Breaking News

Laxminews 24x7

ಯುವಕನ ರುಂಡ ಕಡಿದು ಭೀಕರ ಹತ್ಯೆ………………!

ಕಲಬುರಗಿ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದುದ್ದು, ಯುವಕನ ರುಂಡ ಕತ್ತರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ಯುವಕನ ಹತ್ಯೆ ಮಾಡಲಾಗಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್(32) ಹತ್ಯೆಯಾದ ಯುವಕ. ಅದೇ ಗ್ರಾಮದ ಪ್ರಭು ಕಾಂಬಳೆ ಎಂಬಾತನಿಂದ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ. ಸುಮಾರು 9 ವರ್ಷಗಳ …

Read More »

ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ತುಂಬಾ ಬೇಸರವಾಯ್ತು: ದರ್ಶನ್

ದಾವಣಗೆರೆ: ಡ್ರಗ್ಸ್ ವಿಚಾರದಲ್ಲಿ ಚಿರು ಹೆಸರು ಕೇಳಿ ನನಗೆ ತುಂಬಾ ಬೇಸರವಾಯಿತು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನಗರದ ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕ್ಲಾಸ್ ಎಂದ ಮೇಲೆ ಫಸ್ಟ್ ರ‍್ಯಾಂಕ್ ವಿದ್ಯಾರ್ಥಿ ಇರುತ್ತಾರೆ. ಲಾಸ್ಟ್ ಬೆಂಚ್ ಸ್ಟೂಡೆಂಟ್ ಕೂಡ ಇರುತ್ತಾರೆ. ಅದಕ್ಕೆ ಇಡೀ ಕ್ಲಾಸ್ ಝೀರೋ ಅಂತೀರಾ. ಹಾಗೇ ಸ್ಯಾಂಡಲ್‍ವುಡ್ ಕೂಡ ಎಂದರು. ಡ್ರಗ್ಸ್ ವಿಚಾರದಲ್ಲಿ ಚಿರು …

Read More »

ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ1 ರೂಪಾಯಿ ದಂಢ, 3 ತಿಂಗಳು ಶಿಕ್ಷೆ

ಹೊಸದಿಲ್ಲಿ: ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಶಿಕ್ಷೆ ವಿಧಿಸಿದೆ. ಪ್ರಶಾಂತ್ ಭೂಷಣ ನ್ಯಾಯಾಂಗ ನಿಂದನೆ ಕೇಸ್ ಗೆ ಸುಪ್ರೀಂ ಕೋರ್ಟ್ 1 ರೂಪಾಯಿ ದಂಢ, 3 ತಿಂಗಳು ಶಿಕ್ಷೆ ವಿಧಿಸಿದೆ. ಜತೆಗೆ 3 ತಿಂಗಳು ಕೋರ್ಟ್ ನಲ್ಲಿ ವಾದ ಮಂಡಿಸಿದಂತೆ ತೀರ್ಪು  ನೀಡಿದೆ. ಈ ಹಿಂದೆ ಸುಪ್ರೀಂಕೋರ್ಟ್‌ನ ಪೀಠ ಕ್ಷಮೆ ಕೇಳಿದರೆ ಕೇಸ್‌ ಇತ್ಯರ್ಥಗೊಳ್ಳುವ ಸುಳಿವು ಬಿಟ್ಟುಕೊಟ್ಟಿತ್ತು. ಆದರೆ …

Read More »

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳು ಮುಂದೆ ಹಾಜರ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರಜಿತ್ ಲಂಕೇಶ್ ಸಿಸಿಬಿ ಅಧಿಕಾರಿಗಳು ಮುಂದೆ ಹಾಜರಾಗಿದ್ದಾರೆ. ಸಿಸಿಬಿ ಕಚೇರಿಯ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಸಿಸಿಬಿ ಅಧಿಕಾರಿಗಳು ಜೊತೆ ಮೊದಲು ಮಾತನಾಡುತ್ತೇನೆ. ನನಗೆ ಯಾರದು ಒತ್ತಡ ಇಲ್ಲ. ಯಾರಿಗೂ ಹೆದರಲ್ಲ. ನಾನು ಮಾಧ್ಯಮದವರನ್ನು ಗೌರವಿಸುವೆ. ವಿಚಾರಣೆ ಮುಗಿಸಿ ಸವಿಸ್ತರವಾಗಿ ಮಾತನಾಡುವೆ ಎಂದು ಹೇಳಿ ಸಿಸಿಬಿ ಕಚೇರಿಯ ಒಳಗೆ ಹೋಗಿದ್ದಾರೆ. ಇಂದ್ರಜಿತ್ ಸಿಸಿಬಿ ಕಚೇರಿಗೆ ಬರುವವರೆಗೆ ನಿರಂತರವಾಗಿ ಫೋನ್‍ಲ್ಲಿ ಬ್ಯುಸಿಯಾಗಿದ್ದರು. …

Read More »

ಸಕಲ ಗೌರವಗಳೊಂದಿಗೆ 18 ತಿಂಗಳ ಹಿಂದೆಯಷ್ಟೆ ಸೇನೆ ಸೇರಿದ್ದ ಯೋಧನ ಅಂತ್ಯಕ್ರಿಯೆ

ಚಿಕ್ಕೋಡಿ(ಬೆಳಗಾವಿ): ಕಳೆದ ಮೂರು ದಿನದ ಹಿಂದೆ ದೆಹಲಿಯಲ್ಲಿ ಸಾವನ್ನಪ್ಪಿರುವ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಯೋಧ ಅನೀಲ್ ಶಿವಾಜಿ ಶಿಂಗಾಯಿ(23) ಅವರ ಅಂತ್ಯಕ್ರಿಯೆ ಸಕಲ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಕಳೆದ 18 ತಿಂಗಳ ಹಿಂದೆಯಷ್ಟೆ ಸೈನಿಕ ಸೇವೆಗೆ ಸೇರಿದ್ದರು. ದೆಹಲಿಯಲ್ಲಿನ ರಾಜಪುಟಾನ ರಿಫಾಯಿಲ್ ದಲ್ಲಿ ತರಬೇತಿ ಮುಗಿಸಿದ್ದರು. ನಂತರ ಕಳೆದ ಮಾರ್ಚ್‍ನಲ್ಲಿ ಕರೋಶಿ ಗ್ರಾಮಕ್ಕೆ ಆಗಮಿಸಿದ್ದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳ …

Read More »

ಸರ್ಕಾರಿ ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಗ್ರಂಥಾಲಯಗಳನ್ನು ಆಧುನೀಕರಣಗೊಳಿಸುವ ಹಾಗೂ ಗಣಿಕೀಕರಣಗೊಳಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಕಾಲೇಜು ಗ್ರಂಥಾಲಯಗಳನ್ನು ಅಭಿವೃದ್ಧಿಪಡಿಸಲು ಮತ್ತು ನ್ಯಾಕ್‌ ಮಾನ್ಯತೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಗ್ರಂಥಾಲಯ ಗಣಕೀಕರಣಗೊಳಿಸಲು ಇ-ಗ್ರಂಥಾಲಯ ಸಾಫ್ಟ್‌ವೇರ್‌ಗಳನ್ನು ಕಾಲೇಜುಗಳಿಗೆ ಇಲಾಖೆಯಿಂದ ಎನ್‌ಐಸಿ ಸಹಕಾರದೊಂದಿಗೆ ಕಳುಹಿಸಿಕೊಡಲಾಗಿದೆ. 4499 ಹುದ್ದೆಗೆ ಅರ್ಜಿ ಆಹ್ವಾನ: SSLC ಪಾಸಾದವರಿಗೆ ಇದು ಸುವರ್ಣವಕಾಶ.. ಸಂಯೋಜಿತ ಗ್ರಂಥಾಲಯ ನಿರ್ವಹಣೆ ಸಾಫ್ಟ್‌ವೇರ್‌ ಅಳವಡಿಸಲು ಅಗತ್ಯವಿರುವ ಕಂಪ್ಯೂಟರ್‌, ಬಾರ್‌ಕೋಡ್‌ ಪ್ರಿಂಟರ್‌, ಬಾರ್‌ಕೋಡ್‌ …

Read More »

ಶಾಸಕ ಆರಗ ಕಾರು ಚಾಲಕನಿಗೆ ಮಹಾಮಾರಿ ಸೋಂಕು

ತೀರ್ಥಹಳ್ಳಿ  : ಶಾಸಕ ಆರಗ ಜ್ಞಾನೇಂದ್ರ ಅವರ ಕಾರು ಚಾಲಕನಿಗೆ ಕೊರೋನಾ ಸೋಂಕು ತಗುಲಿದ್ದು, ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರು ಚಾಲಕನಿಗೆ ಕಳೆದ ಎರಡು ದಿನಗಳಿಂದ ಜ್ವರ ಕಾಣಿಸಿ ಕೊಂಡಿದ್ದರ ಹಿನ್ನೆಲೆ ಪರೀಕ್ಷೆ ಮಾಡಲಾಯಿತು. ಆಗ ಪಾಸಿಟಿವ್‌ ಬಂದಿದೆ ಎಂದು ಶಾಸಕ ಆರಗ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಶಾಸಕ ಆರಗ ಜ್ಞಾನೇಂದ್ರ ಹಾಗೂ ಜೊತೆಯಲ್ಲಿದ್ದ ಆಪ್ತ ಸಹಾಯಕ ಹೊದಲ ಬಸವರಾಜ್‌, ತಾಪಂ ಸದಸ್ಯ ಕುಕ್ಕೆ ಪ್ರಶಾಂತ ಇವರು ಕೂಡಾ ಕೊರೋನಾ ಪರೀಕ್ಷೆ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಿವಶಂಕರಪ್ಪನವರ ಫಾರ್ಮ್ ಹೌಸ್‍ಗೆ ಭೇಟಿ

ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಪ್ರೀತಿ ಇರುವುದು ತಿಳಿದೇ ಇದೆ. ಅದೇ ರೀತಿ ಇದೀಗ ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಕುರಿತು ಮಾಹಿತಿ ಪಡೆಯಲು ಶಾಸಕ, ಮಾಜಿ ಸಚಿವ, ಶಾಮನೂರು ಶಿವಶಂಕರಪ್ಪನವರ ಫಾರ್ಮ್ ಹೌಸ್‍ಗೆ ಭೇಟಿ ನೀಡಿದ್ದಾರೆ. ಇಂದು ಮಧ್ಯಾಹ್ನದಿಂದ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿಯಲ್ಲಿನ ಶಾಮನೂರ ಅವರ ತೋಟಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಗೋ ಪಾಲನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ದಾವಣಗೆರೆ …

Read More »

ಭಾರತಲ್ಲಿ 80000 ಕೇಸ್‌: ಒಂದೇ ದಿನ ಯಾವ ದೇಶದಲ್ಲೂ ಇಷ್ಟು ಕೇಸ್‌ ಇಲ್ಲ!

ನವದೆಹಲಿ : ದಾಖಲೆ ಪ್ರಮಾಣದಲ್ಲಿ ನಡೆಯುತ್ತಿರುವ ಪರೀಕ್ಷೆ ಹಾಗೂ ಜನಜೀವನ ಸಹಜ ಸ್ಥಿತಿಯತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ವೈರಸ್‌ ಪೀಡಿತರ ಸಂಖ್ಯೆ ದೇಶದಲ್ಲಿ ಮತ್ತೊಂದು ಹೊಸ ದಾಖಲೆ ನಿರ್ಮಿಸಿದೆ. ಭಾನುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ 80 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೊರೋನಾ ಹಾವಳಿ ಆರಂಭವಾದಾಗಿನಿಂದ ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಇಷ್ಟೊಂದು ಸಂಖ್ಯೆಯ ಕೊರೋನಾ ಪ್ರಕರಣಗಳು ಪತ್ತೆಯಾದ ನಿದರ್ಶನವೇ ಇಲ್ಲ. ಭಾನುವಾರ 80,078 ಮಂದಿಗೆ …

Read More »

ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ.:ಶಂಕರಗೌಡ ಪಾಟೀಲ

ಬೆಳಗಾವಿ-:ಬೆಳಗಾವಿ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಸರ್ಕಾರದಲ್ಲಿ ಲಾಟ್ರಿ ಮೇಲೆ ಲಾಟ್ರಿ ಹೊಡೆಯುತ್ತಲೇ ಬಂದಿದ್ದು,ಇವರಿಗೆ ಸರ್ಕಾರ ಉನ್ನತ ಹುದ್ದೆ ನೀಡಿ ಇಂದು ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಸರ್ಕಾರ ಇಂದು ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ಹಿಂದಕ್ಕೆ ಪಡೆದು ಇಂದು ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ …

Read More »