ಹೊಸದಿಲ್ಲಿ: ಲಡಾಖ್ನ ಎಲ್ಎಸಿಯ ವಿವಾದಿತ ಸ್ಥಳದಿಂದ ಚೀನ ಸೇನೆ ವಾಪಸಾತಿ ಕೈಗೊಳ್ಳುತ್ತಿರುವ ವೀಡಿಯೊವೊಂದನ್ನು ಭಾರತೀಯ ಸೇನೆ ಮಂಗಳವಾರ ಬಿಡುಗಡೆ ಮಾಡಿದೆ. ಹಿಮಬೆಟ್ಟದ ನೆತ್ತಿ ಮೇಲೆ ಹೂಡಿದ್ದ ಅಕ್ರಮ ಟೆಂಟ್ಗಳನ್ನು ಪಿಎಲ್ಎ ಸೈನಿಕರು ಕೀಳುತ್ತಿರುವ ದೃಶ್ಯಗಳು ವೀಡಿಯೋದಲ್ಲಿವೆ. ಯುದ್ದೋಪಕರಣಗಳನ್ನು ಹೊತ್ತು ಪರ್ವತದಿಂದ ಇಳಿಯುತ್ತಾ, ತಮಗಾಗಿ ಕಾಯುತ್ತಿರುವ ಟ್ರಕ್ನತ್ತ ಚೀನೀ ಸೈನಿಕರು ಧಾವಿಸುತ್ತಿರುವ ದೃಶ್ಯಗಳನ್ನು ಝೂಮ್ ನೋಟದಲ್ಲಿ ವೀಡಿಯೋ ತೋರಿಸಿದೆ. ನಿರ್ಮಾಣಗಳು ಉಡೀಸ್: ಅಲ್ಲದೆ ಈ 10 ತಿಂಗಳಲ್ಲಿ ಸೈನಿಕರು ತಂಗಲು, ಯುದ್ದೋಪಕರಣಗಳನ್ನು …
Read More »BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ …
Read More »ಕನಸಿನಲ್ಲೂ ಬಿಜೆಪಿ ಹೆಸರು ಕೇಳಿದರೆ ಜನರು ಬೆವರುವಂತಾಗಿದೆ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ – ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೇಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಎಲ್ಲಿದೆ ಬಿಜೆಪಿಯ ಅಚ್ಛೇ ದಿನ್ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೋನಾದಿಂದ ತತ್ತರಿಸಿದ್ದ ಜನರಿಗೆ ಈಗ ಬೆಲೆ ಏರಿಕೆಯ ಬರೆ ಬಿದ್ದಿದೆ. ಜನಸಾಮಾನ್ಯರ ಗೋಳನ್ನು ಕೇಳುವವರಿಲ್ಲ ಎಂದು ಕಿಡಿಕಾರಿದ್ದಾರೆ. ಜನರು ಕೊರೋನಾದಿಂದಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಆದಾಯವಿಲ್ಲದೆ ಹೊತ್ತಿನ ಕೂಳಿಗೆ ಪರದಾಡುತ್ತಿದ್ದಾರೆ. …
Read More »ಬೆಳಗಾವಿ ನಗರ ಸಿಸಿಐಬಿ ತಂಡದಿಂದ ಸುಮಾರು ೧೩ ಲಕ್ಷ ಮೌಲ್ಯದ ಮಿಲಿಟರಿ ಮತ್ತು ಅಂತರ್ರಾಜ್ಯ ಮದ್ಯ ಜಪ್ತಿ
ಬೆಳಗಾವಿ – ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ ಕಂಪನಿಯ ಸರಾಯಿ ಬಾಟಲ & ಚೀಲಗಳನ್ನು ಸ್ಥಳಿಯರಿಗೆ ಎರಡುಪಟ್ಟು ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು. ಆರೋಪಿತರಾದ ರಾಜೇಶ ಕೇಶವ ನಾಯಿಕ, (೩೭) ಸಾ: ಕುಮಾರಸ್ವಾಮಿ ಲೇಔಟ್, ಬೆಳಗಾವಿ, ಶಂಕರ ಬಸವಂತ ದೇಸನೂರ, (೩೮) ಸಾ|| ಸಿಸಿಬಿ ನಂ. …
Read More »ಪಿಎಂ ಕೇರ್ಸ್ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ
ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ …
Read More »ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ
ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …
Read More »ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …
Read More »ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ
ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು. ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು …
Read More »ಏರುತ್ತಿದೆ ಕೊರೊನಾ ಪ್ರಕರಣ; ಮುಂಬೈನಲ್ಲಿ ಮತ್ತೊಂದು ಲಾಕ್ ಡೌನ್?
ಮುಂಬೈ, ಫೆಬ್ರುವರಿ 16: ಮುಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಕುರಿತು ಚರ್ಚೆ ನಡೆದಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೀಗೇ ಹೆಚ್ಚುತ್ತಿದ್ದರೆ, ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಬಹುದು ಎಂದು ಎರಡು ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಬೃಹತ್ ಮುಂಬೈ ಮುನಿಸಿಪಾಲ್ ಕಾರ್ಪೊರೇಷನ್ ಮೇಯರ್ ಕಿಶೋರಿ ಪೆಡ್ನೇಕರ್, “ಜನರು …
Read More »ಮೀಸಲಾತಿ ಹೋರಾಟಗಳು ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು: ಕುಮಾರಸ್ವಾಮಿ
ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮೀಸಲಾತಿ ಬೇಡಿಕೆ ಹೋರಾಟಗಳು ಭವಿಷ್ಯದಲ್ಲಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಸಿದರು. ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ. ಅಂಬೇಡ್ಕರ್ ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು. ಇಂದು ಸರ್ಕಾರದ ಸಚಿವರು, ಶಾಸಕರೇ ತಮ್ಮ ಜಾತಿಗಳ ಪರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಂಪುಟ ಸಭೆಯಲ್ಲೇ ನಿರ್ಧರಿಸಬಹುದಾದ ವಿಷಯವನ್ನು ಬೀದಿಗೆ …
Read More »
Laxmi News 24×7