ಬೆಂಗಳೂರು: ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಪತ್ರ ಸಾಮಾನ್ಯ. ಇನ್ನು ಅದರ ಜತೆ ಆರೋಗ್ಯದ ಮಾಹಿತಿಯನ್ನು ಒಳಗೊಂಡಿರುವ “ಆರೋಗ್ಯ ಕಾರ್ಡ್’ ಕೂಡ ನೀಡಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರೋಗ್ಯ ಕಾರ್ಡ್ ದೊರೆಯಲಿದೆ. ಕೊರೊನಾದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಇಂದಿನ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಅತಿಯಾದ ಗಮನ ಅಗತ್ಯವಾಗಿರುವುದರಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಸರಕಾರಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಸ್ವಾಸ್ಥ್ಯ ನಿಗಾವಣೆಗೆ ಯೋಜನೆ ಸಿದ್ಧಪಡಿಸಿದೆ. ಪ್ರತಿ ವಿದ್ಯಾರ್ಥಿಯ …
Read More »ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …
Read More »ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ
ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ
ರಾಯಚೂರು: ಗಣೇಶ ವಿಸರ್ಜನೆ ವೇಳೆ ಧ್ವನಿವರ್ಧಕಕ್ಕೆ ಅವಕಾಶ ನೀಡದ ಹಿನ್ನೆಲೆ ಕೆಲ ಕಿಡಿಗೇಡಿಗಳು ರಸ್ತೆ ಬದಿ ನಿಲ್ಲಿಸಿದ್ದ ಬೈಕ್, ತಳ್ಳೋಬಂಡಿಗಳನ್ನ ರಾಜಕಾಲುವೆಗೆ ಎಸೆದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ ನಗರದ ಬಂಗೀಕುಂಟದಲ್ಲಿ 20 ಕ್ಕೂ ಹೆಚ್ಚು ಬೈಕ್ ಹಾಗೂ 10 ತಳ್ಳೋಬಂಡಿ ಹಾಗೂ ಟಂಟಂನ ಗಾಜು ಪುಡಿಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕೈದು ಬೈಕ್ ಗಳನ್ನ ರಾಜಕಾಲುವೆಗೆ ಎಸೆದಿದ್ದಾರೆ. ನಿಯಮ ಮೀರಿ ಹೆಚ್ಚು ಜನ ಸೇರಿ ಮೆರವಣಿಗೆ ಮಾಡಲಾಗಿದೆ.ಧ್ವನಿವರ್ಧಕ, ವಿದ್ಯುತ್ ದ್ವೀಪಗಳನ್ನ …
Read More »ಆನ್ಲೈನ್ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್ಲೈನ್ ಆಗಲಿದೆ.
ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್ಲೈನ್ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ …
Read More »ಬುಲೆಟ್ ಮೇಲಿತ್ತು 103 ಪ್ರಕರಣಗಳು – ಫೈನ್ ಕಂಡು ಬೆಚ್ಚಿಬಿದ್ದ ಮಾಲೀಕ
ಬೆಂಗಳೂರು: ಬುಲೆಟ್ ಬೈಕ್ ಮಾಲೀಕನೊಬ್ಬ ಬರೋಬ್ಬರಿ 58 ಸಾವಿರದ 200 ರೂಪಾಯಿ ದಂಡ ಕಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಆಡುಗೊಡಿಯಲ್ಲಿ ನಡೆದಿದೆ. ಸಿಗ್ನಲ್ ಜಂಪ್, ಹೆಲ್ಮೆಟ್ ಇಲ್ಲದೇ ಸಂಚಾರ, ಒನ್ ವೇ ಹೀಗೆ ಸುಮಾರು 103 ಬಾರಿ ಬೈಕ್ ಸವಾರ ರಾಜೇಶ್ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಾನೆ. ಈ ಕಾರಣದಿಂದ ಸಂಚಾರಿ ಪೊಲೀಸರು ಆತನಿಗೆ ನೋಟಿಸ್ ನೀಡಿದ್ದರು. ಪರಿಣಾಮ ಇಂದು ಆಡುಗೋಡಿ ಸಂಚಾರಿ ಪೊಲೀಸ್ ಠಾಣೆಗೆ ಬಂದ ರಾಜೇಶ್ ಬರೋಬ್ಬರಿ …
Read More »ಸಿನಿಮಾ ಸ್ಟೈಲ್ನಲ್ಲಿ 12 ಕೋಟಿ ಮೌಲ್ಯದ ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್
ಹೈದರಾಬಾದ್: ಥೇಟ್ ಸಿನಿಮಾ ಸ್ಟೈಲ್ನಲ್ಲಿ ಹೆದ್ದಾರಿಯೊಂದರಲ್ಲಿ ಭಾರೀ ದರೋಡೆ ನಡೆದಿದೆ. ಹೈಜಾಕ್ ಆಗಿದ್ದ ಲಾರಿ ಪುತ್ತೂರು ಸಮೀಪದ ಮರಾಠಿ ಗೇಟ್ ಎಂಬಲ್ಲಿ ಪತ್ತೆಯಾಗಿದೆ. ಲಾರಿಯಲ್ಲಿದ್ದ 12 ಕೋಟಿ ಮೌಲ್ಯದ 15 ಮೊಬೈಲ್ ಬಾಕ್ಸ್ಗಳ ಪೈಕಿ, 8 ಮೊಬೈಲ್ ಬಾಕ್ಸ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಇದರ ಮೌಲ್ಯ 7 ಕೋಟಿ ರೂ. ಇರಬಹುದು ಎಂದು ಅಂದಾಜಿಸಲಾಗಿದೆ. ಚೆನ್ನೈನ ಶ್ರೀ ಪೆರಂಬದೂರ್ನಿಂದ ಮುಂಬೈನ ಎಂಐ ಗೋಡಾನ್ಗೆ ಈ ಮೊಬೈಲ್ಗಳನ್ನು ಸಾಗಿಸಲಾಗುತ್ತಿತ್ತು. ಇದೀಗ …
Read More »ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್………!
ಬೆಂಗಳೂರು: ಸಿಎಂ ಆಗಲೇಬೇಕು ಎಂಬ ಹಠಕ್ಕೆ ಬಿದ್ದಂತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜ್ಯೋತಿಷ್ಯದ ಮೊರೆ ಹೋಗಿದ್ದು, ಕಚೇರಿಯಲ್ಲಿ ಓಡಾಡಲು ಪ್ರತ್ಯೇಕ ಬಾಗಿಲನ್ನೇ ನಿರ್ಮಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಸಿಎಂ ಆಗಲು ಕಚೇರಿ ಹಾಗೂ ಅಧಿಕೃತ ನಿವಾಸ ಕಚೇರಿಯನ್ನು ಶ್ವೇತ ವರ್ಣಕ್ಕೆ ಬದಲಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯ ಪಟ್ಟಕ್ಕೇರಲು ಜ್ಯೋತಿಷಿಗಳ ಸಲಹೆಯಂತೆ ಕಾಂಗ್ರೆಸ್ ಕಚೇರಿಯಲ್ಲಿ ಓಡಾಡಲು ಕುಬೇರ ಮೂಲೆಯಲ್ಲಿ ಹೊಸ ಬಾಗಿಲನ್ನೇ …
Read More »
Laxmi News 24×7