ಬೆಂಗಳೂರು: ಕೊರೊನಾ ಬಗ್ಗೆ ಗಮನ ಕೊಡಿ, ಬಾಕಿ ವಿಚಾರ ನಮಗೆ ಬಿಡಿ ಎಂದು ಸಿಎಂ ಯಡಿಯೂರಪ್ಪನವರಿಗೆ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಸದ್ಯ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಮಾತು ಜೋರಾಗಿ ಕೇಳಿ ಬರುತ್ತಿದೆ. ಆದರೆ ನೇರವಾಗಿ ಇದನ್ನು ಯಾರೂ ಒಪ್ಪಿಕೊಳ್ಳದಿದ್ದರೂ ಪರೋಕ್ಷವಾಗಿ ಬಂಡಾಯದ ಮಾತುಗಳನ್ನು ಆಡುತ್ತಿದ್ದಾರೆ. ಈ ವಿಚಾರವಾಗಿ ಅಮಿತ್ ಶಾ ಅವರು ಯಡಿಯೂರಪ್ಪನವಿಗೆ ಕರೆ ಮಾಡಿ ಮಾತನಾಡಿದ್ದು, ಈ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. …
Read More »ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ
ಬೆಂಗಳೂರು: ಕೊರೊನಾ ಸೋಂಕಿತರು, ಗುಣಮುಖರಾದವರ ಬಗ್ಗೆ ಈವರೆಗೂ ರಾಜ್ಯ ಆರೋಗ್ಯ ಇಲಾಖೆ ದಿನನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುತ್ತಿತ್ತು. ಆದ್ರೆ ಇನ್ನು ಮುಂದೆ ಸಂಜೆ ಮಾತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸುಧಾಕರ್, ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ ಇತರೆ ರಾಜ್ಯಗಳಂತೆಯೇ ಮಧ್ಯಾಹ್ನದ …
Read More »ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶಭಾನುವಾರ ಕರ್ಫ್ಯೂ ತೆಗೆಯಲಾಗಿದೆ
ಬೆಂಗಳೂರು: ಶಾಪಿಂಗ್ ಮಾಡಲು ಭಾನುವಾರ ಒಂದೇ ದಿನ ಅವಕಾಶ ಇರುವುದು. ಹೀಗಾಗಿ ಖರೀದಿಗೆ ಹಾಗೂ ಸ್ನೇಹಿತರನ್ನ ಭೇಟಿಯಾಗಲು ಅವಕಾಶ ಬೇಕಿತ್ತು. ಅದಕ್ಕೆ ಭಾನುವಾರ ಕರ್ಫ್ಯೂ ತೆಗೆಯಲಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾನುವಾರ ಲಾಕ್ ಡೌನ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸಿಎಂ ನಿರ್ಧಾರ ಸ್ವಾಗತಾರ್ಹ ಎಂದರು. ದುಡಿಯುವ ವರ್ಗಕ್ಕೆ ರಿಲ್ಯಾಕ್ಸ್ ಮಾಡಿಕೊಡಲು ಅನುಕೂಲವಾಗಿದೆ. ವಾರವೆಲ್ಲ ನೌಕರರು, ಉದ್ದಿಮೆದಾರರು ಕೆಲಸ ಮಾಡಿರುತ್ತಾರೆ. …
Read More »ಬಿಯರ್ ಶೇರ್ ಮಾಡದ್ದಕ್ಕೆ ಐಸ್ ಪಿಕ್ನಿಂದ ಸ್ನೇಹಿತನನ್ನೇ ಕೊಂದ……
ಮುಂಬೈ: ಬಿಯರ್ ಬಾಟಲ್ ಶೇರ್ ಮಾಡದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಮುಂಬೈನ ಜೋಗೇಶ್ವರಿ ಪ್ರದೇಶದಲ್ಲಿ ನಡೆದಿದೆ. ಅಜಯ್ ದ್ರಾವಿಡ್ (29) ಕೊಲೆಯಾದ ಸ್ನೇಹಿತ. ಮೇಘವಾಡಿ ಪೊಲೀಸರು ಆರೋಪಿ ಸೋನು ಅಲಿಯಾಸ್ ಷಣ್ಮುಗ ರಾಜೇಂದ್ರನನ್ನು ಬಂಧಿಸಿದ್ದಾರೆ. ಏನಿದು ಪ್ರಕರಣ? ಮೃತ ಅಜಯ್ ದ್ರಾವಿಡ್ ಮತ್ತು ಆತನ ಸಹೋದರ ಬಿಯರ್ ತರಿಸಿಕೊಂಡು ತಮ್ಮ ಮನೆಯ ಸಮೀಪವಿರುವ ಮೀನು ಮಾರುಕಟ್ಟೆಯಲ್ಲಿ ಕುಳಿತು ಕುಡಿಯುತ್ತಿದ್ದರು. ಅದೇ ಸಮಯದಲ್ಲಿ ಇಬ್ಬರ ಸ್ನೇಹಿತನಾಗಿದ್ದ ಆರೋಪಿ …
Read More »ಭುಜಕ್ಕೆ ಹಗ್ಗಕಟ್ಟಿಕೊಂಡು ಹೊಲ ಸಮ ಮಾಡ್ತಿದ್ದಾರೆ ಕುಸ್ತಿಪಟು ಸಾಕ್ಷಿ………..
ನವದೆಹಲಿ: ನಾನು ನನ್ನ ಪದಕದ ಬಣ್ಣವನ್ನು ಬದಲಿಸಬೇಕು ಎಂದು ಭಾರತದ ಮಹಿಳಾ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಹೇಳಿದ್ದಾರೆ. ಸಾಕ್ಷಿ ಅವರು ಭಾರತದ ಪ್ರತಿಭಾನ್ವಿತ ಕುಸ್ತಿಪುಟು, ಅವರು ದೇಶಕ್ಕಾಗಿ ಮೂರು ಪದಕಗಳನ್ನು ಗೆದ್ದು ತಂದಿದ್ದಾರೆ. ಆದರೆ ಮೂರು ಪದಕದಲ್ಲಿ ಒಂದು ಬಾರಿ ಸಿಲ್ವರ್ ಮತ್ತು ಎರಡು ಬಾರಿ ಕಂಚಿನ ಪದಕ ಗೆದ್ದಿದ್ದೇನೆ ಎಂಬ ನೋವು ಅವರಿಗಿದೆ. ಹೀಗಾಗಿ ಮುಂದೆ ನಡೆಯುವ ಟೋಕಿಯೊ ಒಲಿಪಿಂಕ್ಸ್ ನಲ್ಲಿ ನಾನು ನನ್ನ ಪದಕದ ಬಣ್ಣವನ್ನು …
Read More »ಇನ್ಮುಂದೆ ನಮಗೂ,(ಡಬ್ಲ್ಯೂಹೆಚ್ಒ) ಅದಕ್ಕೂ ಸಂಬಂಧವೇ ಇಲ್ಲ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಹೆಚ್ಒ) ಜೊತೆಗಿನ ಸಂಬಂಧವನ್ನು ಅಮೆರಿಕ ಕಡಿದುಕೊಂಡಿದ್ದು, ಇನ್ಮುಂದೆ ನಮಗೂ ಅದಕ್ಕೂ ಸಂಬಂಧವೇ ಇಲ್ಲವೆಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ನಾವು ಮನವಿ ಮಾಡಿದ್ದ ಹಾಗೂ ನಮಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾವು ಅದರ ಜೊತೆಗಿನ ಸಂಬಂಧವನನ್ನು ಕಡಿತಗೊಳಿಸುವುದಾಗಿ ಮಾಧ್ಯಮಗಳ ಮುಂದೆ ಟ್ರಂಪ್ ಹೇಳಿಕೆ ನೀಡಿದ್ದಾರೆ.ಕೊರೊನಾ ತಡೆಗೆ ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ …
Read More »177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್
ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ …
Read More »ಮಳೆಯ ಅವಾಂತರ – ಮನೆಗಳಿಗೆ ನುಗ್ಗಿದ ನೀರು, ಹತ್ತಾರು ಎಕರೆ ಬಾಳೆ ನಾಶ
ರಾಯಚೂರು/ಕೋಲಾರ: ಅನೇಕ ದಿನಗಳಿಂದ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜನರ ಜೀವನ ಅಸ್ತವ್ಯಸ್ತವಾಗುತ್ತಿದೆ. ರಾಯಚೂರಿನಲ್ಲಿ ಇಡೀ ರಾತ್ರಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಮಳೆಗೆ ಚರಂಡಿ ನೀರು ಮನೆಯೊಳಗೆ ನುಗ್ಗಿದೆ. ನಗರದ ಮಡ್ಡಿಪೇಟೆ, ಬಂದರಗಲ್ಲಿ ಸೇರಿ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದ ಕಾರಣ ಮನೆಗಳಿಗೆ ಮಳೆಯ ನೀರಿನೊಂದಿಗೆ ಕೊಳಚೆ ನೀರು ನುಗ್ಗಿದೆ. ಇದರಿಂದ ಜನರು ರಾತ್ರಿಯೆಲ್ಲಾ ಮನೆಯೊಳಗೆ ನುಗ್ಗಿದ ನೀರನ್ನು ಹೊರಹಾಕಿದ್ದಾರೆ. …
Read More »ಸಂತಸದ ಸುದ್ದಿ: ಕೊರೊನಾ ಕಾರಣ ನೌಕರಿ ಹೋದರು ಕೂಡ ಚಿಂತಿಸುವ ಅಗತ್ಯವಿಲ್ಲ
ನವದೆಹಲಿ: ನೌಕರಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಚಟುವಟಿಕೆಗಳು ತೀವ್ರಗೊಂಡಿವೆ. ಲಾಕ್ ಡೌನ್ ಹಿನ್ನೆಲೆ ಹಲವು ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯಲ್ಲಿಯೂ ಕೂಡ ಏರಿಕೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯ ಲಾಕ್ ಡೌನ್ ಮಧ್ಯೆಯೇ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ (NCS) ಅಡಿಯಲ್ಲಿ 76 ಆನ್ಲೈನ್ ಉದ್ಯೋಗ ಮೇಳಗಳನ್ನು ನಡೆಸಿ ಇದುವರೆಗೆ ಒಟ್ಟು 73 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಹೇಳಿದೆ, ಅಷ್ಟೇ ಅಲ್ಲ ಇಂತಹ …
Read More »ಪ್ರತಿಪಕ್ಷಗಳು ಹಗಲುಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ: ಡಾ. ಅಶ್ವತ್ಥನಾರಾಯಣ
ರಾಮನಗರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಮೂಡಿದೆ ಎಂಬ ಊಹಾಪೋಹಗಳ ಕುರಿತು ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ಬತ್ಥನಾರಾಯಣ (Dr CN Ashwathnarayan) ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಸರ್ಕಾರ ಉರುಳುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಮೊದಲು ಬಿಡಲಿ. 2023ರವರೆಗೆ ಮಾತ್ರವಲ್ಲ, 2023ರ ನಂತರವೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾಮನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ …
Read More »
Laxmi News 24×7