Breaking News

Laxminews 24x7

ಅರಭಾಂವಿ ಮತಕ್ಷೇತ್ರದಲ್ಲಿ ತಲೆ ಎತ್ತಿದ ಹೈಟೆಕ್  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ

ಗೋಕಾಕ: ಅರಭಾಂವಿ ಮತಕ್ಷೇತ್ರದಲ್ಲಿ ತಲೆ ಎತ್ತಿದ ಹೈಟೆಕ್  ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ (ಜಿಟಿಟಿಸಿ) ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಭಾನುವಾರ ಭೇಟಿ ನೀಡಿ,  ಕಾಲೇಜು ಮೂಲಸೌಕರ್ಯ  ಪರಿಶೀಲನೆ ನಡೆಸಿದರು. ಈ ಹಿಂದೆ ಸತೀಶ ಜಾರಕಿಹೊಳಿ ಅವರು ಕೈಗಾರಿಕಾ ಮಂತ್ರಿಯಾಗಿದ್ದ ವೇಳೆ ಸುಮಾರು 20 ಕೋಟಿ ರೂ. ಅನುದಾನ ಕಲ್ಪಿಸಿ,   ಅರಭಾಂವಿಯಲ್ಲಿ ಜಿಟಿಟಿಸಿ ತರಬೇತಿ ಕೇಂದ್ರಕ್ಕೆ ಸ್ಥಾಪನೆಗೆ ವಿಶೇಷ ಕಾಳಜಿವಹಿಸಿದ್ದರು. ಸದ್ಯ ಪ್ರಸಕ್ತ ವರ್ಷದಿಂದ ತರಬೇತಿ …

Read More »

 ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ

ಬೆಂಗಳೂರು: ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತು ಮಾಂಸ ಖರೀದಿಸುತ್ತಿದ್ದು, ಒಂದು ತಿಂಗಳಿಂದ ಬಿಕೋ ಎನ್ನುತ್ತಿದ್ದ ಮಟನ್ ಅಂಗಡಿಗಳು ಇಂದು ಫುಲ್ ಆಗಿವೆ.ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಲೇ ಸಾಲುಗಟ್ಟಿ ನಿಂತು ಗ್ರಾಹಕರು ಮಾಂಸ ಖರೀದಿಸುತ್ತಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸೈನಿಟಸರ್ ಬಳಸುತ್ತಿದ್ದಾರೆ. ಈ ಮೂಲಕ ಕೊರೊನಾ ನಿಯಮಗಳನ್ನು ಪಾಲಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶ್ರಾವಣ ಮಾಸ ಹಿನ್ನೆಲೆ ಕಳೆದ ನಾಲ್ಕು ವಾರದಿಂದ ಮಟನ್ ಶಾಪ್ ಗಳು …

Read More »

30 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಶನಿವಾರ 69,239 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ತನ್ನೆಲ್ಲ ಹಿಂದಿನ ದಾಖಲೆಗಳ ಬ್ರೇಕ್ ಮಾಡಿದೆ. ಕಳೆದ 24 ಗಂಟೆಯಲ್ಲಿ ಕೊರೊನಾದಿಂದಾಗಿ ಒಟ್ಟು 912 ಜನರು ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 56,706ಕ್ಕೆ ಏರಿಕೆಯಾಗಿದೆ. ಸದ್ಯ 7,07,668 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,44,941ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಗುಣಮುಖ ಪ್ರಮಾಣ ಶೇ.74.89ರಷ್ಟಿದೆ. ಕಳೆದ 15 ದಿನದಲ್ಲಿಯೇ 20 ಲಕ್ಷ …

Read More »

ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ ರಣ್‍ವೀರ್ ಸಿಂಗ್

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ. ಇದೀಗ ಆನ್‍ಲೈನ್ ಟ್ರೋಲ್ಸ್ ಬಗ್ಗೆ ನಟ ರಣ್‍ವೀರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ರಣ್‍ವೀರ್ ಕಾರಿನಲ್ಲಿ ಸಾಂಗ್ ಕೇಳುತ್ತಾ ಎಂಜಾಯ್ ಮಾಡಿಕೊಂಡು ಹೋಗುತ್ತಿದ್ದರು. ಈ ಮಧ್ಯೆಯೇ, “ಇಂದು ಎಂತಹ ವಿಭಿನ್ನವಾದ ಟ್ರೋಲ್‍ಗಳು ಬಂದಿವೆ. ಹೇ ಮೂಸ್ಯಿಕ್ ಬಂದ್ ಮಾಡು, ಜೋಕರ್ ತರ ಕಾಣಿಸುತ್ತಿದಿಯಾ ಎಂದು ಅನೇಕ ರೀತಿ ಟ್ರೋಲ್ ಮಾಡುತ್ತಿದ್ದಾರೆ ಎಂದಿದ್ದಾರೆ.  

Read More »

ದುಡ್ಡು ಕೊಟ್ರೆ ರಾಜ್ಯಕ್ಕೆ ಪಾಸ್ ಇಲ್ಲದಿದ್ರು ಸಿಗುತ್ತೆ ಎಂಟ್ರಿ

ಬೆಂಗಳೂರು: ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಿನ ಜನಕ್ಕೆ ಪಾಸ್ ಇದ್ದರೆ ಮಾತ್ರ ಕರ್ನಾಟಕಕ್ಕೆ ಪ್ರವೇಶ ಸಿಗುತ್ತದೆ. ಆದರೆ ಅಲ್ಲಿನ ಪೊಲೀಸರಿಗೆ ಸ್ವಲ್ಪ ಹಣ ಕೊಟ್ಟರೆ ಯಾವುದೇ ಪಾಸ್ ಇಲ್ಲದಿದ್ದರೂ ರಾಜ್ಯಕ್ಕೆ ಎಂಟ್ರಿ ಕೊಡಿಸುತ್ತಾರೆ. ಕರ್ನಾಟಕ ಸರ್ಕಾರದ ನಿರ್ಲಕ್ಷ ತಮಿಳುನಾಡು ಪೊಲೀಸರಿಗೆ ವರದಾನವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಳಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಗೆ ಹಣ ನೀಡಿದ್ರೆ ಕರ್ನಾಟಕ ಪ್ರವೇಶಿಸಬಹುದು. ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ …

Read More »

ಎಸ್‍ಪಿಬಿ ಶೀಘ್ರಗುಣಮುಖರಾಗಲಿ: ಹಿರಿಯ ನಟಿ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾದಿಂದ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯ ಆರೋಗ್ಯದಲ್ಲಿ ಗಂಭೀರವಾದ ಹಿನ್ನೆಲೆಯಲ್ಲಿ ಎಸ್‍ಪಿಬಿ ಶೀಘ್ರಗುಣಮುಖರಾಗಲಿ ಅಂತ ದೇವರಲ್ಲಿ ಪ್ರಾರ್ಥಿಸೋಣ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹೇಳಿದ್ದಾರೆ.ಸೋಶಿಯಲ್ ಮೀಡಿಯಾದ ಮೂಲಕ ಭಾರತಿ ವಿಷ್ಣುವರ್ಧನ್ ಅವರು ಬಾಲಸುಬ್ರಹ್ಮಣ್ಯ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ನಟ ಅನಿರುದ್ಧ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನಮ್ಮ ಬಾಲಸುಬ್ರಹ್ಮಣ್ಯ ಅವರು ಕೊರೊನಾದಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು, ಅದರಿಂದ ನರಳುತ್ತಿದ್ದಾರೆ. ಈ ಸುದ್ದಿ ಕೇಳಿ ನನಗೆ ಬಹಳ ಬೇಸರವಾಗಿದೆ. ಅಂತಹ …

Read More »

ಗಣಪನ ಅವತಾರದಲ್ಲಿ ಜೂ.ಯಶ್ ಮಿಂಚಿಂಗ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಐರಾ ಮತ್ತು ಜೂ.ಯಶ್ ಫೋಟೋಗಳನ್ನ ಶೇರ್ ಮಾಡಿದ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ಇದೀಗ ನಟ ಯಶ್ ಪುತ್ರ ಗಣಪನ ಅವತಾರದಲ್ಲಿ ಮಿಂಚಿದ್ದಾನೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ಐರಾ ಮತ್ತು ಜೂನಿಯರ್ ಯಶ್‍ಗೆ ರಾಧೆ ಹಾಗೂ ಕೃಷ್ಣನ ಉಡುಪು ಧರಿಸಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. …

Read More »

ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ …

Read More »

10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ. ಸೆಪ್ಟಂಬರ್ 21 …

Read More »

JEE, NEET ಪರೀಕ್ಷೆ ದಿನಾಂಕ ಪ್ರಕಟ

ನವದೆಹಲಿ : ಪ್ರಸಕ್ತ ಸಾಲಿನ ವೃತ್ತಪರ ಕೋರ್ಸ್ ಗಳಿಗೆ ನಡೆಯಲಿರುವ ನೀಟ್ ( ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಹಾಗೂ ಜೆಇಇ (ಜಂಟಿ ಪ್ರವೇಶ ಪರೀಕ್ಷೆ)ಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 1 ರಿಂದ 6 ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮಾಹಿತಿ ನೀಡಿದೆ.

Read More »