Breaking News

Laxminews 24x7

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್​ಫೀಲ್ಡ್​ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್​ಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಅಕ್ಟೋಬರ್​ 20 ರಿಂದ ನವೆಂಬರ್ 30ರವರೆಗೆ …

Read More »

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್​​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್

ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್​ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್​ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್​ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್​ಗೆ ಅಂತ್ಯವಾಯ್ತು. …

Read More »

ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್​!

ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …

Read More »

ವಿಕ್ರಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಫರಾಜ್ ಖಾನ್‍ಗೆ ಸಲ್ಮಾನ್ ಖಾನ್ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ಸಹಾಯ ಮಾಡಿದ್ದಾರೆ.

ಮುಂಬೈ: ಪ್ರಸ್ತುತ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಫರಾಜ್ ಖಾನ್‍ಗೆ ಸಲ್ಮಾನ್ ಖಾನ್ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ಸಹಾಯ ಮಾಡಿದ್ದಾರೆ. 1998ರಲ್ಲಿ ಬಿಡುಗಡೆಯಾದ ಮೆಹಂದಿ ಎಂಬ ಚಿತ್ರದಲ್ಲಿ ನಟಿ ರಾಣಿ ಮುಖರ್ಜಿಯೊಂದಿಗೆ ಫರಾಜ್ ಖಾನ್ ಅಭಿನಯಿಸಿದ್ದರು. ಈ ಚಿತ್ರದ ಮೂಲಕ ಬಹಳ ಹೆಸರುವಾಸಿಯಾಗಿದ್ದರು. ಕಳೆದ ಒಂದು ವರ್ಷದಿಂದ ಫರಾಜ್ ಖಾನ್ ಹೃದಯಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನ ವಿಕ್ರಮ್ …

Read More »

ಪ್ರೀತ್ಸೇ.. ಪ್ರೀತ್ಸೇ ಅಂತ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಬೆನ್ನು ಬಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮೇಲೆ ಕತ್ತಿಯಿಂದ ದಾಳಿ

ಹೈದರಾಬಾದ್: ಪ್ರೀತ್ಸೇ.. ಪ್ರೀತ್ಸೇ ಅಂತ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಬೆನ್ನು ಬಿದ್ದ ಪಾಗಲ್ ಪ್ರೇಮಿಯೊಬ್ಬ ಆಕೆಯ ಮೇಲೆ ಕತ್ತಿಯಿಂದ ದಾಳಿ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ದಿವ್ಯ ತೇಜಸ್ವಿನಿ (20) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಪೊಲೀಸರು ನೀಡಿರುವ ಮಾಹಿತಿ ಅನ್ವಯ, ಕ್ರಿಸ್ತು ರಾಜಪುರಂ ಪ್ರದೇಶದ ನಿವಾಸಿಯಾಗಿರುವ ದಿವ್ಯ ತೇಜಸ್ವಿನಿ ಎಂಜಿನಿಯರಿಂಗ್ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾಳೆ. ಸ್ಥಳೀಯವಾಗಿ ಪೇಂಟಿಂಗ್ …

Read More »

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ

ಬೆಂಗಳೂರು:  ರಾಜ್ಯದಲ್ಲಿ  ಕಳೆದ ನಾಲ್ಕು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಪಾರ ಹಾನಿಯಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಳೆ ಕಂದಾಯ ಸಚಿವ ಆರ್. ಅಶೋಕ ಭೇಟಿ ನೀಡಲಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು,  ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ,  ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ  ಎದುರಾಗಿದೆ. ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ/.  ಆಯಾ ಪ್ರದೇಶದಲ್ಲಿ 43 ಕಾಳಜಿ ಕೇಂದ್ರ …

Read More »

ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಪೊಲೀಸರಿಂದ ಜಾಗೃತಿ

ಹುಬ್ಬಳ್ಳಿ: ಮಾಸ್ಕ್ ಧರಿಸದೆ ಕೊರೊನಾ ತಡೆಯಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಲು ಸ್ವತಃ ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಪಿಎಸ್‍ಐ ಶರಣ್ ದೇಸಾಯಿ ಹಾಗೂ ಸಿಬ್ಬಂದಿ ಬೆಳಗ್ಗೆ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಜಾಗೃತಿ ಮೂಡಿಸಿದರುಕೋವಿಡ್-19 ಕುರಿತು ಅರಿವು ಕಾರ್ಯಕ್ರಮ ಏರ್ಪಡಿಸಿ, ಮಾಸ್ಕ್ ವಿತರಿಸುವ ಮೂಲಕ ಶರಣ್ ದೇಸಾಯಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು. ದಂಡ ಹಾಕುವುದು ನಿಮ್ಮನ್ನು ಎಚ್ಚರಿಸಲು. ಇದರ ಹೊರತು ಬೇರೆ ಉದ್ದೇಶವಿಲ್ಲ. ನಿಮ್ಮ ಆರೋಗ್ಯದ …

Read More »

ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ

ಶಿರಸಿ – ಸಿದ್ದಾಪುರ ತಾಲೂಕಿನ ಹೆಗ್ಗರಣಿ ಬಳಿ ಕಾರೊಂದು ಹಳ್ಳದಲ್ಲಿ ಕೊಚ್ಚಿಹೋಗಿದ್ದು 4 ಅಥವಾ 5 ಜನರು ಕಾರಿನೊಳಗೆ ಸಿಲುಕಿರುವ ಶಂಕೆ ಇದೆ. ಕೋಡನಮನೆ ಎಂಬಲ್ಲಿ ಸೇತುವೆೆಯಿಂದ ಕೆಳಗುರುಳಿದ ಕಾರು ನೀರಿನಲ್ಲೇ ಅರ್ಧ ಕಿಲೋ ಮೀಟರ್ ದೂರ ಹೋಗಿ ಬಿದ್ದಿದೆ. ಬುಧವಾರ ರಾತ್ರಿಯೇ ಘಟನೆ ನಡೆದಿದ್ದು ಗುರುವಾರ ಮಧ್ಯಾಹ್ನದ ಹೊತ್ತಿಗೆ ಬೆಳಕಿಗೆ ಬಂದಿದೆ. ಆದರೆ ಕಾರಿನ ಬಾಗಿಲುಗಳು ಇನ್ನೂ ಮುಚ್ಚಿಯೇ ಇದ್ದು ಪೊಲೀಸರು ಸ್ಥಳಕ್ಕೆ ಬಂದ ನಂತರ ನಿಖರ ಮಾಹಿತಿ …

Read More »

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ

ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ …

Read More »

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಪ್ರತಿಭೆಗಳಿಗೆ ಮಾಡಲಾದ ಅವಮಾನವಾಗಿದೆ:ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ –  ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರತಿಭಾವಂತ ಗೋಲ್ಡ್ ಮೆಡಲಿಸ್ಟ್ ಗಳಿಗೆ ಗೋಲ್ಡ್ ಮೆಡಲ್ ಗಳನ್ನು ನೀಡಿ ಗೌರವಿಸದೆ ವಿದ್ಯಾರ್ಥಿಗಳನ್ನು ತಿರಸ್ಕರಿಸಿ ಅವಮಾನಿಸಿದೆ ಎಂದು ಶಾಸಕರೂ, ಕೆಪಿಸಿಸಿ ರಾಜ್ಯ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜರುಗಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಂಟನೇಯ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬೆಳಗಾವಿ ನಗರದ ನಿವಾಸಿ ಸೃಷ್ಟಿ ಗ್ಯಾನಿ ಎಂಬ ವಿದ್ಯಾರ್ಥಿನಿಯು ಇದೇ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗವನ್ನು ಮಾಡಿದ್ದು, …

Read More »