ಹಾಸನ: ಮುಂಬೈನಿಂದ ಬಂದವರನ್ನು ಜಿಲ್ಲೆಯ ಹೊಳೆನರಸೀಪುರದಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ವಿರೋಧಿಸಿ ಅಂಬ್ಯುಲೆನ್ಸ್ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೇವರ ಮುದ್ದನಹಳ್ಳಿ ಬಳಿ ಘಟನೆ ನಡೆದಿದ್ದು, ಮುಂಬೈನಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ಹಳ್ಳಿಯ ಜನರಿಗೂ ಕೊರೊನಾ ಬರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ ಮಾಡಲು ಕರೆದೊಯ್ದಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೇ.15ರಂದು ಮುಂಬೈನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರನ್ನು …
Read More »ಸಾಮೂಹಿಕ ವಿಶೇಷ ಪ್ರಾರ್ಥನೆಗೆ ಬಿಎಸ್ವೈಗೆ ಪತ್ರ ಬರೆದ ಶಾಸಕ ಹ್ಯಾರಿಸ್……….
ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಬೆನ್ನಲ್ಲೇ ಶಾಸಕ ಎನ್.ಎ.ಹ್ಯಾರಿಸ್ ರಂಜಾನ್ ನಿಮಿತ್ತ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್ನ ಮುಸ್ಲಿಂ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದರೂ ಶಾಸಕ ಹ್ಯಾರಿಸ್ ಅವರು ಸಾಮೂಹಿಕ ಪ್ರಾರ್ಥನೆಗೆ ಪತ್ರ ಬರೆದಿರುವುದು ಚರ್ಚೆಗೆ ಕಾರಣವಾಗಿದೆ. ಪತ್ರದಲ್ಲಿ ಏನಿದೆ?: ಮುಸ್ಲಿಂ ಬಾಂಧವರು ಚಂದ್ರ ದರ್ಶನ ನಂತರ ಮೇ …
Read More »ಬಳ್ಳಾರಿ ರೈಲು ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ
ಬಳ್ಳಾರಿ: ಶ್ರಮಿಕ್ ವಿಶೇಷ ರೈಲಿನ ಮೂಲಕ 1,452 ಜನ ಬಿಹಾರಿ ವಲಸೆ ಕಾರ್ಮಿಕರು ತಮ್ಮ ತವರಿನತ್ತ ತೆರಳಿದರು. ಸುರಕ್ಷಿತವಾಗಿ ಊರು ತಲುಪಿ ಮತ್ತೆ ಬಳ್ಳಾರಿಗೆ ಅತ್ಯಂತ ಖುಷಿಯಿಂದ ಬನ್ನಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಎಸ್ಪಿ ಸಿ.ಕೆ.ಬಾಬಾ, ಜಿ.ಪಂ. ಸಿಇಒ ಕೆ.ನಿತೀಶ್ ಸೇರಿದಂತೆ ಅನೇಕರು ಶುಭಹಾರೈಸಿ ಬೀಳ್ಕೊಟ್ಟರು. ಬಳ್ಳಾರಿ, ತೋರಣಗಲ್ಲು ಸೇರಿದಂತೆ ಜಿಲ್ಲೆಯ ವಿವಿಧೆಡೆ ಜೀವನ ನಿರ್ವಹಣೆಗೆ ಬಂದಿದ್ದ ಬಿಹಾರದ 1,452 ಜನ ವಲಸಿಗರನ್ನು ಬಳ್ಳಾರಿ ಕೇಂದ್ರ ಬಸ್ ನಿಲ್ದಾಣದಲ್ಲಿ …
Read More »ಪತ್ನಿ, ಪುತ್ರ ಆಸ್ಪತ್ರೆಯಿಂದ ಮನೆಗೆ ಬರೋಷ್ಟರಲ್ಲಿ ಶವವಾಗಿ ಡಿಎಸ್ಪಿ ಪತ್ತೆ……
ಹೈದರಾಬಾದ್: ಅನುಮಾನಾಸ್ಪದ ರೀತಿಯಲ್ಲಿ ಶ್ರೀಕಾಕುಲಂ ಉಪ ಪೊಲೀಸ್ ವರಿಷ್ಠಾಧಿಕಾರಿ (ವಿಶೇಷ ವಿಭಾಗ) ಕೃಷ್ಣ ವರ್ಮಾ ಅವರು ವಿಶಾಖಪಟ್ಟಣಂನ ತಮ್ಮ ನಿವಾಸದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ. ಡಿಎಸ್ಪಿ ಅವರ ಮಗನಿಗೆ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಡಿಎಸ್ಪಿ ಅವರ ಪತ್ನಿ ಮತ್ತು ಮಗ ಆಸ್ಪತ್ರೆಗೆ ಹೋಗಿದ್ದರು. ಡಿಎಸ್ಪಿ ವರ್ಮಾ ಮನೆಯಲ್ಲಿಯೇ ಇದ್ದರು. ಆದರೆ ಪತ್ನಿ ಮತ್ತು ಮಗ ಮನೆಗೆ ಹಿಂದಿರುಗಿ ಬಂದು ನೋಡಿದಾಗ ನೆಲದ ಮೇಲೆ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ …
Read More »ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್ ರ ಹಸಿವು ನೀಗಿಸುತ್ತಿದ್ದಾರೆ.
ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ವೈದ್ಯರು, ನರ್ಸ್ ಹಾಗೂ ಪೊಲೀಸರು ಸೇರಿದಂತೆ ಸಾಕಷ್ಟು ಜನರು ಹಗಲಿರುಳು ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್ ರ ಹಸಿವು ನೀಗಿಸುತ್ತಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ಗೆ ನಟಿ ರಶ್ಮಿಕಾ ಮಂದಣ್ಣ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ವೈದ್ಯರು, ನರ್ಸ್, ಪೊಲೀಸ್ ಮತ್ತು ಹೋಂ ಗಾರ್ಡ್ ಸೇರಿದಂತೆ ಒಟ್ಟು 150 ಜನ …
Read More »ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ
ಉಡುಪಿ: ಮುಂಬೈನಿಂದ ಬಂದು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರೋದು ಇಂದು ದೃಢಪಟ್ಟಿದೆ. ಸಾವನ್ನಪ್ಪಿದ 54 ವರ್ಷದ ಸೋಂಕಿತ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ನಿವಾಸಿಯಾಗಿದ್ದು, ಮೇ 13ರಂದು ಹೃದಯಾಘಾತವಾಗಿತ್ತು. ಆರಂಭದಲ್ಲಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನೋವು ಉಲ್ಬಣಗೊಂಡು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿತ್ತು. ಮೇ 13ರ ರಾತ್ರಿಯೇ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಮೇ 14ರ ಬೆಳಗ್ಗೆ ವ್ಯಕ್ತಿ ನಿಧನರಾಗಿದ್ದರು. ವ್ಯಕ್ತಿ ಮುಂಬೈನಿಂದ …
Read More »ರಕ್ಷಣಾ ವಲಯಕ್ಕೆ ಮೇಕ್ ಇನ್ ಇಂಡಿಯಾ ಬಲ- 6 ಏರ್ ಪೋರ್ಟ್ಗಳ ಹರಾಜು……..
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಘೋಷಣೆಯ 20 ಲಕ್ಷ ಕೋಟಿಯ ಪ್ಯಾಕೇಜ್ ನ ನಾಲ್ಕನೇ ಹಂತದ ಪ್ರಕಟನೆಯನ್ನ ಕೇಂದ್ರ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸುದ್ದಿಗೋಷ್ಟಿಯಲ್ಲಿ ಮಂಡಿಸಿದರು. ಪಿಎಂ ಮೋದಿ ಸುಧಾರಣೆಯ ಕುರಿತು ಒಳ್ಳೆಯ ರೆಕಾರ್ಡ್ ಹೊಂದಿದ್ದಾರೆ. ನೇರ ವರ್ಗಾವಣೆಯ ಅವಶ್ಯಕತೆ ಹೆಚ್ಚಿದ್ದು, ಈ ಕುರಿತು ಹಲವು ನಿಯಮಗಳನ್ನು ಸರಳೀಕರಣಕೊರಿಸುವ ಬಗ್ಗೆ ಕೇಂದ್ರ ಸಚಿವರು ಆರಂಭದಲ್ಲಿಯೇ ಮಾತನಾಡಿದರು. ಕೈಗಾರಿಕಾ ಮೂಲಭೂತ ಸುಧಾರಣೆಗೆ ಕ್ರಮ, ಉದ್ಯೋಗ ಸೃಷ್ಟಿ, ಉದ್ಯಮಗಳ ಮೇಲೆ …
Read More »ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ
ಉಡುಪಿ: ವಿಶ್ವಾದ್ಯಂತ ಮಹಾಮಾರಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಕೋವಿಡ್-19ಗೆ ಇನ್ನೂ ಚುಚ್ಚು ಮದ್ದು ಸಿಕ್ಕಿಲ್ಲ. ವಿಶ್ವದ ಎಲ್ಲಾ ದೇಶಗಳು ಕೊರೊನಾ ಚುಚ್ಚು ಮದ್ದನ್ನು ಕಂಡು ಹುಡುಕುವಲ್ಲಿ ಹಗಲು ರಾತ್ರಿ ಶ್ರಮಿಸುತ್ತಿವೆ. ಈ ನಡುವೆ ಕೊರೊನಾ ವೈರಸ್ ದೇಹಕ್ಕೆ ಬಾಧಿಸದಂತೆ ಆಯುರ್ವೇದದಲ್ಲಿ ಚಿಕಿತ್ಸೆ ಇದೆ ಎಂದು ಆಯುಷ್ ಇಲಾಖೆ ಹೇಳಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಇದನ್ನು ಪ್ರಯೋಗ ಮಾಡಲಾಗುತ್ತಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ತಾಲೂಕಿನಾದ್ಯಂತ ಕಷಾಯ ವಿತರಣೆ …
Read More »ಧಾರವಾಡ:ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು?……..
ಧಾರವಾಡ: ನಗರದಲ್ಲಿ ಇಂದು ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವ್ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ತಯಾರಿಯಲ್ಲೇ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಧಾರವಾಡ ಗಾಂಧಿನಗರದ ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇವರ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಯದ್ವಾತದ್ವಾ ತಯಾರಿಸಿದ್ದಾರೆ. ಅಧಿಕಾರಿಗಳ ತಪ್ಪು ನೊಡದೆಯೇ ಜಿಲ್ಲಾಧಿಕಾರಿ ಕೂಡ ಸಹಿ ಮಾಡಿ ಮುಂದಿನ ಕ್ರಮಕ್ಕೆ ರವಾನಿಸಿದ್ದಾರೆ. ಅಲ್ಲದೆ ಯಾವ ತಿಂಗಳಲ್ಲಿ ಎಷ್ಟು ದಿನಾಂಕ ಎನ್ನುವ ಪರಿಜ್ಞಾನವೂ ಇಲ್ಲದಂತೆ ಅಧಿಕಾರಿಗಳು …
Read More »ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ
ಬೆಳಗಾವಿ -: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ ೧೭ ರಂದು ಬೆಳಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಬೆಳಗಾವಿಯ ಕೆಲವೆಡೆ ವಿದ್ಯುತ್ ನಿಲುಗಡೆ ಆಗಲಿದೆ. ೩೩ ಕೆ.ವ್ಹಿ. ಆರ್ ಎಮ್-೨ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಮರಾಠಾ ಕಾಲೊನಿ, ಎಸ್.ವ್ಹಿ ಕಾಲೊನಿ, ಎಮ್.ಜಿ. ಕಾಲೊನಿ, ೧ನೇ ಗೇಟ್, ಲೀಲೆ ಗ್ರೌಂಡ್, ಸಾವರ್ಕರ್ ರೋಡ, ಮಹರ್ಷಿ ರೋಡ್, ನೆಹರು ರೋಡ್, ರಾಯ್ …
Read More »
Laxmi News 24×7