Breaking News

Laxminews 24x7

ಬೆಂಗಳೂರಿನಲ್ಲಿ ಮತ್ತೊಂದು ಹತ್ಯೆ; ಕುಡಿದ ಅಮಲಿನಲ್ಲಿ ಕೊಲೆಯಾದ ರೌಡಿಶೀಟರ್‌

ಬ್ಯಾಟರಾಯನಪುರ ರೌಡಿಶೀಟರ್‌ ಅಶೋಕ್‌ ನಿನ್ನೆ ಕುಡಿದ ಅಮಲಿನಲ್ಲಿದ್ದಾಗ ದಾಳಿ ಮಾಡಿದ್ದ ಕೆಲವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಬೆಂಗಳೂರು (ಮೇ 08); ಕಳೆದ 47 ದಿನಗಳಿಂದ ಶಾಂತವಾಗಿದ್ದ ಬೆಂಗಳೂರು ಕ್ರೈಂ ಲೋಕ ಲಾಕ್‌ಡೌನ್ ಅನ್ನು ಸಡಿಲಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡುತ್ತಿದ್ದಂತೆ ಮತ್ತೆ ಕ್ರಿಯಾಶೀಲವಾಗಿದೆ. ನಿನ್ನೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ರೌಡಿಶೀಟರ್‌ ಅಶೋಕ್‌ ಅಲಿಯಾಸ್ ದಡಿಯಾ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ …

Read More »

ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ಹರಿದ ರೈಲು,ಅಪ್ಪಚ್ಚಿಯಾದ ಮಕ್ಕಳು, ಮಹಿಳೆಯರ ಮೃತ ದೇಹಗಳು

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ ದಾರುಣ ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ, ಕೆಳಗೆ ಬಿದ್ದಿವೆ.ಕರ್ಮದ್ …

Read More »

ಬೆಂಗ್ಳೂರಿಗರೇ ಎಚ್ಚರ- ಮೇ ಅಂತ್ಯಕ್ಕೆ ಹೆಚ್ಚಾಗಲಿದೆ ಕೊರೊನಾ ಅಬ್ಬರ……………

ಬೆಂಗಳೂರು: ಭಾರತದಲ್ಲಿ ಜೂನ್, ಜುಲೈ ಅಂತ್ಯಕ್ಕೆ ಕೊರೊನಾ ಇನ್ನಿಲ್ಲದಂತೆ ಬಾಧಿಸಲಿದೆ ಅಂತ ಎಚ್ಚರಿಸಲಾಗಿದೆ. ಆದರೆ ಬೆಂಗಳೂರಿಗೆ ಮಾತ್ರ ಮೇ ತಿಂಗಳೇ ಕಂಟಕವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ವಾರ ಬೆಂಗಳೂರಿನಲ್ಲಿ ಮತ್ತಷ್ಟು ಕೊರೊನಾ ಹೆಚ್ಚಳವಾಗಲಿದ್ದು, ಮೇ ಅಂತ್ಯಕ್ಕೆ 5 ಸಾವಿರ ಪ್ರಕರಣ ಪತ್ತೆಯಾಗಬಹುದು ಅಂತ ತಜ್ಞರು ಎಚ್ಚರಿಕೆ ಕೊಟ್ಟಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಆಗಿ ನಾಲ್ಕು ದಿನದಲ್ಲಿ ಅಂತಹ ಕಂಟಕ ಬೆಂಗಳೂರಿಗೆ ಎದುರಾಗಿಲ್ಲ. ಆದರೆ ಮುಂದಿನ ವಾರ ಹೈ ರಿಸ್ಕ್ …

Read More »

ಕೋವಿಡ್-19 ವಾರಿಯರ್ಸ್‌ಗೆ ಆರತಿ ಎತ್ತಿ, ಹೂಮಳೆಗೈದ ಗುರೂಜಿ……

ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್ ಗಳಿಗೆ ಗೌರಿಗದ್ದೆ ದತ್ತಶ್ರಮದ ಅವಧೂತ ವಿನಯ್ ಗುರೂಜಿ ಆರತಿ ಎತ್ತಿ, ಹೂಮಳೆಗೈದಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ದತ್ತಾಶ್ರಮದಲ್ಲಿ ಬುದ್ಧ ಪೂರ್ಣಿಮೆಯ ಅಂಗವಾಗಿ ಕೊರೊನಾ ವಾರಿಯರ್ಸ್ ಗಳಿಗೆ ಗೌರವ ಸಮರ್ಪಿಸಿದರು. ಹೆಲ್ತ್ ವಾರಿಯರ್ಸ್‍ಗೆ ವಿನಯ್ ಗುರೂಜಿ ಅವರು ಆರತಿ ಎತ್ತಿದರು. ಬಳಿಕ ಮೇಲ್ಭಾಗದಲ್ಲಿ ಕುಳಿತಿದ್ದ ಅವರ ಬಳಿಗೆ ಹೋಗಿ ಹೂಗಳನ್ನ ಸುರಿದು ಪುಷ್ಪಾರ್ಚನೆಯ ಮೂಲಕ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ವಿನಯ್ ಗುರೂಜಿ, ವೈದ್ಯರು, …

Read More »

ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ.

ಮೈಸೂರು: ಇಡೀ ದೇಶವೇ ಕೊರೊನಾ ವೈರಸ್ ಎಂಬ ಮಹಾಮಾರಿಯನ್ನು ಎದುರಿಸುತ್ತಿದೆ. ಈ ಮಧ್ಯೆ ಮೈಸೂರಿನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿ ಸಿಕ್ಕಿ ಹಾಕಿಕೊಂಡಿದ್ದಾರೆ. ಹೌದು. ಗುರುವಾರ ರಾತ್ರಿ ಖದೀಮರು ಸರಗಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಮಹದೇಶ್ವರ ಬಡಾವಣೆಯಲ್ಲಿ ಮಹಿಳೆಯಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ನಂತರ ರಿಂಗ್‍ರಸ್ತೆ ಹಾಗೂ ಕಾರ್ಪೋರೇಷನ್ ಬ್ಯಾಂಕ್ ಬಳಿಯೂ ಸರಗಳ್ಳತನ ಮಾಡಿ ಪಲ್ಸರ್ ಬೈಕಿನಲ್ಲಿ ಕಳ್ಳರು ಪರಾರಿಯಾಗುತ್ತಿದ್ದರು. …

Read More »

ಅವಧಿಗೆ ತಕ್ಕಂತೆ ಪಠ್ಯವನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ ಸೂಚನೆ

ಬೆಂಗಳೂರು : ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗುರುವಾರ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಿದ ಸಚಿವರು ಈ ಶೈಕ್ಷಣಿಕ ಸಾಲಿನ ಪ್ರಾರಂಭದ …

Read More »

ಬೆಚ್ಚಿಬೀಳುವಂತಿದೆ ಕೊರೋನಾ ಕುರಿತ ವಿಶ್ವ ಸಂಸ್ಥೆ ನೀಡಿದ ಈ ವರದಿ..!

ವಿಶ್ವಸಂಸ್ಥೆ, ಮೇ 7-ಡೆಡ್ಲಿ ಕೊರೊನಾ ವೈರಸ್ ಹಾವಳಿ ಕುರಿತು ವಿಶ್ವ ಸಂಸ್ಥೆ ನೀಡಿರುವ ಹೊಸ ಅಂಕಿಅಂಶವೊಂದು ಬೆಚ್ಚಿಬೀಳಿಸುವಂತಿದೆ. ಏಪ್ರಿಲ್ ತಿಂಗಳಲ್ಲಿ ಪ್ರತಿದಿನ ವಿಶ್ವದಲ್ಲಿ ಸರಾಸರಿ 80,000 ಮಂದಿಗೆ ಕೋವಿಡ್-19 ವೈರಸ್ ಸೋಂಕು ತಗುಲಿರುವುದು ಕಂಡುಬಂದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ) ತಿಳಿಸಿದೆ. ಈ ಕುರಿತು ಮಾಹಿತಿ ನೀಡಿರುವ ಡಬ್ಲ್ಯುಎಚ್‍ಒ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸೂಸ್, ಭಾರತ, ಇಂಡೋನೆಷ್ಯಾ ಸೇರಿದಂತೆ ದಕ್ಷಿಣ ಏಷ್ಯಾದ ಕೆಲವು ದೇಶಗಳಲ್ಲಿ ಸೋಂಕು ಪ್ರಮಾಣದಲ್ಲಿ ಹೆಚ್ಚಳ …

Read More »

ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ’- ಕಿಚ್ಚನ ಖಡಕ್ ಲುಕ್‍ಗೆ ಅಭಿಮಾನಿಗಳು ಫಿದಾ

ಬೆಂಗಳೂರು: ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಖಡಕ್ ಲುಕ್ ಹಾಗೂ ಬೇರ್ ಬಾಡಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುದೀಪ್ ಅವರು ಪೈಲ್ವಾನ್ ಸಿನಿಮಾದ ಸಮಯದಲ್ಲಿ ತಮ್ಮ ದೇಹವನ್ನು ದಂಡಿಸಿ ಖಡಕ್ ಬಾಡಿ ಮಾಡಿದ್ದರು. ಈಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತ್ತಿವೆ. ಕಿಚ್ಚನ ಖಡಕ್ ಲುಕ್ ಇರುವ ಈ ಫೋಟೋಗಳನ್ನು ಹಂಚಿಕೊಂಡಿರುವ ನಿರ್ದೇಶಕ ಪವನ್ …

Read More »

ಮೂರನೇ ಲಾಕ್ ಡೌನ್ ನಂತರ ಏನು? ಸುಳಿವು ಕೊಟ್ಟ ಗೃಹಸಚಿವ ಬೊಮ್ಮಾಯಿ

ಕೃಷಿ ಮತ್ತು ಆರ್ಥಿಕ ಚಟುವಟಿಕೆಗಳು ಆರಂಭವಾಗಲಿ ಎನ್ನುವ ಕಾರಣಕ್ಕಾಗಿ ಲಾಕ್ ಡೌನ್ ಅನ್ನು ಸಡಿಲಿಕೆ ಮಾಡಲಾಗಿದೆ, ಇದರರ್ಥ ಕೊರೊನಾ ಕಮ್ಮಿಯಾಗಿದೆ ಎಂದಲ್ಲ” ಎಂದು ಬೊಮ್ಮಾಯಿ ಹೇಳಿದ್ದಾರೆ. ಸಾರ್ವಜನಿಕರ ಸಹಕಾರವಿದ್ದರೆ ಮಾತ್ರ ಕೊರೊನಾವನ್ನು ಸಂಪೂರ್ಣ ತೊಲಗಿಸಲು ಸಾಧ್ಯ. ಮೂರನೇ ಲಾಕ್ ಡೌನ್ ಅನ್ನು ಯಶಸ್ವಿಗೊಳಿಸುವ ಸಂಪೂರ್ಣ ಜವಾಬ್ದಾರಿ ಜನರದ್ದು”ಎಂದು ಬೊಮ್ಮಾಯಿ ಪುನರುಚ್ಚಿಸಿದ್ದಾರೆ. ಮೇ ಹದಿನೇಳರ ನಂತರ ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ, ಮುಂದೆ ಕಠಿಣ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಸರಕಾರಕ್ಕೆ ಬರಲಿದೆ”ಎಂದು …

Read More »

ಪ್ರತ್ಯೇಕ ರಾಯಚೂರು ವಿವಿ ಕನಸು ನನಸು; ಹೊಸ ವಿವಿ ವ್ಯಾಪ್ತಿಗೆ ಯಾದಗಿರಿ, ರಾಯಚೂರಿನ 187 ಕಾಲೇಜುಗಳು

ರಾಯಚೂರು(ಮೇ 08): ರಾಯಚೂರು ಜಿಲ್ಲೆಯ ಪ್ರಗತಿಪರರು, ವಿದ್ಯಾರ್ಥಿಗಳ ಹೋರಾಟದ ಫಲವಾಗಿ ರಾಯಚೂರು ವಿಶ್ವವಿದ್ಯಾಲಯ ಆರಂಭಕ್ಕೆ ಸಿದ್ದತೆ ನಡೆದಿದೆ. ಕೊನೆಗೂ ರಾಜ್ಯಪಾಲರು ವಿವಿ ಆರಂಭಕ್ಕೆ ತಿದ್ದುಪಡಿ ಕಾಯ್ದೆಗೆ ಅಂಕಿತ ಹಾಕಿದ್ದು ರಾಜ್ಯ ಸರಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ ರಾಯಚೂರು ಜನತೆ ಹರ್ಷಗೊಂಡಿದ್ದಾರೆ. ಗುಲಬುರ್ಗಾ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ರಾಯಚೂರು ಹಾಗು ಯಾದಗಿರಿ ಜಿಲ್ಲೆಯ 187 ಕಾಲೇಜುಗಳು ಈಗ ಸ್ಥಾಪನೆಯಾಗಲಿರುವ ರಾಯಚೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರಲಿವೆ. ಕಲಬುರಗಿ, ಬೀದರ್, ರಾಯಚೂರು ಹಾಗು ಯಾದಗಿರಿ …

Read More »