Breaking News

Laxminews 24x7

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.   ಶುಲ್ಕ ಪಾವತಿಗೆ ಮೇ 5 ಕೊನೆ ದಿನವಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇಲೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read More »

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ …

Read More »

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

ಬೆಂಗಳೂರು: ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ ಎಂದು ವಿಧಾನಸಭೆ ಮುಖ್ಯ ಸಚೇತಕ, ಶಾಸಕ ಅಶೋಕ್ ಪಟ್ಟಣ್  ತಿಳಿಸಿದ್ದಾರೆ. ಸಚಿವ ಸಂಪುಟ ಪುನರ್  ರಚನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೇ ಎರಡನೇ ವಾರದಲ್ಲಿ ನಮಗೆ ಸಿಹಿ ಸುದ್ದಿ ಕೊಡುವ ಭರವಸೆಯನ್ನ ಸುರ್ಜೇವಾಲ ನೀಡಿದ್ದಾರೆ. ಅದರ ನಿರೀಕ್ಷೆಯಲ್ಲಿ ನಾವು ಇದ್ದೇವೆ ಎಂದರು. ಮೇ 4ರಂದು ಪಂಚ ರಾಜ್ಯಗಳ ಚುನಾವಣೆ ರಿಸಲ್ಟ್ ಬರಲಿದೆ. ಅದಾದ …

Read More »

ಹುಕ್ಕೇರಿ ಕರವೇ ಕಾರ್ಯಕರ್ತರಿಂದ. ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗೆ ಅರಿವು

ಹುಕ್ಕೇರಿ ಕರವೇ ಕಾರ್ಯಕರ್ತರಿಂದ. ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗೆ ಅರಿವು ಮೂಡಿಸಿದ ರಕ್ಷಿ ಗುಡ್ ಶೇಫೆರ್ಡ ಇಂಗ್ಲಿಷ್ ಮಾಧ್ಯಮ ಶಾಲೆಗೆ. ಕರ್ನಾಟಕ ರಕ್ಷಣಾ ವೇದಿಕೆ ಹುಕ್ಕೇರಿ ಘಟಕದಿಂದ ಇಂದು ಹುಕ್ಕೇರಿ ಪಟ್ಟಣದ ಸಮೀಪದಲ್ಲಿರುವ ಗುಡ್ ಶೇಫೆರ್ಡ ಇಂಗ್ಲಿಷ್ ಮಾಧ್ಯಮ ರಕ್ಷಿ (CBSC) ಶಾಲೆಗೆ ಭೇಟಿ ನೀಡಿ ಪ್ರವೇಶ ದ್ವಾರಕ್ಕೆ ದೊಡ್ಡದಾಗಿ ಇಂಗ್ಲಿಷ್ ನಲ್ಲಿ ಶಾಲೆಯ ಹೆಸರನ್ನು ಹಾಕಿದ್ದನ್ನು ಖಂಡಿಸಿ ತಕರಾರು ಮಾಡಿ ಕನ್ನಡದಲ್ಲಿ 60% ದೊಡ್ಡದಾಗಿ ಕನ್ನಡ ನಾಮಫಲಕವನ್ನು …

Read More »

ಮದುವೆಗೆ ಆಹ್ವಾನಿಸಿದ್ದ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರು: ಪ್ರಧಾನಿ ನರೇಂದ್ರ ಮೋದಿಗೆ  ಮದುವೆ ಆಹ್ವಾನ ಪತ್ರ ಕಳುಹಿಸಿದ್ದ ರಾಯಚೂರಿನ  ಯುವಕನಿಗೆ ಇದೀಗ ಪ್ರಧಾನಿ ಕಚೇರಿಯಿಂದ ಮದುವೆ ಶುಭಾಶಯ ಪತ್ರ ಬಂದಿದ್ದು, ಯುವಕ ಖುಷಿ ವ್ಯಕ್ತಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆಯನ್ನ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಪ್ರತಿಯಾಗಿ ಶುಭಾಶಯ ಬರಬಹುದು ಎನ್ನುವ ನಿರೀಕ್ಷೆಯಲ್ಲೇ ಲಗ್ನ ಪತ್ರಿಕೆಯನ್ನ …

Read More »

ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ಶವ ಪತ್ತೆ

ಅನುಮಾನಸ್ಪದ ಸ್ಥಿತಿಯಲ್ಲಿ ಆಟೋ ಡ್ರೈವರ್ ನ ಶವ ಪತ್ತೆಯಾದ ಘಟನೆ ಚಿಕ್ಕೋಡಿ ಪಟ್ಟಣದ ಹಾಲಟ್ಟಿಯಲ್ಲಿ ನಡೆದಿದೆ. ಕಳೆದ ರಾತ್ರಿ ಮನೆಯಿಂದ ಆಟೋ ಸಮೇತ ಹೋಗಿದ್ದ ವ್ಯಕ್ತಿ ಶವ ಪತ್ತೆಯಾಗಿದೆ.ಬಂದೇನವಾಜ( ರಾಜಾ ) ರಂಜಾನ್ 41 ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಮೃತನೂ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನ ನಿವಾಸಿ.ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿದ್ದಾರೆ. ಸೋಕೊ ಪಾರೆನ್ಸಿಕ್ ತಂಡದಿಂದ ಪರಿಶೀಲನೆ‌ ನಡೆಸಲಾಗುತ್ತಿದೆ.

Read More »

ಬಾಡಿಗೆ ಹಣವೇ ಜೀವನಕ್ಕೆ ಆಧಾರ: ಸಂಕಷ್ಟದಲ್ಲಿ ಸ್ಯಾಂಡಲ್‌ವುಡ್ ‘ದೂದ್ ಪೇಡ’ ದಿಗಂತ್!

​ಕನ್ನಡ ಚಿತ್ರರಂಗದ ಚಾಕೊಲೇಟ್ ಬಾಯ್, ನಟ ದಿಗಂತ್ ಅವರೀಗ ಕಠಿಣ ಹಂತದಲ್ಲಿದ್ದಾರೆ. ದಶಕಗಳಿಂದ ಸ್ಟಾರ್ ಆಗಿ ಮಿಂಚಿದ ನಟನಿಗೆ ಈಗ ಆರ್ಥಿಕ ಸವಾಲುಗಳು ಎದುರಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ​ ಜೀವನಕ್ಕೆ ಆಸರೆಯಾದ ಬಾಡಿಗೆ ಹಣ! ​ವರ್ಷಕ್ಕೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ದಿಗಂತ್ ಅವರಿಗೆ ಕಳೆದ ಆರು ತಿಂಗಳು ಅನಿರೀಕ್ಷಿತ ತಿರುವು ನೀಡಿದೆ. ಒಪ್ಪಿಕೊಂಡಿದ್ದ ಸಿನಿಮಾಗಳು ಅರ್ಧಕ್ಕೆ ನಿಂತ ಕಾರಣ ಆರ್ಥಿಕ ಮುಗ್ಗಟ್ಟು ಎದುರಾಗಿದೆ. “ನಂದಿ ಬೆಟ್ಟದ ಬಳಿ …

Read More »

ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವ್ಹಿಸಿ ಸಜ್ಜನರ ಬಡ್ತಿ

ಸಮಾಜಘಾತಕರ ಹೃದಯದಲ್ಲಿ ಭಯ ಹುಟ್ಟಿಸುವ ಧೈರ್ಯಶಾಲಿ, ನ್ಯಾಯಕ್ಕಾಗಿ ನಿಂತ ನಿರ್ಭಯ ಯೋಧ, ನಮ್ಮ ಹೆಮ್ಮೆಯ ಕನ್ನಡಿಗರಾದ ಮಾನ್ಯ V.C. Sajjanar, IPS ಸರ್ ಅವರಿಗೆ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹುದ್ದೆಗೆ ಬಡ್ತಿ ಲಭಿಸಿರುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಕ್ಷಣ. ಅವರ ಪ್ರತಿಯೊಂದು ಹೆಜ್ಜೆಯೂ ನ್ಯಾಯದ ದಾರಿಯಲ್ಲಿ, ಪ್ರತಿಯೊಂದು ನಿರ್ಧಾರವೂ ದೇಶಭಕ್ತಿಯ ನಾದದಲ್ಲಿ ಮೂಡಿದೆ. ಕಠಿಣ ಪರಿಸ್ಥಿತಿಗಳಲ್ಲೂ ತಲೆಬಾಗದೆ ನಿಂತ ಅವರ ಆತ್ಮವಿಶ್ವಾಸ, ಶೌರ್ಯ ಮತ್ತು ತ್ಯಾಗ ಇವೆಲ್ಲವೂ ನಮ್ಮ ಯುವ …

Read More »

ಬೆಳಗಾವಿಯ ಜೀವನಾಡಿ ರಾಕಸಕೊಪ್ಪ ಖಾಲಿ ಖಾಲಿ: ಕುಂದಾನಗರಿಗೆ ಜಲಕಂಟಕ, ನೀರು ಪೂರೈಕೆಯಲ್ಲಿ ಭಾರಿ ಬದಲಾವಣೆ!

ಬೆಳಗಾವಿಗೆ ಈ ಬಾರಿ ಬೇಸಿಗೆಯ ಬಿಸಿ ಜೋರಾಗಿಯೇ ತಟ್ಟಿದೆ. ನಗರದ ದಾಹ ತಣಿಸುವ ರಾಕಸಕೊಪ್ಪ ಜಲಾಶಯದ ಒಡಲು ಬರಿದಾಗುತ್ತಿದ್ದು, ಮಹಾನಗರದ 58 ವಾರ್ಡ್‌ಗಳ ಜನತೆಗೆ ಈಗ ನೀರಿನ ತತ್ವಾರ ಶುರುವಾಗಿದೆ. ಮುಂದಿನ ಎರಡು ತಿಂಗಳುಗಳ ಕಾಲ ನೀರಿನ ಬಳಕೆಯಲ್ಲಿ ಎಚ್ಚರಿಕೆ ವಹಿಸದಿದ್ದರೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಲಿದೆ. ಸೌಮ್ಯ ಹವಾಮಾನಕ್ಕೆ ಹೆಸರಾದ ಬೆಳಗಾವಿಯಲ್ಲಿ ಈ ಬಾರಿ ಸೂರ್ಯನ ಪ್ರತಾಪ ಹೆಚ್ಚಾಗಿದ್ದು, ಅದರ ನೇರ ಪರಿಣಾಮ ಜಲಮೂಲಗಳ ಮೇಲೆ ಬೀರಿದೆ. ಅರ್ಧ ಟಿಎಂಸಿ …

Read More »

ಡಿ.ಸುಧಾಕರ್‌ ಸ್ಥಿತಿ ಗಂಭೀರ – ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌ ಎಂದ ಹೆಚ್‌ಡಿಕೆ

ಚಿತ್ರದುರ್ಗ: ಸಚಿವ ಡಿ.ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್ ಇದ್ದಾರೆ ಎಂದು ಪರೋಕ್ಷವಾಗಿ ಡಿ.ಕೆ ಶಿವಕುಮಾರ್  ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದ  ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅವರು ಮಾತನಾಡಿದರು. ಈ ವೇಳೆ ಸಚಿವ‌ ಸುಧಾಕರ್ ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಈ ವೇಳೆ ನಾನು ಜೆಡಿಎಸ್ ಸ್ಥಾನದ ಬಗ್ಗೆ ಚರ್ಚೆ ಮಾಡಲ್ಲ. ಹಿರಿಯೂರು ಸೇರಿದಂತೆ ಬೇರೆ …

Read More »