Breaking News

Laxminews 24x7

ಜನರ ರಕ್ತ ಹೀರುವ ಹೆದ್ದಾರಿ ಟೋಲ್‍ಗಳು, ಹಗಲು ದರೋಡೆಗೆ ಮತ್ತೊಂದು ಲೈಸೆನ್ಸ್..!

ಬೆಂಗಳೂರು, ನ.19-ಮುಂದಿನ ವರ್ಷದಿಂದ ಹೆದ್ದಾರಿಗಳ ಟೋಲ್‍ಗಳಲ್ಲಿ ಹಾದು ಹೋಗಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ ಎಂಬ ನಿರ್ಧಾರ ವಾಹನ ಸವಾರರನ್ನು ಕೆರಳಿಸಿದ್ದು, ಎಲ್ಲೆಡೆ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರದ ವಿರುದ್ಧ ವಾಗ್ದಾಳಿಗಳು ನಡೆಯುತ್ತಿವೆ. ಸರ್ಕಾರ ಸರಿಯಾದ ಸೌಲಭ್ಯ ನೀಡದೆ, ಬದಲಿ ರಸ್ತೆ ನಿರ್ಮಿಸದೆ ಜನರನ್ನು ಸುಲಿಗೆ ಮಾಡುವಂತಹ ಹುಚ್ಚು ನಿರ್ಧಾರಗಳನ್ನು ಪ್ರಕಟಿಸಿರುವುದು ಪ್ರಶ್ನಾರ್ಹವಾಗಿದೆ. ಜನವರಿ 1ರಿಂದ ಟೋಲ್ ಇರುವ ಹೆದ್ದಾರಿಗಳಲ್ಲಿ ಸಂಚರಿಸಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟ್ಯಾಗ್ …

Read More »

ಯಡಿಯೂರಪ್ಪ ಮತ್ತು ದೆಹಲಿ ನಾಯಕರ ನಡುವಿನ ಸಂಬಂಧ ಅಷ್ಟೇಕಷ್ಟೇ……..?

ಬೆಂಗಳೂರು,ನ.19- ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೇಂದ್ರ ಬಿಜೆಪಿ ವರಿಷ್ಠರ ನಡುವೆ ಸಂಬಂಧ ಹಳಸಿದೆಯೇ? ಇತ್ತೀಚಿಗೆ ಪಕ್ಷ ಮತ್ತು ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ದೆಹಲಿ ನಾಯಕರು ಮತ್ತು ಬಿಎಸ್‍ವೈ ಅವರ ನಡುವಿನ ಸಂಬಂಧ ಹಾವು-ಮುಂಗೂಸಿ ಎಂಬಂತಿದೆ. ಇದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಕೇವಲ 15 ನಿಮಿಷದಲ್ಲಿ ಭೇಟಿಯಾಗಿ ಹಿಂತಿರುಗಿರುವುದು. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಲು ಬಿಎಸ್‍ವೈ ಉತ್ಸುಕತೆ …

Read More »

ಬಾಲಿವುಡ್ ನಟ ಸಲ್ಮಾನ್ ಖಾನ್ ಐಸೋಲೇಶನ್‍ಗೆ..!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸ್ವತಃ ಐಸೋಲೇಶನ್‍ಗೆ ಒಳಗಾಗಿದ್ದಾರೆ. ಕಾರು ಚಾಲಕ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಕೋವಿಡ್ 19 ಪಾಸಿಟವ್ ಕಂಡುಬಂದ ಹಿನ್ನೆಲೆಯಲ್ಲಿ ಸಲ್ಮಾನ್ ಈ ನಿರ್ಧಾರಕ್ಕೆ ಬಂದಿದ್ದಾರೆ. ಸೋಂಕು ತಾಗಿದ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಕಾರಣ ಸಲ್ಮಾನ್ ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ನಿರ್ಧರಿಸಿದ್ದಾರೆ. ಸಲೀಮ್ ಖಾನ್ ಮತ್ತು ಸಲ್ಮಾಖಾನ್‍ರ ವಿವಾಹ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಕೆಲವೇ ದಿನಗಳಲ್ಲಿ …

Read More »

ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ.

ಬೆಂಗಳೂರು: 2020-21ನೇ ಸಾಲಿನ (ಜುಲೈ ಆವೃತ್ತಿ) ವಿವಿಧ ಸರ್ಟಿಫಿಕೇಟ್ ಪೆÇ್ರೀಗ್ರಾಮ್‍ಗಳಿಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಆದೇಶ ಹೊರಡಿಸಿದೆ. ದಂಡಶುಲ್ಕವಿಲ್ಲದೆ ನ.30ರವರೆಗೆ ಪ್ರವೇಶಾತಿ ವಿಸ್ತರಿಸಲಾಗಿರುವ ಪ್ರಥಮ ವರ್ಷದ ಕೋರ್ಸ್‍ಗಳು ಈ ಕೆಳಗಿನಂತಿವೆ. ಸ್ನಾತಕ/ಸ್ನಾತಕೋತ್ತರ ಕೋರ್ಸ್‍ಗಳಾದ ಬಿಎ, ಬಿಕಾಂ, ಬಿ.ಲಿಬ್.ಐ.ಎಸ್ಸಿ, ಎಂಎ/ಎಂಕಾಂ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಎಸ್ಸಿ, ಎಂಬಿಎ, ಪಿ.ಜಿ. ಡಿಪ್ಲೊಮಾ ಪ್ರೋಗ್ರಾಮ್ಸ್, ಮತ್ತು ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವ …

Read More »

ರಾಷ್ಟ್ರಗೀತೆಯನ್ನೇ ತಪ್ಪಾಗಿ ಹಾಡಿದ ಬಿಹಾರ ಶಿಕ್ಷಣ ಸಚಿವ

ಬಿಹಾರ: ಬಿಹಾರ ಶಿಕ್ಷಣ ಸಚಿವ ಮೆವಾಲಾಲ್ ಚೌಧರಿ ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡುವ ಮೂಲಕ ನೆಟ್ಟಿಗರಿಂದ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ. ಇದು ಹಳೆಯ ವಿಡಿಯೋವಾಗಿದ್ದು, ಮೆವಾಲಾಲ್ ಚೌಧರಿ ಜನಗಣ ಮನವನ್ನು ತಪ್ಪುತಪ್ಪಾಗಿ ಹಾಡಿದ್ದಾರೆ. ಈ ವಿಡಿಯೋ ಪೊಸ್ಟ್ ಮಾಡಿರುವ ಆರ್ ಜೆಡಿ, 7 ಭ್ರಷ್ಟಾಚಾರ ಪ್ರಕರಣಗಳ ಆರೋಪ ಹೊತ್ತಿರುವ ಮೆವಾಲಾಲ್‍ಗೆ ರಾಷ್ಟ್ರಗೀತೆಯೇ ಗೊತ್ತಿಲ್ಲ. ಇಂತಹ ವ್ಯಕ್ತಿಯನ್ನು ನೀವು ಶಿಕ್ಷಣ ಮಂತ್ರಿಯನ್ನಾಗಿ ಮಾಡೋಕೆ ನಿತೀಶ್ ಕುಮಾರ್ ಸರ್ಕಾರಕ್ಕೆ ನಾಚಿಕೆ ಆಗೋದಿಲ್ವಾ ಅಂತಾ ಪ್ರಶ್ನೆ …

Read More »

K.P.S.C. ಪರೀಕ್ಷೆ ಮುಂದೂಡಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಮುಖ್ಯ ಪರೀಕ್ಷೆ (ಕೆಪಿಎಸ್ ಸಿ) ಮುಂದೂಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೆಪಿಎಸ್ ಸಿ ಮತ್ತು ಯುಪಿ ಎಸ್ ಸಿ ಪರೀಕ್ಷೆಗಳು ಒಟ್ಟಿಗೆ ಬಂದಿರುವ ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಪರೀಕ್ಷೆಯನ್ನು  ಮುಂದೂಡಲಾಗಿದೆ. ಜನವರಿ 2 ರಿಂದ 5 ರವರೆಗೆ ನಿಗದಿಯಾಗಿದ್ದ ಕೆಪಿಎಸ್ ಸಿ ಮುಖ್ಯ ಪರೀಕ್ಷೆಯನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 13 ರಿಂದ 16 ರವರೆಗೆ ಪರೀಕ್ಷೆ …

Read More »

ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್

ಧಾರವಾಡ: ನಾನು ವಲಸೆ ಬಂದ ಮನುಷ್ಯ ಅಲ್ಲ. ಮೂವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಸಂಪುಟ ಪುನರ್ ರಚನೆಯಲ್ಲಿ ಸಚಿವ ಸ್ಥಾನ ಕೈ ತಪ್ಪುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಮನೆಯಿಂದ ಸೀದಾ ಬಿಜೆಪಿಗೆ ಬಂದವನು. ನನ್ನಲ್ಲಿ ಕೊರತೆ ಏನಿಲ್ಲ, ನಾನು ಕೆಲಸ ಮಾಡುತ್ತಿರುವೆ. ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮಗಳ ಮೂಲಕ ಮಾತ್ರ …

Read More »

ಗೆದ್ದಿರುವ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು: ಎಂ.ಪಿ. ರೇಣುಕಾಚಾರ್ಯ

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಹೇಳುತ್ತಿಲ್ಲ. ಗೆದ್ದಿರುವ ಶಾಸಕರಿಗೆ ಕೊಡಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರುವ ವಾಸ್ತವಾಂಶವನ್ನು ತಿಳಿಸುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇವೆ. ಯಾರನ್ನು ಸೇರಿಸಬೇಕು, ಕೈಬಿಡಬೇಕು ಅನ್ನೋದು ಸಿಎಂ, ರಾಜ್ಯಾಧ್ಯಕ್ಷರು ಹಾಗೂ ವರಿಷ್ಠರಿಗೆ ಬಿಟ್ಟ ನಿರ್ಧಾರ. ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಕೆಲವರನ್ನು …

Read More »

ಕಾಂಗ್ರೆಸ್ ನಿಂದಾ ಲೋಕಸಭಾ ಅಭ್ಯರ್ಥಿ ಯಾರು ?ಇದೆ 21ರಂದು ಮಹತ್ವದ ಸಭೆ:ಸತೀಶ್ ಜಾರಕಿಹೊಳಿ,

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಕುರಿತು ನ.21ರಂದು ನಗರದ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕಾಗಿ ಕೆಪಿಸಿಸಿ ಅಧÀ್ಯಕ್ಷ ಡಿ.ಕೆ ಶಿವಕುಮಾರ್ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರ ಅಧ್ಯಕ್ಷ ಹಾಗೂ ಶಾಸಕ, ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಮಿತಿ …

Read More »

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ

ಜಾಮೀನು ಅರ್ಜಿ ಹಿಂಪಡೆದ ವಿನಯ್ ಕುಲ್ಕರ್ಣಿ ಯೋಗೀಶ್ ಗೌಡ ಹತ್ಯೆ ಪ್ರಕರಣ; ಜೈಲುವಾಸದಲ್ಲಿರುವ ಮಾಜಿ ಸಚಿವ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಜಾಮಿನು ಅರ್ಜಿಯನ್ನು ಹಿಂಪಡೆದಿದ್ದಾರೆ. ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ವಿನಯ್ ಕುಲ್ಕರ್ಣಿ ಬೆಳಗಾವಿ ಹಿಡಲಗಾ ಜೈಲಿನಲ್ಲಿದ್ದು, ಕೆಲ ದಿನಗಳ ಹಿಂದೆ ಬಿಡುಗಡೆ ಕೋರಿ ಧಾರವಾಡ 3ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ …

Read More »