Breaking News

Laxminews 24x7

ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನಲ್ಲಿ PIL ಸಲ್ಲಿಕೆ

ಬೆಂಗಳೂರು: ಮಾರಕ ಕೊರೋನಾ ವೈರಸ್​​ ವಿರುದ್ಧ ಹೋರಾಡುತ್ತಿರುವ ವೈದ್ಯರು, ಪೊಲೀಸರು ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಪೌರ ಕಾರ್ಮಿಕರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಘೋಷಿಸಿದೆ. ಈ ಮೂಲಕ ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ವಾರಿಯರ್ಸ್​ಗೆ 30 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಲಾಗಿದೆ. ಆದರೀಗ, ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಮತ್ತು ಅಂಗನವಾಡಿ ಕಾರ್ಯಕರ್ತರಂತೆಯೇ ತಮ್ಮ ಪ್ರಾಣವನ್ನು …

Read More »

2021ರ ಮಾರ್ಚ್ ವೇಳೆಗೆ ಎತ್ತಿನಹೊಳೆ ಕಾಮಗಾರಿ ಮೊದಲ ಹಂತಕ್ಕೆ ಚಾಲನೆ; ಸಚಿವ ರಮೇಶ್ ಜಾರಕಿಹೊಳಿ

ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರು ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ ತುರ್ತಾಗಿ ಕಾಮಗಾರಿಗಳು ಪೂರ್ಣವಾಗಬೇಕು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಣೆಯಾಗಬೇಕು ಹಾಗೂ ಮೊದಲ ಹಂತದ ಯೋಜನೆ ಆದಷ್ಟು ಬೇಗ ಮುಗಿಯಬೇಕು ಎಂದು ಮನವಿ ಮಾಡಿದರು. ಹಾಸನ: ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳೆ ಅವರು ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆ ಕಾಮಗಾರಿ ಪರಿಶೀಲನೆ  ನಡೆಸಿದರು. ಸಕಲೇಶಪುರ ತಾಲ್ಲೂಕಿನ …

Read More »

ಶಿವಾಜಿನಗರ ನಾಲ್ವರಲ್ಲಿ ಕೊರೋನಾ ಸೋಂಕು; ಬೆಂಗಳೂರಿನ ಬಹುತೇಕ ಕಡೆ ಅಡ್ಡಾಡಿರುವ ಸೋಂಕಿತರು

ಬೆಂಗಳೂರು:  ಹೌಸ್​ ಕೀಪಿಂಗ್​ ಜೊತೆ ವಾಸವಿದ್ದ ಶಿವಾಜಿನಗರ ನಾಲ್ವರು ವ್ಯಾಪಾರಿಗಳಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕೊರೋನಾ ಸೋಂಕಿತ ಹೌಸ್​ ಕೀಪಿಂಗ್ ವ್ಯಕ್ತಿ ಜತೆ ಒಟ್ಟು  ಏಳು ಜನ ಇದ್ದರು. ಇವರಲ್ಲಿ ನಾಲ್ಕು ಜನರಲ್ಲಿ ಪಾಸಿಟಿವ್ ಕಂಡುಬಂದಿದೆ.  13 ಜನರಲ್ಲಿ 5 ಮಂದಿಗೂ ಕೊರೋನಾ ಸೋಂಕು ತಗುಲಿದೆ. ಉಳಿದ 9 ಜನರ ಫಲಿತಾಂಶ ನಾಳೆ ಬರಲಿದೆ. ಇದೀಗ ಕೊರೋನಾ ಪಾಸಿಟಿವ್ ವರದಿ ಬಂದ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 19, 22, 25 …

Read More »

ರಾಜ್ಯದ ಉಚಿತ ಬಸ್​ ವ್ಯವಸ್ಥೆ ಅವಧೀ ಮುಗಿದಿದೆ.ಒಂದು ವಾರದಲ್ಲಿ ಬೆಂಗಳೂರಿನಿಂದ ಊರುಗಳತ್ತ ತೆರಳಿದ 1,‌08,300 ಕಾರ್ಮಿಕರು

ದೇಶಾದ್ಯಂತ ಮೇ 17ರವರೆಗೆ ಲಾಕ್ ಡೌನ್ ಮುಂದುವರಿಸಲಾಗಿದೆ. ಕೆಲ ರಿಯಾಯಿತಿಗಳನ್ನು ನೀಡಲಾಗಿದ್ದು, ರಾಜ್ಯದೊಳಗಿನ ಕಾರ್ಮಿಕರು ತಮ್ಮ ತಮ್ಮ ಮನೆಗಳಿಗೆ ಸೇರಲಾರಂಭಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸಿಲುಕಿಕೊಂಡಿರುವ ಹೊರ ರಾಜ್ಯದ ಕಾರ್ಮಿಕರು ಗೋಳು ಕೇಳುವವರೇ ಇಲ್ಲದಂತಾಗಿದೆ. ಬೆಂಗಳೂರು(ಮೇ.08): ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಆದೇಶ ಮೇರೆಗೆ ಒಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1,‌08,300 ಕಾರ್ಮಿಕರನ್ನು ಕೆಎಸ್​ಆರ್​​ಟಿ ಬಸ್​ಗಳಲ್ಲಿ ಸ್ಥಳಾಂತರ ಮಾಡಲಾಗಿದೆ. ಸುಮಾರು 3610 ಬಸ್​ಗಳಲ್ಲಿ ವಲಸೆ ಕಾರ್ಮಿಕರು …

Read More »

ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢ

ಬೆಂಗಳೂರು: ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಗುರುವಾರ ಒಂದೇ ದಿನ ಏಳು ಮಂದಿಗೆ ಕಿಲ್ಲರ್ ಕೊರೊನಾ ದೃಢವಾಗಿದೆ. ಶಿವಾಜಿನಗರದಲ್ಲಿ ನಾಲ್ವರಿಗೆ, ಪಾದರಾಯನಪುರದಲ್ಲಿ ಇಬ್ಬರಿಗೆ ಮತ್ತು ಯಶವಂತಪುರದಲ್ಲೂ ಓರ್ವರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಪಾದರಾಯನಪುರದಲ್ಲಿ ಮತ್ತೆ ಕೊರೊನಾ ರಣಕೇಕೆ ಹಾಕುತ್ತಿದೆ. ಪಾದಾರಾಯನಪುರದಲ್ಲಿ 35 ವರ್ಷದ ಮಹಿಳೆ ಮತ್ತು 23 ವರ್ಷದ ಯುವಕನಿಗೆ ಡೆಡ್ಲಿ ವೈರಸ್ ದೃಢವಾಗಿದೆ. ಬೇರೆ ಬೇರೆ ಮನೆಗಳಲ್ಲಿ ಇದ್ದ …

Read More »

ಹೊರ ರಾಜ್ಯದಿಂದ ಬೆಂಗ್ಳೂರಿಗೆ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್ ಫಿಕ್ಸ್

ಬೆಂಗಳೂರು: ಹೊರರಾಜ್ಯಗಳಿಂದ ಬೆಂಗಳೂರಿಗೆ ಸಾಕಷ್ಟು ಮಂದಿ ಬರುತ್ತಿರುವ ಹಿನ್ನೆಲೆ ಅವರಿಂದ ನಗರದಲ್ಲಿ ಕೊರೊನಾ ಸೋಂಕು ಹರಡಬಾರದು ಎಂದು ಬೆಂಗಳೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದೆ. ಹೊರ ರಾಜ್ಯದಿಂದ ಸಿಲಿಕಾನ್ ಸಿಟಿಗೆ ಬರುವವರಿಗೆ ಕಡ್ಡಾಯವಾಗಿ ಕೈಗೆ ಸ್ಟಾಂಪಿಂಗ್ ಮಾಡಲಾಗುತ್ತದೆ. ಅವರು 14 ದಿನ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಇರಲೇಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ಹೊರ ರಾಜ್ಯದವರಿಂದ ನಗರದಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು …

Read More »

ಕುಂಬಾರರಿಗೂ ವಿಶೇಷ ಪರಿಹಾರ ನೆರವು ನೀಡಲು ಸಿಎಂಗೆ ಮನವಿ…………

ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೊಳಗಾದ ಕುಂಬಾರಿಕೆ ವೃತ್ತಿ ಮಾಡುವವರಿಗೂ ಐದು ಸಾವಿರ ರೂಪಾಯಿಗಳ ವಿಶೇಷ ಪರಿಹಾರ ನೆರವು ನೀಡಬೇಕೆಂದು ಕರ್ನಾಟಕ ರಾಜ್ಯ ಕುಲಾಲ್ ಕುಂಬಾರ ಯುವವೇದಿಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ. ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಇರುವವರ ನೆರವಿಗೆ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಪರಿಹಾರ ಘೋಷಿಸುವ ಮೂಲಕ ಹೆಚ್ಚಿನ ನೆರವು ನೀಡಿರುವ ತಮ್ಮ ನಡೆ ಸ್ವಾಗತಾರ್ಹ. ಆದರೆ ರಾಜ್ಯಾದ್ಯಂತ ಸಂಕಷ್ಟಕ್ಕೆ ಸಿಲುಕಿರುವ ಇನ್ನೂ …

Read More »

ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿ

ಮುಂಬೈ: ಲಾಕ್‍ಡೌನ್‍ನಲ್ಲಿ ಎಣ್ಣೆ ಸಿಗದೆ ಮದ್ಯಪ್ರಿಯರು ಪರದಾಡಿದ್ದರು. ಆದರೆ ಈಗ ಮದ್ಯದಂಗಡಿ ತೆರೆದಿರುವ ಹಿನ್ನೆಲೆ ಕ್ಯೂನಲ್ಲಿ ನಿಂತು ಮದ್ಯಪ್ರಿಯರು ಎಣ್ಣೆ ಖರೀದಿಸುವಲ್ಲಿ ಬ್ಯೂಸಿ ಆಗಿದ್ದಾರೆ. ಮದ್ಯ ಖರೀದಿಗೆ ಪುರುಷರು, ಮಹಿಳೆಯರು, ಯುವಕ-ಯುವತಿಯರು ಕ್ಯೂನಲ್ಲಿನಿಂತ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಮಧ್ಯೆ ರಸ್ತೆ ಬದಿಯ ವೈನ್ ಸ್ಟೋರ್ ನಿಂದ ನಟಿ ರಾಕುಲ್ ಪ್ರೀತ್ ಸಿಂಗ್ ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಎನ್ನಲಾದ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಮದ್ಯ ಮಾರಾಟಕ್ಕೆ …

Read More »

ವಲಸೆ ಕಾರ್ಮಿಕರನ್ನು ಸ್ವ-ಸ್ಥಳಕ್ಕೆ ತಲುಪಿಸಿದ ಸಾರಿಗೆ ಸಿಬ್ಬಂದಿಗೆ ಹೂ ಮಳೆ ಸ್ವಾಗತ

ಹುಬ್ಬಳ್ಳಿ: ಲಾಕ್‍ಡೌನ್‍ನಿಂದಾಗಿ ಪರ ಊರುಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವ-ಸ್ಥಳಗಳಿಗೆ ತಲುಪಿಸಲು ಶ್ರಮ ವಹಿಸಿದ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಇತರೆ ಸಿಬ್ಬಂದಿಗೆ ಹೂ ಮಳೆಗರೆದು ಅಭಿನಂದನೆ ಸಲ್ಲಿಸಲಾಯಿತು. ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಎನ್.ಡಬ್ಲ್ಯೂ.ಕೆ.ಆರ್.ಟಿ.ಸಿ ಹಾಗೂ ಬಿ.ಆರ್.ಟಿ.ಎಸ್. ವ್ಯವಸ್ಥಾಕ ನಿರ್ದೇಶಕರಾದ ರಾಜೇಂದ್ರ ಚೋಳನ್ ಆಗಮಿಸಿ ಹುಬ್ಬಳ್ಳಿ ವಿಭಾಗದ ಚಾಲಕರು ಹಾಗೂ ನಿರ್ವಾಹಕರುಗಳ ಸಾರ್ಥಕ ಕಾರ್ಯಕ್ಕೆ ಮನದುಂಬಿ ಹರಿಸಿದರು. ಕಳೆದ ಮೂರು ದಿನಗಳಿಂದ ಸರ್ಕಾರದ …

Read More »

ಚಾಮರಾಜನಗರಕ್ಕೆ ಬಿಗ್ ರಿಲೀಫ್: ಆತಂಕ ಹುಟ್ಟಿಸಿದ್ದ ಪೇದೆ ಕೊರೊನಾ ನೆಗೆಟಿವ್

ಚಾಮರಾಜನಗರ: ಬೆಂಗಳೂರಿನಿಂದ ಜಿಲ್ಲೆಯ ಹನೂರು ತಾಲೂಕಿನ ಬೆಳ್ತೂರು ಗ್ರಾಮಕ್ಕೆ ಬಂದು ಹೋಗಿದ್ದ ಪೇದೆಯ ಕೋವಿಡ್-19 ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಹೀಗಾಗಿ ಚಾಮರಾಜನಗರ ಜಿಲ್ಲೆಯ ಜನರ ಆತಂಕ ದೂರವಾಗಿದೆ. ಬೇಗೂರು ಠಾಣೆಯ ಮುಖ್ಯಪೇದೆ ಕುಟುಂಬ ಸಮೇತ ಬೆಳ್ತೂರಿಗೆ ಬಂದಿದ್ದ ವೇಳೆ ಕೊರೊನಾ ಪಾಸಿಟಿವ್ ಸಂಬಂಧ ಹಲವಾರು ಗೊಂದಲಗಳು ಉಂಟಾಗಿದ್ದವು. ಆದರೆ ಈಗ ಅವರ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 16 ಜನರನ್ನು ಹಾಗೂ …

Read More »