Breaking News

Laxminews 24x7

ಮಾಸ್ಕ್ ಇಲ್ಲದೆ ಓಡಾಡುವವರಿಗೆ ಬಸ್ಕಿ ಹೊಡೆಯುವ ಶಿಕ್ಷೆ…

ಹಾಸನ: ಹಾಸನದಲ್ಲಿ ಈ ವರೆಗೆ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಗ್ರೀನ್ ಝೋನ್‍ಗೆ ಒಳಪಟ್ಟಿದೆ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಕೊಂಚ ಸಡಿಲಿಕೆ ಮಾಡಿದ್ದು, ಜನ ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಗ್ರೀನ್‍ಝೋನ್‍ನಲ್ಲಿ ನಿಯಮ ಸಡಿಲಿಕೆ ಮಾಡಿದ ಬೆನ್ನಲ್ಲೇ ಜನ ಬೇಕಾಬಿಟ್ಟಿಯಾಗಿ ಬೀದಿಗಿಳಿಯುತ್ತಿದ್ದು, ಕೆಲವರು ಏನೂ ಕೆಲಸವಿಲ್ಲದಿದ್ದರೂ ರಸ್ತೆಗಿಳಿಯುತ್ತಿದ್ದಾರೆ. ಅಲ್ಲದೆ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದಾರೆ. ಇದನ್ನು ಮನಗಂಡ ಪೊಲೀಸರು ಶಿಕ್ಷೆ ನೀಡಲು ಮುಂದಾಗಿದ್ದು, ಅನಗತ್ಯವಾಗಿ ಓಡಾಡುವವರಿಗೆ ಹಾಗೂ ಮಾಸ್ಕ್ ಇಲ್ಲದೆ ರಸ್ತೆಗಿಳಿಯುವವರಿಗೆ …

Read More »

ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ

ಬೆಂಗಳೂರು: ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಲಾಕ್‍ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದಾರೆ. ರಾಯಚೂರಿನಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೊಪ್ಪಳದಲ್ಲಿ ಸಹ ಕಟ್ಟೆಚ್ಚರ …

Read More »

ಇಂದು ಪ್ರಧಾನಿ ಮೋದಿ ಮನ್ ಕೀ ಬಾತ್-ದೇಶದ ಜನರಿಗೆ ಲಾಕ್‍ಡೌನ್ ಸಿಹಿಯೋ? ಕಹಿಯೋ?

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಇಡೀ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ನಲ್ಲಿ ಮಾತನಾಡಲಿದ್ದಾರೆ. ಕಳೆದ ತಿಂಗಳ ಮನ್ ಕೀ ಬಾತ್ ನಲ್ಲಿ ಲಾಕ್‍ಡೌನ್ ಹೇರಿಕೆ ಕ್ಷಮೆ ಕೇಳಿದ್ದ ಅವರು ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಕಟ್ಟುನಿಟ್ಟಿನ ಲಾಕ್‍ಡೌನ್ ನಡುವೆಯೂ ಮಾರಕ ಕೊರೊನಾ ವೈರಸ್ ಆರ್ಭಟ ಭಾರತದಲ್ಲಿ ಮುಂದುವರಿದಿದೆ. ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಮೇ 3ರವರೆಗೂ ಲಾಕ್‍ಡೌನ್ ವಿಸ್ತರಿಸಿದ್ದಾರೆ. ಕೊರೊನಾ ಬಿಕ್ಕಟ್ಟಿನ ನಡುವೆ ಆಗ್ಗಾಗ …

Read More »

ಜುಬಿಲೆಂಟ್ಸ್ ಕಾರ್ಖಾನೆಗೆ ಸೋಂಕು ತಗುಲಿದ್ದು ಹೇಗೆ : ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಮೈಸೂರು (ಏಪ್ರಿಲ್ 25); ಜಿಲ್ಲೆಯ ನಂಜನಗೂಡಿನಲ್ಲಿ ಜುಬಿಲೆಂಟ್ಸ್ ಕಾರ್ಖಾನೆ ಕೊರೋನಾ ಹಾಟ್‌ಸ್ಪಾಟ್ ಆಗಿರುವ ಹಿನ್ನೆಲೆಯಲ್ಲಿ, ಕಾರ್ಖಾನೆಗೆ ಸೋಂಕು ತಗುಲಿದ್ದರ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಮೈಸೂರು ಕೋವಿಡ್-19 ವಿಶೇಷಾಧಿಕಾರಿ ಹರ್ಷಗುಪ್ತ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, ಒಂದು ವಾರದ ಒಳಗಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಸೂಚಿಸಲಾಗಿದೆ. ಕಾರ್ಖಾನೆ ಸೋಂಕು ಎಲ್ಲಿಂದ ಬಂತು?  ಯಾರಿಂದ ಬಂತು? ಪ್ರಥಮವಾಗಿ ಯಾರಿಗೆ ಬಂತು? ಸೋಂಕು ಹರಡುವಿಕೆಗೆ ಕಾರಣವೇನು? ಕಾರ್ಖಾನೆ ಜವಬ್ದಾರಿ ಏನು? ಹೀಗೆ ಎಲ್ಲಾ ವಿಚಾರಗಳ …

Read More »

ದಂತ ಚಿಕಿತ್ಸಾಲಯ ತೆರೆಯಬಾರದು ಎಂಬ ನಿಯಮ ಗಾಳಿಗೆ ತೂರಿ ಕ್ಲಿನಿಕ್ ತೆರೆದು ಚಿಕಿತ್ಸೆ ನೀಡಿದ ಡಾ.ಖಾನ್

ಹಾಸನ; ದಂತ ಚಿಕಿತ್ಸಾಲಯ ತೆರೆಯಬಾರದೆಂಬ ನಿಯಮವಿದ್ದರೂ ಕ್ಲಿನಿಕ್ ತೆರೆದು ವೈದ್ಯನೋರ್ವ ಚಿಕಿತ್ಸೆ ಮಾಡುತ್ತಿದ್ದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಹಳೇ ಬಸ್ ನಿಲ್ದಾಣದ ಮುಂಭಾಗವಿರುವ ಹಾಸನ ದಂತ ಚಿಕಿತ್ಸಾಲಯದಲ್ಲಿ ಡಾ.ಖಾನ್ ಕ್ಲಿನಿಕ್ ತೆರೆದು ಬೆಳಿಗ್ಗೆಯಿಂದ ಕೆಲ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಮಾಧ್ಯಮದವರು ಸ್ಥಳಕ್ಕೆ ತೆರಳಿದಾಗ ಕ್ಯಾಮರಾ ಕಂಡು ತಬ್ಬಿಬ್ಬಾದ ಡಾ.ಖಾನ್ ಕ್ಲಿನಿಕ್‌  ಬಾಗಿಲು ಮುಚ್ಚಲು ಮುಂದಾದರು. ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಅಧ್ಯಕ್ಷ …

Read More »

ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರಿಗೆ ಕುದ್ರೋಳಿ ಕ್ಷೇತ್ರದಿಂದ ಸಹಾಯ……….

ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ. ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ …

Read More »

ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …

Read More »

ನಿಜವಾದ ಸಂತೋಷ ಅಂದ್ರೆ ಏನೆಂದು ತೋರಿಸಿದೆ – ಭಾವಿ ಪತ್ನಿಗೆ ಕೃಷ್ಣ ವಿಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮಿಲನಾ ನಾಗರಾಜ್ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ನಟ ಡಾರ್ಲಿಂಗ್ ಕೃಷ್ಣ ತಮ್ಮ ಗೆಳತಿಗೆ ಸೋಶಿಯಲ್ ಮೀಡಿಯಾದ ಮೂಲಕ ವಿಶೇಷ ರೀತಿಯಲ್ಲಿ ಶುಭಾಶಯ ತಿಳಿಸಿದ್ದಾರೆ. ಕೊರೊನಾ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಮಿಲನಾ ನಾಗರಾಜ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತ ಕೃಷ್ಣ ಕೂಡ ತಮ್ಮ ಪ್ರೇಯಸಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣದ ಮೂಲಕವೇ ಕೃಷ್ಣ ವಿಶ್ ಮಾಡಿದ್ದಾರೆ. ಕೃಷ್ಣ ಇನ್‍ಸ್ಟಾಗ್ರಾಂನಲ್ಲಿ ಒಂದು …

Read More »

ಲಾಕ್‍ಡೌನ್ ಎಫೆಕ್ಟ್ – 100 ಎಕ್ರೆಯಲ್ಲಿ ಕೊಳೆಯುತ್ತಿದೆ 300 ಟನ್ ಅನಾನಸ್

ಮಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದು, ಎಲ್ಲ ವರ್ಗದ ಜನ ಆತಂಕದಲ್ಲಿದ್ದಾರೆ. ದೇಶದ ಬೆನ್ನೆಲುಬು ರೈತನು ಕೂಡ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ಕಷ್ಟ ನಷ್ಟ ಅನುಭವಿಸುವಂತಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ಕೇರಳದ ಎರ್ನಾಕುಲಂ ಮೂಲದ ಶೈಜು 100 ಎಕರೆ ಜಮೀನನ್ನು ಲೀಸ್‍ಗೆ ಪಡೆದು ಅನಾನಸ್ ಕೃಷಿ ಮಾಡಿದ್ದರು. ಶ್ರಮಕ್ಕೆ ತಕ್ಕ ಪ್ರತಿಫಲ ಭರ್ಜರಿ ಫಸಲು ಕೂಡ ಬಂದಿತ್ತು. …

Read More »

ಕಿಮ್ ಜಾಂಗ್-ಉನ್ ಆರೋಗ್ಯ ಗಂಭೀರ – ಉ.ಕೊರಿಯಾಗೆ ಬಂದಿಳಿದ ಚೀನಾ ವೈದ್ಯರು

ಬೀಜಿಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚಿಕಿತ್ಸೆ ನೀಡಲು ಚೀನಾದ ನುರಿತ ವೈದ್ಯರ ತಂಡ ಉತ್ತರ ಕೊರಿಯಾಗೆ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಅಂತರರಾಷ್ಟ್ರೀಯ ಸಂಪರ್ಕ ವಿಭಾಗದ ಹಿರಿಯ ಸದಸ್ಯರ ನೇತೃತ್ವದಲ್ಲಿ ವೈದ್ಯರ ನಿಯೋಗವು ಬೀಜಿಂಗ್‍ನಿಂದ ಪ್ಯೊಂಗ್ಯಾಂಗ್‍ಗೆ ಗುರುವಾರ ಹೋಗಿದೆ ಎನ್ನಲಾಗಿದೆ. ಕಿಮ್ ಜಾಂಗ್-ಉನ್ ಚೈನ್ ಸ್ಮೋಕರ್ ಆಗಿದ್ದು, ಅವರ ದೇಹದ ತೂಕ ಜಾಸ್ತಿಯಾಗಿದೆ. …

Read More »