Breaking News

Laxminews 24x7

ಅಂಗಡಿ ಓಪನ್ ಮಾಡಿದ ಮೊದಲ ದಿನವೇ ಮದ್ಯಪ್ರಿಯರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್

ಬೆಂಗಳೂರು: ಅಂಗಡಿ ಓಪನ್ ಮಾಡಿದ ಮೊದಲ ದಿನವೇ ಮದ್ಯಪ್ರಿಯರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್ ನೀಡಿದೆ. ಒಣಗಿದ ತುಟಿಗೆ ಎಣ್ಣೆ ಸೇರಿ ನಶೆ ಏರುವ ಮೊದಲೇ ಕಿಕ್ ಇಳಿಯುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇವತ್ತು ಮದ್ಯ ಖರೀದಿ ಮಾಡೋರಿಗೆ ಬೆಲೆ ಏರಿಕೆಯ ಬಿಸಿ ತಾಗಲ್ಲ. ಅಂಗಡಿಯಲ್ಲಿ ಹಳೆ ಸ್ಟಾರ್ ಇರೋದರಿಂದ ಮೊದಲ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತದೆ. ನಾಳೆಯಿಂದ ಬಜೆಟ್ ನಲ್ಲಿ ಸೆಸ್ ಶೇ.6 ಅನ್ವಯವಾಗಲಿದೆ. ಏಪ್ರಿಲ್ ಮೊದಲ ದಿನದಿಂದಲೇ ಮದ್ಯದ …

Read More »

ಮದ್ಯ’ವಿಲ್ಲದೆ ‘ಮಧ್ಯ’ರಾತ್ರಿ ಎದ್ದು ಕೂರ್ತಿದ್ದೆ: ಎಣ್ಣೆಪ್ರಿಯನ ಮನದಾಳದ ಮಾತು,ಮೊದಲು ಬಂದ ಗ್ರಾಹಕನಿಗೆ ವೈನ್ ಶಾಪ್ ಮಾಲೀಕರು ಹಾರ ಹಾಕಿ ಸನ್ಮಾನ

ಬೆಳಗಾವಿ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಕರ್ನಾಟದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಎಣ್ಣೆ ಪ್ರಿಯರು ಫುಲ್ ಖುಷಿಯಾಗಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬಾರ್ ಓಪನ್ ಮಾಡಿರೋದು ತುಂಬಾ ಖುಷಿಯಾಗುತ್ತಿದೆ. ನಿನ್ನೆ ಟಿವಿಯಲ್ಲಿ ಮೇ 4ರಂದು ಮದ್ಯದಂಗಡಿಗಳು ಓಪನ್ ಅಂದಾಗ ತುಂಬಾನೇ ಖುಷಿಯಾಯ್ತು. ಹೀಗಾಗಿ ಇಂದು ಬೆಳಗ್ಗೆನೇ ಬಂದು ಟೋಕನ್ ತೆಗೆದುಕೊಂಡು ಕ್ಯೂನಲ್ಲಿ …

Read More »

ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ

ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಉಡುಪಿ: ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೇ ಕೊಟ್ಟಿದ್ದು ಎಣ್ಣೆಗೆ ಮಣಿಪಾಲದ ಮಾನಿನಿಯರು ಮುಗಿಬಿದ್ದ ಪ್ರಸಂಗ ಇಂದು ನಡೆದಿದೆ. ಸಾಮಾಜಿಕ ಅಂತರಕ್ಕೆ ಗೋಲಿ ಮಾರೋ ಅಂತ ಎದ್ದು ಬಿದ್ದು ಮದ್ಯ ಖರೀದಿ ಮಾಡಿದರು. ರೂಲ್ಸ್ & ರೆಗ್ಯುಲೇಶನ್ ಅನ್ನು ಉಡುಪಿಯ ಮಣಿಪಾಲದಲ್ಲಿ ಗಾಳಿಗೆ ತೂರಿ, ಬಿಸಿಲ ದಾಹ ತೀರಿಸಲು ಬಿಯರ್ ಗಾಗಿ ಬಿಸಿಲಿನಲ್ಲೇ ಯುವತಿಯರು ಒಣಗಿದರು. ಮಣಿಪಾಲದಲ್ಲಿ ಮದ್ಯಕ್ಕಾಗಿ ಯುವತಿಯರು ಸರತಿ ಸಾಲು ಕಟ್ಟಿದ್ದರು. ಬಿಸಿಲ …

Read More »

ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ – ಪೊಲೀಸರಿಂದ ಮದ್ಯದಂಗಡಿ ಕ್ಲೋಸ್……

ಮೈಸೂರು: ಜಿಲ್ಲೆಯಲ್ಲಿ ಸರತಿ ಸಾಲಿನಲ್ಲಿ ನಿಂತ ಮದ್ಯ ಪ್ರಿಯರಿಗೆ ಶಾಕ್ ಆಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ. ಮೈಸೂರಿನ ದೇವರಾಜ ಠಾಣಾ ವ್ಯಾಪ್ತಿಯಲ್ಲಿರುವ ಟ್ರೂ ಸ್ಪಿರಿಟ್ ಮದ್ಯದಂಗಡಿಯನ್ನು ಪೊಲೀಸರು ಕ್ಲೋಸ್ ಮಾಡಿದ್ದಾರೆ. ಪೊಲೀಸ್ ಇನ್ಸ್‌ಪೆಕ್ಟರ್ ಪ್ರಸನ್ನ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಾಲ್ಕೈದು ಬಾರಿ ವಾರ್ನ್ ಮಾಡಿದ್ದರು. ಇನ್ಸ್‌ಪೆಕ್ಟರ್ ಮಾತಿಗೂ ಲೆಕ್ಕಿಸದೆ ಮಾಲೀಕರು ಮದ್ಯ ಮಾರಾಟ ಮಾಡುತ್ತಿದ್ದರು. ಹೀಗಾಗಿ ಪೊಲೀಸರು ಮದ್ಯದಂಗಡಿಯನ್ನು ಮುಚ್ಚಿಸಿದ್ದಾರೆ. ಮದ್ಯದಂಗಡಿಯಲ್ಲಿ ಸಿಬ್ಬಂದಿಯಿಲ್ಲದೆ …

Read More »

ಮೆಡಿಕಲ್ ಶಾಪ್ ಖಾಲಿ – ಮದ್ಯದಂಗಡಿ ಫುಲ್,ಬಿಸಿಲಿನಲ್ಲೇ ಕ್ಯೂ ನಿಂತ ಎಣ್ಣೆಪ್ರಿಯರು….

ಹುಬ್ಬಳ್ಳಿ: ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಇದೂವರೆಗೂ ಮದ್ಯ ಮಾರಾಟವನ್ನ ಸ್ಥಗಿತಗೊಳಿಸಲಾಗಿತ್ತು. ಆದರೆ ಇಂದು ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದ ಪರಿಣಾಮ ಮದ್ಯ ಪ್ರಿಯರು ಬೆಳಗ್ಗೆಯಿಂದ ಮದ್ಯ ಖರೀದಿ ಮಾಡಲು ಕ್ಯೂ ನಿಂತಿದ್ದಾರೆ. ಆದರೆ ಪಕ್ಕದಲ್ಲಿದ್ದ ಮೆಡಿಕಲ್ ಶಾಪ್ ಮಾತ್ರ ಖಾಲಿಯಾಗಿದೆ. ಮದ್ಯ ಮಾರಾಟ ಆರಂಭವಾಗುತ್ತಿದ್ದಂತೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣ ಬಳಿಯ ದಾರುವಾಲ್ ಶಾಪ್ ಮುಂದೆ ಎಣ್ಣೆ ಖರೀದಿ ಮಾಡಲು ಸುಮಾರು ಒಂದು ಕೀಲೋ …

Read More »

ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ

ಬೆಳಗಾವಿ: ರಾಜ್ಯದಲ್ಲಿ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಈ ಹಂತದಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕಳೆದ ಒಂದುವರೆ ತಿಂಗಳ ಬಳಿಕ ಇಂದಿನಿಂದ ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಬೆಳಗಾವಿ ಜಿಲ್ಲೆಯ 10 ಪ್ರದೇಶಗಳಲ್ಲಿ ಮದ್ಯ ಪ್ರಿಯರಿಗೆ ಮತ್ತೆ ನಿರಾಸೆಯಾಗಿದೆ. ಇಲ್ಲಿನ 10 ಪ್ರದೇಶಗಳನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಈ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮದ್ಯ ಸಿಗಲಾರದು. ಬೆಳಗಾವಿ …

Read More »

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ

ನವದೆಹಲಿ: ಕೊರೊನಾದಿಂದ ಸಾವನ್ನಪ್ಪುವವರ ಪ್ರಮಾಣ ದೇಶದಲ್ಲಿ ಶೇಕಡಾ 3.2ರಷ್ಟಿದೆ ಎಂದು ಕೇಂದ್ರ ಸಚಿವ ಡಾ. ಹರ್ಷವರ್ಧನ್​ ತಿಳಿಸಿದ್ದಾರೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ ಎಂದಿರುವ ಅವರು 14 ದಿನಗಳ ಹಿಂದೆ ಸೋಂಕಿತರು ದ್ವಿಗುಣಗೊಳ್ಳುವ ಪ್ರಮಾಣ 10.5ರಷ್ಟಿತ್ತು. ಈಗ ಸೋಂಕಿತರು ದ್ವಿಗುಣಗೊಳ್ಳಲು 12 ದಿನಗಳು ಬೇಕಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇಲ್ಲಿಯವರೆಗೆ ಸುಮಾರು 10 ಸಾವಿರ ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಲ್ಲಿರುವ ಸೋಂಕಿತರೂ ಬೇಗನೇ ಚೇತರಿಕೆಗೊಳ್ಳುತ್ತಿದ್ದಾರೆ …

Read More »

ಹಲವು ವಿನಾಯಿತಿಗಳ ನಡುವೆ ಮೇ 17ರವರೆಗೆ ನಿಷೇಧಾಜ್ಞೆ ಮುಂದುವರಿಕೆ ……..

ಹಾವೇರಿ: ಹಲವು ವಿನಾಯಿತಿಗಳ ನಡುವೆ ಕರೋನಾವೈರಸ್ (Coronavirus) ಕೋವಿಡ್ ನಿರ್ಭಂಧ ಜಿಲ್ಲೆಯಲ್ಲಿ ಮುಂದುವರೆದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 17ರವರೆಗೆ ಮುಂದುವರಿಸಿ  ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ (Lockdown)ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಅದರಂತೆ ಈ ಕೆಳಕಂಡ ಚಟುವಟಿಕೆಗಳನ್ನು ನಿಯಂತ್ರಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್‍ಗಳನ್ನು ಹೊರತುಪಡಿಸಿ ಉಳಿದ ಯಾವುದೇ …

Read More »

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ …

Read More »

ಕೊರೋನಾ ಜೊತೆ ಹೋರಾಡಿ ಸಾವು ಗೆದ್ದ ಬಂದ ಕ್ಷಣ ನೆನೆದು ಕಣ್ಣೀರಿಟ್ಟ ಬ್ರಿಟನ್ ಪ್ರಧಾನಿ..!

ಲಂಡನ್,ಮೇ4- ಕಾಯಿಲೆಯನ್ನು ಎದುರಿಸಿದ ಸನ್ನಿವೇಶ ಕಠಿಣ ಕ್ಷಣಗಳಾಗಿದ್ದವು.. ತಮಗೆ ಬರಬಹುದಾದ ಸಾವಿನ ಸಂಗತಿಯನ್ನು ಘೋಷಿಸಲು ವೈದ್ಯರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಎಂದು ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ. ಅಲ್ಲಿನ ಸ್ಥಳೀಯ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ಅವರು, ಅದು ಕಠಿಣ ಕ್ಷಣಗಳಾಗಿದ್ದವು. ಪರಿಸ್ಥಿತಿ ಕೈ ಮೀರಿ ಹೋದರೆ ಏನು ಮಾಡಬೇಕು ಎಂಬುದರ ಬಗ್ಗೆ ವೈದ್ಯರು ಒಂದಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ನಾನು ಉತ್ತಮ ಸ್ಥಿತಿಯಲ್ಲಿರಲಿಲ್ಲ. …

Read More »