Breaking News

Laxminews 24x7

ಕೊರೊನಾ ಗೆದ್ದು ಬಂದವರಿಂದ್ಲೇ ಜಾಗೃತಿ- ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಹುಬ್ಬಳ್ಳಿ: ಕೊರೊನಾ ಭಯವನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತವು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ವಿನೂತನ ಪ್ರಯತ್ನವನ್ನು ಕೈಗೆತ್ತಿಕೊಂಡಿದೆ. ಈ ಮೂಲಕ ಜನರಲ್ಲಿರುವ ಆತಂಕ ದೂರ ಮಾಡುವ ಮಾರ್ಗವಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದವರ ವಿಶೇಷ ತಂಡಗಳನ್ನು ರಚಿಸಿ, ಎನ್‍ಜಿಒ ಸಹಭಾಗಿತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಆತ್ಮಸ್ಥೈರ್ಯ ಮೂಡಿಸುವ ಯೋಜನೆಯೊಂದನ್ನು ಜಿಲ್ಲಾಡಳಿತ ರೂಪಿಸಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಗೆ ಬಂದವರೇ ಇದಕ್ಕೆ …

Read More »

ಬೆಳಗಾವಿ: ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ.

ಬೆಳಗಾವಿ:  ನಗರಕ್ಕೆ ಮತ್ತೊಂದು ಉಪ ನೋಂದಣಿ ಕಚೇರಿ ಮಂಜೂರಾಗಿದೆ.  ದಕ್ಷಿಣ ಮತಕ್ಷೇತ್ರ ಶಾಸಕ ಅಭಯ ಪಾಟೀಲ್ ಅವರು ಮತ್ತೊಂದು  ಉಪ ನೋಂದಣಿ ಆರಂಭಿಸುವಂತೆ ಸಿಎಂ, ಕಂದಾಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಸರ್ಕಾರ  ನೂತನ ಉಪ ನೋಂದಣಿ ಕಚೇರಿ ಪ್ರಾರಂಭಿಸಲು ಅನುಮತಿ ನೀಡಿದೆ.  ಶೀಘ್ರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಕಚೇರಿ ಆರಂಭಿಸಲಾಗುವುದು ಎಂದು ಶಾಸಕ  ಅಭಯ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.  ಜಿಲ್ಲೆಯಲ್ಲಿ ಬೆಳಗಾವಿ ತಾಲೂಕು ದೊಡ್ಡದಾಗಿದೆ. ಪ್ರಸ್ತುತ ಡಿಸಿ ಕಚೇರಿ …

Read More »

ಬೆಳಗಾವಿ:  ಜಿಲ್ಲೆಯ ಪೊಲೀಸ್ ಪೇದೆಗಳಿಗೂ ಕೋವಿಡ್ ಕಾಟ ಆರಂಭ……….

ಬೆಳಗಾವಿ:  ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಪೊಲೀಸ್ ಪೇದೆಗಳಿಗೂ ಕೋವಿಡ್ ಕಾಟ ಆರಂಭವಾಗಿದೆ. ಮಚ್ಛೆಯಲ್ಲಿರುವ ಕೆಎಸ್‌ಆರ್‌ಪಿ 2 ನೇ ಪಡೆಯ ಓರ್ವ ಮಹಿಳಾ ಪೇದೆ ಸೇರಿ 12 ಕೆಎಸ್‌ಆರ್‌ಪಿ ಸಿಬ್ಬಂದಿಗೆ ಸೋಂಕು ತಗುಲಿದೆ. ಸೋಂಕು ತಗುಲಿದ ಸಿಬ್ಬಂದಿ ಎಲ್ಲರೂ  ಜಿಲ್ಲೆಯ ಗಡಿ ಭಾಗದ ಕಾಗವಾಡ ಮತ್ತು ಕಗನೊಳ್ಳಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ  ನಿಭಾಯಿಸಿದ್ರು. ಕೆಎಸ್ಆರ್ ಪಿ ಎರಡನೇ ಬೆಟಾಲಿಯನ್ ನಲ್ಲಿ 70 ಮಹಿಳಾ ಸಿಬ್ಬಂದಿ ಸೇರಿ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »

ನಾನು ಗಂಡು ಆದ್ರೆ ಅಷ್ಟೇನು ಕೆಟ್ಟದಾಗಿ ಕಾಣಲ್ಲ – ‘ರಣಧೀರ’ ನಟಿ

ಹೈದರಾಬಾದ್: ನಟಿ ಖುಷ್ಬೂ ನಟನೆ ಜೊತೆಗೆ ರಾಜಕೀಯದಲ್ಲಿಯೂ ಬ್ಯುಸಿಯಾಗಿದ್ದಾರೆ. ಅಲ್ಲದೇ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಇದೀಗ ಖುಷ್ಬೂ ರೂಪಾಂತರದ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯರಾಗಿರುವ ಖುಷ್ಬೂ ಇತ್ತೀಚಿಗೆ ಒಂದು ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಫೋಟೋ ನೋಡಿ ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಯಾಕೆಂದರೆ ಆ ಫೋಟೋದಲ್ಲಿ ನಟಿ ಖುಷ್ಬೂ ಪುರುಷ ಅವತಾರತಾಳಿದ್ದಾರೆ. ಹೌದು..ಫೇಸ್ ಆಪ್ ಮೂಲಕ ನಟಿ ಖುಷ್ಬೂ ತಮ್ಮ ಫೋಟೋವನ್ನು ಎಡಿಟ್ ಮಾಡಿ ಟ್ವಿಟ್ಟರಿನಲ್ಲಿ …

Read More »

ವಿದೇಶಗಳಿಂದ ದೆಹಲಿಗೆ ಬರುವವರಿಗೆ 7 ದಿನ ಸಾಂಸ್ಥಿಕ ಕ್ವಾರೆಂಟೈನ್ ಕಡ್ಡಾಯ ..

ನವದೆಹಲಿ,ಜು.22- ಕೊರೊನಾ ಸೋಂಕು ಹರಡುವಿಕೆ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ದೆಹಲಿ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರಿಗಾಗಿ ಹೊಸ ನಿಯಮವನ್ನು ಜಾರಿಗೊಳಿಸಿದೆ. ನವದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರೆಂಟೈನ್ ಗೆ ಒಳಗಾಗಬೇಕು. ಈ ಸಾಂಸ್ಥಿಕ ಕ್ವಾರೆಂಟೈನ್ ವೆಚ್ಚವನ್ನು ಆ ವ್ಯಕ್ತಿಗಳೇ ಪಾವತಿಸಬೇಕಿದೆ. ಏಳು ದಿನಗಳ ಮಟ್ಟಿಗೆ ಸಾಂಸ್ಥಿಕ ಕ್ವಾರೆಂಟೈನ್ ಹಾಗೂ …

Read More »

4 ತಿಂಗಳ ನಂತರ ರಾಜ್ಯಪಾಲರನ್ನು ಭೇಟಿಮಾಡಿದ ಸಿಎಂ, ಮಹತ್ವದ ಮಾತುಕತೆ

ಬೆಂಗಳೂರು,ಜು.22- ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು, ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತವಾದ ಭೇಟಿ ಎಂದು ಹೇಳಲಾಗಿದೆ. ಸುಮಾರು ನಾಲ್ಕು ತಿಂಗಳ ನಂತರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪನವರು, ರಾಜ್ಯದ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ, ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಬೆಳವಣಿಗೆಗಳ …

Read More »

ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

ಸಿಂಗಪುರ: ಕೋವಿಡ್-19 ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ನರ್ಸ್ ಕಲಾ ನಾರಾಯಣಸ್ವಾಮಿ ಅವರಿಗೆ ಸಿಂಗಪುರದಲ್ಲಿ ರಾಷ್ಟ್ರಪತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಒಟ್ಟು ಐವರು ನರ್ಸ್ ಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಐವರಲ್ಲಿ ಕಲಾ ನಾರಾಯಣಸ್ವಾಮಿ ಸಹ ಒಬ್ಬರಾಗಿದ್ದಾರೆ. ಸಿಂಗಪುರದ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗಿರುವ ನರ್ಸ್ ಗಳಿಗೆ ಸಿಂಗಪುರ ರಾಷ್ಟ್ರಪತಿ ಹಲಿಮಾ ಯಾಕೂಬ್ ಅವರ …

Read More »

ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ

ಶಿವಮೊಗ್ಗ: ಮಾಧ್ಯಮಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿನ ಅನೇಕ ಟಿವಿ ಚಾನಲ್ ನೋಡಿದರೆ, ಏನು ಪ್ರಪಂಚದಲ್ಲಿ ಇನ್ನೂ ಯಾರೂ ಬದುಕುವುದಿಲ್ಲವೇನೋ ಅನ್ನುವ ರೀತಿ ಹೈಲೈಟ್ ಮಾಡುತ್ತಿದ್ದಾರೆ. ಕೆಲವು ಶವ ಹೊತ್ತುಕೊಂಡು ಹೋಗುತ್ತಿರುವಂತಹ ರೂಪ ತೋರಿಸೋದನ್ನು ನೋಡಿದರೆ, ಯಾರೂ ಕೂಡ ಮೃತದೇಹಗಳಿಗೆ ಇಡೀ ರಾಜ್ಯದಲ್ಲಿ ಮಾಡುತ್ತಿರುವ ವ್ಯವಸ್ಥೆ ಅನಾಗರೀಕ ವ್ಯವಸ್ಥೆ ಎನ್ನುವ ಭಾವನೆ ತರುತ್ತಿದ್ದಾರೆ ಎಂದು ಮಾಧ್ಯಮಗಳ …

Read More »

ಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ

ರಾಯಬಾಗ:  ವರ್ಗಾವಣೆಗೊಂಡಿರುವ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರನ್ನು ರಾತ್ರೋ ರಾತ್ರಿ  ಸಾಮಗ್ರಿಗಳ ಸಮೇತ ಮನೆ ಖಾಲಿ ಮಾಡಿಸಿದ ಆರೋಪ ಕೇಳಿ ಬಂದಿದೆ. ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಗೈರಾಣ ಜಾಗ ಸಲುವಾಗಿ ಶಾಸಕ ದುರ್ಯೋಧನ ಐಹೊಳೆ ಹಾಗೂ ತಹಸೀಲ್ದಾರ್ ಚಂದ್ರಕಾಂತ ಅವರ ಮಧ್ಯೆ ಕಿತ್ತಾಟ ನಡೆದಿತ್ತು. ಶಾಸಕ ಐಹೊಳೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದು ತಹಸೀಲ್ದಾರ್ ಅವರ ವರ್ಗಾವಣೆ ಮಾಡಿಸಿದ್ದರು. ದಿಢೀರ್ ವರ್ಗಾವಣೆ ವಿರೋಧಿಸಿ ತಹಸೀಲ್ದಾರ್ ಕೆಇಟಿಯಲ್ಲಿ ಅರ್ಜಿ ಸಲ್ಲಿಸಿ …

Read More »