ವಿಜಯಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ 50 ರೂ.ಗಳ ಆರ್ಥಿಕ ನೆರವಿನ ಮೊತ್ತ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಕಳೆದ ನವಂಬರ್ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ …
Read More »ನರೇಗಾ ಬಚಾವ್ ಸಂಗ್ರಾಮ್ ಪ್ರತಿಭಟನೆ; ಕಾಂಗ್ರೆಸ್ ವತಿಯಿಂದ ವಿಜಯಪುರ ನಗರದಲ್ಲಿ ರ್ಯಾಲಿ
ವಿಜಯಪುರ ನಗರ ಮತಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ನರೇಗಾ ಬಚಾವ್ ಸಂಗ್ರಾಮ್’ ಪ್ರತಿಭಟನೆ ನಗರದ ಮಧ್ಯಭಾಗದಲ್ಲಿರುವ ಮಹಾತ್ಮ ಗಾಂಧೀಜಿ ವೃತ್ತದಿಂದ ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಮೀದ ಮುಶ್ರಿಷ್, ಹಲವು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯನ್ನು ಬಿಜೆಪಿ ಸರ್ಕಾರವು ವಿ.ಬಿ.ಜಿ.ರಾಮ ಜಿ ಯೋಜನೆ ಎಂದು ಪರಿವರ್ತಿಸಲು ಮುಂದಾಗಿರುವುದು ಖಂಡನೀಯ …
Read More »ಕಿತ್ತೂರು ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ್ ಪಾಟೀಲ್ ಹೊಸ ಭಾಷ್ಯ: 36.75 ಕೋಟಿ ರೂ. ವೆಚ್ಚದ ಶ್ರಮಿಕ ವಸತಿ ಶಾಲೆಗೆ ಚಾಲನೆ
ಕಿತ್ತೂರು ಕ್ಷೇತ್ರದ ಕಾರ್ಮಿಕರ ಮಕ್ಕಳ ಪಾಲಿಗೆ ಹೊಸ ಆಶಾಕಿರಣ ಮೂಡಿದೆ. ಶಾಸಕ ಬಾಬಾಸಾಹೇಬ್ ಪಾಟೀಲ್ ಅವರ ಸತತ ಪ್ರಯತ್ನದ ಫಲವಾಗಿ, 36.75 ಕೋಟಿ ರೂಪಾಯಿ ವೆಚ್ಚದ ಹೈಟೆಕ್ ‘ಶ್ರಮಿಕ ವಸತಿ ಶಾಲೆ’ ನಿರ್ಮಾಣಕ್ಕೆ ಅದ್ಧೂರಿ ಭೂಮಿ ಪೂಜೆ ನೆರವೇರಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕೈಗಾರಿಕಾ ಪ್ರದೇಶದ ಸಮೀಪ, ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಿರ್ಮಾಣವಾಗಲಿರುವ ಶ್ರಮಿಕ ವಸತಿ ಶಾಲೆಯ ಭೂಮಿ ಪೂಜಾ ಸಮಾರಂಭ …
Read More »ಬೆಳಗಾವಿ ಕ್ಯಾಂಟೋನ್ಮೆಂಟ್ ಬೋರ್ಡ್ ಶಾಲೆಗಳಿಗೆ ‘ಶಾಲಾ ಎಕ್ಸಲೆನ್ಸ್ ಪ್ರಶಸ್ತಿ’ ಗೌರವ: ಶಾಂತಿ ವೃದ್ಧಾಶ್ರಮದಲ್ಲಿ ಅದ್ಧೂರಿ ಸಮಾರಂಭ
ಬೆಳಗಾವಿಯ ಪ್ರತಿಷ್ಠಿತ ಶಾಂತಿ ವೃದ್ಧಾಶ್ರಮದ ವತಿಯಿಂದ ನೀಡಲಾಗುವ 2025-26ನೇ ಸಾಲಿನ ‘ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್’ ಅನ್ನು ಕ್ಯಾಂಟೋನ್ಮೆಂಟ್ ಬೋರ್ಡ್ ಆಡಳಿತದ ಶಾಲೆಗಳಿಗೆ ಪ್ರದಾನ ಮಾಡಲಾಯಿತು. ಶಿಕ್ಷಣ ಕ್ಷೇತ್ರದಲ್ಲಿ ನೂರಾರು ವರ್ಷಗಳಿಂದ ಅಪಾರ ಸೇವೆ ಸಲ್ಲಿಸುತ್ತಿರುವ ಈ ಸಂಸ್ಥೆಗಳ ಶ್ರೇಷ್ಠತೆಯನ್ನು ಗುರುತಿಸಿ ಇಂದು ಈ ವಿಶೇಷ ಗೌರವ ಸಮರ್ಪಿಸಲಾಯಿತು.” ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಬೆಳಗಾವಿ ಕ್ಯಾಂಟೋನ್ಮೆಂಟ್ ಬೋರ್ಡ್ ನಡೆಸುತ್ತಿರುವ ವಿವಿಧ ಶಾಲೆಗಳಿಗೆ ಅವುಗಳ ಗಣನೀಯ ಶೈಕ್ಷಣಿಕ ಸಾಧನೆಗಾಗಿ ‘ಶಾಲಾ …
Read More »ಕಾಗವಾಡ ಶಾಸಕ ರಾಜು ಕಾಗೆ ಇವರಿಂದ 3.55 ಕೋಟಿ ರೂಪಾಯಿಗಳ ರಸ್ತೆ ಕಾಮಗಾರಿಗೆ ಪೂಜೆ
ರಾಜ್ಯದ ಮುಖ್ಯಮಂತ್ರಿಗಳು ಪ್ರತಿಯೊಂದು ಗ್ರಾಮದಲ್ಲಿ ಉತ್ತಮ ರಸ್ತೆ, ಶಾಲೆಗಳ ಕೊಠಡಿಗಳು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಹೆಚ್ಚಿನ ಒತ್ತು ನೀಡಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ನೀಡುತ್ತಿದ್ದಾರೆ. 50 ಕೋಟಿ ರೂಪಾಯಿ ಯೋಜನೆ ಕಾಮಗಾರಿಗಳಿಗೆ ಪೂಜೆ ನೆರವೇರಿಸಿದ್ದೇನೆ ಎಂದು ಶಾಸಕ ರಾಜು ಕಾಗೆ ಹೇಳಿದರು. ಬುಧವಾರ ರಂದು ಮಂಗಸೂಳಿ-ಫರಿದಖಾನವಾಡಿ ಗ್ರಾಮ ಮಧ್ಯದ ರಸ್ತೆ ಅಭಿವೃದ್ಧಿಗೊಳಿಸಲು 3 ಕೋಟಿ ರೂಪಾಯಿ ಯೋಜನೆಗೆ ಹಾಗೂ ಶೇಡಬಾಳ ನಗರ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 11, …
Read More »ಆರ್.ಎಸ್.ಎಸ್. ಮುಖಂಡನ ಮೇಲೆ ಹಲ್ಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೋಮು ವಿವಾದವಲ್ಲ, ಇದು ಅಧಿಕಾರಕ್ಕಾಗಿ ನಡೆದ ಅಂತರ್ಯುದ್ಧ!
ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ನಡೆದ ಆರ್ಎಸ್ಎಸ್ ತಾಲೂಕಾಧ್ಯಕ್ಷ ದತ್ತಾ ಥೋರಾವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣ ಈಗ ಸಂಚಲನ ಮೂಡಿಸಿದೆ. ಆರಂಭದಲ್ಲಿ ಈ ಘಟನೆ ಕೋಮು ಸಂಘರ್ಷದ ಬಣ್ಣ ಪಡೆದಿತ್ತಾದರೂ, ಈಗ ಪೊಲೀಸರು ಹೊರಹಾಕಿರುವ ಸತ್ಯಾಂಶಗಳು ಎಲ್ಲರನ್ನೂ ಬೆಚ್ಚಿಬೀಳಿಸಿವೆ. ಕೇವಲ ವರ್ಚಸ್ಸು ಮತ್ತು ಅಧಿಕಾರದಾಸೆಗಾಗಿ ಸ್ವಪಕ್ಷೀಯರೇ ಸುಪಾರಿ ನೀಡಿ ಕೊಲೆಗೆ ಸಂಚು ರೂಪಿಸಿದ್ದು ಬಯಲಾಗಿದೆ. ಹುಕ್ಕೇರಿ ತಾಲೂಕಿನ ಆರ್ಎಸ್ಎಸ್ ಮುಖಂಡರಾದ ದತ್ತಾ ಥೋರಾವತ್ ಹಾಗೂ ಸಮೀರ್ ಪಾಟೀಲ್ ನಡುವೆ ಮೊದಲಿನಿಂದಲೂ …
Read More »ಪಕ್ಷದ ವಿಚಾರ ಬಂದಾಗ ಮಾಜಿ ಸಚಿವ ಎ.ಬಿ. ಪಾಟೀಲ ಹಾಗೂ ನಾನು ಒಂದೇ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಸಂಘ- ಸಂಸ್ಥೆ ವಿಚಾರ ಬಂದಾಗ ಎ. ಬಿ. ಪಾಟೀಲ ಹಾಗೂ ನಾವು ಬೇರೆ ಬೇರೆ, ಆದರೆ ಪಕ್ಷದ ವಿಚಾರ ಬಂದಾಗ ನಾವು ಅವರು ಒಂದೇ ಎಂದು ಲೋಕೋಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಸಂಘ-ಸಂಸ್ಥೆಗಳ ಚುನಾವಾಣೆ ಬಂದಾಗ ಮಾಜಿ ಸಚಿವ ಎ.ಬಿ.ಪಾಟೀಲ ಅವರು ಬೇರೆ ಬೇರೆಯಾಗಿದ್ದೇವೆ ಹೊರತು ಪಕ್ಷದ ವಿಚಾರ ಬಂದಾಗ ನಾವು ಅವರು ಕೂಡಿ ಪ್ರಚಾರ ಮಾಡುತ್ತೇವೆ. ಈ ಕುರಿತು …
Read More »ಅಪ್ರಾಪ್ತೆ ಮೇಲೆ ಅತ್ಯಾಚಾರ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ
ಬೈಲಹೊಂಗಲ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಗೋಕಾಕ ತಾಲೂಕಿನ ಹೀರೆಹಟ್ಟಿ ಗ್ರಾಮದ ಅಪರಾಧಿ ಲಕ್ಷ್ಮಣ ಹನುಮಂತ ಮುರಗೋಡ (28) ಗೆ 30 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಈ ಕುರಿತು ನೇಸರಗಿ ಪೊಲೀಸ್ ಠಾಣೆಯಲ್ಲಿ 2022ರಲ್ಲಿ ದೂರು ದಾಖಲಾಗಿತ್ತು. ತನಿಖಾಧಿಕಾರಿ ಯು.ಎಚ್.ಸಾತೇಹಳ್ಳಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು …
Read More »ಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ ನದಿಗೆ ಹಾರಿ ಸಾವು
ಸವದತ್ತಿ: ಮನೆಯಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ವಜ್ರವ್ವ ಮಲ್ಲಿಕಾರ್ಜುನ ಉಪ್ಪಾರಟ್ಟಿ (58) ಮೃತದೇಹ ಮಂಗಳವಾರ ಜೋಗುಳಬಾವಿ ಸಮೀಪದ ಮಲಪ್ರಭಾ ಬಲದಂಡೆ ಕಾಲುವೆಯಲ್ಲಿ ಪತ್ತೆಯಾಗಿದೆ. ಸೋಮವಾರದಿಂದ ಕಾಣೆಯಾಗಿದ್ದ ವಜ್ರವ್ವಳ ಹುಡುಕಾಟ ಆರಂಭಿಸಿದಾಗ ಜೋಗುಳಬಾವಿ ಹತ್ತಿರ ಕಾಲುವೆ ದಂಡೆಯ ಮೇಲೆ ಚಪ್ಪಲಿ ಪತ್ತೆಯಾಗಿದ್ದವು. ಬಳಿಕ ಅಗ್ನಿಶಾಮಕ ದಳದೊಂದಿಗೆ ಮಲಪ್ರಭಾ ನದಿ ಕಾಲುವೆಯಲ್ಲಿ ಶೋಧ ಕಾರ್ಯ ಆರಂಭಿಸಿದಾಗ ಹಂಚಿನಾಳ ಸಮೀಪದ ಕಾಲುವೆಯಲ್ಲಿ ಶವ ಪತ್ತೆಯಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಸವದತ್ತಿ ಠಾಣೆ ಪೊಲೀಸರು ತಿಳಿಸಿದ್ದಾರೆ.
Read More »ಧನಲಕ್ಷ್ಮೀ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮು ಗುರುವಾರ ಮುಕ್ತಾಯ
ಧನಲಕ್ಷ್ಮೀ ಕಾರ್ಖಾನೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಎಲ್ಲ ಕಬ್ಬು ನೊಂದಾಯಿಸಿದ ರೈತ ಬಾಂಧವರು ಹಾಗೂ ಶೇರು ಸದಸ್ಯರು ಗುರುವಾರ ದಿನಾಂಕ : 26-02-2026 ರಂದು ರಾತ್ರಿ 8:00 ಗಂಟೆಗೆ 2025-26 ನೇ ಸಾಲಿನ ಕಬ್ಬು ನುರಿಸುವ ಹಂಗಾಮನ್ನು ಮುಕ್ತಾಯಗೊಳಿಸಲು ತೀರ್ಮಾನಿಸಲಾಗಿದೆ. ಕಾರಣ ರೈತರು ಕಬ್ಬನ್ನು ಕಟಾವು ಮಾಡಿ ನಿಗದಿಪಡಿಸಿದ ದಿನಾಂಕದೊಳಗಾಗಿ ಕಾರ್ಖಾನೆಗೆ ಸರಬರಾಜು ಮಾಡಬೇಕೆಂದು ತಿಳಿಯಪಡಿಸಲಾಗಿದೆ. ಸದರಿ ಅವಧಿಯ ಒಳಗಾಗಿ ಕಬ್ಬು ಕಟಾವು ಮತ್ತು ಸಾಗಾಣಿಕೆ ಮಾಡದೇ ಇರುವ ಕಬ್ಬಿಗೆ ಕಾರ್ಖಾನೆಯವರು …
Read More »
Laxmi News 24×7