Breaking News

Laxminews 24x7

ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು: ಬಿ.ಕೆ.ಹರಿಪ್ರಸಾದ್

ಕಾರವಾರ: ಕೊರೊನಾ ವಿಚಾರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ. ಬಿಜೆಪಿಯವರು ಹೆಣದ ಮೇಲೆ ಹಣ ಮಾಡುವವರು. ಶವದ ಮೇಲೆ ಕುಳಿತು ಊಟ ಮಾಡುವವರು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಕಿಡಿಕಾರಿದ್ದಾರೆ. ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗರಿಗೆ ಯಾವುದೇ ನಾಚಿಕೆ, ಮಾನಮರ್ಯಾದೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜ್ಯ ಸರ್ಕಾರ ಇಂಥ ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲೂ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಇದು …

Read More »

ತಾಯಿಯ ಮಾಂಗಲ್ಯವನ್ನು ಬಿಡಿಸಿಕೊಡುವ ಜವಾಬ್ದಾರಿ ನನ್ನದು: ಸಿಸಿ ಪಾಟೀಲ್

ಗದಗ: ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರ ನಾಗನೂರ ಗ್ರಾಮದ ತಾಯಿ ಕಸ್ತೂರಿ ಅವರು ಅಡವಿಟ್ಟಿರುವ ಮಾಂಗಲ್ಯವನ್ನು ವಾಪಸ್ ಕೊಡಿದುವುದಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಹೇಳಿದ್ದಾರೆ. ಕಸ್ತೂರಿ ಅವರು ಮಾಂಗಲ್ಯವನ್ನು ಅಡವಿಟ್ಟು ಟಿವಿ ಖರೀದಿ ಮಾಡಿ ಮಕ್ಕಳ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸುದ್ದಿಯನ್ನುಮಾಡಿತ್ತು. ಈ ವರದಿಯನ್ನು ಗಮನಿಸಿಮಾತನಾಡಿದ ಸಚಿವ ಸಿಸಿ ಪಾಟೀಲ್, ಘಟನೆ ಬಗ್ಗೆ ನಾನು ಮಾಹಿತಿ ಪಡೆದು ಮಹಿಳೆಯೊಂದಿಗೆ ಮಾತನಾಡಿದ್ದೇನೆ. ಅಲ್ಲದೇ …

Read More »

ಚಿಕಿತ್ಸೆ ಸಿಗದೆ ಆರು ದಿನದ ಬಾಣಂತಿ ಕೊರೊನಾಗೆ ಬಲಿ

ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಸಿಗದೆ 6 ದಿನದ ಬಾಣಂತಿ ಕೊರೊನಾಗೆ ಬಲಿಯಾಗಿರುವ ಅಮಾನವೀಯ ಘಟನೆ ರಾಜಾಜಿನಗರದಲ್ಲಿ ನಡೆದಿದೆ. ರಾಜಾಜಿನಗರ ಖಾಸಗಿ ಆಸ್ಪತ್ರೆಯಲ್ಲಿ 6 ದಿನಗಳ ಹಿಂದೆ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದರು. ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಆದರೆ ಮನೆಗೆ ತೆರಳಿದ ಸಂದರ್ಭದಲ್ಲಿ ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಬಾಣಂತಿಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು. ಈ ಸಂದರ್ಭದಲ್ಲಿ ಅವರಿಗೆ ಆ್ಯಂಟಿಜೆನ್‌ ಟೆಸ್ಟ್ ಮಾಡಿದ ವೇಳೆ …

Read More »

ಪಕ್ಕದಲ್ಲಿ ಫೆರಾರಿ ಹೋದ್ರು ತಲೆಕೆಡಿಸಿಕೊಳ್ಳಲ್ಲ:ಪುನೀತ್ ರಾಜ್‍ಕುಮಾರ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳಿಗೆ ‘ಯುವರತ್ನ’ ಸಿನಿಮಾ ತಂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ಈ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ಟ್ವೀಟ್ ಮಾಡಿದ್ದ ಯುವರತ್ನ ಸಿನಿಮಾದ ನಿರ್ದೇಶಕ ಸಂತೋಷ್ ಅನಂದರಾಮ್ ಅವರು, ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿಗೆ ದೊಡ್ಮನೆ ಅಭಿಮಾನಿ ಬಳಗಕ್ಕೆ ಇದು ಸಮರ್ಪಣೆ. ಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್ ಜೊತೆಗೆ ಒಂದು ಡೈಲಾಗ್ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. …

Read More »

ನಾಳೆ ಪ್ರಧಾನಿ ನರೇಂದ್ರ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ ಸಂಜೆ 4.30ಕ್ಕೆ ಮಾತನಾಡಲಿದ್ದಾರೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಈ ಕುರಿತು ಪ್ರಧಾನಿ ಮೋದಿ ಭಾಷಣದಲ್ಲಿ ಮಾತನಾಡಲಿದ್ದಾರೆ ಎಂದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ತಿಳಿಸಿದೆ. ಅಲ್ಲದೇ ಕೊರೊನಾ ಅನ್‍ಲಾಕ್ 3.0 ನಾಳೆಯಿಂದ ಜಾರಿ ಆಗಲಿದೆ. ಈ ವೇಳೆಯಲ್ಲೇ ಪ್ರಧಾನಿಗಳು ಭಾಷಣ ಮಾಡುತ್ತಿರುವುದು ಸಾಕಷ್ಟು ಪ್ರಾಮುಖ್ಯತೆ ಪಡೆದುಕೊಂಡಿದೆ.ಮಾತೃಭಾಷೆಯಲ್ಲೇ …

Read More »

ಕೊರೊನಾ ಗೆದ್ದು ಬಂದ ಸಂಚಾರಿ ಪೊಲೀಸ್ ಠಾಣೆ ಸೇನಾನಿಗಳಿಗೆ ಸ್ವಾಗತ ಸನ್ಮಾನ

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಶತಾಯ ಗತಾಯ ಹೋರಾಟ ಮಾಡುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಬೆನ್ನುಬಿಡದೇ ಕಾಡುತಿದೆ. ಕೊರೊನಾ ವೈರಸ್ ವಿರುದ್ಧ ಹೋರಾಡಿ ಜಯಗಳಿಸಿದ ಜಿಲ್ಲೆಯ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಪಿ.ಬಿ.ಕಾಟೆ, ಎನ್.ಸಿ.ಪೂಜಾರ, ಗದಿಗೆಪ್ಪ ಕಿತ್ತೂರ ಅವರು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಇಂದು ವೃತ್ತಿಗೆ ಆಗಮಿಸಿದ್ದು, ಎಲ್ಲರಲ್ಲಿಯೂ ಸಂತೋಷದ ವಾತಾವರಣ ನಿರ್ಮಾಣವಾಯಿತು …

Read More »

ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ ಫಿನಾಲೆಗೆ ಆಯ್ಕೆ

ಚಿಕ್ಕೋಡಿ: ನಿಪ್ಪಾಣಿ ವಿ.ಎಸ್‌.ಎಂ. ಸೋಮಶೇಖರ್‌ ಆರ್‌. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಿದ್ಧಪಡಿಸಿದ ಎರಡು ಯೋಜನೆಗಳು ಸ್ಮಾರ್ಟ್‌ ಇಂಡಿಯಾ ಹ್ಯಾಕ್‌ಥಾನ್‌ 2020ರ ಗ್ರ್ಯಾಂಡ್ ‌ಫಿನಾಲೆಗೆ ಆಯ್ಕೆಯಾಗಿವೆ. ಭಾರತ ಸರಕಾರ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ಹೊಸ ದೆಹಲಿಯ ಎಐಸಿಟಿಇ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಸಸ ಸ ಸ ಸಸಾಫ್ಟ್‌ವೇರ್‌ನ ವಿಶ್ವದ ಅತಿ ದೊಡ್ಡ ಮುಕ್ತ ನಾವಿನ್ಯತೆ ಮಾದರಿ ಸ್ಪರ್ಧೆಯಲ್ಲಿ ವಿಎಸ್‌ಎಂಎಸರ್‌ ಆರ್‌ಕೆಐಟಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದ್ದಾರೆ. ಪ್ರೊ| ಮಹಾದೇವ ಹರಕುಡೆ ಮಾರ್ಗದರ್ಶನದಲ್ಲಿ ಮೆಕ್ಯಾನಿಕಲ್‌ ವಿಭಾಗದ ವಿದ್ಯಾರ್ಥಿಗಳಾದ …

Read More »

ಬೆಳಗಾವಿ: ಕೊರೋನಾ ಸೋಂಕಿತರ ಅಂತ್ಯಕ್ರಿಯೆ ವೇಳೆ ಕಣ್ಣೀರು ಹಾಕಿದ ಪಾಲಿಕೆ ಅಧಿಕಾರಿ!

ಬೆಳಗಾವಿ: ಕೊರೋನಾ ಸೋಂಕಿನಿಂದ ಮೃತಪಟ್ಟ ಇಬ್ಬರು ವ್ಯಕ್ತಿಗಳ ಮೃತದೇಹದ ಅಂತ್ಯಕ್ರಿಯೆ ಪ್ರಕ್ರಿಯೆ ವೇಳೆ ಬೆಳಗಾವಿ ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ. ಬಸವರಾಜ ದಬಾಡೆ ಕಣ್ಣೀರು ಹಾಕಿದ ಪ್ರಸಂಗ ಇಲ್ಲಿನ ಸದಾಶಿವ ನಗರದ ಸ್ಮಶಾನಭೂಮಿಯಲ್ಲಿ ಗುರುವಾರ ನಡೆದಿದೆ. ಯಾವ ಜನ್ಮದ ಋುಣವೂ ಇಲ್ಲದ ಮೃತರ ಅಂತ್ಯಕ್ರಿಯೆಯನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದು, ಎಲ್ಲರ ಮನಕಲಕುವಂತಿದೆ. ಮೃತರ ಕುಟುಂಬಸ್ಥರು ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದರು. ಬೆಳಗಾವಿ: ಕೊರೋನಾ ವಾರಿಯರ್ಸ್‌ಗೂ …

Read More »

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾವಾರು ಬಿಡುಗಡೆಯಾದ ಹಣದ ಲೆಕ್ಕ ಕೊಟ್ಟ ಸರ್ಕಾರ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕವನ್ನು ಸರ್ಕಾರ ಇಂದು ಬಹಿರಂಗಪಡಿಸಿದೆ. ನ್ಯಾಯವಾದಿ ಸುರೇಂದ್ರ ಉಗಾರೆ ಕೊರೊನಾ ಸಂದರ್ಭದಲ್ಲಿ ಖರ್ಚಾದ ಹಣದ ಕುರಿತು ಮಾಹಿತಿ ಕೇಳಿದ್ದರು. ಕೊರೊನಾ ಸಾಮಗ್ರಿ ಖರೀದಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆರೋಪ ಮಾಡಿದ್ದವು. ಈ ಹಿನ್ನೆಲೆ ಸರ್ಕಾರ ಇಂದು ಜಿಲ್ಲಾವಾರು ಬಿಡುಗಡೆ ಮಾಡಲಾದ ಹಣದ ಲೆಕ್ಕ ಕೊಟ್ಟಿದೆ. ಇದುವರೆಗೆ ಸರ್ಕಾರದಿಂದ ಕೊರೊನಾ ನಿಯಂತ್ರಣಕ್ಕಾಗಿ ಎಲ್ಲಾ …

Read More »

ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೋವಿಡ್ 19 ದೃಢ

ಕೊಪ್ಪಳ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಶಾಸಕರಿಗೆ ಕೊರೊನಾ ದೃಢಪಟ್ಟ ಮಾಹಿತಿಯನ್ನು ಜಿಲ್ಲಾಧಿಕಾರಿ ಸೂರಳ್ಕರ್ ವಿಕಾಸ್ ಕಿಶೋರ್ ಬಹಿರಂಗಪಡಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಾಸಕ ರಾಘವೇಂದ್ರ ಹಿಟ್ನಾಳ್‍ಗೆ ಕೊರೊನಾ ಸೊಂಕು ತಗಲಿರುವ ಬಗ್ಗೆ ಕ್ಷೇತ್ರದಾದ್ಯಂತ ಹರಿದಾಡಿತ್ತು.ಈಗ ಸ್ವತಃ ಜಿಲ್ಲಾಧಿಕಾರಿಗಳೇ ಶಾಸಕರಿಗೆ ಸೋಂಕು ತಗಲಿರುವುದನ್ನು ದೃಢಪಡಿಸಿದ್ದಾರೆ. ಕೆಲದಿನಗಳ ಹಿಂದೇ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿರವರಿಗೆ ಕೊರೊನಾ ದೃಢಪಟ್ಟಿತ್ತು. ಗಂಗಾವತಿ ಶಾಸಕರ ಪಕ್ಕದಲ್ಲಿಯೇ ಜಿಲ್ಲಾಧಿಕಾರಿಗಳ ಸಭೆಯಲ್ಲಿ …

Read More »