Breaking News

Laxminews 24x7

ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.   ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …

Read More »

ಆನ್ ಲೈನ್ ನಲ್ಲಿ ಪುಸ್ತಕ ಲೋಕಾರ್ಪಣೆ

ಬೆಂಗಳೂರು, ಜು.12- ಹಿರಿಯ ಸಾಹಿತಿ ಡಾ.ಜಿ.ಕೃಷ್ಣಪ್ಪ ಅವರು ರಚಿಸಿರುವ ಕುವೆಂಪು ಹನುಮದ್ದರ್ಶನ(ಶ್ರೀ ರಾಮಾಯಣ ದರ್ಶನಂ-ಒಂದು ಚಿತ್ರಣ) ಗ್ರಂಥ ವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಲೋಕಾರ್ಪಣೆ ಮಾಡಿದರು. https://youtu.be/I1U-UG-NHuk ನಗರದಲ್ಲಿಂದು ತಮ್ಮ ನಿವಾಸದಲ್ಲಿ ಆನ್ ಲೈನ್ ಮೂಲಕವೇ ಬಿಡುಗಡೆ ಮಾಡಿದ ಅವರು, ಶ್ರೀ ರಾಮಾಯಣ ದರ್ಶನಂ ವಿಶೇಷ ಗ್ರಂಥವಾಗಿದ್ದು, ಡಾ.ಜಿ.ಕೃಷ್ಣಪ್ಪ ಅವರು ಹನುಮದ್ದರ್ಶನ ಕುರಿತು ಹೆಚ್ಚಿನ ಮಾಹಿತಿ ಬೆಳಕು ಚೆಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮದೀಯರ ಕನ್ನಡ …

Read More »

ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ.

ಉಡುಪಿ: ಕೊರೊನಾದಿಂದ ಸಾವನ್ನಪ್ಪಿದ ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ. ದಾವಣಗೆರೆ ಮೂಲದ ವ್ಯಕ್ತಿ ಉಡುಪಿಯಲ್ಲಿ ಮೃತಪಟ್ಟಿದ್ದು ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ 72 ವರ್ಷದ ವೃದ್ಧ ಮಣಿಪಾಲ ಕೆಎಂಸಿಗೆ ಭೇಟಿ ಕೊಟ್ಟಿದ್ದರು. ಚಿಕಿತ್ಸಾ ಸಂದರ್ಭ ಅವರಲ್ಲಿ ಕೊರೊನಾದ ಲಕ್ಷಣಗಳು ಕಂಡು ಬಂದಿತ್ತು. ರೋಗಿಯನ್ನು ಕೂಡಲೇ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಉಸಿರಾಟದ …

Read More »

ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ………

ಉಡುಪಿ: ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ನಾಗೇಶ್ ಕುಮಾರ್ (64) ನೇಣಿಗೆ ಶರಣಾದ ನಿರ್ಮಾಪಕ. ಮೃತ ನಾಗೇಶ್ ಕುಮಾರ್ ಚಲನಚಿತ್ರ ನಿರ್ದೇಶನಕ್ಕೆ 28 ಲಕ್ಷ ಹಣ ಹೂಡಿದ್ದರು. ‘ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀಜಾಡಿ ಗ್ರಾಮದ …

Read More »

ಕೊರೊನಾ ಮಹಾಮಾರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮೂವರು ಬಲಿ

ಬಾಗಲಕೋಟೆ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಒಟ್ಟು ಮೂವರು ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ವ್ಯಕ್ತಿ ಮೃತರಾಗಿದ್ದು, ರೋಗಿ ನಂ.8300 ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ ನವನಗರದ 28 ಸೆಕ್ಟರ್ ನಿವಾಸಿ, 77 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಬಿಪಿ, ಡಯಾಬಿಟಿಸ್‍ಗೆ ತುತ್ತಾಗಿದ್ದರು. ಜೂನ್ 10ರಂದು ತೀವ್ರ ಉಸಿರಾಟ ತೊಂದರೆ …

Read More »

ಸಂಡೆ ಲಾಕ್‌ಡೌನ್ : ಬೆಂಗಳೂರು ಸೇರಿ ಕರ್ನಾಟಕ ಸ್ಥಬ್ದ, ಎಲ್ಲೆಲ್ಲಿ ಏನೇನಾಯ್ತು..?

ಬೆಂಗಳೂರು : ಅಂಕೆ ಮೀರಿ ಶರವೇಗದಲ್ಲಿ ಹಬ್ಬುತ್ತಿರುವ ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಎರಡನೇ ಭಾನುವಾರದ ಲಾಕ್ ಡೌನ್ ಗೂ ಈ ವಾರವೂ ಬಹುತೇಕ ಯಶಸ್ವಿಯಾಗಿದೆ. ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದು ವಿಶೇಷವಾಗಿತ್ತು. ಲಾಕ್ ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ. …

Read More »

ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು

ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ. ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ …

Read More »

ವಿಕಾಸ್ ದುಬೆ ಎನ್‌‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಪೊಲೀಸ್‍ಗೆ ಕೊರೊನಾ……….

ಲಕ್ನೋ: ಗ್ಯಾಂಗ್‍ಸ್ಟರ್ ವಿಕಾಸ್ ದುಬೆ ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ. ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎನ್‍ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. …

Read More »

ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ

ಹೈದರಾಬಾದ್: ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಥೋಟಾ ಮಧುಕರ್ (24) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಮಧುಕರ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ನಿಷೇಧಿತ ಆಟದಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಮಧುಕರ್ ವಿಷ ಕುಡಿದಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ …

Read More »

ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ

ಹೈದರಾಬಾದ್: ಮೂವರು ಯುವಕರಿಗೆ ವಿಡಿಯೋ ಸಂದೇಶ ಕಳುಹಿಸಿ ಮಾತನಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದ್ದಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನ ಭಕ್ತವತ್ಸಲ ನಗರದಲ್ಲಿ ನಡೆದಿದೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ 21 ವರ್ಷದ ಯುವತಿ, ಈ ವಿಡಿಯೋದಲ್ಲಿ ಕುತ್ತಿಗೆಗೆ ದುಪ್ಪಟ್ಟವನ್ನು ಸುತ್ತಿಕೊಂಡು ‘ಶಿವ ನನ್ನ ಜೊತೆ ಮಾತನಾಡು’ ಎಂದು ಮನವಿ ಮಾಡಿಕೊಂಡಿದ್ದಾಳೆ. ನಂತರ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿಯ ಮನವಿಯ ವಿಡಿಯೋ ಸಾಮಾಜಿಕ …

Read More »