Breaking News

Laxminews 24x7

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿ – ಕೃಷಿ ಅಧಿಕಾರಿಗಳ ದಾಳಿ

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಕೀಟನಾಶಕಗಳನ್ನು ತಯಾರಿಸಿ ರೈತರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಜಾಗೃತ ದಳ ಅಧಿಕಾರಿಗಳು ಬಯಲಿಗೆ ಎಳೆದಿದ್ದಾರೆ. ಮನೆಯೊಂದರಲ್ಲಿ ನಡೆಸಲಾಗುತ್ತಿದ್ದ ನಕಲಿ ಕೀಟನಾಶಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 200 ಲೀಟರ್‌ಗೂ ಹೆಚ್ಚು ವಿವಿಧ ಕೃಷಿ ರಾಸಾಯನಿಕಗಳು, ಪ್ಯಾಕಿಂಗ್ ಸಾಮಗ್ರಿ ಹಾಗೂ 11 ರಿಂದ 12 ಕಂಪನಿಗಳ ಹೆಸರಿನ ನಕಲಿ ಲೇಬಲ್‌ಗಳನ್ನ ವಶಪಡಿಸಿಕೊಂಡಿದ್ದಾರೆ. ಆರೋಪಿ ಸೋಮಸುಂದರ್ ತಾನು ʻಬೆಳೆ ತಜ್ಞʼ …

Read More »

ಅಪ್ಪ ಪ್ರಧಾನಿಯಾದಾಗ ಅಮ್ಮ ರಾಜ್ಯ ಬಿಟ್ಟು ಹೋಗ್ಬೇಡಿ, ಇಲ್ಲಿನ ಜನರ ಸೇವೆ ಮಾಡಿ ಅಂದಿದ್ರು: ಚೆನ್ನಮ್ಮ ನೆನೆದು ಪುತ್ರಿಯರ ಮಾತು

ಬೆಂಗಳೂರು: ಅಪ್ಪ ಪ್ರಧಾನಿಯಾದಾಗ ಅಮ್ಮ ರಾಜ್ಯ ಬಿಟ್ಟು ಹೋಗ್ಬೇಡಿ, ಇಲ್ಲಿನ ಜನರ ಸೇವೆ ಮಾಡಿ ಅಂದಿದ್ರು ಎಂದು ದೇವೇಗೌಡರ  ಪುತ್ರಿಯರಾದ ಅನಸೂಯ-ಶೈಲಜಾ ಅವರು ತಾಯಿ ಚೆನ್ನಮ್ಮನನ್ನು ನೆನೆದು ಭಾವುಕರಾಗಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಪ್ಪ ಪ್ರಧಾನಿ ಅಭ್ಯರ್ಥಿ ಆದಾಗ ಮೊದಲು ಅಮ್ಮನಿಗೆ ಫೋನ್ ಮಾಡಿ ಹೇಳಿದ್ರು. ಆದರೆ ಅಮ್ಮ ರಾಜ್ಯ ಬಿಟ್ಟು ಹೋಗಬೇಡಿ. ಜನರ ಸೇವೆ ಮಾಡಿ ಅಂದಿದ್ರು. ಅಪ್ಪ ವಿಪಕ್ಷ ನಾಯಕ ಆಗಿದ್ದಾಗ ಅವರೇ ಕಾರ್ ಡ್ರೈವ್ …

Read More »

‘ನೀಟ್’ ಪ್ರತಿಭಟನೆ; ಎನ್‌ಟಿಎ 47 ಸಿಬ್ಬಂದಿಯನ್ನು ಹೊರಹಾಕಿದ ಕೇಂದ್ರ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆಯ ನಡುವೆ ಪರೀಕ್ಷಾ ಸಂಸ್ಥೆಯ 47 NTA ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ. ಪರೀಕ್ಷಾ ಸಂಸ್ಥೆಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ ಕೆಲವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಪಾತ್ರಗಳು ಅಥವಾ ಹುದ್ದೆಗಳ ಬಗ್ಗೆ ವಿವರಗಳನ್ನು ನೀಡಿಲ್ಲ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಮುಂದಿನ ತಿಂಗಳಲ್ಲಿ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸಂಪೂರ್ಣವಾಗಿ ಆಧುನೀಕರಿಸಲಿದೆ …

Read More »

ಕಾವೇರಿ, ಮೇಕೆದಾಟು ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ಮುಂದಾದ ಕರ್ನಾಟಕ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ಮೇಕೆದಾಟು ಯೋಜನೆಯ ವಿಚಾರವಾಗಿ ತಮಿಳುನಾಡಿನೊಂದಿಗೆ ಸಂಧಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆಗಸ್ಟ್ 3ರಂದು ಈ ವಿಚಾರವಾಗಿ ಮಾತುಕತೆಗೆ ಬರುವಂತೆ ತಮಿಳುನಾಡು ಸಿಎಂ ವಿಜಯ್‌ಗೆ ಕರ್ನಾಟಕ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ. ಉಭಯ ರಾಜ್ಯಗಳ ನಡುವಿನ ಕಾವೇರಿ ನದಿ ನೀರು ವಿವಾದವು ದಶಕಗಳಿಂದಲೂ ಇದ್ದು, ಪ್ರತಿ ಬೇಸಿಗೆಯಲ್ಲಿ ಇದು ತಾರಕಕ್ಕೇರುವ ಸಾಧ್ಯತೆಗಳಿವೆ. ಹೀಗಾಗಿ ಸರ್ಕಾರವು ಸಂಧಾನದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ …

Read More »

ವಿದ್ಯುತ್‌ ತೆಗೆದುಕೊಳ್ಳುವ ವಿಚಾರಕ್ಕೆ ಗಲಾಟೆ – ಮಂಡ್ಯದಲ್ಲಿ ಹರಿಯಿತು ನೆತ್ತರು

ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಳಘಟ್ಟ ಗ್ರಾಮದಲ್ಲಿ ನಡೆದಿದೆ. ರುದ್ರೇಗೌಡ ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ಕೃತ್ಯ ನಡೆದಿದ್ದು, ಹತ್ಯೆ ಮಾಡಿದ ಬಳಿಕ ದುಷ್ಕರ್ಮಿ ಮೃತದೇಹದ ಮೇಲೆ ಸ್ಕೂಟಿ ಎತ್ತಿಹಾಕಿದ್ದಾನೆ ಎಂದು ತಿಳಿದುಬಂದಿದೆ. ಕಾರಣ ಏನು? ಟಾನ್ಸ್‌ಫಾರ್ಮರ್‌ನಿಂದ ವಿದ್ಯುತ್‌ ತೆಗೆದುಕೊಳ್ಳುತ್ತಿದ್ದ ವಿಚಾರಕ್ಕೆ ರುದ್ರೇಗೌಡನ ಮತ್ತು ಪಕ್ಕದ ಜಮೀನಿನ ಮಾಲೀಕನ ಜೊತೆ ಗಲಾಟೆ ಶುರುವಾಗಿದೆ. ಇದೇ ವಿಚಾರಕ್ಕೆ ಕೊಲೆ ನಡೆದಿರುವ …

Read More »

ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹ

ಬೆಳಗಾವಿ: ನೀಟ್ ಪರೀಕ್ಷೆ ಅಕ್ರಮ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ವಿವಿಧ ಕಾಲೇಜ್‌ಗಳ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಟಿಸಿದರು. ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ ಕೆಲಹೊತ್ತು ರಸ್ತೆ ತಡೆ ಮಾಡಿ, ಆಕ್ರೋಶ ಹೊರಹಾಕಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. …

Read More »

ಮೌಢ್ಯದ ಜಡೆಗೆ ನಿಡಸೋಸಿ ಜಗದ್ಗುರುಗಳಿಂದ ಮುಕ್ತಿ

ಸಂಕೇಶ್ವರ: ದೇವರ ಪವಾಡವೆಂದು ನಂಬಿ ಜಡೆ ಬಿಟ್ಟಿದ್ದ ಬಾಲಕನ ಕೂದಲು ಕತ್ತರಿಸಿ, ಮೌಢ್ಯದ ಸಂಕೋಲೆಯಿಂದ ಮುಕ್ತಿ ನೀಡಿ ಬಾಲಕನ ಬಾಳಿಗೆ ಹೊಸ ದಾರಿಯನ್ನು ನಿಡಸೋಸಿ ಜಗದ್ಗುರು ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಡಾ.ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ತೋರಿದ್ದಾರೆ. ಸಮೀಪದ ಬಾಡ ಗ್ರಾಮದ ವಿಶಾಲ ಸಾವ್ರತಕರ(14) ಬಾಲಕನ ಕೂದಲು ಗಂಟಿಕ್ಕಿಕೊಂಡು ಜಡೆ ರೂಪ ಪಡೆದಿತ್ತು. ದೇವರ ಪವಾಡವೆಂದು ನಂಬಿದ್ದ ಕುಟುಂಬಸ್ಥರು ಜಡೆ ಕತ್ತರಿಸಿದಲ್ಲಿ ಅಪಶಕುನ ಸಂಭವಿಸುತ್ತದೆ ಎಂಬ ಭಯದಿಂದ ಕಾಲ ಕಳೆಯುತ್ತ ಬಂದಿದ್ದರು. …

Read More »

ಮತ್ತೊಂದು ವಿಡಿಯೋ ಪೋಸ್ಟ್ ಮಾಡಿದ ಪ್ರಧಾನಿ ಮೋದಿ; ಧನ್ಯವಾದ ಹೇಳಿದ್ದು ಯಾರಿಗೆ..?

ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಮುಂದುವರಿಸಿರುವ ಮಧ್ಯೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ  ಶುಕ್ರವಾರ ತಡರಾತ್ರಿ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಸಕಾರಾತ್ಮಕ ಸಲಹೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ. ಧನ್ಯವಾದಗಳು ಗೆಳೆಯರೇ! ನಿನ್ನೆ ರಾತ್ರಿ ನಿಮ್ಮನ್ನೆಲ್ಲಾ ಭೇಟಿಯಾಗುವ ಅವಕಾಶ ನನಗೆ ಸಿಕ್ಕಿತ್ತು. ನಾನು ಪೋಸ್ಟ್ ಮಾಡಿದ ವಿಡಿಯೋಗೆ ಅಪಾರ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮ್ಮ …

Read More »

ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಇಂದು ಬಿಜೆಪಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.‌ ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿ ಕೆಲ ಕ್ಷಣ ಬಿಗುವಿನ ವಾತಾವರಣ …

Read More »

ಬೆಳಗಾವಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನ ಓಡಿಸಿದ್ರೆ ಹುಷಾರ್

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೊಂದಣಿ ಸಂಖ್ಯೆ ಹೊಂದಿಲ್ಲದ, ದೋಷಪೂರಿತ ನೊಂದಣಿ ಸಂಖ್ಯೆ ಹೊಂದಿದ ದ್ವಿಚಕ್ರ ವಾಹನ ಬಳಸುತ್ತಿರುವುದನ್ನು ಗಮನಸಿ ನೊಂದಣಿ ಸಂಖ್ಯೆಗಳಿಲ್ಲದ ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಪೊಲೀಸರು  ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೊಂದಣಿ ಸಂಖ್ಯೆಗಳಿಲ್ಲದ/ ನೊಂದಣಿ ಸಂಖ್ಯೆ ಮರೆಮಾಚಿದ/ ಮುಂದೆ ಅಥವಾ ಹಿಂದೆ ಯಾವುದಾದರೂ ಒಂದು ನೊಂದಣಿ ಸಂಖ್ಯೆ ಇಲ್ಲದಂತೆ ಮಾಡಿದ ಒಟ್ಟು 105 ದ್ವಿಚಕ್ರ ವಾಹನಗಳನ್ನು ತಡೆಹಿಡಿದು ಅವುಗಳ …

Read More »