ಬೆಳಗಾವಿ ಆರ್ ಸಿ ಯು ಹಾಗೂ ಅಮೆರಿಕ ವಿವಿ ಶೈಕ್ಷಣಿಕ ಒಪ್ಪಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಅಮೆರಿಕದ ಬ್ರಿಡ್ಜ್ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ವಿವಿಧ ಶೈಕ್ಷಣಿಕ ಒಡಂಬಡಿಕೆಗಳ ಒಪ್ಪಂದಕ್ಕೆ ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಸಹಿ ಹಾಕಲಾಯಿತು. ಈ ಕುರಿತು ಮಾತುಕತೆಗಳು ನಡೆದ ನಂತರ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊಫೆಸರ್ ಸಿಎಂ ತ್ಯಾಗರಾಜ್ ಮತ್ತು ಅಮೆರಿಕಾದ ಬ್ರಿಡ್ಜ್ ವಾಟರ್ ಸ್ಟೇಟ ವಿವಿ ಅಧ್ಯಕ್ಷ ಫ್ರೆಡ್ರಿಕ್ ಡಬ್ಲ್ಯೂ.ಕ್ಲಾರ್ಕ್ …
Read More »ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು.
Read More »ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿ ಕೊಡಲು ತೊಂದರೆ ಇದೆಯಾ: ಸಚಿವ ಸಂತೋಷ್ ಲಾಡ್
ಅರಕಲಗೂಡು (ಹಾಸನ) : “ತುಂಬಾ ಪವರ್ಫುಲ್ ಪ್ರಧಾನಿ ಆಗಿರುವ ವಿಶ್ವಗುರುಗೆ ನಮ್ಮ ದೇಶದ ಮತದಾರರ ಪಟ್ಟಿಯನ್ನು ಕೊಡಲು ತೊಂದರೆ ಇದೆಯಾ” ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಸಂತೋಷ್ ಲಾಡ್ ಅವರು ವಾಗ್ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿ ಖಾಸಗಿಯಾಗಿ ನಡೆಯುತ್ತಿರುವ ಸಿದ್ದರಾಮಯ್ಯ ಕ್ರಿಕೆಟ್ ಕಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಅಥವಾ ಚುನಾವಣಾ ಕಮಿಷನ್ನವರಾಗಲಿ ಎಲೆಕ್ಷನ್ ವೋಟಿಂಗ್ ಪ್ಯಾಟರ್ನ್ಅನ್ನು ಕೊಡದಂತೆ ಕಾನೂನನ್ನೇ ತಂದಿದ್ದಾರೆ. ಈ ಹೊಸ …
Read More »ಹಾವೇರಿಯಲ್ಲಿ ಇಬ್ಬರು ರೈತರ ದುರ್ಮರಣ
ಹಾವೇರಿ: ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಎರಡು ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ. ಒಂದೆಡೆ ರೈತ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟರೆ ಇನ್ನೊಂದೆಡೆ ಜೇನು ಹುಳು ಕಡಿದು ರೈತ ಮೃತಪಟ್ಟ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತಪಟ್ಟ ಘಟನೆ ಹಾನಗಲ್ ತಾಲೂಕಿನ ತುಮರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ರೈತ ಮಹಿಳೆಯನ್ನು 45 ವರ್ಷದ ರೇಣುಕಾ ಮರೆಯಪ್ಪನವರ್ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು …
Read More »ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ:ಡಿ ಕೆ ಶಿ
ಮೈಸೂರು : ಸಚಿವ ಕೆ ಎನ್ ರಾಜಣ್ಣ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಸಣ್ಣ ಕಾರ್ಯಕರ್ತ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾರ್ಮಿಕವಾಗಿ ಹೇಳಿದರು. ಸಚಿವ ಕೆ.ಎನ್.ರಾಜಣ್ಣ ಅವರ ದಿಢೀರ್ ದೆಹಲಿ ಪ್ರವಾಸ, ಉದಯಗಿರಿ ಗಲಾಟೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಅವರ ಹೇಳಿಕೆಗೆ ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, ರಾಜಣ್ಣ ದೊಡ್ಡವರು, ನಾನು ಅವರ ಬಗ್ಗೆ ಮಾತನಾಡಲ್ಲ. ಕಾಂಗ್ರೆಸ್ …
Read More »ತಿರುಮಕೂಡಲಿನ ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ ಪವಿತ್ರ ಸ್ನಾನ
ಮೈಸೂರು: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ದಿಯಾದ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದು ಮಾಘ ಪೂರ್ಣಿಮೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಪವಿತ್ರ ಸ್ನಾನ ಮಾಡಿದರು. ಫೆಬ್ರವರಿ 10ರಿಂದ ತಿರುಮಕೂಡಲಿನಲ್ಲಿ ಮೂರು ದಿನಗಳ ಕಾಲ ನಡೆಯುತ್ತಿರುವ ಕುಂಭಮೇಳದಲ್ಲಿ ಇಂದು ಕೊನೆಯ ದಿನ. ಸಂಗಮದಲ್ಲಿ ಈ ಸಲ 6 ವರ್ಷಗಳ ಬಳಿಕ ಕುಂಭಮೇಳ ನಡೆಯುತ್ತಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ನದಿಗಳು ಸಂಗಮವಾಗುವ ಸ್ಥಳದಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆಯುತ್ತವೆ ಎಂಬುದು ಜನರ ನಂಬಿಕೆ. …
Read More »ಬೆಳಗಾವಿಯಲ್ಲಿ ಮರಾಠಾ ಸಾಮ್ರಾಜ್ಯದ ನೈಜ ಆಯುಧಗಳ ಅನಾವರಣ
ಬೆಳಗಾವಿ : ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರಿಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಶೇಷ ಗೌರವವಿದೆ. ಅವರ ಪರಾಕ್ರಮ, ಸಾಹಸವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಒಂದಿಲ್ಲೊಂದು ಕಾರ್ಯಕ್ರಮಗಳು ಇಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಹಳೆಯ ಕಾಲದ ಶಸ್ತ್ರಾಸ್ತ್ರಗಳ ಪ್ರದರ್ಶನವು ಶಿವಾಜಿ ಚರಿತ್ರೆ ಕಟ್ಟಿಕೊಡುತ್ತಿದೆ. ಹೇಗಿದೆ ಪ್ರದರ್ಶನ..? ಯಾವೆಲ್ಲಾ ಶಸ್ತ್ರಗಳಿವೆ..? ಎಂಬುದರ ಕುರಿತು ಈಟಿವಿ ಭಾರತದ ವಿಶೇಷ ವರದಿ ಇಲ್ಲಿದೆ. ಛತ್ರಪತಿ ಶಿವಾಜಿ ಕಾಲದ ಕತ್ತಿ-ಗುರಾಣಿಗಳು, ಸೇನಾ ಹಡಗುಗಳ ಮಾದರಿಗಳು, ಅಂಚೆ …
Read More »ಚಿತ್ರದುರ್ಗ: ನಿಧಿಯಾಸೆಗೆ ಜ್ಯೋತಿಷಿಯ ಮಾತು ಕೇಳಿ ನರಬಲಿ, ಇಬ್ಬರು ಅರೆಸ್ಟ್
ಚಿತ್ರದುರ್ಗ: ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂಬ ಕಪಟ ಜ್ಯೋತಿಷಿಯ ಮಾತು ಕೇಳಿ ವ್ಯಕ್ತಿಯೊಬ್ಬ, ಚಪ್ಪಲಿ ಹೊಲಿಯುತ್ತಾ ಜೀವನ ನಡೆಸುತ್ತಿದ್ದವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಭಾನುವಾರ ನಡೆದಿದೆ. ಜೆ.ಜೆ.ಕಾಲೊನಿ ನಿವಾಸಿ ಪ್ರಭಾಕರ್ ಹತ್ಯೆಯಾದ ವ್ಯಕ್ತಿ. ಪೊಲೀಸರು ನರಬಲಿ ಕೊಟ್ಟ ಆರೋಪಿ ಆಂಧ್ರ ಪ್ರದೇಶದ ಆನಂದ್ ರೆಡ್ಡಿ ಹಾಗೂ ಜ್ಯೋತಿಷಿ ರಾಮಕೃಷ್ಣ ಎಂಬಿಬ್ಬರನ್ನು ಬಂಧಿಸಿದ್ದಾರೆ. ನಿಧಿಯಾಸೆಗೆ ಚಪ್ಪಲಿ ಹೊಲಿಯುವ ಬಡಪಾಯಿಯ ಕೊಲೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ …
Read More »ಸೀಟ್ ಎಡ್ಜ್’ ಸಿನಿಮಾದ ಮೊದಲ ಹಾಡು ರಿಲೀಸ್…ರವೀಕ್ಷಾ ಶೆಟ್ಟಿ ಜೊತೆ ಸಿದ್ದು ಮೂಲಿಮನಿ ರೋಮ್ಯಾನ್ಸ್
ಸಾರಿ ಹೇಳುವೇ ಜಗಕ್ಕೆ ಎಂದ ಸಿದ್ದು ಮೂಲಿಮನಿ…ಸೀಟ್ ಎಡ್ಜ್ ಸಿನಿಮಾದ ಮೊದಲ ಹಾಡು ರಿಲೀಸ್ ಸೀಟ್ ಎಡ್ಜ್ ಹೀಗೊಂದು ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಕಿರುತೆರೆ ಜೊತೆಗೆ ಒಂದಷ್ಟು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಹಾಗೂ ಯುವ ನಟಿ ರವೀಕ್ಷ ಶೆಟ್ಟಿ ಜೋಡಿಯಾಗಿ ಅಭಿನಯಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಸಿದ್ದು ಕೊಡಿಪುರ ಸಾಹಿತ್ಯದ ರೋಮ್ಯಾಂಟಿಕ್ ಗೀತೆಗೆ ಅರ್ಮನ್ ಮಲ್ಲಿಕ್ ಧ್ವನಿ ಕುಣಿಸಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. …
Read More »ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್
ಬೆಂಗಳೂರಿನ ಕೈಯಲ್ಲಿ ಭಾರತದ ಭವಿಷ್ಯ, ಬಂಡವಾಳ ಹೂಡಿಕೆಗೆ ಕರ್ನಾಟಕ ಪ್ರಮುಖ ರಾಜ್ಯ: ರಾಜನಾಥ್ ಸಿಂಗ್ ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಅತ್ಯುತ್ತಮ ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ರಾಜ್ಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಜಾಗತಿಕ ಹೂಡಿಕೆದಾರರ ಸಮಾವೇಶ’ ಇನ್ವೆಸ್ಟ್ ಕರ್ನಾಟಕ-2025ಕ್ಕೆ ಇಂದು ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ …
Read More »