ವಿಜಯಪುರ: ಮಾಜಿ ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೆಟರ್ ಮೇಲೆ ಪೊಲಿಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಪೊಲಿಸರ ವಿರುದ್ದ ಆರೋಪ ಮಾಡಿದ್ದಾರೆ. ವಿಜಯಪುರ ನಗರ ಗಾಂಧಿಚೌಕ್ ಹಾಗೂ ಸಂಚಾರಿ ಠಾಣೆಯ ಎ.ಎಸ್.ಐ. ಹಾಗೂ ಹೆಡ್ ಕಾನ್ಸಟೇಬಲ್ ನಿಂದ ಭಾನುವಾರ ಸಂಜೆ ತಮ್ಮ ಮೇಲೆ ಹಲ್ಲೆ ನಡೆಸಿ ಕಾಲು ಮುರಿದಿದ್ದಾರೆ ಎಂದು ಪ್ರಕಾಶ ಮಿರ್ಜಿ ಆರೋಪಿಸಿದ್ದಾರೆ. ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ …
Read More »ಡ್ರಗ್ ಕೇಸಿನಲ್ಲಿ ಚಿಕ್ಕದೊಂದು ಐಸ್ ಬರ್ಗ್ ಹೊರಬಂದಿದೆಯಷ್ಟೇ: ಭಾಸ್ಕರ್ ರಾವ್
ಧಾರವಾಡ: ಡ್ರಗ್ ಕೇಸ್ನಲ್ಲಿ ಈಗ ಹೊರ ಬಂದಿರೋದು ಟಿಪ್ ಆಫ್ ದಿ ಐಸ್ ಬರ್ಗ್ ಅಷ್ಟೇ ಎಂದು ಆಂತರಿಕ ಭದ್ರತಾ ದಳ (ಐಎಸ್ಡಿ) ಮುಖ್ಯಸ್ಥ ಭಾಸ್ಕರ್ ರಾವ್ ಹೇಳಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಡ್ರಗ್ ಕೇಸಿನಲ್ಲಿ ಪೆಡ್ಲರ್ ಮತ್ತು ಗ್ರಾಹಕರವರೆಗೆ ಹೋಗಿದ್ದೇವೆ. ಇದು ಎಲ್ಲಿಂದ ಬರುತ್ತಿದೆ ಅದು ಪತ್ತೆ ಮಾಡಬೇಕಿದೆ ಎಂದು ಹೇಳಿದರು. ಕೆಮಿಕಲ್ ಮತ್ತು ಆರ್ಟಿಫಿಷಿಯಲ್ ಡ್ರಗ್ ಹೊರ ದೇಶದಿಂದ ಬರುತ್ತಿದೆ ಎಂದರು. ಡ್ರಗ್ಸ್ ಸಮುದ್ರ ಮತ್ತು ವಿಮಾನ …
Read More »ಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?:ಸಿದ್ದರಾಮಯ್,
ಮೈಸೂರು: ಬಿಜೆಪಿಯವರ ಮೇಲೆ ಯಕೆ ಸಿಬಿಐ ರೊಟೀನ್ ದಾಳಿ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಬ್ರದರ್ಸ್ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿಯಾಗಿದೆ. ಬಿಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?, ಅವರ್ಯಾರು ಭ್ರಷ್ಟಾಚಾರ ಅಕ್ರಮ ಹಣ ಸಂಪಾದನೆಯನ್ನೇ ಮಾಡಿಲ್ವಾ ಎಂದು ಪ್ರಶ್ನಿಸಿದರು. ಯಾಕೆ ಉಪಚುನಾವಣೆ …
Read More »ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?
ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ
ಬೆಂಗಳೂರು: ಶೋಕಿ ಜೀವನಕ್ಕಾಗಿ ಖಾಸಗಿ ಕಂಪನಿಯಲ್ಲಿನ ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬನಶಂಕರಿ ನಿವಾಸಿ ತಮಿಳುನಾಡು ಮೂಲದ ಜಯಕುಮಾರ್ ಅಲಿಯಾಸ್ ಜಯ ಗಣಿ (42) ಬಂಧಿತ. ಆರೋಪಿ ಯಿಂದ 3.70 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆ.8ರ ರಾತ್ರಿ ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಮ್ಮ …
Read More »ಮಹದಾಯಿ ನದಿ ನೀರನ್ನು ಕರ್ನಾಟಕ ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ:ಗೋವಾ ಸರ್ಕಾರ
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕ ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂಬ ಆರೋಪದ ಮೇಲೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ. ಮಹದಾಯಿ ನದಿಯ ನೀರನ್ನು ಹಂಚಿಕೊಳ್ಳುವ ವಿವಾದ ಎರಡೂ ರಾಜ್ಯಗಳ ನಡುವೆ ಸಾಕಷ್ಟು ದೊಡ್ಡ ವ್ಯಾಜ್ಯಕ್ಕೆ ಕಾರಣವಾಗಿದೆ. ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಗೋವಾ ಆರೋಪಿಸಿದೆ. ಸೋಮವಾರ ಈ ಸಂಬಂಧ ಗೋವಾ ಸಿಎಂಸಾವಂತ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋವಾ …
Read More »ಮಗಳ ಮದುವೆಗೆ ತಂದಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು ನೋವಾಗಿದೆ ಎಂದು ಸ್ವಾಮೀಜಿ ಮುಂದೆ ಡಿಕೆ ಶಿವಕುಮಾರ್ ನೋವು ತೋಡಿಕೊಂಡಿದ್ದಾರೆ
ಬೆಂಗಳೂರು: ನಿನ್ನೆ ಇಡೀ ದಿನ ಸಿಬಿಐ ವಿಚಾರಣೆ ಎದುರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಂಜಾವಧೂತ ಶ್ರೀಗಳು ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ್ದ ನಂಜಾವಧೂತ ಶ್ರೀಗಳ ಬಳಿ ಡಿ.ಕೆ. ಶಿವಕುಮಾರ್ ಅವರು ನೋವು ಹೇಳಿಕೊಂಡಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇ ಬಿಜೆಪಿಯವರಿಗೆ ತಪ್ಪಾಗಿದೆ. ನಾನು ಆಯಕ್ಟೀವ್ ಆಗಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಈಗ ಸಿಬಿಐನವರು ದಾಳಿ ಮಾಡುವ ಅಗತ್ಯವಿರಲಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿಯೇ …
Read More »ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …
Read More »ನಾಳೆ ಬೆಳಗಾವಿಗೆ ಯಡಿಯೂರಪ್ಪ;
ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಇತ್ತೀಚೆಗೆ ನಿಧನರಾಗಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ವಿಶ್ವೇಶ್ವರ ನಗರದ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಅವರು 11 ಗಂಟೆಗೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಅದೇ ವಿಮಾನದಲ್ಲಿ ನಿರ್ಗಮಿಸುವರು
Read More »ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ
ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹಿರಿಯ ರಂಗಕರ್ಮಿ, ಹೆಸರಾಂತ ರಂಗ ಕಲಾವಿಧ ಎಂದೇ ಗುರ್ತಿಸಿಕೊಂಡಿದ್ದಂತ ಕೊಡಗನೂರು ಜಯಕುಮಾರ್ (70) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಹೃದಯಾಘಾತವಾದ ತಕ್ಷಣ ಆಸ್ಪತ್ರೆಗೆ ದಾಖಲಾದ್ರೂ.. ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರು ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿದ್ದರು. ಕಿರುತೆರೆಯಲ್ಲಿ ಪಾಪ ಪಾಂಡು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ …
Read More »
Laxmi News 24×7