Breaking News

Laxminews 24x7

ಶೇ.15 ರಷ್ಟು ದರ ಹೆಚ್ಚಿಸಿ ಖಾಸಗಿ ಬಸ್ ಓಡಿಸಲು ಅವಕಾಶ: ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ದಿನಗಳಲ್ಲಿ ಖಾಸಗಿ ವಾಹನಗಳ ಸಂಚಾರ ಆರಂಭವಾಗಲಿದೆ ಅಂತ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನಲ್ಲಿ ಕೋವಿಡ್ 19 ಕುರಿತ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು ಖಾಸಗಿ ಬಸ್ ಓಡಾಟ ಕಡಿಮೆಯಿರುವುದರಿಂದ ರಸ್ತೆ ಸಾರಿಗೆ ಸಂಸ್ಥೆಗೂ ಹಾನಿಯಾಗುತ್ತಿದೆ. ಹಾನಿಯಾದರೂ ರಾಜ್ಯ ಸರ್ಕಾರ ಸೇವಾ ಭಾವನೆಯಿಂದ ಬಸ್ ಓಡಿಸುತ್ತಿದೆ ಎಂದರು. ಖಾಸಗಿಯವರು ಶೇ.15 ರಷ್ಟು ಹೆಚ್ಚು ಪ್ರಯಾಣ ದರ ಮಾಡಿ ಬಸ್ ಓಡಿಸಲು ಪರವಾನಿಗೆ ನೀಡಲಾಗಿದೆ. …

Read More »

ಇಂದು ಬೆಳಗಾವಿ ಯಲ್ಲಿ ಮತ್ತೊಂದು ಕರೊನ ಪಾಸಿಟಿವ್

ಬೆಂಗಳೂರು – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 51 ಜನರು ಸೇರಿದಂತೆ ರಾಜ್ಯದಲ್ಲಿ ಇಂದು ಒಟ್ಟೂ 105 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1710ಕ್ಕೇರಿದೆ. ಬೆಳಗಾವಿಯ ಶಿರಗುಪ್ಪಿಯಲ್ಲಿ 1, ಉತ್ತರ ಕನ್ನಡದಲ್ಲಿ 1, ಧಾರವಾಡದಲ್ಲಿ 3, ಹಾವೇರಿಯಲ್ಲಿ 3, ಬೀದರ್ ನಲ್ಲಿ 6, ಬೆಂಗಳೂರಿನಲ್ಲಿ 5, ತುಮಕೂರು 8, ವಿಜಯಪುರದಲ್ಲಿ 6, ಮಂಡ್ಯದಲ್ಲಿ 3, ಬಾಗಲಕೋಟೆಯಲ್ಲಿ 1, ದಾವಣಗೆರೆಯಲ್ಲಿ 3, ಹಾಸನದಲ್ಲಿ 14 ಜನರಿಗೆ ಸೋಂಕು …

Read More »

ಆರ್‌ಬಿಐನಿಂದ ಗುಡ್‍ನ್ಯೂಸ್ – ಆ.31ರವರೆಗೂ ಇಎಂಐ ವಿನಾಯಿತಿ………..

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಲದ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡುವ ಮೂಲಕ ಸಿಹಿ ಸುದ್ದಿ ನೀಡಿದೆ. ಇಂದು ಆರ್‌ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ, ಸಾಲದ ಮೇಲಿನ ಕಂತು ಕುಟ್ಟುವ ಅವಧಿ ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಎಲ್ಲಾ ರೀತಿಯ ಸಾಲದ ಇಎಂಐ ಕಟ್ಟಲು …

Read More »

ಕುಚ್ಚಪ್ಪ ನವರ ಜಮೀನಿನಲ್ಲಿ ಪ್ರತೀ ವರ್ಷ50 ಗಿಡಗಳನ್ನು ಪೋಷಿಸಿದ್ದಾರೆ

  ಗುಡಿಬಂಡೆ:- ಪಟ್ಟಣದ ಕುಚ್ಚಪ್ಪ ನವರ ಜಮೀನಿನಲ್ಲಿ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪರಿಸರ ವೇದಿಕೆ, ಆರೋಗ್ಯ ಇಲಾಖೆ ಹಾಗೂ ಜಮೀನಿನ ಮಾಲಿಕರು ಚಾಲನೆ ನೀಡಿದರು.. ಈ ವೇಳೆ ಮಾತನಾಡಿದ ಆರೋಗ್ಯಾಧಿಕಾರಿ ಡಾ. ನರಸಿಂಹಮೂರ್ತಿ, ಪರಿಸರ ವೇದಿಕೆಯು ಇತ್ತೀಚಿನ ದಿನಗಳಲ್ಲಿ ಖಾಸಗೀ ಜಮೀನಿನ ರೈತರು ತಮ್ಮ ಸ್ವ ಇಚ್ಛೆಯಿಂದ ಗಿಡಗಳನ್ನು ದತ್ತು ಪಡೆದು ಪೋಷಿತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.. ನಂತರ ಜಮೀನು ಮಾಲಕರಾದ ನಿರ್ಮಲ ಕೆ ಮಾತನಾಡಿ, ನಾವು ಅರಣ್ಯ ಇಲಾಖೆ …

Read More »

ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ವಿತರಣೆ: ಪಾಲಕರ ಆಕ್ರೋಶ

  ಗುಡಿಬಂಡೆ : ತಾಲೂಕಿನ ಜಂಬಿಗೇಮರದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ವಿತರಿಸಲಾಗುತ್ತಿದೆ ಎಂದು ಮಕ್ಕಳ ಪಾಲಕರು ಆರೋಪಿಸಿದ್ದಾರೆ. ಗ್ರಾಮದ ನಿವಾಸಿಗಳು ಅಂಗನವಾಡಿಗೆ ಭೇಟಿ ನೀಡಿದಾಗ ಮಕ್ಕಳಿಗೆ ಕಳಪೆ ಆಹಾರ ವಿತರಿಸುವುದು ಬೆಳಕಿಗೆ ಬಂದಿದೆ. ಕೇಂದ್ರದಲ್ಲಿಸಂಗ್ರಹಿಸಿರುವ ಒಡೆದ ಮೊಟ್ಟೆ ನೋಡಿ ಬೇಸರಗೊಂಡ ಅವರು, ಕಳಪೆ ಮಟ್ಟದ ಆಹಾರ ಸೇವಿಸುತ್ತಿರುವ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ, ಇದನ್ನು ಕಂಡು ಕಾಣದಂತೆ ವರ್ತಿಸುವ ಸಿಡಿಪಿಒ, …

Read More »

ಆನಲೈನ್ ಮುಖಾಂತರ ವೆಬ್‌ಪೇಜ್‌ನಲ್ಲಿ ಶೀತಜ್ವರ ಮತ್ತು ತೀವ್ರ ಉಸಿರಾಟದ ತೊಂದರೆಗೊಳಗಾದ ಪ್ರಕರಣಗಳ ವರದಿ ನೀಡಲು ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ kpme.karnataka.tech ವೆಬ್‌ಪೇಜಗೆ ಸಂಬಂಧಿಸಿದಂತೆ ಇನ್ನೂ ಸುಮಾರು ಖಾಸಗಿ ಆರೋಗ್ಯ ಸಂಸ್ಥೆ/ಆಸ್ಪತ್ರೆ/ ಕ್ಲೀನಿಕಗಳಿಗೆ User ID ಹಾಗೂ ಪಾಸ್ ವರ್ಡ್ ಸಿಗದೇ ಇರುವ ಬಗ್ಗೆ ಈ ಕಚೇರಿಗೆ ದೂರವಾಣಿ ಮುಖಾಂತರ ಮಾಹಿತಿ ಸ್ವೀಕೃತವಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿದ್ದಾರೆ. ಆರೋಗ್ಯ ಸಂಸ್ಥೆ/ಆಸ್ಪತ್ರೆ/ಕ್ಲಿನಿಕ್‌ನವರು ತಮ್ಮ ಕೆ.ಪಿ.ಎಂ.ಇ ನೊಂದಣಿ ಪ್ರಮಾಣ ಪತ್ರ ಹಾಗೂ ದೂರವಾಣಿ ಸಂಖ್ಯೆ ಮತ್ತು ಪೂರ್ಣ ವಿಳಾಸದೊಂದಿಗೆ ಈ ಕಚೇರಿಯ ಕೆ.ಪಿ.ಎಂ.ಇ ವಿಭಾಗಕ್ಕೆ ಸಲ್ಲಿಸಿ …

Read More »

ಗೋವಾದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ ………..

ಗೋವಾ ರಾಜ್ಯ ಹೊರತುಪಡಿಸಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ ಜನರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ ವಿವಿಧ ರಾಜ್ಯಗಳಿಂದ ಆಗಮಿಸಿದ ಒಟ್ಟು 17,626 ಜನರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಂದ ಆಗಮಿಸಿದವರಲ್ಲಿ ಅಧಿಕೃತ ಪರವಾನಿಗೆ ಪಡೆದು 9987 ಹಾಗೂ ಪರವಾನಿಗೆ ಪಡೆಯದೆ 7639 ಜನರು ಜಿಲ್ಲೆಗೆ ಆಗಮಿಸಿದ್ದು, ಒಟ್ಟು 17,626 ಜನರು ಜಿಲ್ಲೆಗೆ ಆಗಮಿಸಿದ್ದು ಅವರೆಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ನಗರ …

Read More »

ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ

ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ  ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ …

Read More »

ಇಳಿಕೆಯಾದ ವಿದ್ಯುತ್‌ ಬೇಡಿಕೆ, ರಾಯಚೂರಿನ ಉಷ್ಣ ವಿದ್ಯುತ್‌ ಸ್ಥಾವರ ಶಟ್‌ಡೌನ್; ಬೀದಿಗೆ ಬಿದ್ದ ಕಾರ್ಮಿಕರು

ರಾಯಚೂರು: ಅಂಫಾನಾ‌ ಚಂಡಮಾರುತದ ಹಿನ್ನೆಲೆ, ರಾಜ್ಯದಲ್ಲೂ ಅಲ್ಲಲ್ಲಿ ಮಳೆಯಾಗುತ್ತಿದೆ. ಪರಿಣಾಮ ಪ್ರಸ್ತುತ ವಿದ್ಯುತ್ ಬೇಡಿಕೆ ಇಳಿಕೆಯಾಗಿದೆ. ಇದರೊಂದಿಗೆ ಪವನ ಹಾಗು ಸೌರಶಕ್ತಿ ಉತ್ಪಾದನೆ ಅಧಿಕವಾಗಿದ್ದು, ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಗೆ ಬೇಸಿಗೆಯಲ್ಲಿಯೇ ರೆಸ್ಟ್ ನೀಡಲಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಅನ್ನು ರಾಯಚೂರು ಮೂಲದ ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಿಂದ ನೀಡಲಾಗುತ್ತಿದೆ. 40 ವರ್ಷಗಳ ಇತಿಹಾಸದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಬಹುತೇಕವಾಗಿ ಶಾಖೋತ್ಪನ್ನ ಸ್ಥಾವರಗಳೆ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದವು. ಆದರೆ, ಈ ಬಾರಿ ಬೇಸಿಗೆಯ …

Read More »

ಚಿಕನ್ ಗೆ ಫುಲ್ ಡಿಮ್ಯಾಂಡ್; ದುಡ್ಡು ಕೊಟ್ಟರೂ ಸಿಗುತ್ತಿಲ್ಲ ಬೇಡಿಕೆಯಷ್ಟು ಕೋಳಿ

ಬೆಂಗಳೂರು (ಮೇ 21); ಕೊರೊನೋ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಲಾಕ್ ಡೌನ್ ಆಗಿ ಸಾಕಷ್ಟು ಉದ್ಯಮಗಳು ಸಂಕಷ್ಟಕ್ಕೀಡಾಗಿದ್ದರೆ, ಮಾಂಸಾಹಾರ ವ್ಯಾಪಾರ ಮಾತ್ರ ಇಂದಿಗೂ ಫುಲ್ ಡಿಮ್ಯಾಂಡ್ ಉಳಿಸಿಕೊಂಡಿದೆ. ಪ್ರಸ್ತುತ ಚಿಕನ್‌ಗೆ ಎಲ್ಲಿಲ್ಲಿದ ಬೇಡಿಕೆಯಿದ್ದು, ಚಿಕನ್ ವ್ಯಾಪಾರಿಗಳಿಗೆ ಮುಂಗಡ ದುಡ್ಡು ಕೊಟ್ಟರೂ ಬೇಡಿಕೆಯಷ್ಟು ಚಿಕನ್ ಸಿಗುತ್ತಿಲ್ಲ. ಪರಿಣಾಮ ಚಿಕನ್ ದರವೂ ಏರುತ್ತಿದೆ. ಕಳೆದೆರಡು ತಿಂಗಳ‌ ಹಿಂದೆ ಚಿಕನ್ ವ್ಯಾಪಾರ ಸಾಕಷ್ಟು ಕಳೆಗುಂದಿತ್ತು‌. ಚಿಕನ್ ತಿಂದರೆ ಕೊರೋನಾ ಬರುತ್ತೆ ಎಂಬ ಭಯಕ್ಕೆ …

Read More »