Breaking News

Laxminews 24x7

ಚಾರ್ಮಾಡಿಯಲ್ಲಿ ರಸ್ತೆ ಮೇಲೆ ಬೀಳುತ್ತಿವೆ ಬಂಡೆಗಳು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಂತೂ ಕಳೆದ 2 ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಬೃಹತ್ ಬಂಡೆಗಳು ಉರುಳಿ ಬೀಳುತ್ತಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಬಂದ್ ಆಗಿದೆ. ಈಗ ಮೂಡಿಗೆರೆ ತಾಲೂಕಿನ ಕುದ್ರೆಗುಂಡಿ ಬಳಿ ರಸ್ತೆಗೆ ಮರ ಬಿದ್ದ ಪರಿಣಾಮ ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ. ರಾತ್ರಿ ಮೂರು ಗಂಟೆಯಿಂದ ವಾಹನಗಳು ನಿಂತಲ್ಲೇ ಇದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ …

Read More »

ಆ ಪ್ರಧಾನ ಮಂತ್ರಿಯನ್ನು ಶ್ರೀರಾಮನೆ ಕಾಪಾಡಲಿ: ರಮೇಶ್ ಕುಮಾರ್

ಕೋಲಾರ: ದೇಶದಲ್ಲಿ ಕೊರೊನಾ ತಾಂಡವವಾಡುತ್ತಿದ್ದರೆ, ಪ್ರಧಾನ ಮಂತ್ರಿಗಳು ಅಯೋಧ್ಯೆಯಲ್ಲಿ ಪೂಜೆ ಮಾಡುತ್ತಿದ್ದಾರೆಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಟೀಕಿಸಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಕೋವಿಡ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳು ಈ ದೇಶವನ್ನು ಲಾಕ್‍ಡೌನ್ ಮಾಡಿದಾಗ ನಮ್ಮಲ್ಲಿ ಪ್ರಕರಣ 524 ಇತ್ತು. 21 ದಿನದಲ್ಲಿ ಎಲ್ಲವೂ ನಿರ್ನಾಮ ಆಗುತ್ತೆ ಎಂದರು. ಆದರೆ ಈಗ ಕೊರೊನಾ ಸೋಂಕು 14 ಲಕ್ಷಕ್ಕೆ ಬಂದಿದೆ ಎಂದು ವ್ಯಂಗವಾಡಿದರು. …

Read More »

ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿದ ಪವರ್ ಮ್ಯಾನ್

ಹಾಸನ: ಎದೆ ಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ಸಂಪರ್ಕವನ್ನು ಪವರ್ ಮ್ಯಾನ್ ಸರಿಪಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಗ್ರಾಮಸ್ಥರಿಗೆ ಸಹಾಯವಾಗಲಿ ಎಂದು ಪವರ್ ಮ್ಯಾನ್ ಅಮಿತ್ ಎದೆಮಟ್ಟದವರೆಗೆ ನಿಂತಿದ್ದ ನೀರಿನಲ್ಲೇ ಸುಮಾರು 500 ಮೀಟರ್ ತೆರಳಿ ವಿದ್ಯುತ್ ಸಂಪರ್ಕ ಸರಿಪಡಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ ಕಳೆದ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದ್ದು, ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ …

Read More »

ತನ್ನ ಮಗಳು ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ

ಬೆಳಗಾವಿ: ತನ್ನ ಮಗಳು ಎಸ್‍ಎಸ್‍ಎಲ್‍ಸಿ ಆನ್‍ಲೈನ್ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ ನಡೆದಿದೆ. ಮಹಾನಗರದ ಕ್ಲಬ್ ರಸ್ತೆಯಲ್ಲಿರುವ ತಗಡಿನ ಶೆಡ್‍ನಲ್ಲಿ ವಾಸವಿರುವ ದೇವದಾಸಿ ಜೋಗಮ್ಮ ಸರೋಜಿನಿ ಬೇವಿನಕಟ್ಟಿ ಮಕ್ಕಳಿಗಾಗಿ ಕಿವಿಯೊಲೆ ಮಾರಿ ಮೊಬೈಲ್ ತಂದುಕೊಟ್ಟಿದ್ದಾರೆ.ಜೋಗ ಬೇಡಿ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದ ಈ ಜೋಗಮ್ಮನ ಕುಟುಂಬಕ್ಕೆ ಕೊರೊನಾ ಬರಸಿಡಿಲು ಬಡಿದಂತಾಗಿದೆ. ಕಳೆದ ಐದು ತಿಂಗಳಿಂದ ತಾಯಿ ಸರೋಜಾಗೆ ಕೆಲಸ ಕೂಡ ಇಲ್ಲ ಇತ್ತ ಇದ್ದೊಬ್ಬ ಮಗ ಅಪಘಾತದಲ್ಲಿ …

Read More »

ಮಂಗಳವಾರದಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಕಳೆದ ವರ್ಷದ ಪ್ರವಾಹದ ಭೀತಿ ಮತ್ತೆ

ಬೆಳಗಾವಿ: ಮಹಾನಗರ ಸಹಿತ ಜಿಲ್ಲೆಯ ಅನೇಕ ಕಡೆಗಳಲ್ಲಿ ನಿನ್ನೆ ಮಂಗಳವಾರದಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಕಳೆದ ವರ್ಷದ ಪ್ರವಾಹದ ಭೀತಿ ಮತ್ತೆ ಉಂಟಾಗಿದೆ. ಖಾನಾಪುರ, ಬೈಲಹೊಂಗಲ ಮುಂತಾದ ಪ್ರದೇಶಗಳಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿರು ವದರಿಂದ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಆಣೆಗೆ ಒಳಹರಿವಿನ ಪ್ರಮಾಣ ಬುಧವಾರ ಸಂಜೆಗೆ 30 ಸಾವಿರ ಕ್ಯೂಸೆಕ್ಸ ತಲುಪಿದೆ. ಆಣೆಕಟ್ಟಿನ ಒಟ್ಟು ಎತ್ತರ 2079.5 ಅಡಿ.ಸದ್ಯ 2023 ಅಡಿಗಳವರೆಗೆ ನೀರು ನಿಂತಿದೆ.ಆಣೆಯ ಒಟ್ಟು ಸಾಮರ್ಥ್ಯ …

Read More »

ಬೆಳಗಾವಿ: ಬುಧವಾರ ಒಂದೇ ದಿನಕ್ಕೆ 293 ಹೊಸ ಕೇಸ್ ಪತ್ತೆ

ಬೆಳಗಾವಿ: ಜಿಲ್ಲೆಯಲ್ಲಿಂದು ಮಾರಕ ಕೊರೊನಾ ರಣಕೇಕೆ ಮುಂದುವರೆದಿದ್ದು,ಬುಧವಾರ ಒಂದೇ ದಿನಕ್ಕೆ 293 ಹೊಸ ಕೇಸ್ ಪತ್ತೆಯಾಗಿವೆ. ನಾಲ್ಕು ಜನರು ಬಲಿಯಾಗಿದ್ದಾರೆ. ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‍ನಲ್ಲಿ ಮಾಹಿತಿ ನೀಡಿದ್ದು, 293 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4221ಕ್ಕೆ ಏರಿಕೆಯಾಗಿದೆ. ಇನ್ನೂ ಜಿಲ್ಲೆಯಲ್ಲಿ ನಾಲ್ಕು ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 90ಕ್ಕೆ ಹೆಚ್ಚಳವಾಗಿದೆ. ಇಲ್ಲಿಯವರೆಗೂ 1162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2969 …

Read More »

ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಕೆಲವೆಡೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮತ್ತೆ ಮಣ್ಣು ಕುಸಿತದ ಪ್ರಕರಣಗಳು ವರದಿಯಾಗುತ್ತಿವೆ. ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿ ಸೇತುವೆ ಕುಸಿಯುವ ಹಂತ ತಲುಪಿದ್ದು, ಸ್ಥಳೀಯರಲ್ಲಿ ಆತಂಕ …

Read More »

ಕೆಎಸ್ಆರ್‌ಟಿಸಿಯ ಮಿಡಿ ಬಸ್ಸುಗಳು ಈಗ ಅಂಬುಲೆನ್ಸ್………..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಮಾಣ ಹೆಚ್ಚುತ್ತಿರುವ ಕಾರಣ ಕೆಎಸ್‍ಆರ್‍ಟಿಸಿಯ ಮಿಡಿ ಬಸ್ಸುಗಳನ್ನು ಅಂಬುಲೆನ್ಸ್ ಗಳನ್ನಾಗಿ ಬಳಸಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.ಇದರ ಬಗ್ಗೆ ಮಾಹಿತಿ ನೀಡಿ ಸುತ್ತೋಲೆ ಹೊರಡಿಸಿರುವ ಕೆ.ಎಸ್.ಆರ್.ಟಿ.ಸಿ. ಈ ಅಂಬುಲೆನ್ಸ್ ಗಳಲ್ಲಿ ತುರ್ತುಸ್ಥಳದಿಂದ ರೋಗಿಯನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ವರ್ಗಾಹಿಸಲು ಮತ್ತು ಆಸ್ವತ್ರೆಯನ್ನು ತಲುಪಿದ ನಂತರ ತುರ್ತುಕೋಣಿಗೆ ರೋಗಿಯನ್ನು ತ್ವರಿತವಾಗಿ ಮತ್ತು ಆರಾಮದಾಯಕವಾಗಿ ತೆಗೆದುಕೊಂಡು ಹೋಗಲು ಅನುಕೂಲವಾಗುವಂತೆ 2 ಸ್ಟ್ರೆಚರ್ ಗಳನ್ನು ನಿರ್ಮಾಣ ಮಾಡಲಾಗಿದೆ. ಬ್ಯಾಂಡೇಜ್, ಕ್ರಿಮಿನಾಶಕ, …

Read More »

ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದೆ.

ಬೆಳಗಾವಿ: ನಿರಂತರ ಸುರಿದ ಮಳೆಗೆ ಮನೆಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡ ಘಟನೆ  ನಗರದಲ್ಲಿ ಬಸವನಗಲ್ಲಿಯಲ್ಲಿ ನಡೆದಿದೆ.  ಮಹಾವೀರ ಕೊಟಾರಿ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಜಿಲ್ಲೆಯಾದ್ಯಂತ ಮಳೆಯಿಂದ  ಪ್ರವಾಹದ ಭೀತಿ ಉಂಟಾಗಿದೆ. ನಗರದ ರಸ್ತೆ ಜಲಾವೃತವಾಗಿದ್ದು, ನೀರುತುಂಬಿದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಹಾಗೂ ಖಾನಾಪೂರದ ಕೆಲ ಬಡಾವಣೆಗಳಿಗೂ ನೀರು ನುಗ್ಗಿದ್ದು ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, …

Read More »

ಶಾಸಕಿ ಅಂಜಲಿ ನಿಂಬಾಳಕರ ಮಲಪ್ರಭಾ ನದಿ ಸೇತುವೆಗೆ ಭೇಟಿ

ಕಕ್ಕೇರಿ: ಖಾನಾಪುರ ತಾಲ್ಲೂಕಿನಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಂಜಲಿ ನಿಂಬಾಳಕರ ಅವರು ಮಲಪ್ರಭಾ ನದಿ ಸೇತುವೆಗೆ ಭೇಟಿ ನೀಡಿ ಪ್ರವಾಹದ ಪರಿಸ್ಥಿತಿಯನ್ನು ಅವಲೋಕಿಸಿದರು. ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ, ನದಿ ತುಂಬಿ ಹರಿಯುತ್ತಿವೆ. ಜತೆಗೆ ರೈತರ ಭತ್ತದ ಜಮೀನಿಗೂ,  ನದಿ ದಡದ ಜನರ ವಾಸಸ್ಥಳಿಗೂ ನೀರು  ನುಗ್ಗುತ್ತಿವೆ. ಇದರಿಂದ ಶಾಸಕ ಕೆಲವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿಗೆ ಅಡ್ಡಲಾಗಿ ನಿರ್ಮಿತ  ಬಹುಗ್ರಾಮಗಳ ರಸ್ತೆಗಳು ಸಂಪರ್ಕ ಕಡಿದುಕೊಂಡಿದ್ದು,  …

Read More »