Breaking News

Laxminews 24x7

DSS ಮುಖಂಡನ ಬರ್ಬರ ಕೊಲೆ, ಭಯದ ವಾತಾವರಣ

ಗೋಕಾಕ: ಇಲ್ಲಿನ ಹರಿಜನ ಕೇರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡನ‌ ಬರ್ಬರ ಕೊಲೆ ನಡೆದಿದ್ದು ಗೋಕಾಕನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಿದ್ದು ಕನಮಡ್ಡಿ (26), ಗೋಕಾಕ ನಗರದ ಹರಿಜನ ಕೇರಿಯ ನಿವಾಸಿ ಬುಧವಾರ ರಾತ್ರಿ ಊಟದ ಬಳಿಕ ಮನೆಯ ಮುಂದೆಯೇ ಕುಳಿತಿದ್ದಾಗ 5 ಜನರು ಗುಂಪೊಂದು ಮಾರಕಸಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಿದ್ದು ಕನಮಡ್ಡಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ …

Read More »

ತೆರಿಗೆ ಸಂಗ್ರಹಕ್ಕೆ ವರ್ಕೌಟ್ ಆದ ಪಾಲಿಕೆ ಪ್ಲಾನ್- 2 ಕೋಟಿಗೂ ಅಧಿಕ ಆಸ್ತಿ ತೆರಿಗೆ ಸಂಗ್ರಹ

ಹುಬ್ಬಳ್ಳಿ: ಮಹಾಮಾರಿ ಕೊರೊನಾ ವೈರಸ್ ಬಂದ ನಂತರ ವಿಶ್ವದ ಆರ್ಥಿಕ ಪರಿಸ್ಥಿತಿಯೇ ಪಾತಾಳಕ್ಕೋಗಿದೆ. ಭಾರತದಲ್ಲೂ ಆರ್ಥಿಕ ಪರಿಸ್ಥಿತಿ ಕೂಡ ಚೆನ್ನಾಗಿಲ್ಲ. ಇತ್ತ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗುತ್ತಾ ಬರುತ್ತಿದೆ. ಆದರೆ ಲಾಕ್‍ಡೌನ್ ನಡುವೆಯೂ ಅವಳಿ ನಗರದ ಮಹಾನಗರ ಪಾಲಿಕೆಯ ಖಜಾನೆಗೆ ಕೋಟಿ ಕೋಟಿ ಹಣ ಹರಿದು ಬಂದಿದೆ. ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಕೊರೊನಾ ಲಾಕ್‍ಡೌನ್ ಬರಸಿಡಿಲು ಬಡಿದಂತಾಗಿತ್ತು. ಹೀಗಾಗಿ ಆರ್ಥಿಕ ಪುನಶ್ಚೇತನಕ್ಕೆ ಮಹಾನಗರ ಪಾಲಿಕೆ ಆಯುಕ್ತ …

Read More »

ಮಹಾಮಾರಿ ಕೊರೊನಾ ಗೆದ್ದ ಮೈಸೂರು- 90ರಲ್ಲಿ 83 ಮಂದಿ ಡಿಸ್ಚಾರ್ಜ್………

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಿದ್ದದ್ದು ನೋಡಿದಾಗ ಮೈಸೂರು ಇಡೀ ರಾಜ್ಯದಲ್ಲಿ ನಂಬರ್ ಒನ್ ಆಗಿ ಬಿಡುತ್ತೋ ಎಂಬ ಆತಂಕ ಇತ್ತು. ಮೈಸೂರಲ್ಲಿ ಒಟ್ಟು 90 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಅದರಲ್ಲಿ ಜ್ಯೂಬಿಲಿಯೆಂಟ್ ಕಾರ್ಖಾನೆಯ ಪಾತ್ರವೇ ಅತಿ ದೊಡ್ಡದಾಗಿತ್ತು. ರೋಗಿ ನಂಬರ್ 52 ಸೃಷ್ಟಿಸಿದ ಆತಂಕಕ್ಕೆ ಇಡೀ ಮೈಸೂರೇ ಆತಂಕಕ್ಕೀಡಾಗಿತ್ತು. ಈತನೊಬ್ಬನಿಂದಲೇ 75 ಜನರಿಗೆ ಕೊರೊನಾ ಬಂದಿತ್ತು. ಆದರೆ ಈಗ ಮೈಸೂರು ಮಹಾಮಾರಿ ಕೊರೊನಾವನ್ನ ಗೆದ್ದಿದೆ. ಹೌದು. ಬರೋಬ್ಬರಿ …

Read More »

ಕೊರೊನಾ ಹೋಲುವ ಪುಷ್ಪ – ಜನತೆಯಲ್ಲಿ ಕುತೂಹಲ ಮೂಡಿಸಿದ ಹೂವು

ಹುಬ್ಬಳ್ಳಿ: ಮಳೆರಾಯ ಭೂಮಿಗೆ ಆಗಮಿಸುತ್ತಿದ್ದಂತೆ ಗಿಡ ಮರಗಳೆಲ್ಲ ಚಿಗುರೊಡೆದು ನಿಸರ್ಗ ದೇವತೆಯನ್ನು ಅಲಂಕರಿಸುತ್ತವೆ. ಪ್ರಸ್ತುತ ದಿನಮಾನಗಳಲ್ಲಿ ಕೊರೊನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬಿದ್ದು, ಕೊರೊನಾ ವೈರಸ್ ಚಿತ್ರಣವೊಂದು ಎಲ್ಲರ ಗಮನದಲ್ಲಿದೆ. ಇದೀಗ ಕೊರೊನಾ ವೈರಸ್ ಚಿತ್ರಣವನ್ನು ಹೋಲುವ ಹೂವೊಂದು ವಾಣಿಜ್ಯನಗರಿಯಲ್ಲಿ ಅರಳಿದ್ದು, ಆಕರ್ಷಣಿಯವಾಗಿ ಗೋಚರಿಸುತ್ತಿದೆ. ಮಾಧ್ಯಮಗಳಲ್ಲಿ ಕೊರೊನಾ ವೈರಸ್ ಚಿತ್ರಣವನ್ನು ನೋಡಿರುವ ಜನರಿಗೆ ಈ ಹೂವನ್ನು ನೋಡಿದಾಕ್ಷಣ ಕೆಲಕಾಲ ಅಚ್ಚರಿಯನ್ನುಂಟು ಮಾಡಿದೆ. ಹುಬ್ಬಳ್ಳಿಯ ಅಮರನಗರದಲ್ಲಿರುವ ಮುತ್ತು ಶಾಂತಪೂರಮಠ ಅವರ ಮನೆಯ …

Read More »

ಬಾಗಲಕೋಟೆ ಗರ್ಭಿಣಿ ಕುಟುಂಬದವರ 8 ಜನರ ವರದಿ ನೆಗೆಟಿವ್

ಬಾಗಲಕೋಟೆ: ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿಯ ಕುಟುಂಬಸ್ಥರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಧ್ಯಮ ಬುಲೆಟಿನ್ ನಲ್ಲಿ 12 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಜನರಿಗೆ ಸೋಂಕು ತಗುಲಿಲ್ಲ ಎಂಬುವುದು ವರದಿಯಲ್ಲಿ ಬಂದಿದೆ. ಜಿಲ್ಲಾಡಳಿತ ಇಂದು ಗ್ರಾಮದ 45 ಜನರ ಗಂಟಲು ದ್ರವ ಪರೀಕ್ಷೆ ವರದಿ ನಿರೀಕ್ಷೆಯಲ್ಲಿದೆ. ಸದ್ಯ ಡಾಣಕಶಿರೂರು ಗ್ರಾಮಸ್ಥರಲ್ಲಿ ಯಾರ ವರದಿ ಪಾಸಿಟಿವ್ …

Read More »

ಕಂಠಪೂರ್ತಿ ಕುಡಿದವ್ರ ಕಿಕ್ಕಿಳಿಸಿದ ರಾಜ್ಯ ಸರ್ಕಾರ……..

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಒಂದೂವರೆ ತಿಂಗಳ ಬಳಿಕ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ಕೊಟ್ಟಿತ್ತು. ಇದೀಗ ಎಣ್ಣೆ ಮತ್ತಿನಲ್ಲಿ ತೇಲಾಡುತ್ತಿದ್ದ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ನೀಡಿದೆ. ಮದ್ಯದ ಮೇಲೆ ಕೋವಿಡ್ -19 ಸೆಸ್ ವಿಧಿಸಲಾಗಿದೆ. ಇಂದಿನಿಂದ ಮದ್ಯದ ಹೊಸದರ ಜಾರಿಗೆ ಬರಲಿದೆ. ಸರ್ಕಾರ ಅವಕಾಶ ಕೊಟ್ಟಿದ್ದೆ ತಡ ವೈನ್ ಶಾಪ್, ಎಂಆರ್‌ಪಿ ಶಾಪ್ ಎದುರು ಅಪಾರ ಜನರು ಸೇರುತ್ತಿದ್ದಾರೆ. ಮಧ್ಯಾಹ್ನ ಎನ್ನದೇ ಮದ್ಯಪ್ರಿಯರು ಕಾದುನಿಂತು ಎಣ್ಣೆ ತೆಗೆದುಕೊಂಡು ಹೋಗಿದ್ದಾರೆ. ಸಂಜೆಯಾಗುತ್ತಲೇ …

Read More »

ನೆಲಮಂಗಲದಲ್ಲಿ ಬಿಹಾರಿಗಳ ಗಲಾಟೆ ತಡೆಯಲು ರಾಷ್ಟ್ರಗೀತೆ ಹಾಡಿದ ಪಿಎಸ್‍ಐ

ಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆಯನ್ನು ತಡೆಯವುದು ಹರಸಾಹಸವನ್ನೇ ಪಟ್ಟಿದ್ದರು. ನಂತರ ಗಲಾಟೆ ಹತೋಟಿಗೆ ಬಂದಿತ್ತು. ಗಲಾಟೆ ನಿಯಂತ್ರಣದ ವಿಡಿಯೋ ಇದೀಗ ವೈರಲ್ ಆಗಿದ್ದು, ಗಲಾಟೆ ಸಮಯದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಲಾಟೆ ಕಡಿಮೆ ಮಾಡಲು ಇನ್ಸ್ ಪೆಕ್ಟರ್ ಪ್ಲಾನ್ ಮಾಡಿ, ಮಾದನಾಯಕನಹಳ್ಳಿ ಠಾಣೆ ಸಿಪಿಐ ಸತ್ಯನಾರಾಯಣ ಅವರು ಗಲಾಟೆ ಸಮಯದಲ್ಲಿ ಜನಗಣ ಮನ ಹಾಡಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ರೊಂದಿಗೆ ಬಿಹಾರಿ ವಲಸೆ ಕಾರ್ಮಿಕರು ಸಹ …

Read More »

78 ವರ್ಷದ ವೃದ್ಧ ಕೊರೊನಾದಿಂದ ಗುಣಮುಖ…….

ಬೆಂಗಳೂರು: 78 ವರ್ಷದ ವೃದ್ಧ ಕೊರೊನಾದಿಂದ ಗುಣಮುಖರಾಗಿ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗುಜರಾತ್ ಮೂಲದ ವೃದ್ಧ ಕರ್ನಾಟಕದಲ್ಲೇ ವಾಸವಾಗಿದ್ದರು. ಮೊದಲು ವೃದ್ಧನಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾದಾಗ ಕೋವಿಡ್-19 ಸೋಂಕು ತಗುಲಿರೋದು ದೃಢಪಟ್ಟಿತ್ತು. ತಮ್ಮ ಆತ್ಮಮನೋಬಲದಿಂದ ಡೆಡ್ಲಿ ಕೊರೊನಾಗೆ ಸೆಡ್ಡು ಹೊಡೆದು ಬಂದಿದ್ದಾರೆ. ಮಾರ್ಚ್ 1ಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಮಾರ್ಚ್ 17ರಂದು ಗುಣಮುಖರಾಗಿ ಹೊರ ಬಂದಿದ್ದರು. ತಮಗೆ ಹೇಗೆ ಚಿಕಿತ್ಸೆ ನೀಡಲಾಯ್ತು ಎಂಬಿತ್ಯಾದಿ …

Read More »

5 ಸಾವಿರ ಕೊರೊನಾ ಸೇನಾನಿಗಳಿಗೆ ಗೌರವ- ಸಿದ್ದರಾಮಯ್ಯರಿಂದ ದಿನಸಿ ಕಿಟ್ ವಿತರಣೆ

ಕೋಲಾರ: ಕೊರೊನಾ ವಿರುದ್ಧ ಹೋರಾಡುತ್ತಿರುವ ಸುಮಾರು 5 ಸಾವಿರ ಜನ ವಾರಿಯರ್ಸ್‍ಗೆ ದಿನಸಿ ಕಿಟ್ ಜೊತೆಗೆ ಮಡಿಲು ತುಂಬಿ ಗೌರವಿಸುವ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿ ಮಾಲೂರು ಶಾಸಕ ನಂಜೇಗೌಡ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಗಲಿರುಳು ದುಡಿಯುತ್ತಿರುವ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ದಿನಸಿ ಕಿಟ್ ವಿತರಿಸಿದರು. ಅಲ್ಲದೆ ಶಾಸಕರ ಕುಟುಂಬಸ್ಥರು ಅರಿಶಿನ ಕುಂಕುಮ ನೀಡಿ ಮಡಿಲು ತುಂಬಿದರು. ಮಾಲೂರು …

Read More »

‘ಸಾಲ ತೀರಿಸಬೇಕು, ಬಾಡಿಗೆ ಕಟ್ಟಬೇಕು, ಕೆಲಸಗಾರರಿಗೆ ಸಂಬಳ ನೀಡಬೇಕು‘: ನಮಗೂ ಎಣ್ಣೆ ಮಾರಲು ಅವಕಾಶ ಕೊಡಿ ಎಂದು ಸಿಎಂಗೆ ಬಾರ್​ ಮಾಲೀಕರ ಮನವಿ

ಬೆಂಗಳೂರು: ಕೊರೋನಾ ಲಾಕ್​ಡೌನ್​​ ನಡುವೆಯೇ ಕೊನೆಗೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎರಡು ದಿನಗಳಿಂದ ಮಹಿಳೆಯರು ಮತ್ತು ಪುರುಷರು ಎನ್ನದೇ ಎಲ್ಲಾ ವಯೋಮಾನದವರು ಬೆಳಿಗ್ಗೆ 7 ಗಂಟೆಯಿಂದಲೇ ವೈನ್ ಸ್ಟೋರ್​​ಗಳು, ಎಂಆರ್​​ಪಿ ಎಣ್ಣೆ ಅಂಗಡಿಗಳ ಮುಂದೆ ನಿಂತು ಮದ್ಯ ಖರೀದಿ ಮಾಡುತ್ತಿದ್ದಾರೆ. ಕೊರೋನಾ ವೈರಸ್​​ ಕಾರಣ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಂತು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿರುವುದು ನೋಡುತ್ತಿದ್ದೇವೆ. ಹೀಗಿರುವಾಗ ರಾಜ್ಯದಲ್ಲಿ ಎಂಆರ್​​ಪಿ ಹಾಗೂ ಎಂಎಸ್​ಐಎಲ್ ಮಳಿಗೆಗಳಲ್ಲಿ ಮಾತ್ರ ಮದ್ಯ …

Read More »