Breaking News

Laxminews 24x7

ಸೋದರಿಯ ಶವಸಂಸ್ಕಾರಕ್ಕೆ ಬಂದು ಬಾವನನ್ನು ಹತೈಗೈದ ಅಣ್ಣ

ಬೆಂಗಳೂರು: ಭಾನುವಾರ ಕಾಡುಗೋಡಿಯಲ್ಲಿ ನಡೆದ ಹೆಚ್.ಎ.ಎಲ್ ಉದ್ಯೋಗಿ ರಾಜೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಕೊಲೆ ನಡೆದ ಆರು ಗಂಟೆಗಳಲ್ಲಿ ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಾನ್‍ಪಾಲ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ. ಆರೋಪಿ ಜಾನ್‍ಪಾಲ್ ತಂಗಿ ಜಾಸ್ಮಿನ್‍ಗೆ ಏಳು ವರ್ಷಗಳ ಹಿಂದೆ ರಾಜೇಶ್ ಜೊತೆ ವಿವಾಹ ಮಾಡಲಾಗಿತ್ತು. ಇವರಿಗೆ ಐದು ವರ್ಷದ ಗಂಡು ಹಾಗೂ ಮೂರು ತಿಂಗಳ ಹೆಣ್ಣು ಮಗು ಇದ್ದು, ಕಾಡುಗೋಡಿಯ ವೀರಸ್ವಾಮಿರೆಡ್ಡಿ ಬಡಾವಣೆಯಲ್ಲಿ ವಾಸವಾಗಿದ್ದರು. …

Read More »

ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರು, ಕೂಲಿ ಕಾರ್ಮಿಕರು, ಬಡವರ ಪರವಿಲ್ಲ. ಇದೊಂದು ಕಾರ್ಪೋರೆಟ್ ಕಂಪನಿಗಳ ಸರ್ಕಾರ. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ ರಾಜ್ಯ ಸಭೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಇಂದು ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕೃಷಿ ಮಸೂದೆ ವಿರೋಧಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ಬಳಿಕ ಮಾತನಾಡಿದ ಅವರು, ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಗೆ ತಂದಿದೆ. ಇದು ರೈತರ …

Read More »

ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು.

ಬೆಂಗಳೂರು, ಸೆ.21- ಕೋವಿಡ್ -19 ಆತಂಕದ ನಡುವೆಯೇ ಇಂದಿನಿಂದ ಆರಂಭವಾದ ಮಳೆಗಾಲದ ಅಧಿವೇಶನಕ್ಕೆ ಮೊದಲ ದಿನವೇ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳು ಭಾಗವಹಿಸಿದ್ದು, ಕಲಾಪ ಕಾಟಾಚಾರಕ್ಕೆ ಸೀಮಿತವಾಗಿತ್ತು. ಭಾರೀ ನಿರೀಕ್ಷೆ ಹಾಗೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರೂ ಕೊರೊನಾ ಮಹಾಮಾರಿಯ ಆತಂಕ ಎಲ್ಲರಲ್ಲೂ ಮನೆ ಮಾಡಿತ್ತು. ಹೀಗಾಗಿ ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಕೇವಲ ಕೆಲವೇ ಕೆಲವು ಮಂದಿ ಸಚಿವರು ಹಾಗೂ ಶಾಸಕರು ಮಾತ್ರ ಭಾಗವಹಿಸಿದ್ದರು. 225 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಮುಖ ಮೂರು …

Read More »

ಸುಶಾಂತ್ ಪ್ರಕರಣ : ಸದ್ಯದಲ್ಲೇ ಸಾರಾ, ಶ್ರದ್ಧಾ, ರಾಕುಲ್‍ಗೆ ಎನ್‍ಸಿಬಿ ನೋಟಿಸ್

ನವದೆಹಲಿ, ಸೆ.21- ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್‍ಸಾವು ಪ್ರಕರಣ ಮತ್ತು ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಸಿಬಿ) ಶೀಘ್ರದಲ್ಲೇ ಬಿ-ಟೌನ್‍ನ ಕೆಲವು ತಾರೆಯರಿಗೆ ನೋಟಿಸ್ ಜಾರಿಗೊಳಿಸಲಿದೆ. ಬಾಲಿವುಡ್ ನಟಿಯರಾದ ಸಾರಾ ಅಲಿ ಖಾನ್, ಶ್ರದ್ಧಾಕಪೂರ್, ರಾಕುಲ್ ಪ್ರೀತ್, ಫ್ಯಾಚನ್‍ಡಿಸೈನರ್ ಕಂಬಾಟಾ ಮತ್ತುಡ್ರಗ್ಸ್ ಸೇವನೆ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವವರಿಗೆ ಶೀಘ್ರ ನೋಟಿಸ್ ಎನ್‍ಸಿಬಿ ಶೀಘ್ರ ನೋಟಿಸ್ ಜಾರಿಗೊಳಿಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ …

Read More »

ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಸೂದ್

ಮುಂಬೈ, ಸೆ. 21- ಕೊರೊನಾದಿಂದ ಬಳಲುತ್ತಿರುವ ಸಂತ್ರಸ್ತರಿಗೆ ನೆರವು ನೀಡುತ್ತಾ ಬಂದಿರುವ ಬಾಲಿವುಡ್ ನಟ ಸೋನು ಸೂದ್ ಈಗ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಮುಂದಾಗಿದ್ದಾರೆ. ತಮ್ಮ ತಾಯಿಯ ಹೆಸರಿನಲ್ಲಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಸೋನು ಮುಂದಾಗಿದ್ದು, ಈ ನಡುವೆ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ್ದಾರೆ. ಅರ್ಜುನ್ ಚೌಹಣ್ ಎಂಬುವವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಸೋನುಸೂದ್‍ಗೆ …

Read More »

ಏರುತ್ತಿರುವ ಐಪಿಎಲ್ ಕಾವು : ಇಂದು RCBಗೆ SRH ಸವಾಲು

ದುಬೈ,ಸೆ.21- ಐಪಿಎಲ್ ಕಾವು ರಂಗೇರಿದ್ದು ಡೆಲ್ಲಿ ಹಾಗೂ ಪಂಜಾಬ್ ವಿರುದ್ಧ ನಡೆದ ಪಂದ್ಯ ಸೂಪರ್ ಓವರ್‍ನಲ್ಲಿ ಮುಗಿದ ನಂತರ ಹೊಡಿ ಬಡಿ ಆಟಕ್ಕೆ ಮತ್ತಷ್ಟು ರಂಗು ಬಂದಿದೆ ಇಂದು 2016ರ ಚಾಂಪಿಯನ್ ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ರನ್ನರ್‍ಅಪ್ ಆಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ವಿರುದ್ಧ ಹಣಾಹಣಿ ನಡೆಯುತ್ತಿದ್ದು ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸಿದೆ. 2019ರಲ್ಲಿ ಆರ್‍ಸಿಬಿ ಪ್ಲೇಆಫ್‍ಗೇರಲು ಪ್ರಮುಖ ಪಂದ್ಯದಲ್ಲೇ ಕೇನ್‍ವಿಲಿಯಮ್ಸ್ ನಾಯಕತ್ವದ ಎಸ್‍ಆರ್‍ಎಚ್ ವಿರುದ್ಧ ಹೀನಾಯವಾಗಿ ಸೋತು …

Read More »

ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ

ನವದೆಹಲಿ: ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ಪಡೆದಿದ್ದಾರೆ. ಈ ಮೂಲಕ ನೌಕಾದಳದಲ್ಲಿಯೂ ಮಹಿಳೆಯರು ತಮ್ಮದೇ ಛಾಪು ಮೂಡಿಸಲು ಆರಂಭಿಸಿದ್ದಾರೆ. ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಅವರು ಹೆಲಿಕಾಪ್ಟರ್ ವಿಭಾಗದಲ್ಲಿ ವೀಕ್ಷಕರು ಅಥವಾ ವಾಯುಗಾಮಿ ತಂತ್ರಜ್ಞರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಇಬ್ಬರು ಛಲಗಾರ್ತಿಯರು ಭಾರತೀಯ ನೌಕಾಪಡೆಯ ಯುದ್ಧ ಹೆಲಿಕಾಪ್ಟರ್‍ಗಳನ್ನು ಆನ್‍ಬೋರ್ಡ್ ಯುದ್ಧನೌಕೆಗಳ ಮೂಲಕ ನಿರ್ವಹಿಸಲಿದ್ದಾರೆ. …

Read More »

ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ

ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ …

Read More »

ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್:ಇಂದ್ರಜಿತ್

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ ನಿರ್ದೇಶಕರ ಮಗನನ್ನ ಯಾಕೆ ಇನ್ನೂ ಕರೆಸಿಲ್ಲ? ಬೇರೇ ಇಲ್ಲದೆ ಇರುವವರನ್ನು ಕರೆದುಕೊಂಡು ಬಂದು ಸುಮ್ಮನೆ ವಿಚಾರಣೆ ಮಾಡುತ್ತಿದ್ದಾರೆ. ಹೀಗಾಗಿ ಇದು ಯಾವುದೇ ರಾಜಕೀಯ ಪ್ರಭಾವ ಇಲ್ಲದೆ ನಡೆಸುತ್ತಿರುವ ವಿಚಾರಣೆ ಎಂದು ನಮಗೆ ಅನ್ನಿಸುತ್ತಿಲ್ಲ ಎಂದು ನಟ, ನಿರ್ದೇಶಕ ಇಂದ್ರಜಿತ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್, ನನಗೆ ಗೊತ್ತಿರುವ ವಿಚಾರವನ್ನು …

Read More »

ಡ್ರಗ್ಸ್ ದಂಧೆಯಲ್ಲಿ ರಾಗಿಣಿ ಆ್ಯಕ್ಟಿವ್ ಮೆಂಬರ್ – ಸೆ.24ರವರೆಗೂ ರಾಗಿಣಿ, ಸಂಜನಾಗೆ ಜೈಲು ಫಿಕ್ಸ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು, …

Read More »