Breaking News

Laxminews 24x7

ಮಾರುತಿ ಕಾರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ಸಾವು, ಐವರು ಗಂಭೀರ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಐದು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದರೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಮಾರುತಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರ ಪೈಕಿ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದ ಐದು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಸಿಪಿಐ ರಾಘವೇಂದ್ರ, …

Read More »

KCET Result 2020- ಎಂಜಿನಿಯರಿಂಗ್ ವಿಭಾಗದಲ್ಲಿ ರಕ್ಷಿತ್ ನಂ. 1; ಇಲ್ಲಿದೆ ವಿವಿಧ ವಿಭಾಗಗಳ ಟಾಪ್ ರ್‍ಯಾಂಕರ್ಸ್

ಬೆಂಗಳೂರು: ರಾಜ್ಯದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಎಂಜಿನಿಯರಿಂಗ್, ಫಾರ್ಮಾ, ಕೃಷಿ, ನ್ಯಾಚುರೋಪಥಿ ವಿಭಾಗಗಳಲ್ಲಿ ವಿದ್ಯಾರ್ಥಿಗಳ ರ್‍ಯಾಂಕಿಂಗ್ ಲಿಸ್ಟ್ ಪ್ರಕಟಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಫಲಿತಾಂಶದಲ್ಲಿ ಬೆಂಗಳೂರಿನ ಆರ್.ವಿ. ಕಾಲೇಜು ವಿದ್ಯಾರ್ಥಿ ರಕ್ಷಿತ್ ಎಂ ಅವರು ಎಂಜಿನಿಯರಿಂಗ್​ನಲ್ಲಿ ನಂಬರ್ ಒನ್ ಸ್ಥಾನ ಅಲಂಕರಿಸಿದ್ದಾರೆ. ಸಿಇಟಿ ಪರೀಕ್ಷೆ ಬರೆದ 1.75 ಲಕ್ಷ ವಿದ್ಯಾರ್ಥಿಗಳ ಪೈಕಿ 1,55,668 ಮಕ್ಕಳು ಅರ್ಹತೆ ಗಿಟ್ಟಿಸಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ. ಅಶ್ವಥ …

Read More »

ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಾಗಿನ

ಮೈಸೂರು : ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರುಗಳು ಭಾಗಿಯಾಗಿದ್ದರು. ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಗುದ್ದಲಿಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, …

Read More »

ಘಟಪ್ರಭಾ, ಮಲಪ್ರಭಾ ಜಲಾಶಯಗಳ ಹೊರಹರಿವು ಇಳಿಕೆ

ಬೆಳಗಾವಿ: ಜಿಲ್ಲೆಯಂತೆ ನೆರೆಯ ದಕ್ಷಿಣ ಮಹಾರಾಷ್ಟ್ರದಲ್ಲೂ ಶುಕ್ರವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಅಲ್ಲಿಂದ ಕೃಷ್ಣಾ ನದಿಗೆ ಹರಿದು ಬರುತ್ತಿದ್ದ ಒಳಹರಿವು ತೀವ್ರ ಗತಿಯಲ್ಲಿ ಕಡಿಮೆಯಾಗಿದೆ. 1.73 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದ್ದು, ಹಿಂದಿನ ದಿನಕ್ಕೆ ಹೋಲಿಸಿದರೆ 25 ಸಾವಿರ ಕ್ಯುಸೆಕ್‌ ಕಡಿಮೆಯಾಗಿದೆ. ಇದೇ ರೀತಿ, ಘಟಪ್ರಭಾ ಹರಿವು ಕೂಡ ಕಡಿಮೆಯಾಗಿದೆ. 19,775 ಕ್ಯುಸೆಕ್‌ ಒಳಹರಿವು ಇದೆ. ಹಿಂದಿನ ದಿನ 31,627 ಕ್ಯುಸೆಕ್‌ ಇತ್ತು. ಹಿಡಕಲ್‌ ಬಳಿಯ ಜಲಾಶಯದಿಂದ ಹೊರಬಿಡುವ ನೀರಿನ …

Read More »

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.   ಸೆ. 21 ರಿಂದ 30 ರವರೆಗೆ ಬೆಂಗಳೂರಿನಲ್ಲಿ ಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ನಡುವೆ ಆರು ತಿಂಗಳಿಗಿಂತ ಹೆಚ್ಚು ಅಂತರ ಇರಬಾರದು ಎಂದು …

Read More »

ಇಂದು ಕಾವೇರಿಗೆ ಯಡಿಯೂರಪ್ಪ ಬಾಗಿನ – ಎರಡೆರಡು ದಾಖಲೆ ಬರೆಯಲಿದ್ದಾರೆ ಸಿಎಂ ಇವರಿಂದ ಪ್ರಕಟಿಸಲಾಗಿದೆ

ಮಂಡ್ಯ : ಒಡಲು ತುಂಬಿರುವ ಕನ್ನಂಬಾಡಿ ಕಟ್ಟೆಯಲ್ಲಿ ಕಾವೇರಿ ಮಾತೆಗೆ ಸಿಎಂ ಯಡಿಯೂರಪ್ಪ ಇಂದು ಬಾಗಿಲ ಅರ್ಪಿಸಲಿದ್ದಾರೆ. ಕೆಆರ್‌ಎಸ್‌ ಜಲಾಶಯದ ಇತಿಹಾಸದಲ್ಲೇ ಅತಿ ಹೆಚ್ಚು ಬಾರಿ ಕಾವೇರಿಗೆ ಬಾಗಿನ ಸಲ್ಲಿಸುವ ಭಾಗ್ಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ದೊರೆತಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ.ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ …

Read More »

ಡ್ಯಾಂಗಳಿಂದ ಕೃಷ್ಣೆಗೆ ಹರಿದುಬಂತು ಅಪಾರ ನೀರು

ಬೆಳಗಾವಿ : ರಾಜ್ಯದಲ್ಲಿ ಮಳೆ ಇಳಿಮುಖವಾದ ಬೆನ್ನಲ್ಲೇ ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲೂ ಮಳೆ ಸಂಪೂರ್ಣ ತಗ್ಗಿರುವುದರಿಂದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರುಸುತ್ತಿರುವ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಪಾತ್ರದ ನಿವಾಸಿಗಳು ನಿರಾಳವಾಗಿದ್ದಾರೆ. ಆದರೆ ಮಹಾರಾಷ್ಟ್ರದ ಜಲಾಶಯಗಳಿಂದ ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಪ್ರಮಾಣ 2.17 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿರುವುದರಿಂದ ನದಿ ಅಪಾಯದ ಮಟ್ಟದಲ್ಲೇ ಹರಿಯುತ್ತಿದೆ. ಇದೇ ವೇಳೆ ತುಂಗಭದ್ರಾ ಮತ್ತು ಮಲಪ್ರಭಾ ಜಲಾನಯನ ಪ್ರದೇಶದಲ್ಲೂ ಮಳೆ …

Read More »

ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸಾವು, ಸೋಂಕು ವರದಿ : ಗುರುವಾರದ ರಿಪೋರ್ಟ್ ಎಷ್ಟು..?

ಬೆಂಗಳೂರು : ರಾಜ್ಯದಲ್ಲಿ ಗುರುವಾರ 7,385 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಂದೂವರೆ ತಿಂಗಳ ಮಗು ಸೇರಿ 102 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದೇ ದಿನ 6231 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ 2.56 ಲಕ್ಷಕ್ಕೆ ಏರಿಕೆಯಾಗಿದ್ದರೆ, ಮೃತಪಟ್ಟವರ ಸಂಖ್ಯೆ ನಾಲ್ಕೂವರೆ ಸಾವಿರ ಗಡಿ (4,429) (ಆತ್ಮಹತ್ಯೆ ಸೇರಿದಂತೆ 16 ಅನ್ಯ ಕಾರಣದ ಸಾವು ಪ್ರಕರಣ ಹೊರತುಪಡಿಸಿ) ತಲುಪಿದೆ. ಇದರ ನಡುವೆ …

Read More »

ಕೊರೋನಾ ಅಂತ್ಯ ಸಂಸ್ಕಾರ, ಸೀಲ್ ಡೌನ್ ಹೆಸರಲ್ಲಿ ಕೋಟಿ ಕೋಟಿ ಲೂಟಿ : ವಾಟಾಳ್ ಕಿಡಿ

 ಉತ್ತರ ಕರ್ನಾಟಕ ಪ್ರವಾಹದಿಂದ ನಲುಗುತ್ತಿದ್ದರೆ, ಅಖಂಡ ಕರ್ನಾಟಕ ಕೊರೋನಾದಿಂದ ನಲುಗುತ್ತಿದೆ. ಆದರೆ, ಇದೆಲ್ಲವನ್ನು ಸಮರ್ಥವಾಗಿ ನಿಭಾಯಿಸಬೇಕಿದ್ದ ರಾಜ್ಯ ಸರ್ಕಾರ ಮಾತ್ರ ಕೊರೋನಾ ಸಾವು, ಅಂತ್ಯ ಸಂಸ್ಕಾರ ಹಾಗೂ ಸೀಲ್ ಡೌನ್ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ ಹೊಡೆಯುತ್ತಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ವಾಟಾಳ್ ನಾಗರಾಜ್ ಹಾಗೂ ಬೆಂಬಲಿಗರು ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು, ರಾಜ್ಯ ಸರ್ಕಾರದ …

Read More »

ಶುದ್ಧ ಜೇಡಿ ಮಣ್ಣಿನಿಂದ ಮಾಡಿದ ಗೌರೀ ಗಣಪತಿಯ ಪ್ರತಿಮೆಗಳನ್ನು ತೆಗೆದುಕೊಂಡು ಬನ್ನಿ.

ನೀವು ಪ್ಲಾಸ್ಟಿಕ್ ನಿಂದ, ಜಿಪ್ಸಮ್ (Plaster of Paris) ನಿಂದ, ಅಥವಾ ಬೇರೆ ಯಾವುದೋ ಕೆಮಿಕಲ್ಲಿನಿಂದ ಮಾಡಿದ ಗಣಪತಿಯನ್ನು ಪೂಜೆ ಮಾಡುವುದಾದರೆ, ಮಾಡುವದೇ ಬೇಡ. ಪರಿಸರ ರಕ್ಷಣೆ ಮಾಡಿದ ಮಹಾಪುಣ್ಯ ಬರುತ್ತದೆ ನಿಮಗೆ, ಆ ರೀತಿಯ ವಿಕಾರದ ಗಣಪತಿಗಳನ್ನು ಪೂಜೆ ಮಾಡದೇ ಇದ್ದರೆ. ಮುಂದಿನ ಜನಾಂಗಕ್ಕೆ ಉಸಿರು ಹಸಿರನ್ನು ಉಳಿಸಿಕೊಡುವದು ಸಾಮಾನ್ಯ ಪುಣ್ಯದ ಮಾತೇ? ಖಂಡಿತ ಅಲ್ಲ. ಹೀಗಾಗಿ ನೀವು ವಿಕೃತ ಗಣಪತಿಯ ಪೂಜೆ ಮಾಡುವದನ್ನು ಬಿಡುವುದರಿಂದ ದೊಡ್ಡ ಸಮಾಜಸೇವೆಯನ್ನು …

Read More »