Breaking News

Laxminews 24x7

ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ

ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …

Read More »

ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ

ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …

Read More »

ಲಾಕ್‍ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್‍ಸ್ಪಾಟ್

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …

Read More »

ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ

ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …

Read More »

ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಲಕ್ನೋ: ನಾನು ಹೇಡಿಯಲ್ಲ, ನನ್ನಿಂದ ಬದುಕಲು ಆಗುತ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ ಪ್ರತಾಪಗಢದ ಲಾಲ್‍ಗಂಜ್ ವ್ಯಾಪ್ತಿಯ ಬೆಲ್ಹಾ ಗ್ರಾಮದ ಐಟಿಐ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧೀರೇಂದ್ರ ಶರ್ಮಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೃತ ಧೀರೇಂದ್ರ ಪ್ರತಾಪಘಢನಲ್ಲಿ ಐಟಿಐ ಓದುತ್ತಿದ್ದನು. ರಜೆ ಹಿನ್ನೆಲೆ ಶನಿವಾರ ಗ್ರಾಮಕ್ಕೆ ಆಗಮಿಸಿದ್ದನು. ಮನೆಗೆ ಬಂದವನು ಎರಡನೇ ಮಹಡಿಯಲ್ಲಿರುವ ಕೋಣೆ ಸೇರಿ, ನೇಣು ಬಿಗಿದುಕೊಂಡು ಆತ್ಮಹತ್ಯೆ …

Read More »

ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು13 ಮಂದಿ ಮೃತ

ಬೆಂಗಳೂರು: ಇಂದು ರಾಜ್ಯದಲ್ಲಿ 1,704 ಮಂದಿಗೆ ಸೋಂಕು ತಗುಲಿದ್ದು, 1,537 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 13 ಮಂದಿ ಮೃತಪಟ್ಟಿದ್ದಾರೆ.   ಒಟ್ಟು ಸೋಂಕಿತರ ಸಂಖ್ಯೆ 8,73,046ಕ್ಕೆ ಏರಿಕೆಯಾಗಿದೆ. ಈ ಪೈಕಿ 8,36,505 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,868 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,654 ಮಂದಿ ಸೋಂಕಿಗೆ ಮೃತಪಟ್ಟಿದ್ದು, 470 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಒಟ್ಟು 20,399 ಆಂಟಿಜನ್ ಟೆಸ್ಟ್, 1,06,505 ಆರ್‍ಟಿ …

Read More »

ಪೊಲೀಸ್ ಪೇದೆಗಳ ನೇಮಕಾತಿಯ ಅರ್ಹತಾ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಯೊರ್ವ ಪತ್ತೆಯಾದ ಪ್ರಕರಣ ಬೆಳಕಿಗೆ

ಹುಬ್ಬಳ್ಳಿ: ಪೊಲೀಸ್ ಪೇದೆಗಳ ನೇಮಕಾತಿಯ ಅರ್ಹತಾ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಯೊರ್ವ ಪತ್ತೆಯಾದ ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಪರೀಕ್ಷಾ ಕೇಂದ್ರದಲ್ಲಿ ನಕಲಿ ಅಭ್ಯರ್ಥಿ ಪರವಾಗಿ ಅಸಲಿ ಪೊಲೀಸ್ ಪೇದೆ ಪರೀಕ್ಷೆ ಬರೆಯುವ ವೇಳೆ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ಹುಬ್ಬಳ್ಳಿ ಧಾರವಾಡದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪೊಲೀಸ್ ಅರ್ಹತಾ ಪರೀಕ್ಷೆಯಲ್ಲಿ ಪೊಲೀಸ್ ಪೇದೆಯೋರ್ವ ಬೇರೆ ಅಭ್ಯರ್ಥಿಯ ಪರವಾಗಿ ಪರೀಕ್ಷೆ ಬರೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ನಕಲಿ ಅಭ್ಯರ್ಥಿ ಪರವಾಗಿ ಪರೀಕ್ಷೆ ಬರೆಯುತ್ತಿದ್ದ …

Read More »

ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕದ್ದೊಯ್ದ ಕಳ್ಳರು

ಬೆಳಗಾವಿ: ಮನೆ ಮುಂದೆ ನಿಲ್ಲಿಸಿದ್ದ ಎರಡು ಹೊಚ್ಚ ಹೊಸ ಕಾರನ್ನು ಕ್ಷಣಾರ್ಧದಲ್ಲಿ ಕಳ್ಳರು ಕದ್ದೊಯ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಶೋಕ ನಗರದ ಮೃತ್ಯುಂಜಯ ಬಸಣ್ಣಪ್ಪ ಬೆಲದ್ ಹಾಗೂ ರಾಮತೀರ್ಥ ನಗರದ ಉದ್ಯಮಿ ಅನಿಲ್ ಪಾಟೀಲ್‍ಗೆ ಸೇರಿದ ಇನ್ನೋವಾ ಕ್ರಿಸ್ಟಾ ಕಾರನ್ನು ಕಳ್ಳರು ಹೈಟೆಕ್ ಟೆಕ್ನಿಕ್ ಬಳಸಿ ಕಳ್ಳತನ ಮಾಡಿದ್ದಾರೆ. ಹೈಟೆಕ್ ಕಳ್ಳರ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗೆ ಕಳ್ಳತನ? ಕಾರಿನ ಗ್ಲಾಸ್ ಒಡೆಯದೆ ಕಳ್ಳರು ಕಾರಿನ …

Read More »

BIG BREAKINGಮನ್ಸೂರ್‌ ಖಾನ್‌ ಒತ್ತಡ – ರೋಷನ್‌ ಬೇಗ್‌ ಅರೆಸ್ಟ್‌, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್‌ ಬೇಗ್‌ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.ಸಂಜಯ್‌ನಗರದ ಸಿಬಿಐ ಕಚೇರಿಯಲ್ಲಿ ರೋಷನ್‌ ಬೇಗ್‌ ಅವರನ್ನು ಬೆಳಗ್ಗೆಯಿಂದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್‌ ಬೇಗ್‌ ಹೆಸರು ಮೊದಲು ಕೇಳಿ ಬಂದಿತ್ತು. ಆರೋಪಿ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್‌ ಬೇಗ್‌ ಪಡೆದಿದ್ದಾರೆ. ಐಷಾರಾಮಿ ಕಾರು ಸೇರಿದಂತೆ …

Read More »

ನಾಲ್ವರು ನಕಲಿ ಪರೀಕ್ಷಾರ್ಥಿಗಳು ಬಂಧನ..!

ಬೆಳಗಾವಿ ನಗರದಲ್ಲಿ ಇಂದು 39 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್‌ಆರ್‌ಪಿಸಿ / ಐಆರ್‌ಬಿ / ಕೆಎಸ್‌ಆರ್‌ಪಿ ಪುರುಷ & ಮಹಿಳಾ ಕಾನ್‌ಸ್ಟೇಬಲ್ ಹುದ್ದೆಯ ಸಿ.ಇ.ಟಿ ಲಿಖಿತ ಪರೀಕ್ಷೆಯಲ್ಲಿ ಒಟ್ಟು 1921 ಅಭ್ಯರ್ಥಿಗಳ ಪೈಕಿ 8461 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1 ) ಜಿಐಟಿ ಕಾಲೇಜ , ಉದ್ಯಮಬಾಗ 2 ) ಲವ್‌ಡೇಲ್ ಸೆಂಟ್ರಲ್ ಸ್ಕೂಲ , ಮಾಳಮಾರುತಿ , 3 ) ಕೆಎಲ್‌ಎಸ್ ಸಂಸ್ಥೆ . ಇಂಗ್ಲೀಷ ಮಿಡಿಯಮ್ …

Read More »