Breaking News

Laxminews 24x7

ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ:ಡಿ.ಕೆ.ಶಿವಕುಮಾರ್

ಕೊಪ್ಪಳ, ನ.23: ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಸೇರ್ಪಡೆ ಆಗುವವರು ಬಹಳಷ್ಟು ಮಂದಿ ಇದ್ದಾರೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್‍ಗೆ ಬರುತ್ತಾರೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮ್ಮ ಸರಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ …

Read More »

ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …

Read More »

ಕಿರುತೆರೆ ನಟಿ ಸಾವು ಕಾರಣ ಏನು ಗೊತ್ತಾ…?

ಮುಂಬೈ: ಕಿರುತೆರೆ ನಟಿಯೊಬ್ಬರು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಸಹನಟ ರೋಹನ್ ಮೆಹ್ರಾ ತಿಳಿಸಿದ್ದಾರೆ.ನಟಿಯನ್ನು ಲೀನಾ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಕ್ಲಾಸ್ ಆಫ್ 2020 ಹಾಗೂ ಸೆಥ್ ಜೀ ಧಾರಾವಾಹಿಗಳಲ್ಲಿ ನಟಿಸಿದ್ದರು. ನಟಿ ಶನಿವಾರ ದೆಹಲಿಯಲ್ಲಿ ಮೃತಪಟ್ಟಿರುವುದಾಗಿ ಲೀನಾ ಸಹನಟ ಮೆಹ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಲೀನಾ ಜೊತೆಗಿನ ಫೋಟೋ ಹಾಕಿ ಬರೆದುಕೊಂಡಿರುವ ರೋಹನ್, ಕಳೆದ ವರ್ಷ ಇದೇ ಸಮಯದಲ್ಲಿ ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. …

Read More »

ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ 7 ಮಂದಿಗೆ ಗಂಭೀರ ಗಾಯ

ಬಳ್ಳಾರಿ: ಲಾರಿಗೆ ಹಿಂಬದಿಯಿಂದ ಬಂದ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ. ಬಳ್ಳಾರಿ ಜಿಲ್ಲೆತ ಕೂಡ್ಲಿಗಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಮಲ್ಲಪ್ಪ (40), ವೀರೇಶ್ (17), ಶರಣಪ್ಪ (15), ಸಾಬಮ್ಮ(19), ಮಹದೇವಮ್ಮ (52), ಮರಿಯಮ್ಮ (35) ಹಾಗೂ ಕಾರ್ ಚಾಲಕ ಸಿದ್ದು (22) ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಾಯಾಳುಗಳ ಪೈಕಿ ಮೂವರನ್ನ …

Read More »

ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದುಮೃತಪಟ್ಟಿದ್ದಾರೆ.

ಬಾಗಲಕೋಟೆ: ಹಂಪ್ಸ್ ನಲ್ಲಾದ ಜಂಪ್ ನಿಂದ ಬೈಕಿನಿಂದ ಬಿದ್ದು ಯೋಧನ ಪತ್ನಿ ಸಾವಿಗೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಮೂಗನೂರು ಗ್ರಾಮದಲ್ಲಿ ನಡೆದಿದೆ. ಪುಷ್ಪಲತಾ (35) ಬೈಕ್ ನಿಂದ ಬಿದ್ದು ಮೃತಪಟ್ಟ ಮಹಿಳೆ. ಇವರು ಬಾದಾಮಿ ತಾಲೂಕಿನ ತಿಮ್ಮಸಾಗರ ಗ್ರಾಮದ ನಿವಾಸಿ. ಈಕೆಯ ಪತಿ ವಿಭೂತಿ ಶೇಖರಯ್ಯ ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸಲು ಇಂದು ಬೆಳಗ್ಗೆ ಜಮ್ಮು-ಕಾಶ್ಮೀರಕ್ಕೆ ಹೊರಡಬೇಕಿತ್ತು. ಪುಷ್ಪಲತಾ ಹಿರೇ ಮಳಗಾವಿ ಗ್ರಾಮದಲ್ಲಿರುವ ಅವರ ತವರು ಮನೆಗೆ …

Read More »

ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳ ವಶಕ್ಕೆ

ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು …

Read More »

ಅಮೆರಿಕ ದಂತೆ ನಮ್ಮಲ್ಲಿಯೂ ರಾಜಕೀಯ ದಲ್ಲಿ ವಿಪ್ಲವ ಆಗಲಿದೆ : ಕೊಡಿಶ್ರಿ ಭವಿಷ್ಯ

ದಾವಣಗೆರೆ: ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ವಿಪ್ಲವ ಆಗಲಿದೆ ಎಂದು ಹಾಸನ ಜಿಲ್ಲೆಯ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿಪ್ಲವಕ್ಕೆ ಜನವರಿಯವರೆಗೂ ಸಮಯವಿದೆ. ಈಗಾಗಲೇ ಅಮೆರಿಕ ಸೇರಿದಂತೆ ಜಗತ್ತಿನ ಬಹುತೇಕ ಕಡೆ ರಾಜಕೀಯ ಬದಲಾವಣೆ ಆಗುತ್ತಿವೆ. ಅದೇ ರೀತಿ ನಮ್ಮಲ್ಲಿಯೂ ವಿಪ್ಲವ ಆಗಲಿದೆ ಎಂದು ಪರೋಕ್ಷವಾಗಿ ಹೇಳುವ ಮೂಲಕ ರಾಜಕಾರಣದಲ್ಲಿ ಬದಲಾವಣೆ ಆಗಲಿದೆ ಎಂಬುದರ ಬಗ್ಗೆ ಹೇಳಿದರು. ಕೆಲ ದಿನಗಳ ಹಿಂದೆ ಗ್ರಹಣ ಫಲ …

Read More »

ಡಿಸೆಂಬರ್‌ವರೆಗೆ ಶಾಲೆ ಇಲ್ಲ:B.S.Y.

ಬೆಂಗಳೂರು: ಡಿಸೆಂಬರ್‌ವರೆಗೆ ಶಾಲೆ ಇಲ್ಲ. ಡಿಸೆಂಬರ್ ಕೊನೆಯಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಾಲಾ-ಕಾಲೇಜು ಪ್ರಾರಂಭ ಕುರಿತು ಇಂದು ಸಿಎಂ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ತಜ್ಞರ ಅಭಿಪ್ರಾಯಗಳನ್ನು ಪಡೆಯಲಾಗಿದ್ದು, ಸದ್ಯಕ್ಕೆ ಶಾಲೆ ಪ್ರಾರಂಭ ಬೇಡ ಎಂದು ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಪ್ರಾರಂಭ ಮಾಡಲಾಗುವುದಿಲ್ಲ ಎಂದು ಸಿಎಂ ಅಧಿಕೃತವಾಗಿ ಘೋಷಿಸಿದ್ದಾರೆ.

Read More »

ಮಸ್ಕಿ ಯಲ್ಲಿ ಬೃಹುತ ಕಾಂಗ್ರೆಸ್ ಸಮಾವೇಶ ಎಲ್ಲ ಹಿರಿಯ ನಾಯಕರು ಭಾಗಿ

ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದ್ದು, ಪೆÇಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು …

Read More »

ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ

ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ  ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ …

Read More »