Breaking News

Laxminews 24x7

ಶಿವಣ್ಣ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳದಿರಲು ನಿರ್ಧಾರಿಸಿದ್ದಾರೆ.

ಬೆಂಗಳೂರು: ಹೆಮ್ಮಾರಿ ಕೊರೊನಾದಿಂದ ಈಗಾಗಲೇ ಅನೇಕ ನಟರು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೀಗ ಸ್ಯಾಂಡಲ್‍ವುಡ್‍ನ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ತಮ್ಮ ಹುಟ್ಟುಹಬ್ಬಕ್ಕೂ ಮುನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದೇ ತಿಂಗಳ 12ರಂದು ಶಿವಣ್ಣ ಅವರ ಹುಟ್ಟುಹಬ್ಬವಿದೆ. ಪ್ರತಿ ವರ್ಷ ಸಾವಿರಾರು ಅಭಿಮಾನಿಗಳು ಶಿವಣ್ಣ ಅವರ ಮುಂದೆ ಜಮಾಯಿಸುತ್ತಿದ್ದರು. ಹೂವಿನ ಹಾರ, ಕೇಕ್ ತಂದು ಸಂಭ್ರಮಿಸುತ್ತಿದ್ದರು. ಆದರೆ ಈ ಕೊರೊನಾದಿಂದ ಯಾವುದೇ ಸಂಭ್ರಮಕ್ಕೂ …

Read More »

ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ ಸೀಲ್‍ಡೌನ್ ಮಾಡಲಾಗಿದೆ.

ಬೆಳಗಾವಿ: ಪೊಲೀಸರಿಂದ ಬಂಧಿತನಾಗಿದ್ದ ಆರೋಪಿಗೆ ಕೊರೊನಾ ಬಂದಿದ್ದು, ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಿಬ್ಬಂದಿ ಸೀಲ್‍ಡೌನ್ ಮಾಡಿದ್ದಾರೆ. ಸದ್ಯ ಕ್ಯಾಂಪ್ ಪೊಲೀಸ್ ಠಾಣೆಯನ್ನು ಮಹಿಳಾ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ. ಜೂ.27ರಂದು 29 ವರ್ಷದ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧಿಸಿ ಕೋವಿಡ್ ಟೆಸ್ಟ್ ಮಾಡಿದಾಗ ಆರೋಪಿಗೆ ಕೊರೊನಾ ದೃಢವಾಗಿತ್ತು. 29 ವರ್ಷದ ರೋಗಿ-18291ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆರೋಪಿಯ ಪ್ರಾಥಮಿಕ ಸಂಪರ್ಕಕ್ಕೆ …

Read More »

ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿದೆ. ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ …

Read More »

ಉಚಿತ ಪಡಿತರ ಯೋಜನೆ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್

ನವದೆಹಲಿ: ಲಾಕ್‍ಡೌನ್‍ನಿಂದ ಅತಿ ಹೆಚ್ಚು ಹೊಡೆತ ತಿಂದವರು ವಲಸೆ ಕಾರ್ಮಿಕರು. ಇವರ ಹಸಿವು ನೀಗಿಸಲೆಂದೇ ಕೇಂದ್ರ ಸರ್ಕಾರವೇನೋ ಉಚಿತ ಪಡಿತರ ಯೋಜನೆ ಜಾರಿಗೆ ತಂದಿತು. ಆದರೆ ಕೇಂದ್ರ ಕೊಟ್ಟಿದ್ದನ್ನ ಫಲಾನುಭವಿಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರಗಳು ಫೇಲ್ ಆಗಿವೆ. ಈ ಮಾತನ್ನ ನಾವು ಹೇಳ್ತಾ ಇಲ್ಲ, ಕೇಂದ್ರ ಸರ್ಕಾರವೇ ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ ರಾಜ್ಯಗಳ ಬೇಜವಾಬ್ದಾರಿ ಅನಾವರಣವಾಗಿದೆ. ಹೌದು. ಲಾಕ್‍ಡೌನ್ ಅವಧಿಯಲ್ಲಿ ಕೊರೊನಾ ಬಿಕ್ಕಟ್ಟಿನ ಹೆಚ್ಚು ಹೊಡೆತ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ………..

ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ …

Read More »

ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಯುವತಿಯ ಬದುಕಿಗೆ ಬೆಳಕಾದ ಕಿಚ್ಚ…………

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು, ಲಾಕ್‍ಡೌನ್ ವೇಳೆ ಕಷ್ಟಕ್ಕೆ ಸಿಲಿಕಿದ್ದ ಆಟೋಚಾಲಕನ ನೆರವಿಗೆ ಬಂದಿದ್ದಾರೆ. ಆಟೋಚಾಲಕನಾಗಿ ಕೆಲಸ ಮಾಡುತ್ತಿದ್ದ ರಿಯಾಜ್ ಲಾಕ್‍ಡೌನ್‍ಗೂ ಮುನ್ನ ತಂಗಿಯ ಮದುವೆ ಫಿಕ್ಸ್ ಮಾಡಿದ್ದರು. ನಂತರದ ದಿನದಲ್ಲಿ ದುಡಿದು ಹಣವನ್ನು ಹೊಂದಿಸಿಕೊಂಡು ತಂಗಿಯ ಮದುವೆ ಮಾಡಲು ಬಯಸಿದ್ದರು. ಆದರೆ ಲಾಕ್‍ಡೌನ್ ಆದ ನಂತರ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲಿಕಿದ್ದರು. ಲಾಕ್‍ಡೌನ್‍ನಿಂದ ಮದುವೆಯ ಖರ್ಚಿಗೆ ಹಣ ಹೊಂದಿಸುವಲ್ಲಿ ವಿಫಲರಾಗಿದ್ದ ರಿಯಾಜ್, ದಿಕ್ಕು ತೋಚದಂತಾಗಿ ಸುದೀಪ್ ಚಾರಿಟೇಬಲ್ …

Read More »

ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ

ಸೋಮವಾರ ಮುಂಜಾನೆ 5 ಗಂಟೆವರೆಗೂ ಕರ್ಫ್ಯೂ ಜಾರಿ ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಲೇ ಇದೆ. ಇತ್ತ ಕೊರೊನಾ ಹರಡದಂತೆ ತಡೆಯಲು ಇವತ್ತು ರಾತ್ರಿಯಿಂದಲೇ ಕರ್ನಾಟಕ ಸ್ತಬ್ಧವಾಗಲಿದೆ. ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 8 ಗಂಟೆಯಿಂದ ಸಂಡೇ ಕರ್ಫ್ಯೂ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಇಂದು ರಾತ್ರಿ 8ರ …

Read More »

ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದೆ.

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿಬಾಲಚಂದ್ರ ಜಾರಕಿಹೊಳಿಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು:ಕನ್ನಡಪರ ಸಂಘಟನೆಗಳು

ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯನ್ನಾಗಿ ಮಾಡಲು ಸರ್ಕಾರ 500 ಕೋಟಿ ಖರ್ಚು ಮಾಡಿ ಸುವರ್ಣ ವಿಧಾನ ಸೌಧ ಕಟ್ಟಡವನ್ನು ನಿರ್ಮಿಸಿದ್ದು,ಸುವರ್ಣ ಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡಬಾರದು,ರಾಜ್ಯ ಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಕನ್ನಡ ಸಂಘಟನೆಗಳ ಕ್ರೀಯಾ ಸಮೀತಿಯ ಅದ್ಯಕ್ಷ ಅಶೋಕ ಚಂದರಗಿ ಅವರ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳು,ಬೆಳಗಾವಿಯ ಸುವರ್ಣ ಸೌಧಕ್ಕೆ ಜಿಲ್ಲಾ …

Read More »