Breaking News

Laxminews 24x7

ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ಕೊಲೆ

ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಅವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಂಜಲಿ (34) ಕೊಲೆಯಾದ ಮಂಗಳಮುಖಿ. ಚಿತ್ರದುರ್ಗದ ಗಾಂಧಿ ನಗರದಲ್ಲೊಂದು ಬಾಡಿಗೆ ಮನೆಮಾಡಿಕೊಂಡಿದ್ದರು. ದೈನಂದಿನ ಜೀವನಕ್ಕಾಗಿ ತನ್ನಲ್ಲಿದ್ದ ನೃತ್ಯ, ಕರಗ ಹಾಗೂ ನಟನೆಯ ಕಲೆಯನ್ನೇ ಬಂಡವಾಳವನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. …

Read More »

ರ‍್ಯಾಪಿಡ್ ಆಂಟಿಜನ್ ಟೆಸ್ಟ್ ವರದಿಪಾಸಿಟಿವ್ ಆರ್ಟಿಪಿಸಿಆರ್ ನಲ್ಲಿ ನೆಗೆಟಿವ್ : ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್

ದಾವಣಗೆರೆ: ಬಿಜೆಪಿ ಶಾಸಕರ ಕೊರೊನಾ ವೈರಸ್ ಟೆಸ್ಟ್ ವರದಿಯಲ್ಲಿ ಗೊಂದಲ ಉಂಟಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಉತ್ತರ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಅವರ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ನಲ್ಲಿ ಪಾಸಿಟಿವ್ ಎಂದು ಬಂದಿತ್ತು. ಆದರೆ ಮರುದಿನವೇ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ. ಈ ಮೂಲಕ ಶಾಸಕರ ಕೋವಿಡ್ ಟೆಸ್ಟ್ ವರದಿಯಲ್ಲಿಯೇ ಗೊಂದಲ ಮೂಡಿದೆ. ರಾಜ್ಯ ಬುಲೆಟಿನ್ ನಲ್ಲಿ ಕೂಡ ಶಾಸಕರ ಪೇಷಂಟ್ ನಂಬರ್ …

Read More »

ಆರು ತಿಂಗಳಿನಿಂದ ಚಿತ್ರೋದ್ಯಮ ಸಂಪೂರ್ಣ ಸ್ಥಗಿತವಾಗಿದೆ. ನಿರ್ಮಾಪಕರು, ವಿತರಕರು, ಪ್ರದರ್ಶಕರು ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು, ಆ.30- ಚಿತ್ರಮಂದಿರಗಳನ್ನು ಆರಂಭಿಸುವ ಬಗ್ಗೆ ಸರ್ಕಾರ ಪುನರ್ ಪರಿಶೀಲನೆ ಮಾಡುವ ಮೂಲಕ ಚಿತ್ರಗಳ ಬಿಡುಗಡೆಗೂ ಅವಕಾಶ ಮಾಡಿಕೊಡುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಕಟಿಸಿರುವ ಅನ್‍ಲಾಕ್ 4.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳಿಗೆ ಅವಕಾಶ ಕಲ್ಪಿಸಿಲ್ಲ. ಆದರೆ ಚಿತ್ರೋದ್ಯಮವನ್ನೇ ನಂಬಿಕೊಂಡು ಸಾಕಷ್ಟು ಮಂದಿ ಜೀವನ ನಡೆಸುತ್ತಿದ್ದೇವೆ. 700 ಸಿಂಗಲ್ ಸ್ಕ್ರೀನ್‍ಗಳ ಚಿತ್ರಮಂದಿರಗಳಿವೆ ಇದನ್ನು ಅವಲಂಬಿಸಿರುವ ಸಿಬ್ಬಂದಿಗಳಿದ್ದಾರೆ. ಎಲ್ಲರೂ ಸಂಕಷ್ಟದಲ್ಲಿದ್ದೇವೆ. ಸಾಲ ಮಾಡಿ ಬದುಕಲು ಆಗದಂತಹ …

Read More »

ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಭಾರೀ ಮಳೆಯಾಗಲಿದೆ…..!

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರ ಉತ್ತಮ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಡುವು ನೀಡಿರುವ ಮಳೆರಾಯ ಮತ್ತೆ ತನ್ನ ಆರ್ಭಟ ಆರಂಭಿಸಲಿದ್ದಾನೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರ ವರೆಗೆ ಮಳೆಯಾಗಲಿದೆ.  ಸೆಪ್ಟೆಂಬರ್ 1 ಮತ್ತು 2 ರಂದು ವ್ಯಾಪಕ ಮಳೆ ನಿರೀಕ್ಷೆಯಿದ್ದು,  ಉತ್ತರ ಕನ್ನಡ , ಉಡುಪಿ …

Read More »

ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಲವು ಸಚಿವರು, ಶಾಸಕರು, ವಿಪಕ್ಷ ನಾಯಕ ಸೇರಿದಂತೆ ರಾಜಕೀಯ ಮುಖಂಡರನ್ನೂ ಕೊವಿಡ್ ವೈರಸ್ ಕಾಡುತ್ತಿದೆ. ಈಗಾಗಲೇ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತ: ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, …

Read More »

ಪತ್ರಕರ್ತರಾಗಿದ್ದಾಗ ಏನೇನು ಮಾಡಿದ್ದೀಯಾ ಎಂಬುದು ಗೊತ್ತು,ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‍ಸಿ ಹುದ್ದೆ ಮಾರಾಟ

ಮೈಸೂರು, ಆ.30- ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‍ಸಿ ಹುದ್ದೆ ಮಾರಾಟ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಡಿಸೆಂಬರ್‍ನಲ್ಲಿ ಆಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಆಗಿರುವ 218 ಕೋಟಿ ಅವ್ಯವಹಾರ, ಅದರಲ್ಲಿ ಹಣ ಕೊಟ್ಟು ಪಡೆದ ದಾಖಲೆಗಳು ನಮ್ಮ ಬಳಿ ಇವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರತಾಪ್ ಸಿಂಹ ಅವರ ಹಗರಣಗಳನ್ನು ನಾನು …

Read More »

ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಅಪಘಾತದಲ್ಲಿ ಸಾವು

ಹೈದ್ರಾಬಾದ್, ಆ.30- ತಿರುಪತಿಯ ಬಾಲಾಜಿ ದರ್ಶನ ಮಾಡಲು ತೆರಳುತ್ತಿದ್ದ ಭಕ್ತರಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ಮೃತಪಟ್ಟವರೆಲ್ಲರೂ ಕರ್ನಾಟಕದವರೆಂದು ತಿಳಿದುಬಂದಿದೆ. ರ್ನಾಟಕದಿಂದ ಆಂಧ್ರಪ್ರದೇಶದಲ್ಲಿರುವ ತಿರುಪತಿಯ ದರ್ಶನ ಮಾಡಲೆಂದು ತೆರಳುತ್ತಿದ್ದ ಕಾರು ಬಂಗಾರು ಪಾಲೆಂ ಮಂಡಲಂನ ಬಲಿಜಪಲ್ಲಿ ಬಳಿ ಚಲಿಸುತ್ತಿದ್ದ ಲಾರಿಯನ್ನು ಓವರ್‍ಟೇಕ್ ಮಾಡುವ ಭರದಲ್ಲಿ ಈ ದುರಂತ …

Read More »

ಲಾಂಗ್ ಹಿಡಿದು ದಾರಿ ಹೋಕರಿಗೆ ಬೆದರಿಕೆ ಹಾಕಿದ್ದು ಅಲ್ಲದೇ ಬಾರ್ ಮಾಲೀಕನಿಗೆ ಬಿಯರ್ ನೀಡುವಂತೆ ಒತ್ತಾಯ

    ಕೋಲಾರ: ಕೆಜಿಎಫ್‍ನಲ್ಲಿ ರೌಡಿಶೀಟರ್ ಓರ್ವ ಸಿನಿಮಾ ಸ್ಟೈಲ್ ನಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಕುಡಿದ ಅಮಲಿನಲ್ಲಿ ಲಾಂಗ್ ಹಿಡಿದು ದಾರಿ ಹೋಕರಿಗೆ ಬೆದರಿಕೆ ಹಾಕಿದ್ದು ಅಲ್ಲದೇ ಬಾರ್ ಮಾಲೀಕನಿಗೆ ಬಿಯರ್ ನೀಡುವಂತೆ ತಮಿಳಿನಲ್ಲಿ ಒತ್ತಾಯ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್‍ನಗರದ ಸಲ್ಡಾನಾ ಸರ್ಕಲ್‍ನ ಬಾರ್ ಮುಂದೆ ಎರಡು ದಿನದ ಹಿಂದೆ ಈ ನಡೆದಿದೆ ಎನ್ನಲಾಗಿದೆ. ಸೂಸೈ ಪಾಳ್ಯ ನಿವಾಸಿ ರೌಡಿಶೀಟರ್ ಎಡ್ವಿನ್ ಕುಡಿದ …

Read More »

ಅವಹೇಳನಕಾರಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ: ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್ ರಾಯಣ್ಣ, ಶಿವಾಜಿ ಅಭಿಮಾನಿಗಳನ್ನು ಕೆರಳಿಸುವಂತಿವೆ.

ಬೆಳಗಾವಿ: ಪೀರನವಾಡಿಯ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಇತ್ಯರ್ಥವಾಗಿದೆ. ಆದರೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಮಾಡುತ್ತಿರುವ ಪೋಸ್ಟ್ ರಾಯಣ್ಣ, ಶಿವಾಜಿ ಅಭಿಮಾನಿಗಳನ್ನು ಕೆರಳಿಸುವಂತಿವೆ. ಪೀರನವಾಡಿ ವೃತ್ತದಲ್ಲಿ ಸ್ಥಾಪನೆ ಆಗಿರೋ ರಾಯಣ್ಣ ಪ್ರತಿಮೆ ವಿದಾದ ಸೌಹಾರ್ದತೆಯಿಂದ ಇತ್ಯರ್ಥ ಪಡಿಸಲಾಗಿದೆ. ಆದರೆ  ಸಾಮಾಜಿಕ ಜಾಲತಾಣದಲ್ಲಿ ಅನೇಕ ರೀತಿಯ ಚರ್ಚೆಗಳು ನಡೆಯುತ್ತಿವೆ. ಶಿವಾಜಿ ಪರವಾಗಿ ಅನೇಕರು ಪೋಸ್ಟ್ ಗಳನ್ನು ಹಾಕಿದ್ರೆ, ರಾಯಣ್ಣನ ಪರವಾಗಿಯೂ ಅನೇಕರು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಠಿಯಾಗುತ್ತಿದೆ. …

Read More »

ಅಂಜುಮನ್ ಸಂಸ್ಥೆ ಅಧ್ಯಕ್ಷ ರಾಜು ಸೇಠ್ ಅವರು  ಯುವಕರ ತಂಡ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿ, ಮಾನವೀಯತೆ ಮೆರೆದಿದ್ದಾರೆ.

ಬೆಳಗಾವಿ : ಕೊರೊನಾ ಸೋಂಕಿನಿಂದ ಮೃತಪಟ್ಟ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿ, ಮುಸ್ಲೀಂ ಯುವಕರು ಮಾನವೀಯತೆ ಮೆರೆದಿದ್ದಾರೆ. ಇಲ್ಲಿನ ಸರಾಫ್ ಗಲ್ಲಿಯಲ್ಲಿನ 70 ವರ್ಷದ ವೃದ್ಧ ನಿನ್ನೆ ಸಾವನ್ನಪ್ಪಿದ್ದರು. ಆದರೆ ಕೊರೊನಾ ಸೋಂಕಿಗೆ ಭಯ ಪಟ್ಟಿರುವ ಜನರು ಅಂತ್ಯಕ್ರಿಯೆಗೆ ಬಾರದೆ ಇರುವ ಹಿನ್ನೆಲೆಯಲ್ಲಿ ಮುಸ್ಲೀಂ ಯುವಕರೇ ಹಿಂದೂ ಧರ್ಮದ ವಿಧಿವಿದಾನಗಳ ಪ್ರಕಾರ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನೆರೆವೇರಿಸಿದ್ದಾರೆ. ಅಂಜುಮನ್ ಸಂಸ್ಥೆ ಅಧ್ಯಕ್ಷ ರಾಜು ಸೇಠ್ ಅವರು  ಯುವಕರ ತಂಡವನ್ನು ರಚಿಸಿದ್ದು, …

Read More »