Breaking News

Laxminews 24x7

ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯಕೊಲೆ

ಬೆಳಗಾವಿ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿಯನ್ನು ಕೊಲೆಗೈದಿರುವ ಘಟನೆ  ಕಾಕತಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಲ್ಲಾವುದ್ದಿನ್ ನಜೀರಸಾಬ ಪಕಾಲಿ (32)  ಕೊಲೆಯಾದ ವ್ಯಕ್ತಿ.  ಅಮರ ಶ್ಯಾಮ ಮೇತ್ರಿ, ಅಖೀಲ ಶಿವಪ್ಪಾ ಮೇತ್ರಿ ಎಂಬ ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂಬೇಡ್ಕರ್ ಗಲ್ಲಿಯ ಯುವಕರು ಬೇರೊಂದು ಯುವಕರ ಗುಂಪಿನೊಂದಿಗೆ ಗಲಾಟೆ ನಡೆದಿತ್ತು. ಆ ಸಂದರ್ಭದಲ್ಲಿ ಸಲ್ಲಾವುದ್ದಿನ್ ಜಗಳ ಬಿಡಿಸಲು ಹೋಗಿದ್ದನು. ಆ ಸಂದರ್ಭದಲ್ಲಿ  ಅಮರ …

Read More »

, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ

 ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಧ್ವಜ ಹಿಡಿದು ಸಾಗುತ್ತಿದ್ದ ರಾಯಣ್ಣ ಅಭಿಮಾನಿಗಳ ಮೇಲೆ ಎಂಇಎಸ್ ಯುವಕರು ಚಪ್ಪಲಿ ಎಸೆದ ಘಟನೆ ನಡೆದಿದೆ. ಪೀರನವಾಡಿಯಲ್ಲಿ ಶಿವಾಜಿ ಪ್ರತಿಮೆ ಎದುರೇ ಬೆಳಗಾಗುವಷ್ಟರಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಇದು ಸ್ಥಳೀಯ ಮಾರಾಠಿಗರು ಹಾಗೂ ಕನ್ನಡಿಗರ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದಂತೆಯೇ ಸ್ಥಳದಲ್ಲಿ ಜಮಾವಣೆಗೊಂಡಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ …

Read More »

ಶಾಂತಿ ಕಾಪಾಡಲು ಕ್ರಮಕೈಗೊಳ್ಳಿ: ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ಆದೇಶ..!

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರುವ ಗಲಾಟೆಯಲ್ಲಿ ನಡೆಯುತ್ತಿದ್ದು, ಶಾಂತಿ ಕಾಪಾಡಲು ಏನೇನು ಕ್ರಮ ಬೇಕು ಅದೆನ್ನೆಲ್ಲವನ್ನ ಕೈಗೊಳ್ಳಿ ಎಂದು ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ದೂರವಾಣಿ ಕರೆ ಮಾಡಿ ಆದೇಶ ನೀಡಿದ್ದಾರೆ. ಇನ್ನು ಪೀರನವಾಡಿಗೆ ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನ ಕಳಿಸಲಾಗಿದ್ದು, ಸಮಸ್ಯೆಯನ್ನ ಬಗೆಹರಿಸಲು ಸಿಎಂ ಸೂಚನೆ ನೀಡುದ್ದಾರೆ ಅದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ. ಎರಡು ಸಮಾಜದ ಜೊತೆ ಹಿರಿಯರು ಮಾತನಾಡುತ್ತೇವೆ ಎಂದು …

Read More »

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಸಂಭಾವ್ಯ XI ಹೀಗಿದೆ ನೋಡಿ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಗೊಳ್ಳಲು ಇನ್ನು ಮೂರು ವಾರಗಳು ಬಾಕಿ ಉಳಿದಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಎಲ್ಲಾ ಎಂಟು ಫ್ರಾಂಚೈಸಿಗಳು ಈಗಾಗಲೇ ಯುಎಇ ತಲುಪಿದ್ದು, ಅಲ್ಲಿ 6 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸುತ್ತಿವೆ. ಆರ್‌ಸಿಬಿಯ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಆಗಸ್ಟ್ 27ರ ಗುರುವಾರದಿಂದ 3 ವಾರಗಳ ತರಬೇತಿಯಲ್ಲಿ ಬೆಂಗಳೂರು ತಂಡ ತೊಡಗಿಕೊಳ್ಳಲಿದೆ. ಐಪಿಎಲ್‌ನ ಆಕರ್ಷಣೀಯ …

Read More »

”ನಾಯಕತ್ವದ ಯಶಸ್ಸಿಗೆ ಧೋನಿಯ ತಾಳ್ಮೆ ಮತ್ತು ಕೊಹ್ಲಿಯ ಆಕ್ರಮಣಶೀಲತೆ ಎರಡೂ ಅಗತ್ಯ”

ಮುಂಬೈ : ಕ್ರಿಕೆಟ್​ ಜಗತ್ತಿನಲ್ಲಿ ಕೆಲವು ವರ್ಷಗಳಿಂದ ಭಾರತ ತಂಡ ಎಲ್ಲಾ ಮಾದರಿಯ ಕ್ರಿಕೆಟ್​​​ನಲ್ಲಿ​ ಅಧಿಪತ್ಯ ಸಾಧಿಸಿದೆ. ಎಲ್ಲಾ ವಿಭಾಗದಲ್ಲಿ ಅಗ್ರಸ್ಥಾನ ಪಡೆಯುವುದಕ್ಕಾಗಿ ಶ್ರಮಿಸುತ್ತಿದೆ. ಇಷ್ಟೆಲ್ಲಾ ಸಾಧನೆಗೆ ಹಲವಾರು ನಾಯಕರು ಶ್ರಮಿಸಿದ್ದಾರೆ. ತಂಡದಿಂದ ಹಲವು ಮೈಲಿಗಲ್ಲು ನಿರ್ಮಾಣವಾಗಲು ಅವರ ಪಾತ್ರ ಮಹತ್ವದ್ದಾಗಿದೆ. ಆದರೆ ನಾಯಕತ್ವದಲ್ಲಿ ಯಶಸ್ವಿಯಾಗಬೇಕಾದರೆ ಕೆಲವು ಗುಣಗಳು ಅಗತ್ಯವಾಗಿ ಬೇಕಾಗಿವೆ ಎಂದಿರುವ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್,​ ತಂಡ ಬಲಿಷ್ಠವಾಗಲು ಧೋನಿಯ ತಾಳ್ಮೆಯ ಮನೋಭಾವ ಹಾಗೂ ಕೊಹ್ಲಿಯಲ್ಲಿದ್ದ ಆಕ್ರಮಣಕಾರಿ ಮನೋಭಾವ ಅಗತ್ಯವಾಗಿ …

Read More »

ಸ್ಮಶಾನಕ್ಕೆ ಜಾಗ ಮಂಜೂರು ಮಾಡದ ಹಿನ್ನೆಲೆ: ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

ಬೆಂಗಳೂರು, : ರಾಜ್ಯದಲ್ಲಿ ಸಂಸ್ಕಾರಕ್ಕೆ ಸ್ಮಶಾನ ಸ್ಥಳವಿಲ್ಲದ ಕಡೆ ಅಗತ್ಯ ಜಮೀನು ಮಂಜೂರು ಮಾಡುವ ಕುರಿತ ನ್ಯಾಯಾಲಯದ ಆದೇಶ ಪಾಲಿಸದ ಸರಕಾರದ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ …

Read More »

ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ …

Read More »

ನಕಲಿ ಕಾರ್ಮಿಕರ ಕಾರ್ಡ್ ದಂಧೆ ವಿರುದ್ಧ ಕಠಿಣ ಕ್ರಮ: ಸಚಿವ ಶಿವರಾಮ್ ಹೆಬ್ಬಾರ್

ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …

Read More »

11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. …

Read More »

ಬೆಂಗಳೂರಿನಲ್ಲಿ ಟಗರು ಬೆಟ್ಟಿಂಗ್ ಭರಾಟೆ ಜೋರು- ಹಳ್ಳಿ ಕ್ರೇಜ್ ಸಿಟಿಗೆ ಶಿಫ್ಟ್

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಸಮಯದಲ್ಲೇ ಟಗರು ಆಟ ಜೋರಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿದ್ದ ಟಗರು ಬೆಟ್ಟಿಂಗ್ ಕ್ರೇಜ್ ಈಗ ನಗರಕ್ಕೆ ಶಿಫ್ಟ್ ಆಗಿದೆ. ಕೆಲಸ ಇಲ್ಲದ ಯುವಕರು ಟಗರು ಆಟದ ಮೂಲ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜಯನಗರ ಸೇರಿದಂತೆ ನಗರದ ಹಲವು ಕಡೆ ಈಗ ಟಗರು ಕಾಳಗ ಸಖತ್ ಕ್ರೇಜ್ ಸೃಷ್ಟಿಸಿದೆ. ಹೊಡಿ ಮಗಾ ಅನ್ನೋ ಟೀಂ ಇದ್ರಲ್ಲಿ ಸಕ್ರೀಯ ಆಗಿದೆ. ಆದರೆ …

Read More »