ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್ ಕ್ಯಾನ್ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಯರ್ ಕ್ಯಾನ್ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ …
Read More »ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿ ಅಂಗಡಿಗೆ ನುಗ್ಗಿದ ಡೀಸೆಲ್ ಟ್ಯಾಂಕರ್!
ಕಲಬುರಗಿ, ಫೆಬ್ರವರಿ 14: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರು ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಡಿಸೆಲ್ ಟ್ಯಾಂಕರ್ ಅಂಗಡಿಯೊಂದಕ್ಕೆ ನುಗ್ಗಿದೆ. ಟ್ಯಾಂಕರ್ನ ಹ್ಯಾಂಡ್ಬ್ರೇಕ್ ಹಾಕದೇ ನಿಲ್ಲಿಸಿದ್ದ ಚಾಲಕ ಕಿರಾಣಿ ಅಂಗಡಿಗೆ ಹೋಗಿದ್ದ. ಈ ವೇಳೆ ಡ್ರೈವರ್ ಹಿಂದೆಯೇ ಡೀಸೆಲ್ ಟ್ಯಾಂಕರ್ ಕಿರಾಣ ಅಂಗಡಿಗೆ ನುಗ್ಗಿದೆ. ವಿಜಪ್ಪಗೌಡ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಕಿರಾಣ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹೂಡಿಕೆದಾರರ ಸಮಾವೇಶದಲ್ಲಿ ಗಮನ ಸೆಳೆದ ಪಾಡ್ ತಂತ್ರಜ್ಞಾನ: ಏನಿದು ಹೊಸ ಸಾರಿಗೆ ವ್ಯವಸ್ಥೆ?
ಬೆಂಗಳೂರು: ಅಲ್ಪ ದೂರ ಕ್ರಮಿಸುವ ವಿದ್ಯುತ್ ಚಾಲಿತ ಪಾಡ್ ಸಾರಿಗೆ ಇನ್ವೆಸ್ಟ್ ಕರ್ನಾಟಕ ಪ್ರದರ್ಶನ ಮಳಿಗೆಯಲ್ಲಿ ಗಮನ ಸೆಳೆಯುತ್ತಿದೆ. ಏನಿದು ‘ನ್ಯೋ ಪಾಡ್ ‘ (NWO POD) ಸಾರಿಗೆ ತಂತ್ರಜ್ಞಾನ ಎಂಬ ವರದಿ ಇಲ್ಲಿದೆ. ಏರ್ ಟ್ಯಾಕ್ಸಿ ಬಳಿಕ ಹೂಡಿಕೆದಾರರ ಸಮಾವೇಶದ ಪ್ರದರ್ಶನ ಮಳಿಗೆಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ‘ನ್ಯೋ ಪಾಡ್’. ಈ ನ್ಯೋ ಪಾಡ್ ಸಾರಿಗೆ ತಂತ್ರಜ್ಞಾನ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ವಿದ್ಯುತ್ ಚಾಲಿತ ಪಾಡ್ ಸಾರಿಗೆ ಅಲ್ಪ ಅಂತರವನ್ನು …
Read More »ಉದಯಗಿರಿ ಪ್ರಕರಣದ ಬೆನ್ನಲ್ಲೇ ಮೈಸೂರು ಸಿಸಿಬಿ ಎಸಿಪಿ ವರ್ಗಾವಣೆ – CCB ACP TRANSFER
ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ ಎಸಿಪಿಯಾಗಿ, ರಾಜೇಂದ್ರ ಕೆ. ಅವರನ್ನು ದೇವರಾಜ ಉಪವಿಭಾಗದ ಎಸಿಪಿಯಾಗಿ ಮತ್ತು ಕೆಪಿಎ ಡಿವೈಎಸ್ಪಿಯಾಗಿದ್ದ ಶಿವಶಂಕರ್ ಎಂ. ಅವರನ್ನು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾಯಿಸಲಾದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ವರದಿ …
Read More »ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ
ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಮಗುವಿನ ಪರವಾಗಿ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ಗೌಡ ಅವರಿದ್ದ ನ್ಯಾಯಪೀಠ ಈ …
Read More »ಯುವ ಅಧ್ಯಕ್ಷ ಉಮೇಶ ಪಾಟೀಲರಿಗೆ ಸತ್ಕರಿಸಿದ ಮುಖಂಡ ಸಂದೀಪ ರೆಡ್ಡಿ
ಯುವ ಅಧ್ಯಕ್ಷ ಉಮೇಶ ಪಾಟೀಲರಿಗೆ ಸತ್ಕರಿಸಿದ ಮುಖಂಡ ಸಂದೀಪ ರೆಡ್ಡಿ ಕಾಗವಾಡ:ನೂತನವಾಗಿ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಉಮೇಶ ಪಾಟೀಲ್ ಅವರಿಗೆ ಯುವ ಮುಖಂಡರಾದ ಸಂದೀಪ ರೆಡ್ಡಿ ಶಾಲು ಹೊದಿಸಿ ಹಾರ ಹಾಕಿ ಸತ್ಕರಿಸಿದರು. ನಂತರ ಸತ್ಕರಿಸಿ ಮಾತನಾಡಿದ ಅವರು,ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಹಗಲಿರುಳು ಶ್ರಮಿಸಿ ಪಕ್ಷ ಬಲಪಡಿಸುವಲ್ಲಿ ಕಾರಣೀಕರ್ತರಾಗಿದ್ದರಿಂದ ಇವತ್ತು ಕಾಗವಾಡ ತಾಲ್ಲೂಕಾ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನ ಸಿಕ್ಕಿರುವದು ಸಂತಸ …
Read More »ಸಂಜಯ ಪಾಟೀಲ ಬೆಂಬಲಿಗನೇ ಮಟಕಾ ಬರೆಯುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಟಕಾ, ಗ್ಯಾಂಬ್ಲಿಂಗ್ ಹೆಚ್ಚಾಗುತ್ತಿದ್ದು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ ಮರುದಿನವೇ ಮಟಕಾ ಬರೆಯುತ್ತಿದ್ದ ಸಂಜಯ ಪಾಟೀಲ ಬೆಂಬಲಿಗ ರೆಡ್ ಹ್ಯಾಂಡ್ ಆಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಡಸ್ ಕೆಎಚ್ ಲಕ್ಷ್ಮೀ ಗಲ್ಲಿಯ ಪರುಶುರಾಮ ಅರ್ಜುನ ಸುತಾರ (39) ಗಜವತಿ – ಕುಕಡೊಳ್ಳಿ ರಸ್ತೆಯಲ್ಲಿ ಓಸಿ ಚೀಟಿ ಬರೆಯುತ್ತಿರುವ ಸಂದರ್ಭದಲ್ಲೇ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. …
Read More »ಗೋಕಾಕಿನಲ್ಲಿ ಧಗಧಗನೆ ಹೊತ್ತಿ ಉರಿದ ಗಾದಿ ಕಾರ್ಖಾನೆ!!!!
ಗೋಕಾಕಿನಲ್ಲಿ ಧಗಧಗನೆ ಹೊತ್ತಿ ಉರಿದ ಗಾದಿ ಕಾರ್ಖಾನೆ!!!! ಗಾದಿ ತಯಾರಿಸುವ ಕಾರ್ಖಾನೆಗೆ ಆಕಸ್ಮಿಕ ಬೆಂಕಿ ಸುಟ್ಟು ಕರಕಲಾದ ಮಶಿನು,ಗಾದಿ ಗೋಕಾಕ : ಗಾದಿ ತಯಾರಿಸುವ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ಗೊಡಾವನದಲ್ಲಿದ್ದ ಹತ್ತಿ, ಮಶಿನಗಳು ಸುಟ್ಟು ಬಸ್ಮವಾದ ಘಟನೆ ಗೋಕಾಕ ತಾಲೂಕಿನ ಮಾನಿಕವಾಡಿಯಲ್ಲಿ ನಡೆದಿದೆ. ಸಂಜೆ 5 ಗಂಟೆಗೆ ಹತ್ತಿದ ಆಕಸ್ಮಿಕ ಬೆಂಕಿ ಕೆಲವೆ ಕ್ಷಣಗಳಲ್ಲಿ ಇಡಿ ಗೊಡಾವನಗೆ ಆವರಿಸಿ ಸುತ್ತಲ್ಲೂ ಬೆಂಕಿ ಹತ್ತಿಕೊಂಡಿದೆ,ಇನ್ನು ಸುದ್ದಿ ತಿಳಿದ ತಕ್ಷಣ …
Read More »ಹಾಸನ: ಮುಖದ ಮೇಲೆ ಕಲ್ಲು ಎತ್ತಿಹಾಕಿ ಅಪರಿಚಿತ ಮಹಿಳೆಯ ಭೀಕರ ಕೊಲೆ
ಹಾಸನ: ಅಪರಿಚಿತ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸುಮಾರು 40 ವರ್ಷ ವಯಸ್ಸಿನ ಮಹಿಳೆಯಾಗಿದ್ದಾರೆ. ರಾಜಘಟ್ಟದ ರೈಲು ನಿಲ್ದಾಣದ ಪಕ್ಕದಲ್ಲಿ ರೈಲ್ವೆ ಇಲಾಖೆಯ ಕಾಮಗಾರಿ ನಡೆಯುತ್ತಿದ್ದು, ಕಟ್ಟಡದ ಒಳಗಡೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೆಲಸಕ್ಕೆ ಬಂದ ಕಾರ್ಮಿಕರು ಕಾಮಗಾರಿ …
Read More »ಚಲಿಸುತ್ತಿದ್ದ ರೈಲಿನಿಂದ ತಳ್ಳಿ ವ್ಯಕ್ತಿಯ ಹತ್ಯೆ
ಬೆಂಗಳೂರು : ಕುಳಿತುಕೊಳ್ಳುವ ವಿಚಾರಕ್ಕೆ ಜಗಳವಾಗಿ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯನ್ನು ತಳ್ಳಿ ಹತ್ಯೆ ಮಾಡಿದ ಆರೋಪದ ಮೇಳೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ರೈಲ್ವೇ ಪೊಲೀಸರು ಸೆರೆಹಿಡಿದಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ಮೂಲದ ದೇವಪ್ಪ (45) ಹಾಗೂ ಪೀರಪ್ಪ (31) ಬಂಧಿತ ಆರೋಪಿಗಳು. ಚನ್ನರಾಯಪಟ್ಟಣ ಹಿರೇಸಾವೆಯ ಕುಮಾರ್ (28) ಹತ್ಯೆಯಾದ ವ್ಯಕ್ತಿ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೊಲೀಸರು ಹೇಳಿದ್ಧೇನು ? ಫೆ. 11ರಂದು ಯಶವಂತಪುರ-ಬೀದರ್ ಎಕ್ಸ್ಪ್ರೆಸ್ ರೈಲಿನ …
Read More »