Breaking News

Laxminews 24x7

ಪ್ರತಿಪಕ್ಷಗಳ ಬಹಿಷ್ಕಾರವನ್ನೇ ಬಂಡವಾಳ ಮಾಡಿಕೊಂಡು 3 ಗಂಟೆಯಲ್ಲಿ 7 ಮಸೂದೆ ಪಾಸ್ ಮಾಡಿದ ಕೇಂದ್ರ

ನವದೆಹಲಿ: ಪ್ರತಿಪಕ್ಷಗಳ ಕಲಾಪ ಬಹಿಷ್ಕರಿಸಿದ್ದನ್ನೇ ಬಂಡವಾಳ ಮಾಡಿಕೊಂಡ ಕೇಂದ್ರ ಸರ್ಕಾರ ಮಂಗಳವಾರ ಮೂರು ಗಂಟೆಯಲ್ಲೇ ದಾಖಲೆಯ ಬರೋಬ್ಬರಿ ಏಳು ಮಂಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿದೆ. ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಪ್ರತಿಪಕ್ಷಗಳ ಎಂಟು ಸದಸ್ಯರನ್ನು ಅಮಾನತು ಮಾಡಿದ್ದಾರೆ. ಈ ನಿರ್ಧಾರ ಖಂಡಿಸಿ ಅಮಾನತುಗೊಂಡ ಸದಸ್ಯರು ಆಹೋರಾತ್ರಿ ಧರಣಿ ನಡೆಸಿದ್ದರು. ಈಗ ತಮ್ಮ ಧರಣಿ ಅಂತ್ಯಗೊಳಿಸಿದ್ದು, ವಿಪಕ್ಷ ನಾಯಕರು ಆರಂಭಿಸಿರುವ ಅಧಿವೇಶನ ಬಹಿಷ್ಕಾರ …

Read More »

ಚೆನ್ನಮ್ಮ ಮೂರ್ತಿ ವಿವಾದ: ತಡೆಯಾಜ್ಞೆ ತೆರವುಗೊಳಿಸಿದ ಧಾರವಾಡ ಪೀಠ- ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಶಿಗ್ಗಾಂವಿ ನಗರದಲ್ಲಿ ವೀರ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿಯನ್ನು ಸ್ಥಾಪಿಸಲು ಇದ್ದ ತಡೆಯಾಜ್ಞೆಯನ್ನು ಧಾರವಾಡದ ಉಚ್ಚ ನ್ಯಾಯಾಲಯ ಇಂದು ತೆರವುಗೊಳಿಸಿ ಮೂರ್ತಿ ಸ್ಥಾಪನೆಗೆ ದಾರಿ ಸುಗಮವಾಗಿಸಿದೆ‌ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ಹಾವೇರಿಯ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಧಾರವಾಡ ಉಚ್ಚನ್ಯಾಯಾಲಯದಿಂದ ಆದೇಶ ತಲುಪಿದ ತಕ್ಷಣ ಶಿಗ್ಗಾಂವಿ ನಗರದಲ್ಲಿ ಮೂರ್ತಿ ಸ್ಥಾಪಿಸಲು ಅನುಮತಿಗೆ ಕ್ರಮಕೈಗೊಳ್ಳಬೇಕೆಂದು ಸೂಚಿಸಿದ್ದೇನೆ ಎಂದಿದ್ದಾರೆ. Basavaraj …

Read More »

ಬ್ಯಾಂಕ್ ಸಿಬ್ಬಂದಿ ಸಾಲ ಕೊಡತಿಲ್ಲ: ಅಂತ ತಹಸೀಲ್ದಾರ್ ಕಛೇರಿ ಮುಂದೆ ವಿಷ್ಯದ ಬಾಟಲಿ ಇಡಿದು ಆತ್ಮಹತ್ಯೆ ಮುಂದಾದ ರೈತರು

ಚಿಕ್ಕೋಡಿ : ಹಾರೋಗೇರಿ ಪಿಕೆಪಿಎಸ್ ಬ್ಯಾಂಕ್ ನ ಸಿಬ್ಬಂದಿಗಳು ಬೆಳೆ ಸಾಲ ನೀಡುತ್ತಿಲ್ಲ. ಮುಚ್ಚಿಹೋಗಿರುವ ಬ್ಯಾಂಕ್ ನಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕೊಡಿ ಅಂತ ಕಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆ ಹರಿಸುವಂತೆ ರಾಯಬಾಗ ತಹಶೀಲ್ದಾರ್ ಕಚೇರಿಯ ಮುಂದೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ರೈತ ಲಕ್ಷ್ಮಣ ತಿಪ್ಪಣ್ಣ ವಡಗೋಲೆ ವಿಷದ ಬಾಟಲಿ ಹಿಡಿದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಷಡಕ್ಷರಿ ಬ್ಯಾಂಕ್ ನಲ್ಲಿ ಅಲಖನೂರ ಗ್ರಾಮದ ರೈತ ಲಕ್ಷ್ಮಣ …

Read More »

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯಬೇಕೆಂಬುದು ಭಾರತದ ದಶಕಗಳ ಕನಸು.

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯಬೇಕೆಂಬುದು ಭಾರತದ ದಶಕಗಳ ಕನಸು. ಆ ಕನಸು ಇದೀಗ ನನಸಾಗುವ ಸಾಧ್ಯತೆ ಬಹುತೇಕ ಖಚಿತ ಎನ್ನುವಂತಾಗಿದೆ. ಭದ್ರತಾ ಮಂಡಳಿಯ ಶಾಶ್ವತ್ ರಾಷ್ಟ್ರಗಳ ಪಟ್ಟಿಯಲ್ಲಿ ಚೀನಾ, ಫ್ರಾನ್ಸ್, ರಷ್ಯಾ, ಬ್ರಿಟನ್ ಹಾಗೂ ಅಮೆರಿಕ ಇವೆ. ಈ ದೇಶಗಳ ಪೈಕಿ ಚೀನಾ ಹೊರತಾಗಿ ಮಿಕ್ಕೆಲ್ಲ ದೇಶಗಳು ಭಾರತದ ಖಾಯಂ ಸ್ಥಾನಕಕೆ ಬೆಂಬಲ ಸೂಚಿಸಿವೆ ಎಂದು ವಿದೇಶಾಂಗ ಇಲಾಖೆಯ ರಾಜ್ಯ ಸಚಿವ ವಿ ಮುರಳೀಧರನ್ ಮಾಹಿತಿ …

Read More »

ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್​ ವ್ಯವಸ್ಥೆ

ಕೋಲಾರ : ಜನಸಾಮಾನ್ಯರ ಮನವಿಗೆ ತಕ್ಷಣ ಸ್ಪಂದಿಸುವ ಮೂಲಕ ರೈಲ್ವೆ ಇಲಾಖೆ ಸಾಕಷ್ಟು ಹೆಸರು ಮಾಡಿದೆ. ಈ ಬಾರಿ ಕೂಡ ಗೋಪಾಲಕರ ಮನವಿ ಪುರಸ್ಕರಿಸಿದ ರೈಲ್ವೆ ಇಲಾಖೆ ದೆಹಲಿಯಿಂದ ಹಸು ಸಾಗಾಣೆಗಾಗಿ ಆರು ವಿಶೇಷ ಕೋಚ್​ ವ್ಯವಸ್ಥೆ ಮಾಡಿದ್ದು, ಮೆಚ್ಚುಗೆ ಪಡೆದಿದೆ. ದುಬಾರಿ ಬೆಲೆಯ ಹೈಬ್ರಿಡ್ ತಳಿಯ ಹಸುಗಳು ಕೋಲಾರ ನಗರದ ನಿವಾಸಿಗಳಾದ ವೆಂಕಟೇಶ್, ಶಬರೀಶ್, ಸುನಿಲ್ ಅವರದ್ದು.ಹಸುವಿನ ವಹಿವಾಟು ನಡೆಸುವ ಇವರು 116 ಹಸುಗಳನ್ನು ಕಳೆದ ಆಗಸ್ಟ್ ತಿಂಗಳಲ್ಲಿ …

Read More »

4 ಸ್ಟ್ರೋಕ್ ಆಟೋಗಳಿಗೆ ಅರ್ಹತಾ ಪತ್ರ ನೀಡಲು ನಿರಾಕರಣೆ, ಚಾಲಕರ ಆಕ್ರೋಶ

ಬೆಂಗಳೂರು, – ಎಲ್‍ಪಿಜಿ ಯಿಂದ ಚಲಾಯಿಸುವ 4 ಸ್ಟ್ರೋಕ್ ಆಟೋ ರಿಕ್ಷಾಗಳಿಗೆ ಅರ್ಹತಾ ಪತ್ರ ಕೊಡಲು ನಿರಾಕರಿಸುವ ಮೂಲಕ ಸಾರಿಗೆ ಆಯುಕ್ತರು ಹಾಗೂ ಆರ್‍ಟಿಓ ಕಚೇರಿಯ ವಾಹನ ನಿರೀಕ್ಷಕರು ತಮ್ಮ ಕಾರ್ಯ ವ್ಯಾಪ್ತಿ ಮೀರಿ ಅಧಿಕಾರ ಚಲಾಯಿಸಲು ಹೊರಟಿದ್ದಾರೆ ಎಂದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಆರೋಪಿಸಿದೆ. ಈಗಾಗಲೆ ಕೊರೊನಾ ಲಾಕ್‍ಡೌನ್‍ನಿಂದಾಗಿ ಆಟೋ ಚಾಲಕರು ಸಂಕಷ್ಟದಲ್ಲಿದ್ದಾರೆ. ಪ್ರತಿದಿನ 100ರಿಂದ 200 ರೂ. ಗಳಿಸಲು ಸಾಧ್ಯವಾಗದೇ …

Read More »

ಭೂ ಸುಧಾರಣೆ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿಂದು 12 ವಿಧೇಯಕಗಳ ಮಂಡನೆ

ಬೆಂಗಳೂರು, – 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ವಿಧೇಯಕ , ವಿವಾದಿತ ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಸೇರಿದಂತೆ 12 ವಿಧೇಯಕಗಳು ವಿಧಾನಸಭೆಯಲ್ಲಿಂದು ಮಂಡನೆಯಾದವು. ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ ಮೂಲಕ ಪ್ರಾರಂಭಿಕ ವಿಚಾರಣೆ ಮತ್ತು ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆವರದಿಗಳನ್ನು ಸಲ್ಲಿಸಲು ಕುಂದು ಕೊರತೆಗಳು ಅಥವಾ ದೂರುಗಳ ಶೀಘ್ರ …

Read More »

ಚೆನ್ನೈ ವಿರುದ್ಧದ ಸೋಲಿನ ಸರಣಿಯನ್ನು ಮುರಿಯುವುದೇ ರಾಯಲ್ಸ್‌ ?

ಮಣಿಪಾಲ: ಐಪಿಎಲ್‌ನ 13 ನೇ ಋತುವಿನ ನಾಲ್ಕನೇ ಪಂದ್ಯವು ಇಂದು ಶಾರ್ಜಾದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಜಸ್ಥಾನ್‌ ರಾಯಲ್ಸ್‌ (ಆರ್‌ಆರ್‌) ನಡುವೆ ನಡೆಯುತ್ತಿದೆ. ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಎರಡನೇ ಪಂದ್ಯವನ್ನು ಆಡುತ್ತಿರುವ ಮಹೇಂದ್ರ ಸಿಂಗ್‌ ಧೋನಿ ಅವರ ಸಿಎಸ್‌ಕೆ ತಂಡವನ್ನು ಗೆಲ್ಲುವ ನೆಚ್ಚಿನ ತಂಡ …

Read More »

ಡ್ರಗ್ಸ್ ಪ್ರಕರಣ : ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಎನಿಸಿದರೆ ನಟಿ ದೀಪಿಕಾ ಪಡುಕೋಣೆ ಅವರಿಗೆ ಸಮನ್ಸ್‌ ನೀಡಲಾಗುತ್ತದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ದೀಪಿಕಾ ಹಾಗೂ ಅವರ ಮ್ಯಾನೇಜರ್‌ ಕರೀಷ್ಮಾ ನಡುವಿನ ವಾಟ್ಸ್‌ಆಯಪ್‌ ಸಂಭಾಷಣೆಗೆ ಸಂಬಂಧಿಸಿ ಸಮನ್ಸ್ ನೀಡಲು ನಿರ್ಧರಿಸಲಾಗಿದೆ ಎನ್‌ಸಿಬಿ ಮೂಲಗಳು ತಿಳಿಸಿವೆ. ಕರೀಷ್ಮಾ ಪ್ರಕಾಶ್‌ ಮತ್ತು ಕ್ವಾನ್‌ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್ ಸಿಇಒ‌ ಧುರ್ವ್‌ ಚಿಟ್‌ಗೋಪೇಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಈಗಾಗಲೇ ಸಮನ್ಸ್‌ ನೀಡಲಾಗಿದೆ. ನಟಿಯರಾದ ರಾಕುಲ್‌ ಪ್ರೀತ್‌ ಸಿಂಗ್‌, …

Read More »

ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು, : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಮಾರ್ಚ್​ನಿಂದ ಅತಿಥಿ ಉಪನ್ಯಾಸಕರ ಗೌರವ ಧನ ಬಿಡುಗಡೆ ಮಾಡದೆ ಮೊಂಡುತನ ತೋರುತ್ತಿದ್ದ ರಾಜ್ಯ ಸರ್ಕಾರ, ಇದೀಗ ಸಂದನದಲ್ಲಿ ತನ್ನದೇ ಪಕ್ಷದ ಎಂಎಲ್ಸಿಯ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡಿದ್ದು, ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ …

Read More »