Breaking News

Laxminews 24x7

ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ.: ಸಿದ್ಧರಾಮಯ್

ಬೆಂಗಳೂರು: ಕೊರೊನಾ ಸೋಂಕಿನ‌ ಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ. ಈ ಪ್ಯಾಕೇಜ್  ‘Too little, Too Late’ ಎನ್ನುವ ಹಾಗಾಗಿದೆ ಎಂದು ವಿರೋಧ ಪಕ್ಷದ ‌ನಾಯಕ‌ ಸಿದ್ಧರಾಮಯ್ಯ ಮಾದ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಹೇಳಿದ್ದಾರೆ.: ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾದುದ್ದು ಜನವರಿ ಕೊನೆ ವಾರದಲ್ಲಿ. ಕೊರೊನಾದಿಂದ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ, ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ …

Read More »

ಶೈಕ್ಷಣಿಕ ಪ್ರಕ್ರಿಯೆಗಳು ಏಪ್ರಿಲ್ 20ರ ವರೆಗೆ ಮುಂದೂಡಿಕೆ

ರಾಜ್ಯದಲ್ಲಿ ಕರೋನಾ ವೈರಸ್ ಹರಡುವಿಕೆ ಮುಂದುವರಿಯುತ್ತಿರುವುದರಿಂದ  ಹಾಗೂ ಏಪ್ರಿಲ್ 15 ರ ವರೆಗೆ ದೇಶಾದ್ಯಂತ ಲಾಕ್ ಡೌನ್ ಮಾಡುವಂತೆ ಪ್ರಧಾನ ಮಂತ್ರಿಗಳು ಘೋಷಿಸಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಕ್ರಿಯೆಗಳನ್ನು  ಏಪ್ರಿಲ್ 20 ರ ವರೆಗೆ ಮುಂದೂಡಲಾಗಿದೆ.       7 ರಿಂದ 9 ನೇ ತರಗತಿಯ ಹಾಗೂ  ಎಸ್.ಎಸ್.ಎಲ್.ಸಿ ಪರೀಕ್ಷೆಗಳು, ಆರ್.ಟಿ.ಇ ಅಡಿಯಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಗಳು ಸೇರಿದಂತೆ ವಿವಿಧ ಮಾದರಿಯ  ಶಾಲೆಗಳಲ್ಲಿನ  2020-21 ನೇ ಸಾಲಿನ ದಾಖಲಾತಿ ಪ್ರಕ್ರಿಯೆಗಳನ್ನು …

Read More »

23 ದಿನದ ಹಸುಗೂಸನ್ನೇ ಒಲೆಗೆ ಹಾಕಿ ಸುಟ್ಟು ಹಾಕಿದ ತಾಯಿ…..

ಚಿಕ್ಕಮಗಳೂರು:   ತನ್ನ 23 ದಿನದ ಹೆಣ್ಣುಮಗುವನ್ನು ತಾಯಿಯೇ ಒಲೆಯಲ್ಲಿ ಹಾಕಿ ಹುಟ್ಟು ಹಾಕಿದ ಅಮಾನವೀಯ ಘಟನೆ ಕಡೂರು ತಾಲೂಕಿನ ಕೆರೆ ಸಂತೆ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಚಂದ್ರಾಬಾಯಿ ಎಂದು ಗುರುತಿಸಲಾಗಿದೆ. ರಮೇಶ್ ನಾಯ್ಕ ಎಂಬಾತನ ಪತ್ನಿ. ಈ ದಂಪತಿಗೆ ಮಾಚ್. 2 ರಂದು ಹೆಣ್ಣು ಮಗು ಜನಿಸಿತ್ತು. ಆಕೆಗೆ ಹೆಣ್ಣು ಮಗು ಬೇಕಿರಲಿಲ್ಲ.  ಹೀಗಾಗಿ ಮಾ.21 ರಂದು ಮಗುವನ್ನು ಒಲೆಗೆ ಹಾಕಿ  ಸುಟ್ಟು ಹಾಕಿದ್ದಳು. ಬಳಿಕ ಮಗುವನ್ನು ನಾಯಿ ಎತ್ತಿಕೊಂಡು …

Read More »

ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್

ಗೋಕಾಕ:ಕೊರೋನಾ‌ ವೈರಸ್ ಹರಡುವ ಭಿತಿಗೆ ಕ್ಯಾರೆ ಎನ್ನದೆ ಮಸೀದಿಯಲ್ಲಿ ಸಾಮೂಹಿಕವಾಗಿ ನಮಾಜ್ ಮಾಡುತ್ತಿದ್ದವರನ್ನ ಹೊರ ಕರೆತಂದು ಲಾಠಿ ಚಾರ್ಜ್ ಮಾಡಿದ ಘಟನೆ ಗೋಕಾಕ್ ನಗರದ ಮಸೀದಿಯೊಂದರಲ್ಲಿ ನಡೆದಿದೆ..   https://youtu.be/Y7NWh8zD7EA ಲಾಕ್ ಡೌನ್ ಇದ್ದರು ಕ್ಯಾರೆ ಎನ್ನದೇ ನಮಾಜ್ ಗೆ ಜನ ಸೇರಿದ್ದಾರೆಂಬ ಮಾಹಿತಿ ಪಡೆದ ಪೋಲೀಸರು ಲಾಠಿ ಚಾರ್ಜ ಮಾಡಿ ಜನರನ್ನು ಚದುರಿಸಿದ್ದಾರೆ. ಎರಡು ಮಸೀದಿಗಳಲ್ಲಿ ನಮಾಜ್ ಮಾಡುತ್ತಿದ್ದ ಮೂವತ್ತಕ್ಕೂ ಅಧಿಕ ಜನರನ್ನು ಮಸೀದಿಯಿಂದ ಹೊರಗೆ ಕರೆದು ಪೋಲೀಸರು …

Read More »

ಅನಗತ್ಯ ಮನೆಯಿಂದ ಹೊರ ಬರದಿರಿ: ಹೆಗ್ಗನಾಯಕ

ಮೂಡಲಗಿ: ಕೊರೊನಾ ವೈರಸ್ ದೇಶವನ್ನೇ ಬೆಚ್ಚಿ ಬಿಳಿಸಿದೆ. ಪ್ರತಿಯೊಬ್ಬರು ತಮ್ಮ ಜೀವ ಉಳಿಸಿಕೊಳ್ಳಬೇಕಾದರೆ ಸಾಮಾಜಿಕ ಅಂತರದ ಕಾಯ್ದುಕೊಳ್ಳಬೇಕು. ಅನಗತ್ಯ ಮನೆಯಿಂದ ಹೊರಗೆ ತಿರಗಾಡದಿರಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಹೇಳಿದರು. ತಾಲ್ಲೂಕಿನ ಸುಣಧೋಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರ್ದೇಶನದಂತೆ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ದೇಶಕ್ಕೆ ದೇಶವೇ ಈ ಮಾರಕ ವೈರಲ್ ವೈರಸ್‍ದಿಂದಾಗಿ ಮನುಕುಲ ಅಪಾಯದ ಅಂಚಿನಲ್ಲಿದೆ. ಈ ಮಾರಕ ರೋಗ …

Read More »

ಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ.

ಚಿಕ್ಕೋಡಿ :  ಪಟ್ಟಣದ  23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು  ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.  ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ …

Read More »

ಕೊರೋನಾ‌ ಎದುರಿಸಲು 1.7 ಲಕ್ಷ ಕೋಟಿ ಪ್ಯಾಕೇಜ್: ಕೇಂದ್ರ ನಿರ್ಧಾರ

ಹೊಸದಿಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ದೇಶದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಾಗಿನಿಂದಲೂ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕಾಂಗ್ರೆಸ್​​ ಒತ್ತಡ ಹೇರುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ …

Read More »

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ ಕುರಿತು ವೈದ್ಯಕೀಯ ಸಚಿವ ಸುಧಾಕರ್ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ   ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ …

Read More »

ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »

ಧಾರವಾಡ ಜಿಲ್ಲೆಯಲ್ಲಿ 437 ಜನರ ಮೇಲೆ ಕರೋನಾ ನಿಗಾ

ಹುಬ್ಬಳ್ಳಿ.:,ಮಾ,26- ಕರೋನಾ ವೈರಸ್ ಪತ್ತೆಗಾಗಿ ಧಾರವಾಡ ಜಿಲ್ಲೆಯಲ್ಲಿ ಈವರೆಗೆ 437 ಜನರ ಮೇಲೆ ನಿಗಾ ವಹಿಸಲಾಗಿದೆ. 266 ಜನರನ್ನು ಅವರ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಇರಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸೋಲೇಶನ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 14 ದಿನಗಳ ಪ್ರತ್ಯೇಕತಾ ಅವಧಿಯನ್ನು 155 ಜನ ಪೂರ್ಣಗೊಳಿಸಿದ್ದಾರೆ. 28 ದಿನಗಳ ಪ್ರತ್ಯೇಕತೆ ಅವಧಿಯನ್ನು 14 ಜನ ಪೂರ್ಣಗೊಳಿಸಿದ್ದಾರೆ.ಇದುವರೆಗೆ 38 ಶಂಕಿತರ ಗಂಟಲು ದ್ರವದ ಪ್ರಯೋಗಾಲಯ …

Read More »