Breaking News

Laxminews 24x7

ಕೆ ಪಿ ಸಿ ಸಿ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿರುವ ಮೂರು ಮಂದಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆಗಿದೆ. ಇವೆರೆಲ್ಲರೂ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಇಬ್ಬರು ಸಿಬ್ಬಂದಿಯಾಗಿ ಮತ್ತೆ ಒಬ್ಬರು ಕೆಪಿಸಿಸಿ ಮಾಧ್ಯಮ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಇದರಿಂದಾಗಿ ಈಗ ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗಿಯಾಗಿರುವ ಹಲವಾರು ಮಂದಿ ನಾಯಕರಿಗೆ ಕೊರೋನಾ ಭೀತಿ ಶುರುವಾಗಿದೆ.

Read More »

ದುಬೆ ನಂತರ ಮತ್ತೋರ್ವ ಗ್ಯಾಂಗ್ ಸ್ಟರ್ ಹತ್ಯೆ – ಯುಪಿಯಲ್ಲಿ ಇಂದು ಡಬಲ್ ಎನ್‍ಕೌಂಟರ್

ಲಕ್ನೋ: ರೌಡಿ ಶೀಟರ್ ವಿಕಾಸ್ ದುಬೆ ನಂತರ ಉತ್ತರ ಪ್ರದೇಶದಲ್ಲಿ ಇನ್ನೊಬ್ಬ ಗ್ಯಾಂಗ್ ಸ್ಟರ್ ಅನ್ನು ಹತ್ಯೆ ಮಾಡಿದ್ದು, ಇಂದು ಒಂದೇ ದಿನ ಎರಡು ಎನ್‍ಕೌಂಟರ್ ಗಳು ನಡೆದಿವೆ. ಇಂದು ಮುಂಜಾನೆ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಇದಾದ ಬಳಿಕ 36 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಪನ್ನಾ ಯಾದವ್‍ನನ್ನು ವಿಶೇಷ ಕಾರ್ಯಪಡೆಯ (ಎಸ್‍ಟಿಎಫ್) ಪೊಲೀಸ್ ಅಧಿಕಾರಿಗಳು ಬಹ್ರೈಚ್‍ನ ಹಾರ್ಡಿ …

Read More »

ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರವಾರ: ಗಂಡು ಮಗು ಆಗಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನ ಜಿಲ್ಲೆಯ ಶಿರಸಿಯ ಅಂದಳ್ಳಿಯಲ್ಲಿ ನಡೆದಿದ್ದು ಶುಕ್ರವಾರ ಎಫ್‌ಐಆರ್ ದಾಖಲಾಗಿದೆ. ಮಧುರಾ ಹೆಗಡೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈ ಹಿಂದೆ ತನಗೆ ಎರಡೂ ಹೆಣ್ಣು ಮಕ್ಕಳೆ ಆಗಿದ್ದು ಗಂಡು ಮಗು ಆಗಿಲ್ಲ ಎಂದು ನೊಂದಿದ್ದಾಳೆ ಎನ್ನಲಾಗಿದೆ. ಬಚ್ಚಲ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ …

Read More »

ಭಾರತದ ಮೂಲದ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಿದ ಇಂಗ್ಲೆಂಡ್ ಕ್ರಿಕೆಟ್………

ಸೌತಾಂಪ್ಟನ್: ಬರೋಬ್ಬರು 117 ದಿನಗಳ ಬಳಿಕ ಕ್ರಿಕೆಟ್ ಚಟುವಟಿಕೆಗಳು ಆರಂಭವಾಗಿದ್ದು, ಇಂಗ್ಲೆಂಡ್ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಪಂದ್ಯ ಮಳೆಯ ಅಡೆತಡೆಯ ನಡುವೆಯೂ ಸಾಗುತ್ತಿದೆ. ಇತ್ತ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತ ಮೂಲದ ನಾಲ್ವರು ವೈದ್ಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದೆ. ಕೋವಿಡ್-19 ಸಂದಿಗ್ಧ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಿದ್ದ ವೈದ್ಯರ ಹೆಸರಗಳನ್ನು ತಮ್ಮ ಜೆರ್ಸಿ ಮೇಲೆ ಮುದ್ರಿಸಿ ಕಣಕ್ಕೆ ಇಳಿಯುವ ಮೂಲಕ ವಿಶೇಷ ಗೌರವ ಅರ್ಪಿಸಿದೆ. ‘ರೈಸ್ ದಿ ಬ್ಯಾಟ್’ …

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ: ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.  ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.

ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು. ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ …

Read More »

ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ

ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …

Read More »

ಗಡಿಭಾಗದ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಬೆಳಗಾವಿ: ಜಿಲ್ಲೆಯಲ್ಲಿ ದಿನೇದಿನೇ ಕೋವಿಡ್‌-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗದಲ್ಲಿ ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಸಂಚರಿಸುತ್ತಿರುವ ಜನರನ್ನು ನಿಭಾಯಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಚೆಕ್‌ಪೋಸ್ಟ್‌ಗಳನ್ನು ತಪ್ಪಿಸಿ, ಒಳದಾರಿಗಳ ಮೂಲಕ ಸ್ಥಳೀಯರು ಸಂಚರಿಸುತ್ತಿರುವುದು ಜಿಲ್ಲಾಡಳಿತವನ್ನು ಕಂಗೆಡಿಸಿದೆ. ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಹುಕ್ಕೇರಿ ಹಾಗೂ ಬೆಳಗಾವಿ ತಾಲ್ಲೂಕುಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಸುಮಾರು 152 ಕಿ.ಮೀ.ವರೆಗೆ ಗಡಿ ಇದೆ. ಗಡಿಯಾಚೆ ಹೋಗುವವರು ಹಾಗೂ …

Read More »

ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್‌ (ಫುಲ್‌ ರೇಕ್‌) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ …

Read More »

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ

ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ …

Read More »