ಸಿಲಿಕಾನ್ ಸಿಟಿ ಟ್ರಾಫಿಕ್ನಲ್ಲಿ ಸಿಲುಕಿಕೊಂಡ ಕ್ರಿಕೆಟಿಗ ರಾಹುಲ್ ದ್ರಾವಿಡ್ ”ನಾನು ಇಂದಿರಾನಗರದ ಗೂಂಡಾ” ಎಂದು ಕಿರುಚಾಡಿ ಅಕ್ಕಪಕ್ಕದ ಕಾರುಗಳ ಗಾಜು ಪುಡಿ ಪುಡಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದ್ಹಾಗೆ, ಇದು ಜಾಹೀರಾತು. ಕ್ರಿಕೆಟ್ ಜಗತ್ತಿನ ಜಂಟಲ್ಮ್ಯಾನ್ ಎಂದೇ ಗುರುತಿಸಿಕೊಂಡಿರುವ ರಾಹುಲ್ ದ್ರಾವಿಡ್ ಅವರನ್ನು ಹಿಂದೆಂದೂ ಈ ರೀತಿ ನೋಡಿರಲು ಸಾಧ್ಯವಿಲ್ಲ. ಆದರೆ, ಜಾಹೀರಾತಿಗಾಗಿ ತಮ್ಮ ಉಗ್ರರೂಪ ತೋರಿಸಿದ್ದಾರೆ. ಇದೀಗ, ‘ನಾನು ಇಂದಿರಾನಗರದ ಗೂಂಡಾ’ ಎಂಬ ಡೈಲಾಗ್ …
Read More »ಬಸ್ ನಲ್ಲಿ ಸಾಗಿಸುತ್ತಿದ್ದ 3.25 ಕೋಟಿ ಪತ್ತೆ ; ಬೆಂಗಳೂರಿನ ಚಾಲಕ ಸೇರಿ ಇಬ್ಬರು ಸೆರೆ
ಕರ್ನೂಲ್(ಆಂಧ್ರಪ್ರದೇಶ),ಏ.10 : ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್ಪೋಸ್ಟ್ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್ನಲ್ಲಿ ಹೈದರಾಬಾದ್ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ನಗದು ಪತ್ತೆಯಾಗಿದೆ. ಹಣ ಸಾಗಿಸುತ್ತಿದ್ದ ಬೆಂಗಳೂರಿನ ಖಾಸಗಿ ಟ್ರಾವೆಲ್ ಕಂಪನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಬಿ.ಎ.ಚೇತನ್ ಕುಮಾರ್ ಮತ್ತು ಚೆನ್ನೈ ಮೂಲದ ಅರುಣ್ ಎನ್ನುವ ಇಬ್ಬರನ್ನು ಬಂಧಿಸಿ ಅವರು ಸಾಗಿಸುತ್ತಿದ್ದ 3.25 ಕೋಟಿ ಹಣವನ್ನು ಕರ್ನೂಲ್ ವಿಶೇಷ ಜಾರಿ ಬ್ಯೂರೋ(ಎಸ್ಇಬಿ)ದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ …
Read More »ಬೆಂಗಳೂರಲ್ಲಿ ನಕಲಿ ಕೋವಿಡ್ ಟೆಸ್ಟ್; ಇಬ್ಬರ ವಿರುದ್ಧ ಎಫ್ಐಆರ್
ಬೆಂಗಳೂರು, ಏಪ್ರಿಲ್ 11; ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಶನಿವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರ ನಡುವೆಯೇ ಆರೋಗ್ಯ ಇಲಾಖೆ ಸಿಬ್ಭಂದಿಗಳ ನಿರ್ಲಕ್ಷ್ಯವೂ ಬೆಳಕಿಗೆ ಬಂದಿದೆ. ಕೋಡಿಗೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ನಾಗರಾಜ್ ಮತ್ತು ಹಿರೇಮಠ ಸರ್ಕಾರಕ್ಕೆ ಲೆಕ್ಕ ತೋರಿಸಲು ನಕಲಿ ಕೋವಿಡ್ ಟೆಸ್ಟ್ ಮಾಡುತ್ತಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಾಗರಾಜ್ ಮತ್ತು ಹಿರೇಮಠ ವಿರುದ್ಧ ಎಫ್ಐಆರ್ ದಾಖಲಾಗಿದ್ದು, …
Read More »ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆ
ಬೆಂಗಳೂರು, ಏಪ್ರಿಲ್ 10: ಕರ್ನಾಟಕದಲ್ಲಿ ಹೊಸದಾಗಿ 6955 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಆಸ್ಪತ್ರೆಯಿಂದ ಇಂದು 3350 ಮಂದಿ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 980519 ಮಂದಿ ಡಿಸ್ಚಾರ್ಜ್ ಆಗಿರುವುದುಆಗಿ ತಿಳಿಸಿದ್ದಾರೆ. ಒಂದೇ ದಿನ 36 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 12,849 ಮಂದಿ ಮೃತಪಟ್ಟಿದ್ದಾರೆ. 61653 ಸಕ್ರಿಯ ಪ್ರಕರಣಗಳಿವೆ, ಒಟ್ಟು 1055040 ಪ್ರಕರಣಗಳಿವೆ. 405 ಮಂದಿ ಐಸಿಯುನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಾಗಲಕೋಟೆ 44, ಬಳ್ಳಾರಿ 62, ಬೆಳಗಾವಿ 75, ಬೆಂಗಳೂರು ಗ್ರಾಮಾಂತರ …
Read More »ಕಳತ್ಮಾಡು: ವರ್ಷದಿಂದ ಉಪಟಳ ನೀಡುತ್ತಿದ್ದ ಆನೆ ಕೊನೆಗೂ ಬಂದಿ!
ಮಡಿಕೇರಿ: ಒಂದು ವರ್ಷದಿಂದ ಗಾಮೀಣ ಭಾಗಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೆ ಕಾರಣವಾಗಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬಂದಿ ಕಳತ್ಮಾಡು ಗ್ರಾಮದ ಕಾಫಿ ತೋಟದಿಂದ ಸೆರೆ ಹಿಡಿದಿದ್ದಾರೆ. 35ರ ಹರೆಯದ ಗಂಡಾನೆಯ ಸೆರೆಗೆ 3 ದಿನ ಗಳಿಂದ ಕಾರ್ಯಾಚರಣೆ ನಡೆಸಿರುವ ಸಿಬಂದಿ ಬಲ್ಲೆ ಹಾಗೂ ಮತ್ತಿಗೋಡು ಆನೆ ಶಿಬಿರಗಳ 6 ಸಾಕಾನೆಗಳ ಸಹಕಾರ ಪಡೆದುಕೊಂಡಿದ್ದರು. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿಗೆ ಒಳಪಟ್ಟ ಗೋಣಿಕೊಪ್ಪಲು ಬಳಿಯ ಕಳತ್ಮಾಡು ಹಾಗೂ ಅಮ್ಮತ್ತಿ …
Read More »ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ: ಬಾಬಾಗೌಡ ಪಾಟೀಲ
ಗೋಕಾಕ: ಕೃಷಿಕರು, ಶ್ರಮಿಕ ವರ್ಗ ಹಾಗೂ ಯುವ ಶಕ್ತಿಯನ್ನು ನಿರ್ಲಕ್ಷಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ಸರ್ವಾಧಿಕಾರಿತನದಿಂದ ಕೂಡಿರುವ ಪ್ರಧಾನಿ ಮೋದಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಹೋರಾಟದ ಧ್ಯೇಯವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ರೈತ ಮುಖಂಡ ಬಾಬಾಗೌಡ ಪಾಟೀಲ ಗುಡುಗಿದರು. ಶನಿವಾರ ಇಲ್ಲಿನ ಡಾಲರ್ಸ್ ಕ್ಲಬ್ನಲ್ಲಿ ಕರೆದಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಚಿಸಿದ ಕೃಷಿ ಸಂಬಂಧಿ ಕಾನೂನುಗಳ ಸಾಧಕ-ಬಾಧಕಗಳ ಪರಾಮರ್ಶಿಸಲು ಸದಾ ಸಿದ್ಧ …
Read More »ಯಡಿಯೂರಪ್ಪ ಸರ್ಕಾರ ಭ್ರಷ್ಟಾಚಾರದಲ್ಲಿ ನಂ.1: ಕಾಂಗ್ರೆಸ್ನ ಸುರ್ಜೇವಾಲಾ
ಬೆಳಗಾವಿ: ‘ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ದೇಶದಲ್ಲೇ ನಂ.1 ಸ್ಥಾನದಲ್ಲಿದೆ’ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ದೂರಿದರು. ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿ, ಶಾಸಕರನ್ನು ಖರೀದಿಸಿ ಬಂದ ಅನೈತಿಕ ಸರ್ಕಾರವಿದು. ಜನಾದೇಶದಿಂದ ರಚನೆಯಾದುದಲ್ಲ. ಅವ್ಯವಹಾರ, ಅಕ್ರಮಗಳಿಂದಲೇ ಕೂಡಿರುವ ಆಡಳಿತದಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು. ‘ಸಚಿವರೊಬ್ಬರು ದೇಶದಲ್ಲೇ ಮೊದಲ …
Read More »ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಗದ್ದುಗೆಯ ಸ್ಥಳದಲ್ಲಿ ಶ್ರೀ ಸತೀಶಣ್ಣನವರ ಪರ ಪಕ್ಷದ ಬೃಹತ್ ಶಕ್ತಿ ಪ್ರದರ್ಶನ “
ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ನಾಡು #ಸುಳೇಭಾವಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಪಕ್ಷದ ವತಿಯಿಂದ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಸಮಾವೇಶವನ್ನು ಕೈಗೊಳ್ಳಲಾಯಿತು. ಸಮಾವೇಶ ಪ್ರಾರಂಭಕ್ಕೂ ಮುನ್ನ ಮುಕ್ಕೋಟಿ ದೇವಾನು ದೇವತೆಗಳು ವರುಣದೇವನ ಮುಖಾಂತರ ಹರಸಿ, ಆಶೀರ್ವದಿಸಿದ್ದು ನಿಜಕ್ಕೂ ಪವಾಡ, ಮಳೆಯ ಹನಿಗಳು ನಮ್ಮೆಲ್ಲರ ಮೇಲೆ ಹೂ ಗಳಂತೆ ಚೆಲ್ಲಿದ್ದು ಆ ದೇವಾನು ದೇವತೆಗಳ ವರ ಪ್ರಸಾದವೇ ಆಗಿದೆ, ಇದು …
Read More »ನಮ್ಮನ್ನು ಅಧಿಕಾರಕ್ಕೆ ತಂದರೆ ಒಂದೇ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ ಮನೆ: ಕುಮಾರಸ್ವಾಮಿ
ಬೀದರ್, ಎ.10: ಯಾರು ರೈತರ ಪರವಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೋ ಅಂತ ವ್ಯಕ್ತಿಗಳನ್ನು ಆಯ್ಕೆ ಮಾಡುವುದು ತಮ್ಮೆಲ್ಲರ ಕರ್ತವ್ಯವೆಂದು ನಾನು ಭಾವಿಸಿದ್ದೇನೆ. ಬಸವಕಲ್ಯಾಣ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಟ್ಟರೆ ನನಗೆ ಶಕ್ತಿ ಕೊಟ್ಟಂತೆಯಾಗುತ್ತದೆ. ಅದು ಮುಂದಿನ ಚುನಾವಣೆಯಲ್ಲಿ ನಮಗೆ ಸಹಾಯಕವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಬಸವಕಲ್ಯಾಣ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿರವರ ಪರವಾಗಿ ಕ್ಷೇತ್ರದ ಕೋಟಮಾಳ, ಹುಲಸೂರು, ಬೇಲೂರ, ನಾರಾಯಣಪುರ, …
Read More »ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂಹೇಳಿಲ್ಲ.: ಅರುಣಸಿಂಗ್ಗೆ ಯತ್ನಾಳ ತಿರುಗೇಟು
ಹುಬ್ಬಳ್ಳಿ: ತನ್ನನ್ನು ವಜಾ ಮಾಡುವುದಾಗಿ ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ ನಂತರ ನನ್ನ ಬಗ್ಗೆ ಚಿಂತನೆ ಮಾಡಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂ ಹೇಳಿಲ್ಲ. ನೀವೆ ತಂದೆ …
Read More »
Laxmi News 24×7