ಬೆಂಗಳೂರು,ಜು25- ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳು ಸಿಗುತ್ತಿಲ್ಲ. ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರು ಹೊರ ವಲಯದ ಮಾದಾವರದ ಬಿಐಇಸಿಯಲ್ಲಿ ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್ಗಳು ಮಾತ್ರ. ಇಲ್ಲಿ 10,100 ಬೆಡ್ಗಳ ಬೃಹತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈವರೆಗೆ ಕೇವಲ 5 ಸಾವಿರ ಬೆಡ್ಗಳನ್ನು ಮಾತ್ರ ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆಗೆ ಲಭ್ಯವಿರುವುದು 1 ಸಾವಿರ ಬೆಡ್ಗಳು ಮಾತ್ರ ಎಂದು ಸ್ವತಃ ಬಿಬಿಎಂಪಿ ಆಯುಕ್ತರೇ …
Read More »ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ…………
ಪ್ರಯಾಗ್ರಾಜ್, -ಉತ್ತರಪ್ರದೇಶದ ಆಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ. ಕೊರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ನಡೆಸಲು ಉದ್ದೇಶಿಸಲಾಗಿರುವ ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಅನ್ಲಾಕ್ 2.0 ಉಲ್ಲಂಘನೆ ಕಾರಣವನ್ನು ಮುಂದೊಡ್ಡಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ದೆಹಲಿ ಮೂಲದ ಹಿರಿಯ ವಕೀಲ ಸಾಕೇಶ್ ಗೋಖಲೆ ಕೋರ್ಟ್ಗೆ ಮನವಿ …
Read More »12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ………….
ಶಿವಮೊಗ್ಗ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಶಿವಮೊಗ್ಗ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಹೊಸನಗರದ ಸಾಗರ ರಸ್ತೆಯ ರಮಾನಂದ್ ಎಂಬವರ ಮನೆಯಲ್ಲಿ ಶುಕ್ರವಾರ ಮಧ್ಯಾಹ್ನ ಹಾವು ಪ್ರತ್ಯಕ್ಷವಾಗಿದ್ದು, ಮನೆಯ ಹೊರಗಡೆ ಇದ್ದ ನಾಯಿ ಹಾವನ್ನು ಕಂಡು ಬೊಗಳಲು ಆರಂಭಿಸಿದೆ. ಅಲ್ಲದೇ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಕ್ಕಳು ಸಹ ಹಾವನ್ನು ಕಂಡು ಹಾವು ಹಾವು ಎಂದು ಕೂಗಿದ್ದಾರೆ. ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ದೂರವಾಣಿ ಮೂಲಕ ವಿಷಯ …
Read More »ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ………
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ. ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. …
Read More »ಗುಣಮುಖರಾದವರಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಸೋಂಕು……….
ಕೋಲಾರ: ಕೊರೊನಾ ಸೋಂಕಿಗೆ ತುತ್ತಾಗಿ ಸದ್ಯ ಗುಣಮುಖವಾಗಿರುವ ಜನರು ದೇವರೇ ಬದುಕಿತು ಬಡಜೀವ ಎಂದು ಕೊಳ್ಳುತ್ತಿದ್ದಾರೆ. ಆದರೆ ಹೋದೆ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಎಂಬಂತೆ ಮತ್ತೆ ಸೋಂಕು ವಕ್ಕರಿಸಲಾರಂಭಿಸಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದುವರೆಗೂ ಸುಮಾರು 284 ಮಂದಿ ಜನರು ಕೊರೊನಾವನ್ನು ಗೆದ್ದು ಬಂದಿದ್ದಾರೆ. ಆದ್ರೆ ಈಗ ಕೊರೊನಾ ಗೆದ್ದು ಬಂದ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ 46 ವರ್ಷದ ಮಹಿಳೆಯಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆಯಾಗಿದೆ. …
Read More »ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್
ಮಂಗಳೂರು: ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ …
Read More »ಬೆಂಗಳೂರಿಗರೇ ಹುಷಾರ್, ಯಾಮಾರಿದ್ರೆ ಕೊರೋನಾ ಹೆಗಲೇರುವುದು ಗ್ಯಾರಂಟಿ..!
ಬೆಂಗಳೂರು, ಜು.24- ಪ್ರತಿ ವಾರ್ಡ್ಗಳಲ್ಲೂ ಕೊರೊನಾ ತನ್ನ ರೌದ್ರನರ್ತನವನ್ನು ಮುಂದುವರಿಸುತ್ತಿದೆ. ಕ್ಷಣ ಕ್ಷಣಕ್ಕೂ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ. ನಮ್ಮ ವಾರ್ಡ್ಗಳಲ್ಲಿ ಹೆಚ್ಚೇನೂ ಕೊರೊನಾ ಕೇಸ್ಗಳಿಲ್ಲ ಎಂದು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನ 198 ವಾರ್ಡ್ಗಳ ಪೈಕಿ 197 ವಾರ್ಡ್ಗಳಲ್ಲಿ ಕೊರೊನಾ ತನ್ನ ಕಬಂಧಬಾಹುವನ್ನು ಚಾಚಿದೆ. 197 ವಾರ್ಡ್ಗಳು ಕೂಡ ಡೇಂಜರ್ ಝೋನ್ನಲ್ಲಿವೆ. ಬೆಂಗಳೂರಿನ 41 ವಾರ್ಡ್ಗಳಲ್ಲಿ 100ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಇವೆ. 33 ವಾರ್ಡ್ಗಳಲ್ಲಿ 80 ರಿಂದ …
Read More »ಬಾಬರಿ ಮಸೀದಿ ಧ್ವಂಸ ಪ್ರಕರಣ : ಅಡ್ವಾಣಿ ಹೇಳಿಕೆ ದಾಖಲು
ಲಖನೌ, ಜು.24- ಅಯೋಧ್ಯೆಯಲ್ಲಿನ ಪ್ರಾಚೀನ ಬಾಬರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ಬಿಜೆಪಿ ಧುರೀಣ ಮತ್ತು ಮಾಜಿ ಉಪ ಪ್ರಧಾನಮಂತ್ರಿ ಲಾಲ್ಕೃಷ್ಣ ಅಡ್ವಾಣಿ ಅವರ ಹೇಳಿಕೆಗಳನ್ನು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ. ಅಡ್ವಾಣಿ ಅವರು ವಿಡಿಯೋ ಲಿಂಕ್ ಮೂಲಕ ನೀಡಿದ ಹೇಳಿಕೆಯನ್ನು ವಿಶೇಷ ನ್ಯಾಯಮೂರ್ತಿ ಎಸ್.ಕೆ.ಯಾದವ್ ಅವರ ನೇತೃತ್ವದ ನ್ಯಾಯಾಲಯವು ದಾಖಲಿಸಿಕೊಂಡಿತ್ತು. ನಿನ್ನೆ ಬಿಜೆಪಿ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಡಾ.ಮುರಳಿ ಮನೋಹರ್ ಜೋಷಿ ವಿಡಿಯೋ …
Read More »ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’
ಬೆಳಗಾವಿ: ‘ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಗರದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಅವಕಾಶ ಕಲ್ಪಿಸಲಾಗುವುದು. ‘ಗಣೇಶೋತ್ಸವ ಮಂಡಳಿಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ …
Read More »ದೇವದುರ್ಗದಲ್ಲಿ ಗುಡ್ಡ ಕುಸಿತ- ಇಬ್ಬರು ಬಾಲಕರು ಸಾವು………
ರಾಯಚೂರು: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದೇವದುರ್ಗ ಪಟ್ಟಣದ ಗೌರಂಪೇಟೆ ಕಾಲೋನಿ ಬಳಿ ಗುಡ್ಡ ಕುಸಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಬಾಲಕನ ಕಾಲು ಮುರಿದಿದೆ. 13 ವರ್ಷದ ವಿರೇಶ್, 10 ವರ್ಷದ ರಮೇಶ್ ಮೃತ ಬಾಲಕರು. ಇನ್ನೋರ್ವ ಬಾಲಕ ಮೌನೇಶ್ಗೆ ಕಾಲು ಮುರಿದಿದ್ದು, ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿರಂತರ ಮಳೆಯಿಂದಾಗಿ ಗುಡ್ಡದ ಮಣ್ಣು ಸಡಿಲವಾಗಿದ್ದು, ಬಂಡೆ ಕೆಳೆಗೆ ಉರುಳಿದೆ. ಗುಡ್ಡದ ಪಕ್ಕದಲ್ಲೇ ಮನೆಗಳಿದ್ದು, ಬಾಲಕರು ಆಟವಾಡುತ್ತಿದ್ದ ವೇಳೆ ಬಂಡೆ …
Read More »
Laxmi News 24×7