Breaking News

Laxminews 24x7

ಸುರಪುರ ನಗರದ ಜನತೆಗೆ ಕುಡಿಯುವ ನೀರಿನ ಅನುಕೂಲ ಸೇರಿ ಜನರಿಗಾಗಿ ಸುಮಾರು 300 ಕೋಟಿ ಅಂದಾಜು ಮೊತ್ತದಲ್ಲಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣ

ಸುರಪುರ: ಹೆಚ್.ವಿಶ್ವನಾಥ ಅವರ ರಾಜಕೀಯ ಭವಿಷ್ಯ ಮುಂದೆ ಉಜ್ವಲವಾಗಲಿದೆ. ವಿಶ್ವನಾಥ ಅವರಿಗಾಗಿ ನಾನು ಯಾವ ತ್ಯಾಗಕ್ಕೂ ಸಿದ್ಧ ಎಂದು ನೀರಾವರಿ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಗರದ ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಹೆಚ್.ವಿಶ್ವನಾಥ ಅವರು ಮುಂದೆ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ. ಅವರ ರಾಜಕೀಯ ಭವಿಷ್ಯ ಮುಂದೆ ಹೇಗಾಗಲಿದೆ ಎಂದು ಕಾದು ನೋಡಿ ಎಂದು ಮಾರ್ಮಿಕವಾಗಿ ನುಡಿದರು. ಸುರಪುರ ನಗರದ …

Read More »

ನಾಯಿ ಕಚ್ಚಿ ಗಾಯಗೊಂಡಿದ್ದ ಬಾಲಕ ಸಾವು ಬೆಳಗಾವಿ ಜಿಲ್ಲೆಯಲ್ಲಿ ನಡದ್ದಿದೆ

ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ …

Read More »

ಮೆಟ್ರೋ ಸಂಚಾರ ಆರಂಭವಾಗೋದು ಡೌಟ್‌! ಕಾಮಗಾರಿ ವಿಳಂಬ:

ಬೆಂಗಳೂರು(ಜು.03): 2020-21ನೇ ಸಾಲಿನಲ್ಲಿ ಸುಮಾರು 445 ಕೋಟಿ ಆದಾಯ ಗುರಿ ಹೊಂದಿದ್ದ ನಮ್ಮ ಮೆಟ್ರೋ ನಿಗಮ ಕೊರೋನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ರದ್ದುಪಡಿಸಿದ್ದರಿಂದ ಅಂದಾಜು 110 ಕೋಟಿಗಿಂತ ಅಧಿಕ ನಷ್ಟಕ್ಕೊಳಗಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್‌ 430 ಕೋಟಿ ಆದಾಯ ಗಳಿಸಿತ್ತು. ಇದರಿಂದ ಸಹಜವಾಗಿಯೇ 2020-21ನೇ ಸಾಲಿನಲ್ಲಿ ಮೆಟ್ರೋ ನಿಗಮ ಸುಮಾರು 445 ಕೋಟಿ ಆದಾಯದ ಗುರಿಯನ್ನು ಹೊಂದಲಾಗಿತ್ತು.ಯಲಚೇನಹಳ್ಳಿ- ನಾಗಸಂದ್ರ(ಹಸಿರು ಮಾರ್ಗ) ಮತ್ತು ಬೈಯ್ಯಪ್ಪನಹಳ್ಳಿ- ಮೈಸೂರು …

Read More »

ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರ, ಜುಲೈ 3: ದಾಳಿಗೆ ತೆರಳಿದ್ದ ಸಮಯದಲ್ಲಿ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಡಿವೈಎಸ್‌ಪಿ ಸೇರಿ 8 ಮಂದಿ ಪೊಲೀಸರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ರೌಡಿ ಶೀಟರ್ ವಿಕಾಸ್ ದುಬೆ ಇದ್ದ ಪ್ರದೇಶದ ಸುಳಿವು ಪಡೆದಿದ್ದ ಪೊಲೀಸರು ದಾಳಿಗೆಂದು ತೆರಳಿದ್ದರು ಆ ಸಂದರ್ಭದಲ್ಲಿ ರೌಡಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಾನ್ಪುರದಲ್ಲಿ ಪೊಲೀಸರ ಹತ್ಯೆಗೈದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಘಟನೆಯ …

Read More »

ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಬೆಂಗಳೂರು(ಜು.03): ನಗರದಲ್ಲಿ ದಿನೇ ದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 10 ಸಾವಿರ ಹಾಸಿಗೆಗಳನ್ನು ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕು ಲಕ್ಷಣಗಳಿದಿದ್ದರೂ ಪಾಸಿಟಿವ್‌ ವರದಿಗಳು ಬರುತ್ತಿವೆ. ಬೆಂಗಳೂರಲ್ಲಿ ಪ್ರತಿನಿತ್ಯ ಸೋಂಕಿನ ಪ್ರಕರಣಗಳು ಅಧಿಕಗೊಳ್ಳುತ್ತಿವೆ. ಇದರಿಂದ ಹಾಸಿಗೆ ಲಭ್ಯವಾಗುತ್ತಿಲ್ಲ ಎಂದು ಜನರು ಭೀತಿಗೊಳಗಾಗಿದ್ದಾರೆ. ಆದರೆ, ಜನರು ಯಾವುದೇ ರೀತಿಯಲ್ಲಿಯೂ ಭಯಗೊಳ್ಳಬೇಕಾದ ಅಗತ್ಯ ಇಲ್ಲ. ಸರ್ಕಾರ ಎಲ್ಲಾ ರೀತಿಯ …

Read More »

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪ್ರಾಧ್ಯಾಪಕರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಇವರುಗಳ ರಜೆ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ದೇಶದಲ್ಲಿ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ – ಕಾಲೇಜುಗಳಿಗೆ ರಾಜ್ಯದಲ್ಲಿ ರಜೆ ಘೋಷಿಸಿದ್ದು, ಹೀಗಾಗಿ ಉನ್ನತ ಶಿಕ್ಷಣ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಬೋಧಕ ಸಿಬ್ಬಂದಿಗೆ ಜುಲೈ 2ರ ವರೆಗೆ ರಜೆ ಘೋಷಿಸಲಾಗಿತ್ತು. ಇದೀಗ ಮತ್ತೊಂದು ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಪ್ರಾಧ್ಯಾಪಕರಿಗೆ ರಜೆ ಅವಧಿಯನ್ನು …

Read More »

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು,

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಪ್ರತಿದಿನವೂ ಏರಿಕೆಯಾಗುತ್ತಿದ್ದು, ಇದರಿಂದ ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ಮೊದಲೇ ಕೊರೊನಾ ಲಾಕ್ಡೌನ್ ನಿಂದಾಗಿ ಆರ್ಥಿಕವಾಗಿ ತತ್ತರಿಸಿದ್ದ ಸಾರ್ವಜನಿಕರಿಗೆ ತೈಲ ಬೆಲೆ ಏರಿಕೆ ಮತ್ತೊಂದು ಹೊರೆಯಾಗಿ ಪರಿಣಮಿಸಿದೆ. ಇದರ ಮಧ್ಯೆ ಕಾನ್ಪುರದ ಕಲ್ಯಾಣಪುರದಲ್ಲಿನ ಪೆಟ್ರೋಲ್ ಬಂಕ್ ಒಂದರಲ್ಲಿ ಕೇವಲ 12 ರೂಪಾಯಿಗೆ ಪೆಟ್ರೋಲ್ ಮಾರಾಟ ಮಾಡಲಾಗಿದೆ. ಹೌದು, ತೈಲ ಬೆಲೆ ಏರಿಕೆಯನ್ನು ವಿರೋಧಿಸಲು ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ …

Read More »

ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ರಾ ಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನ 2,373 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 92,000ಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 61 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 2,864ಕ್ಕೆ ಏರಿಕೆಯಾಗಿದೆ. ಈ ನಡುವೆ ನಿನ್ನೆ ಒಂದೇ ದಿನ 3,015 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ …

Read More »

ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ

ಸುರಪುರ: ತಾಲೂಕಿನ ಅಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷ್ಣಾ ನದಿಯಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣದ ಕುರಿತು ಹಿಂದೆ ಬಜೆಟ್‍ನಲ್ಲಿಯೆ ಅನುದಾನ ಘೋಷಿಸಲಾಗಿದೆ.ಅದರಂತೆ ಈಗ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,ಎರಡು ಮೂರು ಕಡೆಗಳಲ್ಲಿ ಸ್ಥಳ ಗುರುತಿಸಲಾಗುತ್ತಿದೆ. ಸೂಕ್ತ ಸ್ಥಳದಲ್ಲಿ ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಬ್ರೀಜ್ ಕಮ್ ಬ್ಯಾರೆಜ್ …

Read More »

ಗೋಕಾಕ: ಗೋಕಾಕನಗರದಲ್ಲಿ ಮೊಟ್ಟಮೊದಲ ಬಾರಿ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ.

  ಗೋಕಾಕ :ಇಂದು ಗೋಕಾಕ ನಗರದ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಗೋಕಾಕ ನಗರದ ಭಜಂತ್ರಿ ಗಲ್ಲಿಯ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ, ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೂ ಬಂದಿರುವುದಿಲ್ಲಾ. ಈ ಬಾಲಕಿಯು ಭಜಂತ್ರಿ ತೋಟ ಕೌಜಲಗಿ ಗ್ರಾಮಕ್ಕೆ ಹೋಗಿದ್ದಾಳೆ ಈಗ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಬೆಳಗಾವಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.ಭಜಂತ್ರಿ …

Read More »