಂಗದ ಬಳಿಕ ಸಿಡಿ ಗ್ಯಾಂಗ್ ನಡೆಸಿದ್ದ ತಂತ್ರ ಏನು? ಹ್ಯಾಕರ್ ಶ್ರವಣ್ ಯಾವ ರೀತಿ ಪ್ಲಾನಿಂಗ್ ಮಾಡಿಕೊಂಡಿದ್ದ? ಅನ್ನೋದ್ರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಎಸ್ಐಟಿ …
Read More »ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು. ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ …
Read More »
Laxmi News 24×7