Breaking News

Laxminews 24x7

ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನ……….

ಅಥಣಿ- ತಹಸೀಲ್ದಾರ್ ಚಾಲಕನ ಮೇಲೆ ಟ್ರಾಕ್ಟರ್ ಹಾಯಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿತರನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಥಣಿ ತಾಲೂಕಿನ ಶಿರೂರ -ಖಿಳೆಗಾಂವ ಮಧ್ಯದ ಹಳ್ಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡುತ್ತಿದ್ದಾಗ ಅಥಣಿ ತಹಸೀಲ್ದಾರ್ ಮತ್ತು ಅವರ ಚಾಲಕ ಅನಿಲ್ ಮಲ್ಲಪ್ಪ ಗಸ್ತಿ ಹಾಗೂ ಆರ್.ವಿ. ಖಲಾಟೆ ಅವರೊಂದಿಗೆ ದಾಳಿ ಕೈಗೊಂಡಾಗ ತಹಸೀಲ್ದಾರ್ ಮತ್ತು ಅವರ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಒತ್ತಾಯಪೂರ್ವಕವಾಗಿ ಟ್ರ್ಯಾಕ್ಟರನ್ನು ತೆಗೆದುಕೊಂಡು …

Read More »

ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ………..

ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಡೀ ದೇಶವನ್ನೇ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿಂದಂತೆ ಜೀವ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುವಾಗ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಅವರಿಗೆ 30 ಲಕ್ಷ ಪರಿಹಾರ ನೀಡುವುದಕ್ಕೆ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ. …

Read More »

ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ.

ಗೋಕಾಕ: ಮುಸ್ಲಿಂ ಸಮುದಾಯದ ‌ಪವಿತ್ರ ರಮಜಾನ್ ತಿಂಗಳಿನ ರೋಜಾವನ್ನು ಯುವಕರು ವೃದ್ಧರು ಸೇರಿ ಬಾಲಕರೂ ಪಾಲನೆ‌ ಮಾಡುವುದು ಸಾಮಾನ್ಯವಾಗಿದೆ. ನಗರದ ಹಾಜಿ ಆರೀಪ್ ಪೀರಜಾದೆ ಅವರ ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ. ರಾಹುಲ್ ಸತೀಶ್ ಜಾರಕಿಹೊಳಿಯವರು ಈ ಮಗುವಿಗೆ ರಮಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಇಂತಹ ಬಿಸಿಲಿನಲ್ಲೂ ಅರಾಪತ್ ಪೀರಜಾದೆ ಇಡೀ ದಿನ ನೀರು ತಿಂಡಿ ಇಲ್ಲದೆ ಅಲ್ಲಾಹನ ಕೃಪೆಗಾಗಿ ಉಪವಾಸ ವೃತ …

Read More »

ಧಾನ್ಯಗಳ ಕಿಟ್‍ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು.

ಘಟಪ್ರಭಾ: ತುಕ್ಕಾನಟ್ಟಿ ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಬುಧವಾರದಂದು ರಾಜಾಪೂರ, ದಂಡಾಪೂರ, ದುರದುಂಡಿ, ಗಣೇಶವಾಡಿ, ಬಡಿಗವಾಡ ಗ್ರಾಮಗಳಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಬಸವಂತ ಕಮತಿ ಅವರು, ಕೊರೋನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಅನುಭವಿಸುತ್ತಿದ್ದೇವೆ. ಇದರಿಂದ ನಮಗೆಲ್ಲಾ ದಿನನಿತ್ಯದ ಗೃಹ ಬಳಕೆಗೆ ಬೇಕಾಗುವ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಜನರ ಸಮಸ್ಯೆಗಳನ್ನು ಅರಿತು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ …

Read More »

ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ನಾವೇ ಖರೀದಿ ಮಾಡಿಕೊಳ್ಳುತ್ತಿದ್ದು, ಅದಕ್ಕಾಗಿ ಪ್ರತಿ ಕ್ವಿಂಟಲ್‍ಗೆ 1760 ರೂ.ಗಳನ್ನು ನಿಗದಿಪಡಿಸಲಾಗಿದೆ

ಬೆಂಗಳೂರು : ಪಶು ಆಹಾರ ಉತ್ಪಾದನೆಗೆ ಅಗತ್ಯವಿರುವ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ನಾವೇ ಖರೀದಿ ಮಾಡಿಕೊಳ್ಳುತ್ತಿದ್ದು, ಅದಕ್ಕಾಗಿ ಪ್ರತಿ ಕ್ವಿಂಟಲ್‍ಗೆ 1760 ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಹೊರಡಿಸಿದ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಕೋವಿಡ್-19 ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಮೆಕ್ಕೆಜೋಳವನ್ನು ಬೆಳೆದ ರೈತರು ಸೂಕ್ತ ಮಾರುಕಟ್ಟೆ ಇಲ್ಲದೇ, ಯೋಗ್ಯ ದರವು ಸಿಗದೇ ತೊಂದರೆಯಲ್ಲಿರುವುದಾಗಿ ತಿಳಿದುಬಂದಿದ್ದರಿಂದ ಸ್ವತಃ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ‌ನೀಡಿದ ಸುಮಾರು 5 ಲಕ್ಷ ರೂ. ಚೆಕ್  ಗಳನ್ನು ಹಸ್ತಾಂತರಿಸಿದರು. ಇಲ್ಲಿನ ಸದಾಶಿವ ನಗರದಲ್ಲಿರುವ ಡಿಕೆಶಿ ಅವರ ಮನೆಗೆ ಭೇಟಿ‌ ನೀಡಿದ ಕಾರ್ಯಾಧ್ಯಕ್ಷರು ಚೆಕ್ ಗಳನ್ನು ಹಸ್ತಾಂತರಿಸಿ ಲಾಕ್‌ಡೌನ್ ಸಂಕಷ್ಟದಲ್ಲಿರುವ ಬಡಜನರಿಗೆ ನೆರವಾಗುವ ಕುರಿತು ಚರ್ಚೆ …

Read More »

ಎಪಿಎಂಸಿಯ 50 ಕೋಟಿ ವಂಚನೆ ಪ್ರಕರಣ : 12 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು, ಏ.30- ಎಪಿಎಂಸಿಯ 50 ಕೋಟಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ತನಿಖೆ ನಡೆಸಿರುವ ಸಿಸಿಬಿ ಪೆÇಲೀಸರು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 12 ಆರೋಪಿಗಳ ವಿರುದ್ಧ ಸುಮಾರು 1400 ಪುಟಗಳ ಪ್ರಾಥಮಿಕ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಸಿಂಡಿಕೆಟ್ ಬ್ಯಾಂಕ್‍ನ ಸಹಾಯಕ ವ್ಯವಸ್ಥಾಪಕ ಸಿದ್ದಲಿಂಗಯ್ಯ ಹಾಗೂ ನಿವೃತ್ತ ಖಜಾನೆ ಅಧಿಕಾರಿ ಲಕ್ಷ್ಮಯ್ಯ ಸೇರಿದಂತೆ 12 ಮಂದಿ ಆರೋಪಿಗಳಲ್ಲಿ ಕೆಲವರು ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ ಕೃಷಿ ಉತ್ಪನ್ನ ಮಾರುಕಟ್ಟೆ …

Read More »

BREAKING : ಲಾಕ್‍ಡೌನ್ ಸಡಿಲಿಕೆ ಕುರಿತು ಇಲ್ಲಿದೆ ಸಿಹಿಸುದ್ದಿ..!

ನವದೆಹಲಿ,ಏ.30-ಎರಡನೇ ಅವಧಿಗೆ ವಿಸ್ತರಣೆಯಾಗಿರುವ ದೇಶವ್ಯಾಪಿ ಲಾಕ್‍ಡೌನ್ ಮೇ 3ರಂದು ಕೊನೆಗೊಳ್ಳಲಿದ್ದು, ಮರುದಿನದಿಂದಲೇ ಭಾರತದ ಬಹುತೇಕ ಜಿಲ್ಲೆಗಳು ಅನ್‍ಲಾಕ್ ಆಗುವ ಬಗ್ಗೆ ಕೇಂದ್ರ ಗೃಹಸಚಿವಾಲಯ ಮುನ್ಸೂಚನೆ ನೀಡಿದೆ. ಆದರೆ ಹಾಟ್‍ಸ್ಟಾಟ್ ಮತ್ತು ರೆಡ್‍ಜೋನ್ ಜಿಲ್ಲೆಗಳಲ್ಲಿ ಮೇ 3ರ ನಂತರವೂ ಕಠಿಣ ನಿರ್ಬಂಧ ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಅತಿ ಶೀಘ್ರದಲ್ಲೇ ಹೊಸ ಮತ್ತು ಪರಿಸ್ಕøತ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಲಾಗಿದೆ. ದೇಶದಲ್ಲಿ ಒಟ್ಟು 739 ಜಿಲ್ಲೆಗಳಿವೆ. ಅನೇಕ ಜಿಲ್ಲೆಗಳಲ್ಲಿ …

Read More »

ಬ್ರೇಕಿಂಗ್ : ರಾಜ್ಯದಲ್ಲಿ ನಿಂತಿಲ್ಲ ಕೊರೋನಾ ಅಟ್ಟಹಾಸ, ಇಂದು 22 ಮಂದಿಯಲ್ಲಿ ಸೋಂಕು ಪತ್ತೆ..!

ಬೆಂಗಳೂರು, ಏ.30- ಮತ್ತೊಮ್ಮೆ ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರಿಸಿದೆ. ಇಂದು ಮಧ್ಯಾಹ್ನದವರೆಗೂ ನಡೆದ ಪರೀಕ್ಷೆಯಲ್ಲಿ 22 ಮಂದಿಗೆ ಸೋಂಕಿರುವುದು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ 557ಕ್ಕೇರಿದೆ. 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 223 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈವರೆಗೂ ಹಸಿರು ವಲಯವಾಗಿದ್ದ ತುಮಕೂರಿನಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ಹಿರೇಬಾಗವಾಡಿಯಲ್ಲಿ 12, ಹುಕ್ಕೇರಿಯಲ್ಲಿ ಎರಡು, ಬೆಂಗಳೂರು ನಗರದಲ್ಲಿ ಮೂರು ಮಂದಿಗೆ, ವಿಜಯಪುರದಲ್ಲಿ ಎರಡು, ದಕ್ಷಿಣ ಕನ್ನಡ, ತುಮಕೂರು, …

Read More »

ಮದ್ಯದಂಗಡಿ ಸದ್ಯ ಓಪನ್ ಆಗಲ್ಲ : ಆರ್.ಅಶೋಕ್

ಬೆಂಗಳೂರು, ಏ.30- ಮದ್ಯದಂಗಡಿಗಳನ್ನು ಸದ್ಯಕ್ಕೆ ತೆರೆಯುವ ಯಾವುದೇ ಉದ್ದೇಶವನ್ನು ಸರ್ಕಾರ ಹೊಂದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂತ ಹಂತವಾಗಿ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದರೂ ಸದ್ಯಕ್ಕೆ ಮದ್ಯದಂಗಡಿ ತೆರೆಯುವ ಯಾವುದೇ ಉದ್ದೇಶ ಇಲ್ಲ ಎಂದರು. ಒಂದು ವೇಳೆ ಮದ್ಯದಂಗಡಿಗಳನ್ನು ತೆರೆದರೆ ಬಡವರಿಗೆ ಮತ್ತು ಕಾರ್ಮಿಕರಿಗೆ ಹಂಚಿಕೆಯಾಗಿರುವ ಆಹಾರ ಸಾಮಗ್ರಿಗಳು, ಎಣ್ಣೆಗಾಗಿ ಖಾಲಿಯಾಗುವ ಸಾಧ್ಯತೆಯಿದ್ದು, ಕುಟುಂಬದವರು ಉಪವಾಸ ಬೀಳಲಿದ್ದಾರೆ. ಹೀಗಾಗಿ ಮದ್ಯದಂಗಡಿ ತೆರೆಯುವುದಿಲ್ಲ ಎಂದು ಅವರು …

Read More »