ನ್ಯೂಯಾರ್ಕ್: ಕೊರೊನಾ ವೈರಸ್ಗೆ ಅಮೆರಿಕದಲ್ಲಿ ಮತ್ತೊಂದು ಪುಟ್ಟ ಕಂದಮ್ಮ ಬಲಿಯಾಗಿದೆ ಎಂದು ಅಲ್ಲಿನ ರಾಜ್ಯಪಾಲರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅತ್ಯಂತ ಕಿರಿಯ ವಯಸ್ಸಿನ ಕಂದಮ್ಮ ಕೊರೊನಾಗೆ ಬಲಿಯಾದ ಎರಡನೇ ಪ್ರಕರಣ ಇದಾಗಿದೆ. ಈ ಬಗ್ಗೆ ರಾಜ್ಯಪಾಲ ನೆಡ್ ಲ್ಯಾಮಂಟ್ ಟ್ವೀಟ್ ಮಾಡಿದ್ದು, ಕಳೆದ ವಾರ ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಅಲ್ಲದೆ ಕಂದಮ್ಮ ಕೊರೊನಾ ವೈರಸ್ಗೆ ಬಲಿಯಾಗಿರುವುದು ದೃಢವಾಗಿದೆ ಎಂದು ಅವರು ವಿವರಿಸಿದ್ದಾರೆ. ಇದೊಂದು …
Read More »ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆ ಓಪನ್
ಕೊರೊನಾ ಭೀತಿ ನಡುವೆ ವಹಿವಾಟು ರಾಮನಗರ: ಕೊರೊನಾ ಪ್ರಕರಣಗಳು ಪತ್ತೆಯಾಗದೆ ನೆಮ್ಮದಿಯಾಗಿದ್ದ ರೇಷ್ಮೆನಗರಿಗೆ ಮುಂದಿನ ದಿನಗಳಲ್ಲಿ ರೇಷ್ಮೆ ಮಾರುಕಟ್ಟೆಯೇ ಕಂಟಕವಾಗಲಿದೆಯೇ ಎಂಬ ಆತಂಕ ಜಿಲ್ಲಾಡಳಿತಕ್ಕೆ ಇದೀಗ ಎದುರಾಗಿದೆ. ಸರ್ಕಾರದ ಆದೇಶದಂತೆ ಇಂದಿನಿಂದ ಏಷ್ಯಾದ ಅತಿ ದೊಡ್ಡ ರೇಷ್ಮೆ ಮಾರುಕಟ್ಟೆಯನ್ನು ತೆರೆಯಲಾಗುತ್ತಿದೆ. ಸಾವಿರಾರು ಜನರು ಒಟ್ಟಿಗೆ ಸೇರುವ ಮಾರುಕಟ್ಟೆಯಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವುದು ಹೇಗೆ ಎಂಬ ಚಿಂತೆ ಜಿಲ್ಲಾಡಳಿತಕ್ಕೆ ಕಾಡುತ್ತಿದೆ. ಇತ್ತ ಮಾರುಕಟ್ಟೆ ಸ್ಥಗಿತಗೊಂಡಿದ್ದರಿಂದ ರೈತರು ಸಂಕಷ್ಟಕ್ಕೊಳಗಾಗಿದ್ದರು. ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. …
Read More »ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಬಗ್ಗೆ ಜನರೇ ಮಾಹಿತಿ ನೀಡಿ; ಶ್ರೀರಾಮುಲು ಮನವಿ
ಬೆಂಗಳೂರು (ಏಪ್ರಿಲ್ 01); ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸುಮಾರು 2,000 ಜನ ಭಾಗವಹಿಸಿದ್ದಾರೆ. ಈ ಪೈಕಿ ಕರ್ನಾಟಕದಿಂದ 300 ಜನ ಭಾಗವಹಿಸಿದ್ದಾರೆ. ಹೀಗಾಗಿ ಈ ಸಭೆಯಲ್ಲಿ ಭಾಗವಹಿಸಿದವರ ಕುರಿತು ಜನ ಮಾಹಿತಿ ನೀಡಬೇಕಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿದ್ದಾರೆ. ಇಂದು ಬಾಗಲಕೋಟೆಯಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾದ 40 ಜನ ಪತ್ತೆಯಾಗಿದ್ದಾರೆ. ಇವರ ಮಾದರಿಯನ್ನು ಪರಿಶೀಲನೆಗೆ ಕಳುಹಿಸಲಾಗಿದೆ. ಉಳಿದವರ ಪತ್ತೆ …
Read More »ಕೊರೊನಾ ಸೋಂಕು- ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಸಾವು
ಚಂಡೀಗಢ: ಕೊರೊನಾ ಸೋಂಕಿಗೆ ಒಳಗಾಗಿದ್ದ ಪದ್ಮಶ್ರೀ ಪುರಸ್ಕೃತ ನಿರ್ಮಲ್ ಸಿಂಗ್ ಅವರು ಇಂದು ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ 62 ವರ್ಷದ ನಿರ್ಮಲ್ ಸಿಂಗ್ ಪಂಜಾಬ್ನ ಅಮೃತಸರ್ ನಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ. ಸಿಂಗ್ ಅವರು ಇತ್ತೀಚೆಗೆ ವಿದೇಶದಿಂದ ಮರಳಿದ್ದರು, ಮಾರ್ಚ್ 30ರಂದು ಉಸಿರಾಟದ ತೊಂದರೆ, ತಲೆ ತಿರುಗುವುದರಿಂದಾಗಿ ಗುರು …
Read More »ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ
ಚಿಕ್ಕೋಡಿ (ಬೆಳಗಾವಿ): ಲಾಕ್ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …
Read More »ಗ್ರಾಮಕ್ಕೆ ಬಂದಿದ್ದ ಆರೋಗ್ಯ ಸಿಬ್ಬಂದಿಗೆ ಕಲ್ಲೆಸದ ಗ್ರಾಮಸ್ಥರು
ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ …
Read More »ರೊ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಅಜೀಮ್ ಪ್ರೇಮ್ಜಿ ಫೌಂಡೇಶನ್ 1,125 ಕೋಟಿ ರೂ. ನೆರವನ್ನು ನೀಡಲು ಮುಂದಾಗಿದೆ.
ಬೆಂಗಳೂರು: ವಿಶ್ವವ್ಯಾಪಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಹಲವು ದೇಶಗಳು ಒದ್ದಾಡುತ್ತಿವೆ. ಈ ಮಹಾಮಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ವಿಪ್ರೊ ಲಿಮಿಟೆಡ್, ವಿಪ್ರೊ ಎಂಟರ್ಪ್ರೈಸಸ್ ಲಿಮಿಟೆಡ್ ಮತ್ತು ಅಜೀಮ್ ಪ್ರೇಮ್ಜಿ ಫೌಂಡೇಶನ್ ಕೈಜೋಡಿಸಿದ್ದು, ಬರೋಬ್ಬರಿ 1,125 ಕೋಟಿ ರೂ. ನೆರವನ್ನು ನೀಡಲು ಮುಂದಾಗಿದೆ. ಸಂಸ್ಥೆ ಈಗ ನೀಡುತ್ತಿರುವ ನೆರವು ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಡಲು ಉಪಯೋಗವಾಗಲಿದೆ. ವೈದ್ಯಕೀಯ ಸೌಲಭ್ಯ, ಸೋಂಕಿತರ ಚಿಕಿತ್ಸೆಗೆ ಸಹಾಯವಾಗಲಿದೆ ಎಂದು ವಿಪ್ರೊ …
Read More »ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ
ಬೆಳಗಾವಿ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕೊರೊನಾ ವಿಪತ್ತು ಪರಿಹಾರ ನಿಧಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಆರ್ ಟಿಜಿಎಸ್ ಮೂಲಕ ಹಣವನ್ನು ಅವರು ವರ್ಗಾಯಿಸಿದ್ದಾರೆ. ಕೊರೋನಾ ವೈರಸ್ ಹರಡುತ್ತಿರುವ ಇಂದಿನ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ತಮ್ಮ ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುತ್ತಿದ್ದಾರೆ. ಜನರು ಮನೆಯಲ್ಲೇ ಇದ್ದುಕೊಂಡು ತಮ್ಮ ಸಹಕಾರ ನೀಡಬೇಕು. ನಮಗಾಗಿ ತಮ್ಮ ಜೀವವನ್ನೇ ಪಣವಾಗಿಟ್ಟು ಕೆಲಸ …
Read More »ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ
ದೆಹಲಿಯಲ್ಲಿ ನಡೆದ ಸಭೆಗೆ ತಮಿಳುನಾಡು ತತ್ತರ – ನಿನ್ನೆ 50 ಮಂದಿ, ಇಂದು 110 ಜನರಿಗೆ ಸೋಂಕು ದೃಢ ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ ಚೆನ್ನೈ: ಇಂದು ಒಂದೇ 110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಎಲ್ಲ 110 ಮಂದಿ ದೆಹಲಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದವರು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಒಂದೇ ದಿನದಲ್ಲಿ 110 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ …
Read More »ಮರ್ಕಜ್ ಧಾರ್ಮಿಕ ಸಭೆ: ಜಿಲ್ಲೆಯ ೬೨ ಜನರಲ್ಲಿ ಸೋಂಕಿನ ಲಕ್ಷಣಗಳಿಲ್ಲ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ
ಬೆಳಗಾವಿ -: ದೆಹಲಿಯ ಮರ್ಕಜ್ ಧಾರ್ಮಿಕ ಸಭೆಗೆ ಹೋಗಿಬಂದಿರುವ ಬೆಳಗಾವಿ ಜಿಲ್ಲೆಯ 62 ಜನರ ಮಾಹಿತಿ ಲಭಿಸಿದೆ. ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. 62 ಜನರ ಪೈಕಿ ಡಯಾಬಿಟಿಸ್, ಅಸ್ಥಮಾ, ಹೈಪರ್ ಟೆನ್ಷನ್ ಹೊಂದಿರುವ ಐವತ್ತಕ್ಕೂ ಅಧಿಕ ವಯೋಮಾನದ 27 ಜನರನ್ನು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಆಸ್ಪತ್ರೆಗೆ ಕರೆತಂದು ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ. ಇದುವರೆಗೆ ನಡೆಸಲಾದ ವೈದ್ಯಕೀಯ ತಪಾಸಣೆಯ ಪ್ರಕಾರ ಯಾರಿಗೂ ಸೋಂಕಿನ ಲಕ್ಷಣಗಳಿಲ್ಲ …
Read More »